Homeಅಂತರಾಷ್ಟ್ರೀಯಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

ಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

- Advertisement -
- Advertisement -

ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪಾಠಗಳನ್ನು ಕಡ್ಡಾಯಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಇಟಲಿ ಪಾತ್ರವಾಗಿದೆ. ಬದಲಾಗುತ್ತಿರುವ ಹವಾಮಾನ, ಹೆಚ್ಚುತ್ತಿರುವ ತಾಪಮಾನ, ವಿಪರೀತಗೊಳ್ಳುತ್ತಿರುವ ಮಾಲಿನ್ಯದಂತ ವಿಷ ವರ್ತುಲದಲ್ಲಿ ಮನುಷ್ಯ ಬದುಕುತ್ತಿದ್ದಾನೆ. ಹೀಗಾಗಿ ಹವಾಮಾನ ಬದಲಾವಣೆ ಪಾಠ ಅತ್ಯಗತ್ಯವಾಗಿದೆ. ಈಗ ಹವಾಮಾನ ಬದಲಾವಣೆ ಕುರಿತ ಪಾಠಗಳನ್ನು ಶಾಲಾ ಮಕ್ಕಳಿಗೆ ಇಟಲಿ ಸರ್ಕಾರ ಕಡ್ಡಾಯಗೊಳಿಸಿದೆ.

ಈ ಬಗ್ಗೆ ಶಿಕ್ಷಣ ಮಂತ್ರಿ ಲೋರೆಂಜೋ ಫೀಯೋರಾಮೊಂಟಿ ಮಾತನಾಡಿ, ಮುಂದಿನ ವರ್ಷದ ಶೈಕ್ಷಣಿಕ ವರ್ಷದಿಂದ  ಹವಾಮಾನ ಬದಲಾವಣೆ ಪಾಠಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಇಟಲಿಯ ಪ್ರತಿ ಶಾಲೆಯೂ  ಹವಾಮಾನ ಬದಲಾವಣೆ ಪಾಠಕ್ಕಾಗಿ ಒಂದು ಗಂಟೆ ಮೀಸಲಿಡಲಿವೆ ಎಂದು ಹೇಳಿದ್ದಾರೆ.

’ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಯನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ಶಿಕ್ಷಣ ಸರಳೀಕೃತಗೊಳಿಸಲಾಗುವುದು. ಇದಕ್ಕಾಗಿ ಇಡೀ ಶೈಕ್ಷಣಿಕ ಆಡಳಿತ ಮಂಡಳಿ, ಶಿಕ್ಷಣದ ಮಾದರಿ ಹಾಗೂ ಶೈಕ್ಷಣಿಕ ಸಚಿವಾಲಯದಲ್ಲೂ ಬದಲಾವಣೆ ತರಲಾಗುವುದು. ಇಟಾಲಿಯನ್ ಶಿಕ್ಷಣ ವ್ಯವಸ್ಥೆಯಲ್ಲಿ ಹಾಗೂ ನಾವು ಕಲಿಯುವ ಶಾಲೆಯಲ್ಲಿ ಎಲ್ಲದರಲ್ಲೂ ಪರಿಸರ ಮತ್ತು ಸಮಾಜದ ಕುರಿತ ಪಠ್ಯ ಇರುವಂತೆ ವ್ಯವಸ್ಥೆ ಮಾಡಲು ಬಯಸುತ್ತೇನೆ’ ಎಂದು ಲೋರೆಂಜೋ ಹೇಳಿದರು.

ಲೋರೇಂಜೋ ಅವರು ವಿದ್ಯಾರ್ಥಿಗಳು ಶಾಲೆ ಬಿಟ್ಟು ಹವಾಮಾನ ಬದಲಾವಣೆ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆಗ ವಿರೋಧ ಪಕ್ಷದವರು ಲೋರೆಂಜೋ ಅವರ ಹೇಳಿಕೆ ಮತ್ತು ನೀತಿಯನ್ನು ಖಂಡಿಸಿದ್ದರು. ಸ್ವತಃ ಅರ್ಥಶಾಸ್ತ್ರಜ್ಞರೂ ಆಗಿರುವ 42 ವಯಸ್ಸಿನ ಲೊರೆಂಜೊ `ಒಟ್ಟು ದೇಶೀಯ ಉತ್ಪನ್ನವನ್ನು ಇನ್ನು ಮುಂದೆ ದೇಶದ ಆರ್ಥಿಕ ಯಶಸ್ಸಿನ ಮುಖ್ಯ ಅಳತೆಯಾಗಿ ಬಳಸಬಾರದು’ ಎಂಬ ವಾದವನ್ನು ಮುಂದಿಟ್ಟಿದ್ದಂತವರು. ಅದಕ್ಕಾಗಿ ಬಲಪಂಥೀಯರಿಂದ ತೀವ್ರ ವಿರೋಧವನ್ನೂ ಎದುರಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದಾಗಿನಿಂದಲೂ ಬಲಪಂಥೀಯ ವಿರೋಧಕ್ಕೆ ಗುರಿಯಾಗಿದ್ದಾರೆ.

ಶಿಕ್ಷಣಕ್ಕಾಗಿ ಹಣ ಸಂಗ್ರಹಿಸಲು ವಿಮಾನಯಾನ ಟಿಕೆಟ್‌ ದರ ಹೆಚ್ಚಿಸುವುದು, ಪ್ಲಾಸ್ಟಿಕ್ ಮತ್ತು ಸಕ್ಕರೆ ಆಹಾರಗಳ ಮೇಲೆ ಹೊಸದಾಗಿ ತೆರಿಗೆ ಹೇರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದನ್ನು ವಿಮರ್ಶಕರು ತೀವ್ರವಾಗಿ ಖಂಡಿಸಿದ್ದರು. ಇಟಾಲಿಯನ್‌ ಜನತೆ ಈಗಾಗಲೇ ಅಧಿಕ ತೆರಿಗೆ ಭರಿಸುತ್ತಿದ್ದಾರೆ. ಹೀಗಿರುವಾಗ ಹೊಸ ತೆರಿಗೆ ಕಟ್ಟುವುದು ಎಷ್ಟು ಸರಿ..? ಎಂದು ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಎಲ್ಲಾ ಟೀಕೆಗಳ ಹೊರತಾಗಿಯೂ, ಸರ್ಕಾರ 2020ರ ಬಜೆಟ್‌ನಲ್ಲಿ ಪ್ಲಾಸ್ಟಿಕ್ ತೆರಿಗೆ ಮತ್ತು ಸಕ್ಕರೆ ಪಾನೀಯಗಳ ಮೇಲಿನ ಹೊಸ ತೆರಿಗೆ ವಿಧಿಸಿದೆ. ‘ಮೊದಲು ನಾನು ಹೇಳಿದ್ದ ನೀತಿಯನ್ನು ಅಪಹಾಸ್ಯ ಮಾಡಲಾಗಿತ್ತು. ಆದರೆ ಕೆಲ ತಿಂಗಳುಗಳ ನಂತರ ಸರ್ಕಾರ ಎರಡೂ ಪ್ರಸ್ತಾಪಗಳನ್ನು ಬಳಸುತ್ತಿದ್ದು, ಇದು ನಿಜವಾಗಿಯೂ ಸಾಗಬೇಕಾದ ದಾರಿ ಎಂದು ಜನರಿಗೆ ಮನವರಿಕೆಯಾಗಿದೆ’ ಎಂದು ಅರ್ಥಶಾಸ್ತ್ರಜ್ಞರೂ, ಶಿಕ್ಷಣ ಮಂತ್ರಿಯೂ ಆದ ಲೊರೆಂಜೊ ಹೇಳಿದ್ದಾರೆ.

ಸಾಂಪ್ರದಾಯಿಕ ವಿಷಯಗಳಾದ ಭೂಗೋಳಶಾಸ್ತ್ರ, ಗಣಿತಶಾಸ್ತ್ರ, ಭೌತಶಾಸ್ತ್ರ ವಿಷಯಗಳನ್ನು ಸುಸ್ಥಿರ ಬೆಳವಣಿಗೆಯ ಆಯಾಮದಿಂದಲೇ ಬೋಧಿಸಲಾಗುವುದು ಎಂದು ವಿಶ್ವವಿದ್ಯಾಲಯವೊಂದರ ಮಾಜಿ ಪ್ರಾಧ್ಯಾಪಕರೂ ಆಗಿರುವ ಲೊರೆಂಜೊ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...