Homeಮುಖಪುಟಬಿಜೆಪಿ ಸೇರಿದರೆ ನನ್ನ ಮೇಲಿನ ಅಮಾನತು ತೆರವಾಗಬಹುದು : ಬಜರಂಗ್ ಪುನಿಯಾ

ಬಿಜೆಪಿ ಸೇರಿದರೆ ನನ್ನ ಮೇಲಿನ ಅಮಾನತು ತೆರವಾಗಬಹುದು : ಬಜರಂಗ್ ಪುನಿಯಾ

- Advertisement -
- Advertisement -

“ಒಂದು ವೇಳೆ ಬಿಜೆಪಿಗೆ ಸೇರಿದರೆ ನನ್ನ ಮೇಲಿನ ಅಮಾನತು ತೆರವುಗೊಳ್ಳಲಿದೆ” ಎಂದು ಒಲಿಂಪಿಕ್ ಪದಕ ವಿಜೇತ ಭಾರತೀಯ ಕುಸ್ತಿಪಟು ಬಜರಂಗ್ ಪುನಿಯಾ ಹೇಳಿದ್ದಾರೆ.

ಉದ್ದೀಪನ ಮದ್ದು ಪರೀಕ್ಷೆಗೆ (ಡೋಪ್ ಟೆಸ್ಟ್‌) ಮಾದರಿ ನೀಡಲು ನಿರಾಕರಿಸಿದ ಕಾರಣಕ್ಕೆ ನಾಲ್ಕು ವರ್ಷಗಳ ಅವಧಿಗೆ ಮಾನತುಗೊಂಡ ಬಳಿಕ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಮಾರ್ಚ್ 10ರಂದು ರಾಷ್ಟ್ರೀಯ ತಂಡಕ್ಕೆ ಆಯ್ಕೆ ಟ್ರಯಲ್ಸ್‌ ಸಂದರ್ಭದಲ್ಲಿ ಮಾದರಿ ನೀಡಲು ನಿರಾಕರಿಸುವ ಮೂಲಕ ಬಜರಂಗ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (ನಾಡಾ) ಹೇಳಿದೆ.

ಇದೇ ಆರೋಪದಲ್ಲಿ ಏಪ್ರಿಲ್ 23ರಂದು ಬಜರಂಗ್ ಅವರನ್ನು ನಾಡಾ ಅಮಾನತು ಮಾಡಿತ್ತು. ಅದರಂತೆ ವಿಶ್ವ ಕುಸ್ತಿ ಒಕ್ಕೂಟವೂ (ಯುಡಬ್ಲ್ಯುಡಬ್ಲ್ಯು) ಅಮಾನತು ಮಾಡಿತ್ತು.

“ನನಗೆ ಆಘಾತವಾಗಿಲ್ಲ. ಕಳೆದೆ ಒಂದು ವರ್ಷದಿಂದ ವಿವಾದದ ಕುರಿತು ಚರ್ಚೆ ನಡೆಯುತ್ತಿದೆ. ನಾಡಾಗೆ ಮಾದರಿ ನೀಡಲು ನಾನು ನಿರಾಕರಿಸಿಲ್ಲ ಎಂದು ಹಿಂದೆಯೂ ಸ್ಪಷ್ಟಪಡಿಸಿದ್ದೇನೆ. ಉದ್ದೀಪನ ಮದ್ದು ಪರೀಕ್ಷೆ ನಡೆಸಲು ಅವಧಿ ಮುಗಿದ ಕಿಟ್‌ನೊಂದಿಗೆ (2023, ಡಿಸೆಂಬರ್) ನನ್ನ ಮನೆಗೆ ಭೇಟಿ ನೀಡಿದ್ದರು. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲೂ ನಾನು ಪೋಸ್ಟ್ ಹಂಚಿದ್ದೇನೆ” ಎಂದು ಅವರು ಹೇಳಿದ್ದಾರೆ.

‘ಅವಧಿ ಮುಗಿದ ಕಿಟ್ ಆಟಗಾರನಿಗೆ ನೀಡುವಂತಿಲ್ಲ. ನನ್ನ ತಂಡದ ಗಮನಕ್ಕೂ ಬಂದಿದೆ. 2020, 2021, 2022ರ ಅವಧಿ ಮುಗಿದ ಕಿಟ್ ನೀಡಲಾಗಿತ್ತು. ನಾನು ಪರೀಕ್ಷೆಗೆ ಮೂತ್ರದ ಮಾದರಿಯನ್ನು ನೀಡಿದ್ದೇನೆ. ಆದರೆ, ನನ್ನ ತಂಡವು ಕಿಟ್ ಪರಿಶೀಲಿಸಿದಾಗ ಅವಧಿ ಮುಗಿದಿದೆ ಎಂದು ವಿಚಾರ ತಿಳಿದು ಬಂದಿದೆ. ಆದ್ದರಿಂದ ಕಿಟ್‌ನ ವಿಡಿಯೋ ಮಾಡಿ ನಾಡಾಗೆ ಮೇಲ್ ಮಾಡಿದ್ದೇವೆ. ಅವರ ತಪ್ಪಿನ ಬಗ್ಗೆ ಮಾಹಿತಿ ನೀಡಿದ್ದೇವೆ. ಆದರೆ, ತಪ್ಪು ಒಪ್ಪಿಕೊಳ್ಳಲು ಅವರು ಸಿದ್ಧರಿರಲಿಲ್ಲ” ಎಂದು ಪುನಿಯಾ ತಿಳಿಸಿದ್ದಾರೆ.

“ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಗೆ ನಾವು ಬೆಂಬಲ ನೀಡಿದ್ದರಿಂದ ಸರ್ಕಾರ ನನ್ನ ಮೇಲೆ ಸೇಡು ತೀರಿಸಲು ಯತ್ನಿಸುತ್ತಿದೆ” ಎಂದು ಪುನಿಯಾ ಆರೋಪ ಮಾಡಿದ್ದಾರೆ.

“ನಾನು ಕಳೆದ 10-12 ವರ್ಷಗಳಿಂದ ಸ್ಪರ್ಧಿಸುತ್ತಿದ್ದೇನೆ. ಎಲ್ಲಾ ಪಂದ್ಯಾವಳಿಗಳಿಗೂ ಮುನ್ನ ಮಾದರಿಯನ್ನು ನೀಡಿದ್ದೇನೆ. ಆದರೆ, ಸರ್ಕಾರದ ಉದ್ದೇಶವು ನಮ್ಮನ್ನು ಒಡೆಯುವುದು, ಅವರಿಗೆ ತಲೆ ಬಾಗುವಂತೆ ಮಾಡುವುದು. ನಾನು ಬಿಜೆಪಿಗೆ ಸೇರಿದರೆ ನನ್ನ ವಿರುದ್ದದ ಎಲ್ಲಾ ಅಮಾನತು ಆದೇಶವನ್ನು ತೆಗೆದು ಹಾಕಬಹುದು ಎಂಬುದಾಗಿ ಭಾವಿಸುತ್ತೇನೆ” ಎಂದು ಬಜರಂಗ್ ಪುನಿಯಾ ಹೇಳಿದ್ದಾರೆ.

ಅಮಾನತು ಆದೇಶದಂತೆ ಬಜರಂಗ್ ಪುನಿಯಾ 2028ರ ಏಪ್ರಿಲ್‌ವರೆಗೆ ಸ್ಪರ್ಧಾತ್ಮಕ ಕುಸ್ತಿಗೆ ಮರಳುವಂತಿಲ್ಲ. ಅಲ್ಲದೆ ವಿದೇಶದಲ್ಲಿ ತರಬೇತುದಾರ ಕೆಲಸ ವಹಿಸಲು ಸಾಧ್ಯವಿಲ್ಲ ಎಂದು ವರದಿಯಾಗಿದೆ.

ಕುಸ್ತಿಪಟುಗಳಾದ ಸಾಕ್ಷ್ಮಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಪೋಗಟ್ ಕಳೆದ ವರ್ಷ ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಖಂಡಿಸಿ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರು. ಭಾರತೀಯ ಕುಸ್ತಿ ಫೆಡರೇಶನ್‌ನ (ಡಬ್ಲ್ಯುಎಫ್‌ಐ) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ವಿರುದ್ದ ಅವರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. ಆ ಬಳಿಕ ಅವರು ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ತಿಂಗಳ ಹಿಂದೆ ನಡೆದ ಹರಿಯಾಣ ವಿಧಾನಸಭೆ ಚುನಾವಣೆಗೂ ಮುನ್ನ ವಿನೇಶ್ ಪೋಗಟ್ ಮತ್ತು ಬಜರಂಗ್ ಪುನಿಯಾ ಕಾಂಗ್ರೆಸ್‌ ಸೇರಿದ್ದಾರೆ. ವಿನೇಶ್ ಪೋಗಟ್‌ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಶಾಸಕಿಯಾಗಿದ್ದಾರೆ. ಬಜರಂಗ್ ಪುನಿಯಾ ಈಗ ಅಮಾನತುಗೊಂಡಿದ್ದಾರೆ. ಮತ್ತೊಬ್ಬರು ಕುಸ್ತಿಪಟು ಸಾಕ್ಷಿ ಮಲಿಕ್ ಕುಸ್ತಿಗೆ ರಾಜೀನಾಮೆ ನೀಡಿದ್ದಾರೆ.

ಇದನ್ನೂ ಓದಿ : ದಲಿತ ಮೀಸಲಾತಿಯಡಿ ಉದ್ಯೋಗಕ್ಕಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕ್ರೈಸ್ತ ಮಹಿಳೆ | ಮೇಲ್ಮನವಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...