Homeಅಂತರಾಷ್ಟ್ರೀಯಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

ಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

- Advertisement -
- Advertisement -

ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪಾಠಗಳನ್ನು ಕಡ್ಡಾಯಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಇಟಲಿ ಪಾತ್ರವಾಗಿದೆ. ಬದಲಾಗುತ್ತಿರುವ ಹವಾಮಾನ, ಹೆಚ್ಚುತ್ತಿರುವ ತಾಪಮಾನ, ವಿಪರೀತಗೊಳ್ಳುತ್ತಿರುವ ಮಾಲಿನ್ಯದಂತ ವಿಷ ವರ್ತುಲದಲ್ಲಿ ಮನುಷ್ಯ ಬದುಕುತ್ತಿದ್ದಾನೆ. ಹೀಗಾಗಿ ಹವಾಮಾನ ಬದಲಾವಣೆ ಪಾಠ ಅತ್ಯಗತ್ಯವಾಗಿದೆ. ಈಗ ಹವಾಮಾನ ಬದಲಾವಣೆ ಕುರಿತ ಪಾಠಗಳನ್ನು ಶಾಲಾ ಮಕ್ಕಳಿಗೆ ಇಟಲಿ ಸರ್ಕಾರ ಕಡ್ಡಾಯಗೊಳಿಸಿದೆ.

ಈ ಬಗ್ಗೆ ಶಿಕ್ಷಣ ಮಂತ್ರಿ ಲೋರೆಂಜೋ ಫೀಯೋರಾಮೊಂಟಿ ಮಾತನಾಡಿ, ಮುಂದಿನ ವರ್ಷದ ಶೈಕ್ಷಣಿಕ ವರ್ಷದಿಂದ  ಹವಾಮಾನ ಬದಲಾವಣೆ ಪಾಠಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಇಟಲಿಯ ಪ್ರತಿ ಶಾಲೆಯೂ  ಹವಾಮಾನ ಬದಲಾವಣೆ ಪಾಠಕ್ಕಾಗಿ ಒಂದು ಗಂಟೆ ಮೀಸಲಿಡಲಿವೆ ಎಂದು ಹೇಳಿದ್ದಾರೆ.

’ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಯನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ಶಿಕ್ಷಣ ಸರಳೀಕೃತಗೊಳಿಸಲಾಗುವುದು. ಇದಕ್ಕಾಗಿ ಇಡೀ ಶೈಕ್ಷಣಿಕ ಆಡಳಿತ ಮಂಡಳಿ, ಶಿಕ್ಷಣದ ಮಾದರಿ ಹಾಗೂ ಶೈಕ್ಷಣಿಕ ಸಚಿವಾಲಯದಲ್ಲೂ ಬದಲಾವಣೆ ತರಲಾಗುವುದು. ಇಟಾಲಿಯನ್ ಶಿಕ್ಷಣ ವ್ಯವಸ್ಥೆಯಲ್ಲಿ ಹಾಗೂ ನಾವು ಕಲಿಯುವ ಶಾಲೆಯಲ್ಲಿ ಎಲ್ಲದರಲ್ಲೂ ಪರಿಸರ ಮತ್ತು ಸಮಾಜದ ಕುರಿತ ಪಠ್ಯ ಇರುವಂತೆ ವ್ಯವಸ್ಥೆ ಮಾಡಲು ಬಯಸುತ್ತೇನೆ’ ಎಂದು ಲೋರೆಂಜೋ ಹೇಳಿದರು.

ಲೋರೇಂಜೋ ಅವರು ವಿದ್ಯಾರ್ಥಿಗಳು ಶಾಲೆ ಬಿಟ್ಟು ಹವಾಮಾನ ಬದಲಾವಣೆ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆಗ ವಿರೋಧ ಪಕ್ಷದವರು ಲೋರೆಂಜೋ ಅವರ ಹೇಳಿಕೆ ಮತ್ತು ನೀತಿಯನ್ನು ಖಂಡಿಸಿದ್ದರು. ಸ್ವತಃ ಅರ್ಥಶಾಸ್ತ್ರಜ್ಞರೂ ಆಗಿರುವ 42 ವಯಸ್ಸಿನ ಲೊರೆಂಜೊ `ಒಟ್ಟು ದೇಶೀಯ ಉತ್ಪನ್ನವನ್ನು ಇನ್ನು ಮುಂದೆ ದೇಶದ ಆರ್ಥಿಕ ಯಶಸ್ಸಿನ ಮುಖ್ಯ ಅಳತೆಯಾಗಿ ಬಳಸಬಾರದು’ ಎಂಬ ವಾದವನ್ನು ಮುಂದಿಟ್ಟಿದ್ದಂತವರು. ಅದಕ್ಕಾಗಿ ಬಲಪಂಥೀಯರಿಂದ ತೀವ್ರ ವಿರೋಧವನ್ನೂ ಎದುರಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದಾಗಿನಿಂದಲೂ ಬಲಪಂಥೀಯ ವಿರೋಧಕ್ಕೆ ಗುರಿಯಾಗಿದ್ದಾರೆ.

ಶಿಕ್ಷಣಕ್ಕಾಗಿ ಹಣ ಸಂಗ್ರಹಿಸಲು ವಿಮಾನಯಾನ ಟಿಕೆಟ್‌ ದರ ಹೆಚ್ಚಿಸುವುದು, ಪ್ಲಾಸ್ಟಿಕ್ ಮತ್ತು ಸಕ್ಕರೆ ಆಹಾರಗಳ ಮೇಲೆ ಹೊಸದಾಗಿ ತೆರಿಗೆ ಹೇರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದನ್ನು ವಿಮರ್ಶಕರು ತೀವ್ರವಾಗಿ ಖಂಡಿಸಿದ್ದರು. ಇಟಾಲಿಯನ್‌ ಜನತೆ ಈಗಾಗಲೇ ಅಧಿಕ ತೆರಿಗೆ ಭರಿಸುತ್ತಿದ್ದಾರೆ. ಹೀಗಿರುವಾಗ ಹೊಸ ತೆರಿಗೆ ಕಟ್ಟುವುದು ಎಷ್ಟು ಸರಿ..? ಎಂದು ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಎಲ್ಲಾ ಟೀಕೆಗಳ ಹೊರತಾಗಿಯೂ, ಸರ್ಕಾರ 2020ರ ಬಜೆಟ್‌ನಲ್ಲಿ ಪ್ಲಾಸ್ಟಿಕ್ ತೆರಿಗೆ ಮತ್ತು ಸಕ್ಕರೆ ಪಾನೀಯಗಳ ಮೇಲಿನ ಹೊಸ ತೆರಿಗೆ ವಿಧಿಸಿದೆ. ‘ಮೊದಲು ನಾನು ಹೇಳಿದ್ದ ನೀತಿಯನ್ನು ಅಪಹಾಸ್ಯ ಮಾಡಲಾಗಿತ್ತು. ಆದರೆ ಕೆಲ ತಿಂಗಳುಗಳ ನಂತರ ಸರ್ಕಾರ ಎರಡೂ ಪ್ರಸ್ತಾಪಗಳನ್ನು ಬಳಸುತ್ತಿದ್ದು, ಇದು ನಿಜವಾಗಿಯೂ ಸಾಗಬೇಕಾದ ದಾರಿ ಎಂದು ಜನರಿಗೆ ಮನವರಿಕೆಯಾಗಿದೆ’ ಎಂದು ಅರ್ಥಶಾಸ್ತ್ರಜ್ಞರೂ, ಶಿಕ್ಷಣ ಮಂತ್ರಿಯೂ ಆದ ಲೊರೆಂಜೊ ಹೇಳಿದ್ದಾರೆ.

ಸಾಂಪ್ರದಾಯಿಕ ವಿಷಯಗಳಾದ ಭೂಗೋಳಶಾಸ್ತ್ರ, ಗಣಿತಶಾಸ್ತ್ರ, ಭೌತಶಾಸ್ತ್ರ ವಿಷಯಗಳನ್ನು ಸುಸ್ಥಿರ ಬೆಳವಣಿಗೆಯ ಆಯಾಮದಿಂದಲೇ ಬೋಧಿಸಲಾಗುವುದು ಎಂದು ವಿಶ್ವವಿದ್ಯಾಲಯವೊಂದರ ಮಾಜಿ ಪ್ರಾಧ್ಯಾಪಕರೂ ಆಗಿರುವ ಲೊರೆಂಜೊ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...