Homeಅಂತರಾಷ್ಟ್ರೀಯಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

ಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

- Advertisement -
- Advertisement -

ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪಾಠಗಳನ್ನು ಕಡ್ಡಾಯಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಇಟಲಿ ಪಾತ್ರವಾಗಿದೆ. ಬದಲಾಗುತ್ತಿರುವ ಹವಾಮಾನ, ಹೆಚ್ಚುತ್ತಿರುವ ತಾಪಮಾನ, ವಿಪರೀತಗೊಳ್ಳುತ್ತಿರುವ ಮಾಲಿನ್ಯದಂತ ವಿಷ ವರ್ತುಲದಲ್ಲಿ ಮನುಷ್ಯ ಬದುಕುತ್ತಿದ್ದಾನೆ. ಹೀಗಾಗಿ ಹವಾಮಾನ ಬದಲಾವಣೆ ಪಾಠ ಅತ್ಯಗತ್ಯವಾಗಿದೆ. ಈಗ ಹವಾಮಾನ ಬದಲಾವಣೆ ಕುರಿತ ಪಾಠಗಳನ್ನು ಶಾಲಾ ಮಕ್ಕಳಿಗೆ ಇಟಲಿ ಸರ್ಕಾರ ಕಡ್ಡಾಯಗೊಳಿಸಿದೆ.

ಈ ಬಗ್ಗೆ ಶಿಕ್ಷಣ ಮಂತ್ರಿ ಲೋರೆಂಜೋ ಫೀಯೋರಾಮೊಂಟಿ ಮಾತನಾಡಿ, ಮುಂದಿನ ವರ್ಷದ ಶೈಕ್ಷಣಿಕ ವರ್ಷದಿಂದ  ಹವಾಮಾನ ಬದಲಾವಣೆ ಪಾಠಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಇಟಲಿಯ ಪ್ರತಿ ಶಾಲೆಯೂ  ಹವಾಮಾನ ಬದಲಾವಣೆ ಪಾಠಕ್ಕಾಗಿ ಒಂದು ಗಂಟೆ ಮೀಸಲಿಡಲಿವೆ ಎಂದು ಹೇಳಿದ್ದಾರೆ.

’ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಯನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ಶಿಕ್ಷಣ ಸರಳೀಕೃತಗೊಳಿಸಲಾಗುವುದು. ಇದಕ್ಕಾಗಿ ಇಡೀ ಶೈಕ್ಷಣಿಕ ಆಡಳಿತ ಮಂಡಳಿ, ಶಿಕ್ಷಣದ ಮಾದರಿ ಹಾಗೂ ಶೈಕ್ಷಣಿಕ ಸಚಿವಾಲಯದಲ್ಲೂ ಬದಲಾವಣೆ ತರಲಾಗುವುದು. ಇಟಾಲಿಯನ್ ಶಿಕ್ಷಣ ವ್ಯವಸ್ಥೆಯಲ್ಲಿ ಹಾಗೂ ನಾವು ಕಲಿಯುವ ಶಾಲೆಯಲ್ಲಿ ಎಲ್ಲದರಲ್ಲೂ ಪರಿಸರ ಮತ್ತು ಸಮಾಜದ ಕುರಿತ ಪಠ್ಯ ಇರುವಂತೆ ವ್ಯವಸ್ಥೆ ಮಾಡಲು ಬಯಸುತ್ತೇನೆ’ ಎಂದು ಲೋರೆಂಜೋ ಹೇಳಿದರು.

ಲೋರೇಂಜೋ ಅವರು ವಿದ್ಯಾರ್ಥಿಗಳು ಶಾಲೆ ಬಿಟ್ಟು ಹವಾಮಾನ ಬದಲಾವಣೆ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆಗ ವಿರೋಧ ಪಕ್ಷದವರು ಲೋರೆಂಜೋ ಅವರ ಹೇಳಿಕೆ ಮತ್ತು ನೀತಿಯನ್ನು ಖಂಡಿಸಿದ್ದರು. ಸ್ವತಃ ಅರ್ಥಶಾಸ್ತ್ರಜ್ಞರೂ ಆಗಿರುವ 42 ವಯಸ್ಸಿನ ಲೊರೆಂಜೊ `ಒಟ್ಟು ದೇಶೀಯ ಉತ್ಪನ್ನವನ್ನು ಇನ್ನು ಮುಂದೆ ದೇಶದ ಆರ್ಥಿಕ ಯಶಸ್ಸಿನ ಮುಖ್ಯ ಅಳತೆಯಾಗಿ ಬಳಸಬಾರದು’ ಎಂಬ ವಾದವನ್ನು ಮುಂದಿಟ್ಟಿದ್ದಂತವರು. ಅದಕ್ಕಾಗಿ ಬಲಪಂಥೀಯರಿಂದ ತೀವ್ರ ವಿರೋಧವನ್ನೂ ಎದುರಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದಾಗಿನಿಂದಲೂ ಬಲಪಂಥೀಯ ವಿರೋಧಕ್ಕೆ ಗುರಿಯಾಗಿದ್ದಾರೆ.

ಶಿಕ್ಷಣಕ್ಕಾಗಿ ಹಣ ಸಂಗ್ರಹಿಸಲು ವಿಮಾನಯಾನ ಟಿಕೆಟ್‌ ದರ ಹೆಚ್ಚಿಸುವುದು, ಪ್ಲಾಸ್ಟಿಕ್ ಮತ್ತು ಸಕ್ಕರೆ ಆಹಾರಗಳ ಮೇಲೆ ಹೊಸದಾಗಿ ತೆರಿಗೆ ಹೇರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದನ್ನು ವಿಮರ್ಶಕರು ತೀವ್ರವಾಗಿ ಖಂಡಿಸಿದ್ದರು. ಇಟಾಲಿಯನ್‌ ಜನತೆ ಈಗಾಗಲೇ ಅಧಿಕ ತೆರಿಗೆ ಭರಿಸುತ್ತಿದ್ದಾರೆ. ಹೀಗಿರುವಾಗ ಹೊಸ ತೆರಿಗೆ ಕಟ್ಟುವುದು ಎಷ್ಟು ಸರಿ..? ಎಂದು ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಎಲ್ಲಾ ಟೀಕೆಗಳ ಹೊರತಾಗಿಯೂ, ಸರ್ಕಾರ 2020ರ ಬಜೆಟ್‌ನಲ್ಲಿ ಪ್ಲಾಸ್ಟಿಕ್ ತೆರಿಗೆ ಮತ್ತು ಸಕ್ಕರೆ ಪಾನೀಯಗಳ ಮೇಲಿನ ಹೊಸ ತೆರಿಗೆ ವಿಧಿಸಿದೆ. ‘ಮೊದಲು ನಾನು ಹೇಳಿದ್ದ ನೀತಿಯನ್ನು ಅಪಹಾಸ್ಯ ಮಾಡಲಾಗಿತ್ತು. ಆದರೆ ಕೆಲ ತಿಂಗಳುಗಳ ನಂತರ ಸರ್ಕಾರ ಎರಡೂ ಪ್ರಸ್ತಾಪಗಳನ್ನು ಬಳಸುತ್ತಿದ್ದು, ಇದು ನಿಜವಾಗಿಯೂ ಸಾಗಬೇಕಾದ ದಾರಿ ಎಂದು ಜನರಿಗೆ ಮನವರಿಕೆಯಾಗಿದೆ’ ಎಂದು ಅರ್ಥಶಾಸ್ತ್ರಜ್ಞರೂ, ಶಿಕ್ಷಣ ಮಂತ್ರಿಯೂ ಆದ ಲೊರೆಂಜೊ ಹೇಳಿದ್ದಾರೆ.

ಸಾಂಪ್ರದಾಯಿಕ ವಿಷಯಗಳಾದ ಭೂಗೋಳಶಾಸ್ತ್ರ, ಗಣಿತಶಾಸ್ತ್ರ, ಭೌತಶಾಸ್ತ್ರ ವಿಷಯಗಳನ್ನು ಸುಸ್ಥಿರ ಬೆಳವಣಿಗೆಯ ಆಯಾಮದಿಂದಲೇ ಬೋಧಿಸಲಾಗುವುದು ಎಂದು ವಿಶ್ವವಿದ್ಯಾಲಯವೊಂದರ ಮಾಜಿ ಪ್ರಾಧ್ಯಾಪಕರೂ ಆಗಿರುವ ಲೊರೆಂಜೊ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...