Homeಮುಖಪುಟ'ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..': ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

- Advertisement -
- Advertisement -

ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್‌ನ ಮುಂಬರುವ ಸೀಸನ್‌ಗಾಗಿ ತಮ್ಮನ್ನು ಸಂಪರ್ಕಿಸಲಾಗಿದೆ ಎಂದು ಸ್ಟಾಂಡ್‌ಅಪ್‌ ಕಾಮಿಡಿಯನ್ ಕುನಾಲ್ ಕಮ್ರಾ ಮಾಹಿತಿ ಹಂಚಿಕೊಂಡಿದ್ದಾರೆ.

ಮುಂಬರುವ ಸೀಸನ್‌ನ ಜವಾಬ್ದಾರಿ ವಹಿಸಿಕೊಂಡಿರುವ ಕಾಸ್ಟಿಂಗ್ ನಿರ್ದೇಶಕರು ರಿಯಾಲಿಟಿ ಟಿವಿ ಶೋನಲ್ಲಿ ಭಾಗವಹಿಸಲು ಕಮ್ರಾ ಅವರನ್ನು ಸಂಪರ್ಕಿಸಿದ್ದಾರೆ.

ಆದರೆ, ಕುನಾಲ್ ಕಮ್ರಾ ಈ ಆಫರ್ ಅನ್ನು ತಿರಸ್ಕರಿಸಿದ್ದಾರೆ. “ಬಿಗ್ ಬಾಸ್‌ನಲ್ಲಿ ಕಾಣಿಸಿಕೊಳ್ಳುವುದಕ್ಕಿಂತ ಮಾನಸಿಕ ಆಸ್ಪತ್ರೆ ಸೇರುವುದಕ್ಕೆ ಇಷ್ಟಪಡುತ್ತೇನೆ” ಎಂದು ಹೇಳಿದದ್ದಾರೆ. ಕುನಾಲ್ ಕಮ್ರಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಕಾಸ್ಟಿಂಗ್ ನಿರ್ದೇಶಕರೊಂದಿಗಿನ ತಮ್ಮ ಚಾಟ್‌ನ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ.

ಕಾಸ್ಟಿಂಗ್ ನಿರ್ದೇಶಕರಿಂದ ಬಂದ ಸಂದೇಶದಲ್ಲಿ, “ನಾನು ಬಿಗ್ ಬಾಸ್‌ನ ಈ ಸೀಸನ್‌ಗಾಗಿ ಕಾಸ್ಟಿಂಗ್ ಅನ್ನು ನಿರ್ವಹಿಸುತ್ತಿದ್ದೇನೆ. ನಿಮ್ಮ ಹೆಸರು ಆಯೋಜನಕರಿಗೆ ಆಸಕ್ತಿದಾಯಕವೆನಿಸುವ ವ್ಯಕ್ತಿಯಂತೆ ಕಂಡಿದೆ. ಈ ಬಗ್ಗೆ ನಿಮ್ಮ ಗಮನದಲ್ಲಿಲ್ಲದಿರಬಹುದು ಎಂದು ನನಗೆ ತಿಳಿದಿದೆ. ಆದರೆ, ಪ್ರಾಮಾಣಿಕವಾಗಿ ಹೇಳಬೇಕೆಂದರೆ, ನಿಮ್ಮ ನಿಜವಾದ ಪ್ರತಿಭೆ ತೋರಿಸಲು ಮತ್ತು ಬೃಹತ್ ಪ್ರೇಕ್ಷಕರನ್ನು ಗೆಲ್ಲಲು ಇದು ಉತ್ತಮ ವೇದಿಕೆಯಾಗಿದೆ. ನಿಮ್ಮ ಅಭಿಪ್ರಾಯವೇನು? ನಾವು ಈ ಬಗ್ಗೆ ಮಾತನಾಡಬಹುದೇ” ಎಂದು ಕೇಳಿದ್ದಾರೆ.

ಸಂದೇಶಕ್ಕೆ ಪ್ರತಿಕ್ರಿಯಿಸಿದ ಕುನಾಲ್, “ನಾನು ಮಾನಸಿಕ ಆಸ್ಪತ್ರೆಗೆ ಹೋಗುವುದು ಉತ್ತಮ…” ಎಂದು ಬರೆದಿದ್ದಾರೆ.

ಕುನಾಲ್ ಕಮ್ರಾ ಅವರಿಗೆ ಬಿಗ್ ಬಾಸ್ ಒಟಿಟಿ ಅಥವಾ ಬಿಗ್ ಬಾಸ್ 19 ಅನ್ನು ನೀಡಲಾಗಿದೆಯೇ ಎಂದು ಅವರು ನಿರ್ದಿಷ್ಟಪಡಿಸಿಲ್ಲ.

ಶಿವಸೇನಾ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಉದ್ದೇಶಿಸಿ ಮಾಡಿದ ವಿಡಂಬನೆಗಾಗಿ ಕುನಾಲ್ ಕಮ್ರಾ ಸುದ್ದಿಯಲ್ಲಿದ್ದಾರೆ. ಮದ್ರಾಸ್ ಹೈಕೋರ್ಟ್ ಈ ಹಿಂದೆ ಕುನಾಲ್ ಕಮ್ರಾ ಅವರಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿತ್ತು. ಹಾಸ್ಯನಟ ಮುಂಬೈ ಪೊಲೀಸರಿಂದ ಮೂರು ಸಮನ್ಸ್‌ಗಳನ್ನು ತಿರಸ್ಕರಿಸಿದ್ದಾರೆ.

ತನ್ನ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಅನ್ನು ಸಂಪರ್ಕಿಸಿದ್ದಾರೆ.

ಅವರ ಅರ್ಜಿಯು ಪ್ರಕರಣಗಳು ಆರ್ಟಿಕಲ್ 19 ರ ಅಡಿಯಲ್ಲಿ ಅವರ ಅಭಿವ್ಯಕ್ತಿ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಮತ್ತು ಸಂವಿಧಾನದ ಆರ್ಟಿಕಲ್ 21 ರ ಅಡಿಯಲ್ಲಿ ಬದುಕುವ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ವಾದಿಸುತ್ತದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...