Homeಅಂತರಾಷ್ಟ್ರೀಯಇಟಲಿ: ಆರ್ಥಿಕ ಚೇತರಿಕೆಗೆ ಹೊಸ ಉತ್ತೇಜಕ ಪ್ಯಾಕೇಜ್‌ಗಳಿಗೆ ಅನುಮೋದನೆ

ಇಟಲಿ: ಆರ್ಥಿಕ ಚೇತರಿಕೆಗೆ ಹೊಸ ಉತ್ತೇಜಕ ಪ್ಯಾಕೇಜ್‌ಗಳಿಗೆ ಅನುಮೋದನೆ

- Advertisement -
- Advertisement -

ಕೊರೊನಾ ವೈರಸ್ ಬಿಕ್ಕಟ್ಟಿನಿಂದ ಉಂಟಾದ ಆರ್ಥಿಕ ಹಿಂಜರಿತದಿಂದ ದೇಶದ ಪ್ರಗತಿಯನ್ನು ಹೆಚ್ಚಿಸಲು ಇಟಲಿ 2021 ರ ಬಜೆಟ್‌ನಲ್ಲಿ ಹೊಸ ಉತ್ತೇಜಕ ಪ್ಯಾಕೇಜ್‌ಗಳಿಗೆ ಅನುಮೋದನೆ ನೀಡಿದೆ ಎಂದು ಸರ್ಕಾರದ ಕ್ಯಾಬಿನೆಟ್ ಸಭೆಯ ನಂತರ ತಿಳಿಸಿದೆ.

5-ಸ್ಟಾರ್ ಮೂವ್ಮೆಂಟ್ ಮತ್ತು ಮಧ್ಯ-ಎಡ ಪಾರ್ಟಿಟೊ ಡೆಮಾಕ್ರಟಿಕೊ (ಪಿಡಿ) (Anti-establishment 5-Star Movement and Centre-left Partito Democratico) ಪಕ್ಷದ ನೇತೃತ್ವದ ಸಮ್ಮಿಶ್ರ ಸರ್ಕಾರವು ಉತ್ತೇಜಕ ಪ್ಯಾಕೇಜಿನ ಪ್ರಾಥಮಿಕ ಆವೃತ್ತಿಯನ್ನು ಒಪ್ಪಿಕೊಂಡಿತು ಎಂದು ಸರ್ಕಾರದ ಮೂಲವೊಂದು ತಿಳಿಸಿದೆ.

ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯನ್ನು ಬೆಂಬಲಿಸುವ ಕ್ರಮಗಳ ಪೈಕಿ, ಕೊರೊನಾ ವೈರಸ್ ಲಾಕ್‌ಡೌನ್‌ಗಳಿಂದ ಹೆಚ್ಚು ಹಾನಿಗೊಳಗಾದ ಕಂಪನಿಗಳಿಗೆ ಪರಿಹಾರ ನೀಡಲು ಸರ್ಕಾರವು 400 ಕೋಟಿ ಯೂರೋ ($4.7 billion) ನಿಧಿ ಸ್ಥಾಪಿಸುತ್ತದೆ. ಆರ್ಥಿಕವಾಗಿ ದುರ್ಬಲವಾಗಿರುವ ದಕ್ಷಿಣ ಇಟಲಿಯಲ್ಲಿ ಉದ್ಯೋಗವನ್ನು ಬೆಂಬಲಿಸಲು ತೆರಿಗೆ ವಿನಾಯಿತಿಗಳನ್ನು ನೀಡುತ್ತದೆ.

ಇದನ್ನೂ ಓದಿ: ಇಟಲಿಯಲ್ಲೇಕೆ ಹಾಗಾಯಿತು? : ಯೂರೋಪ್ ವೈದ್ಯರೊಬ್ಬರ ಸಂದರ್ಶನ

ಸಾಂಕ್ರಾಮಿಕ ರೋಗದಿಂದ ಹೆಚ್ಚು ಹಾನಿಗೊಳಗಾದ ಯುರೋಪಿಯನ್ ರಾಷ್ಟ್ರಗಳಲ್ಲಿ ಒಂದಾದ ಇಟಲಿ 2020 ಕ್ಕೆ 9% ಆರ್ಥಿಕ ಕುಸಿತದ ಮುನ್ಸೂಚನೆ ನೀಡಿದೆ ಮತ್ತು ಬಜೆಟ್ ಕೊರತೆಯು ಒಟ್ಟು ದೇಶೀಯ ಉತ್ಪನ್ನದ (GDP) 10.8% ಗೆ ಸಮನಾಗಿರುತ್ತದೆ. ಜೊತೆಗೆ 2021ರಲ್ಲಿ 6% ಆರ್ಥಿಕ ಬೆಳವಣಿಗೆಯನ್ನು ಮುನ್ಸೂಚಿಸಿದೆ.

ಮುಂದಿನ ವರ್ಷ ಇಟಲಿಯ ಕೊರತೆಯನ್ನು ಆರ್ಥಿಕ ಉತ್ಪಾದನೆಯ 7% ರಷ್ಟನ್ನು ಉಳಿಸಿಕೊಳ್ಳುವ ನಿರೀಕ್ಷೆಯಲ್ಲಿ ವಿಸ್ತರಣಾ ಪ್ಯಾಕೇಜ್ ಇದೆ. ಇದು ಏಪ್ರಿಲ್‌ ತಿಂಗಳಿನ 5.7% ಮುನ್ಸೂಚನೆಯಿಂದ ಹೆಚ್ಚುವರಿ ವೆಚ್ಚವನ್ನು ಪ್ರತಿಬಿಂಬಿಸುತ್ತದೆ.

ಚೀನಾದಲ್ಲಿ ಹುಟ್ಟಿದ ಸಾಂಕ್ರಾಮಿಕ ವೈರಸ್‌ನಿಂದ ಹೆಚ್ಚು ಹಾನಿಗೊಳಗಾದ ದೇಶ ಇಟಲಿಯಾಗಿದೆ. ಕೊರೊನಾ ಸಾಂಕ್ರಾಮಿಕದಿಂದ ಅತೀ ಹೆಚ್ಚು ಜನರು ಪ್ರಾಣ ತೆತ್ತಿದ್ದು ಇಲ್ಲಿಯೆ. ಇಟಲಿಯ ನೆರವಿಗೆ ದ್ವೀಪ ರಾಷ್ಟ್ರವಾದ ಕ್ಯೂಬಾದಿಂದ ಬಲಿಷ್ಠ ವೈದ್ಯರು ಮತ್ತು ದಾದಿಯರ ತಂಡ ಧಾವಿಸಿತ್ತು.


ಇದನ್ನೂ ಓದಿ:ಕೊರೊನಾ ವಿಷಯದಲ್ಲಿ ರಾಹುಲ್‌ ಮಾತು ಕೇಳಿದ್ದರೆ ಭಾರತ ಇಟಲಿಯಾಗುತ್ತಿತ್ತು: ಯೋಗಿ ಆದಿತ್ಯನಾಥ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...