Homeಮುಖಪುಟಬಿಜೆಪಿ ಸೇರಿದರೆ ನನ್ನ ಮೇಲಿನ ಅಮಾನತು ತೆರವಾಗಬಹುದು : ಬಜರಂಗ್ ಪುನಿಯಾ

ಬಿಜೆಪಿ ಸೇರಿದರೆ ನನ್ನ ಮೇಲಿನ ಅಮಾನತು ತೆರವಾಗಬಹುದು : ಬಜರಂಗ್ ಪುನಿಯಾ

- Advertisement -
- Advertisement -

“ಒಂದು ವೇಳೆ ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳ್ಳಲಿದೆ” ಎಂದು ಒಲಿಂಪಿಕ್ ಪದಕ ವಿಜೇತ ಭಾರತೀಯ ಕುಸ್ತಿಪಟು ಬಜರಂಗ್ ಪುನಿಯಾ ಹೇಳಿದ್ದಾರೆ.

ಉದ್ದೀಪನ ಮದ್ದು ಪರೀಕ್ಷೆಗೆ (ಡೋಪ್ ಟೆಸ್ಟ್‌) ಮಾದರಿ ನೀಡಲು ನಿರಾಕರಿಸಿದ ಕಾರಣಕ್ಕೆ ನಾಲ್ಕು ವರ್ಷಗಳ ಅವಧಿಗೆ ಮಾನತುಗೊಂಡ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಮಾರ್ಚ್ 10ರಂದು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಟ್ರಯಲ್ಸ್‌ ಸಂದರ್ಭದಲ್ಲಿ ಮಾದರಿ ನೀಡಲು ನಿರಾಕರಿಸುವ ಮೂಲಕ ಬಜರಂಗ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (ನಾಡಾ) ಹೇಳಿದೆ.

ಇದೇ ಆರೋಪದಲ್ಲಿ ಏಪ್ರಿಲ್ 23ರಂದು ಬಜರಂಗ್ ಅವರನ್ನು ನಾಡಾ ಅಮಾನತು ಮಾಡಿತ್ತು. ಅದರಂತೆ ವಿಶ್ವ ಕುಸ್ತಿ ಒಕ್ಕೂಟವೂ (ಯುಡಬ್ಲ್ಯುಡಬ್ಲ್ಯು) ಅಮಾನತು ಮಾಡಿತ್ತು.

“ನನಗೆ ಆಘಾತವಾಗಿಲ್ಲ. ಕಳೆದೆ ಒಂದು ವರ್ಷದಿಂದ ವಿವಾದದ ಕುರಿತು ಚರ್ಚೆ ನಡೆಯುತ್ತಿದೆ. ನಾಡಾಗೆ ಮಾದರಿ ನೀಡಲು ನಾನು ನಿರಾಕರಿಸಿಲ್ಲ ಎಂದು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ. ಉದ್ದೀಪನ ಮದ್ದು ಪರೀಕ್ಷೆ ನಡೆಸಲು ಅವಧಿ ಮುಗಿದ ಕಿಟ್‌ನೊಂದಿಗೆ (2023, ಡಿಸೆಂಬರ್) ನನ್ನ ಮನೆಗೆ ಭೇಟಿ ನೀಡಿದ್ದರು. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲೂ ನಾನು ಪೋಸ್ಟ್ ಹಂಚಿದ್ದೇನೆ” ಎಂದು ಅವರು ಹೇಳಿದ್ದಾರೆ.

‘ಅವಧಿ ಮುಗಿದ ಕಿಟ್ ಆಟಗಾರನಿಗೆ ನೀಡುವಂತಿಲ್ಲ. ನನ್ನ ತಂಡದ ಗಮನಕ್ಕೂ ಬಂದಿದೆ. 2020, 2021, 2022ರ ಅವಧಿ ಮುಗಿದ ಕಿಟ್ ನೀಡಲಾಗಿತ್ತು. ನಾನು ಪರೀಕ್ಷೆಗೆ ಮೂತ್ರದ ಮಾದರಿಯನ್ನು ನೀಡಿದ್ದೇನೆ. ಆದರೆ, ನನ್ನ ತಂಡವು ಕಿಟ್ ಪರಿಶೀಲಿಸಿದಾಗ ಅವಧಿ ಮುಗಿದಿದೆ ಎಂದು ವಿಚಾರ ತಿಳಿದು ಬಂದಿದೆ. ಆದ್ದರಿಂದ ಕಿಟ್‌ನ ವಿಡಿಯೋ ಮಾಡಿ ನಾಡಾಗೆ ಮೇಲ್ ಮಾಡಿದ್ದೇವೆ. ಅವರ ತಪ್ಪಿನ ಬಗ್ಗೆ ಮಾಹಿತಿ ನೀಡಿದ್ದೇವೆ. ಆದರೆ, ತಪ್ಪು ಒಪ್ಪಿಕೊಳ್ಳಲು ಅವರು ಸಿದ್ಧರಿರಲಿಲ್ಲ” ಎಂದು ಪುನಿಯಾ ತಿಳಿಸಿದ್ದಾರೆ.

“ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಗೆ ನಾವು ಬೆಂಬಲ ನೀಡಿದ್ದರಿಂದ ಸರ್ಕಾರ ನನ್ನ ಮೇಲೆ ಸೇಡು ತೀರಿಸಲು ಯತ್ನಿಸುತ್ತಿದೆ” ಎಂದು ಪುನಿಯಾ ಆರೋಪ ಮಾಡಿದ್ದಾರೆ.

“ನಾನು ಕಳೆದ 10-12 ವರ್ಷಗಳಿಂದ ಸ್ಪರ್ಧಿಸುತ್ತಿದ್ದೇನೆ. ಎಲ್ಲಾ ಪಂದ್ಯಾವಳಿಗಳಿಗೂ ಮುನ್ನ ಮಾದರಿಯನ್ನು ನೀಡಿದ್ದೇನೆ. ಆದರೆ, ಸರ್ಕಾರದ ಉದ್ದೇಶವು ನಮ್ಮನ್ನು ಒಡೆಯುವುದು, ಅವರಿಗೆ ತಲೆ ಬಾಗುವಂತೆ ಮಾಡುವುದು. ನಾನು ಬಿಜೆಪಿಗೆ ಸೇರಿದರೆ ನನ್ನ ವಿರುದ್ದದ ಎಲ್ಲಾ ಅಮಾನತು ಆದೇಶವನ್ನು ತೆಗೆದು ಹಾಕಬಹುದು ಎಂಬುದಾಗಿ ಭಾವಿಸುತ್ತೇನೆ” ಎಂದು ಬಜರಂಗ್ ಪುನಿಯಾ ಹೇಳಿದ್ದಾರೆ.

ಅಮಾನತು ಆದೇಶದಂತೆ ಬಜರಂಗ್ ಪುನಿಯಾ 2028ರ ಏಪ್ರಿಲ್‌ವರೆಗೆ ಸ್ಪರ್ಧಾತ್ಮಕ ಕುಸ್ತಿಗೆ ಮರಳುವಂತಿಲ್ಲ. ಅಲ್ಲದೆ ವಿದೇಶದಲ್ಲಿ ತರಬೇತುದಾರ ಕೆಲಸ ವಹಿಸಲು ಸಾಧ್ಯವಿಲ್ಲ ಎಂದು ವರದಿಯಾಗಿದೆ.

ಕುಸ್ತಿಪಟುಗಳಾದ ಸಾಕ್ಷ್ಮಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಪೋಗಟ್ ಕಳೆದ ವರ್ಷ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಭಾರತೀಯ ಕುಸ್ತಿ ಫೆಡರೇಶನ್‌ನ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ ಅವರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆ ಬಳಿಕ ಅವರು ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಿಂಗಳ ಹಿಂದೆ ನಡೆದ ಹರಿಯಾಣ ವಿಧಾನಸಭೆ ಚುನಾವಣೆಗೂ ಮುನ್ನ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್‌ ಸೇರಿದ್ದಾರೆ. ವಿನೇಶ್ ಪೋಗಟ್‌ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಶಾಸಕಿಯಾಗಿದ್ದಾರೆ. ಬಜರಂಗ್ ಪುನಿಯಾ ಈಗ ಅಮಾನತುಗೊಂಡಿದ್ದಾರೆ. ಮತ್ತೊಬ್ಬರು ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ : ದಲಿತ ಮೀಸಲಾತಿಯಡಿ ಉದ್ಯೋಗಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕ್ರೈಸ್ತ ಮಹಿಳೆ | ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...