Homeಮುಖಪುಟಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿದ್ದು ನಿಜ, ಧರಣಿ ನಿಲ್ಲಿಸಲು 10 ಲಕ್ಷ ರೂ ಆಮಿಷವೊಡ್ಡಿದ್ದರು: ನಿಹಾಂಗ್...

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾಗಿದ್ದು ನಿಜ, ಧರಣಿ ನಿಲ್ಲಿಸಲು 10 ಲಕ್ಷ ರೂ ಆಮಿಷವೊಡ್ಡಿದ್ದರು: ನಿಹಾಂಗ್ ಬಾಬಾ

- Advertisement -
- Advertisement -

ನಾವು ಈ ವರ್ಷದ ಜುಲೈ ತಿಂಗಳಿನಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಸೇರಿ ಇತರ ಬಿಜೆಪಿ ಮುಖಂಡರನ್ನು ರಹಸ್ಯವಾಗಿ ಭೇಟಿಯಾಗಿದ್ದು ನಿಜ. ಸಿಂಘು ಗಡಿಯಲ್ಲಿನಲ್ಲಿ ಧರಣಿ ನಿಲ್ಲಿಸಲು 10 ಲಕ್ಷ ರೂ ಮತ್ತು ಕುದುರೆಗಳ ಆಮಿಷವೊಡ್ಡಿದ್ದರು ಎಂದು ನಿಹಾಂಗ್ ಬಾಬಾ ಅಮನ್ ಸಿಂಗ್ ಒಪ್ಪಿಕೊಂಡಿದ್ದಾರೆ ಎಂದು ದಿ ಟ್ರಿಬ್ಯೂನ್ ವರದಿ ಮಾಡಿದೆ.

ಅಕ್ಟೋಬರ್ 15 ರಂದು ಸಿಂಘು ಗಡಿಯಲ್ಲಿ ನಿಹಾಂಗ್‌ಗಳಿಂದ ದಲಿತ ಲಖ್ಬೀರ್ ಸಿಂಗ್‌ ಬರ್ಬರ ಕೊಲೆಯಾದ ನಂತರ ಇದರಲ್ಲಿ ಕೇಂದ್ರ ಸರ್ಕಾರದ ಕೈವಾಡವಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಆರೋಪಿಸಿದೆ. ಅದಕ್ಕೆ ಇಂಬು ಕೊಡುವಂತೆ ನಿಹಾಂಗ್ ಮುಖ್ಯಸ್ಥ ಅಮನ್ ಸಿಂಗ್ ಹೇಳಿಕೆ ನೀಡಿದ್ದಾರೆ.

“ನಾವು ನಾಲ್ಕು ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದಿಟ್ಟಿದ್ದೆವು. ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳಬೇಕು, ಎಂಎಸ್‌ಪಿ ಖಾತ್ರಿ ನೀಡಬೇಕು, 2015ರ ಧರ್ಮಗ್ರಂಥ ಅಪವಿತ್ರಗೊಳಿಸಿರುವ ಪ್ರಕರಣಗಳ ಆರೋಪಿಗಳಿಗೆ ಶಿಕ್ಷೆಯಾಗಬೇಕು ಮತ್ತು ನಿಹಾಂಗ್‌ಗಳ ಮೇಲಿನ ಕೇಸುಗಳನ್ನು ವಾಪಸ್ ಪಡೆಯಬೇಕು ಎಂಬುದು ನಮ್ಮ ಬೇಡಿಯಾಗಿತ್ತು. ಇವುಗಳನ್ನು ಈಡೇರಿಸಿದರೆ ನಾವು ಧರಣಿಯನ್ನು ಅಂತ್ಯಗೊಳಿಸುತ್ತೇವೆ ಎಂದು ಹೇಳಿ ಹಣದ ಆಮಿಷವನ್ನು ತಿರಸ್ಕರಿಸಿದ್ದೇವು. ಈ ಕುರಿತು ನಾವು ಪ್ರಧಾನಿ ಮತ್ತು ರಾಷ್ಟ್ರಪತಿಗಳಿಗೂ ಕೂಡ ಪತ್ರ ಬರೆದಿದ್ದೇವೆ” ಎಂದು ಅಮನ್ ಸಿಂಗ್ ಹೇಳಿದ್ದಾರೆ.

ಅವರು ನಿಮ್ಮ ರೈತರ ಜೊತೆ ಸಹ ಮಾತನಾಡಿದ್ದಾರ? ಎಂಬ ಪ್ರಶ್ನೆಗೆ ಅವರು, “ಸಚಿವರು ರೈತರ ಜೊತೆ ಮಾತನಾಡುವ ಅಗತ್ಯವಿರಲಿಲ್ಲ. ಏಕೆಂದರೆ ಅವರನ್ನು ಭೇಟಿಯಾಗಲು ನಾನೊಬ್ಬನೇ ಹೋಗಿರಲಿಲ್ಲ, ನನ್ನೊಡೆನ 10 ಜನ ರೈತರಿದ್ದರು” ಎಂದು ಉತ್ತರಿಸಿದ್ದಾರೆ.

ಲಖ್ಬೀರ್ ಸಿಂಗ್ ಕೊಲೆ ಪ್ರಕರಣದಲ್ಲಿ ಇದುವರೆಗೂ 4 ಜನ ನಿಹಾಂಗ್‌ಗಳ ಬಂಧನವಾಗಿದೆ. ಲಖ್ಬೀರ್ ಸಿಂಗ್ ಪ್ರತಿಭಟನಾ ಸ್ಥಳಕ್ಕೆ ಬಂದುದ್ದೇಕೆ, ಅವರನ್ನು ಕರೆ ತಂದವರು ಯಾರು? ಆತ ಧಾರ್ಮಿಕ ಗ್ರಂಥವನ್ನು ಅಪವಿತ್ರಗೊಳಿಸಿದ್ದಕ್ಕೆ ಸಾಕ್ಷಿ ಏನು? ಆತನನ್ನು ಪೊಲೀಸರಿಗೆ ಏಕೆ ಒಪ್ಪಿಸಲಿಲ್ಲ ಎಂಬ ಪ್ರಶ್ನೆಗಳಿಗೆ ನಿಹಾಂಗ್‌ಗಳು ಇನ್ನು ಉತ್ತರಿಸಿಲ್ಲ. ಈ ಸಂದರ್ಭದಲ್ಲಿ ಬಾಬಾ ಅಮನ್ ಸಿಂಗ್ ಕೇಂದ್ರ ಸಚಿವರನ್ನು ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮುಂದುವರೆದು ಮಾತನಾಡಿರುವ ಅಮನ್ ಸಿಂಗ್, “ಇದೇ ಅಕ್ಟೋಬರ್ 27 ರಂದು ನವದೆಹಲಿಯಲ್ಲಿ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡುತ್ತಿದ್ದೇವೆ. ಆ ನಂತರ ನಾವು ಧರಣಿ ಮುಂದುವರೆಸಬೇಕೆ ಅಥವಾ ಅಂತ್ಯಗೊಳಿಸಬೇಕು ಎಂದು ನಿರ್ಧರಿಸುತ್ತೇವೆ. ಸಂಗತ್ ಹೊರಡಿ ಎಂದರೆ ನಾವು ಹೊರಡುತ್ತೇವೆ ಎಂದು ಹೇಳಿದ್ದಾರೆ. ನಮಗೆ ನಮ್ಮ ಧರ್ಮಕ್ಕಾಗಿ ಹೋರಾಡುವುದು ಮೊದಲ ಆಯ್ಕೆ, ಎರಡನೇಯದು ರೈತರ ವಿಚಾರ ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ ಕೇಂದ್ರ ಕೃಷಿ ಸಚಿವಾಲಯದ ರಾಜ್ಯ ಸಚಿವ ಕೈಲಾಶ್ ಚೌಧರಿಯ ಬಂಗಲೆಯಲ್ಲಿ ಅಂದಿನ ರಹಸ್ಯ ಸಭೆ ನಡೆದಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೈಲಾಶ್ ಚೌಧರಿಯ ಜೊತೆಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿದ್ದ, ವಜಾಗೊಂಡಿರುವ ಪೊಲೀಸ್ ಅಧಿಕಾರಿ ಗುರ್ಮೀತ್ ‘ಪಿಂಕಿ‘ ಮತ್ತು ಬಿಜೆಪಿ ಕಿಸಾನ್ ಮೋರ್ಚಾದ ಸುಖ್ಮೀಂದರ್ ಪಾಲ್ ಸಿಂಗ್ ಗ್ರೇವಾಲ್ ಸಹ ಸಭೆಯಲ್ಲಿ ಇದ್ದರು ಎಂದು ತಿಳಿದು ಬಂದಿದೆ.

ನಿಹಾಂಗ್ ಗುಂಪು ಮತ್ತು ಬಿಜೆಪಿ ನಾಯಕರ ನಡುವಿನ ಈ ರಹಸ್ಯ ಭೇಟಿಯ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ರೈತ ಹೋರಾಟ ನೆಲದಲ್ಲಿ ಹತ್ಯೆ: ಬಿಜೆಪಿ ಸಚಿವರೊಂದಿಗೆ ಆರೋಪಿತ ನಿಹಾಂಗ್ ಗುಂಪಿನ ಮುಖ್ಯಸ್ಥ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...