Homeಅಂತರಾಷ್ಟ್ರೀಯಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

ಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

- Advertisement -
- Advertisement -

ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪಾಠಗಳನ್ನು ಕಡ್ಡಾಯಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಇಟಲಿ ಪಾತ್ರವಾಗಿದೆ. ಬದಲಾಗುತ್ತಿರುವ ಹವಾಮಾನ, ಹೆಚ್ಚುತ್ತಿರುವ ತಾಪಮಾನ, ವಿಪರೀತಗೊಳ್ಳುತ್ತಿರುವ ಮಾಲಿನ್ಯದಂತ ವಿಷ ವರ್ತುಲದಲ್ಲಿ ಮನುಷ್ಯ ಬದುಕುತ್ತಿದ್ದಾನೆ. ಹೀಗಾಗಿ ಹವಾಮಾನ ಬದಲಾವಣೆ ಪಾಠ ಅತ್ಯಗತ್ಯವಾಗಿದೆ. ಈಗ ಹವಾಮಾನ ಬದಲಾವಣೆ ಕುರಿತ ಪಾಠಗಳನ್ನು ಶಾಲಾ ಮಕ್ಕಳಿಗೆ ಇಟಲಿ ಸರ್ಕಾರ ಕಡ್ಡಾಯಗೊಳಿಸಿದೆ.

ಈ ಬಗ್ಗೆ ಶಿಕ್ಷಣ ಮಂತ್ರಿ ಲೋರೆಂಜೋ ಫೀಯೋರಾಮೊಂಟಿ ಮಾತನಾಡಿ, ಮುಂದಿನ ವರ್ಷದ ಶೈಕ್ಷಣಿಕ ವರ್ಷದಿಂದ  ಹವಾಮಾನ ಬದಲಾವಣೆ ಪಾಠಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಇಟಲಿಯ ಪ್ರತಿ ಶಾಲೆಯೂ  ಹವಾಮಾನ ಬದಲಾವಣೆ ಪಾಠಕ್ಕಾಗಿ ಒಂದು ಗಂಟೆ ಮೀಸಲಿಡಲಿವೆ ಎಂದು ಹೇಳಿದ್ದಾರೆ.

’ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಯನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ಶಿಕ್ಷಣ ಸರಳೀಕೃತಗೊಳಿಸಲಾಗುವುದು. ಇದಕ್ಕಾಗಿ ಇಡೀ ಶೈಕ್ಷಣಿಕ ಆಡಳಿತ ಮಂಡಳಿ, ಶಿಕ್ಷಣದ ಮಾದರಿ ಹಾಗೂ ಶೈಕ್ಷಣಿಕ ಸಚಿವಾಲಯದಲ್ಲೂ ಬದಲಾವಣೆ ತರಲಾಗುವುದು. ಇಟಾಲಿಯನ್ ಶಿಕ್ಷಣ ವ್ಯವಸ್ಥೆಯಲ್ಲಿ ಹಾಗೂ ನಾವು ಕಲಿಯುವ ಶಾಲೆಯಲ್ಲಿ ಎಲ್ಲದರಲ್ಲೂ ಪರಿಸರ ಮತ್ತು ಸಮಾಜದ ಕುರಿತ ಪಠ್ಯ ಇರುವಂತೆ ವ್ಯವಸ್ಥೆ ಮಾಡಲು ಬಯಸುತ್ತೇನೆ’ ಎಂದು ಲೋರೆಂಜೋ ಹೇಳಿದರು.

ಲೋರೇಂಜೋ ಅವರು ವಿದ್ಯಾರ್ಥಿಗಳು ಶಾಲೆ ಬಿಟ್ಟು ಹವಾಮಾನ ಬದಲಾವಣೆ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆಗ ವಿರೋಧ ಪಕ್ಷದವರು ಲೋರೆಂಜೋ ಅವರ ಹೇಳಿಕೆ ಮತ್ತು ನೀತಿಯನ್ನು ಖಂಡಿಸಿದ್ದರು. ಸ್ವತಃ ಅರ್ಥಶಾಸ್ತ್ರಜ್ಞರೂ ಆಗಿರುವ 42 ವಯಸ್ಸಿನ ಲೊರೆಂಜೊ `ಒಟ್ಟು ದೇಶೀಯ ಉತ್ಪನ್ನವನ್ನು ಇನ್ನು ಮುಂದೆ ದೇಶದ ಆರ್ಥಿಕ ಯಶಸ್ಸಿನ ಮುಖ್ಯ ಅಳತೆಯಾಗಿ ಬಳಸಬಾರದು’ ಎಂಬ ವಾದವನ್ನು ಮುಂದಿಟ್ಟಿದ್ದಂತವರು. ಅದಕ್ಕಾಗಿ ಬಲಪಂಥೀಯರಿಂದ ತೀವ್ರ ವಿರೋಧವನ್ನೂ ಎದುರಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದಾಗಿನಿಂದಲೂ ಬಲಪಂಥೀಯ ವಿರೋಧಕ್ಕೆ ಗುರಿಯಾಗಿದ್ದಾರೆ.

ಶಿಕ್ಷಣಕ್ಕಾಗಿ ಹಣ ಸಂಗ್ರಹಿಸಲು ವಿಮಾನಯಾನ ಟಿಕೆಟ್‌ ದರ ಹೆಚ್ಚಿಸುವುದು, ಪ್ಲಾಸ್ಟಿಕ್ ಮತ್ತು ಸಕ್ಕರೆ ಆಹಾರಗಳ ಮೇಲೆ ಹೊಸದಾಗಿ ತೆರಿಗೆ ಹೇರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದನ್ನು ವಿಮರ್ಶಕರು ತೀವ್ರವಾಗಿ ಖಂಡಿಸಿದ್ದರು. ಇಟಾಲಿಯನ್‌ ಜನತೆ ಈಗಾಗಲೇ ಅಧಿಕ ತೆರಿಗೆ ಭರಿಸುತ್ತಿದ್ದಾರೆ. ಹೀಗಿರುವಾಗ ಹೊಸ ತೆರಿಗೆ ಕಟ್ಟುವುದು ಎಷ್ಟು ಸರಿ..? ಎಂದು ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಎಲ್ಲಾ ಟೀಕೆಗಳ ಹೊರತಾಗಿಯೂ, ಸರ್ಕಾರ 2020ರ ಬಜೆಟ್‌ನಲ್ಲಿ ಪ್ಲಾಸ್ಟಿಕ್ ತೆರಿಗೆ ಮತ್ತು ಸಕ್ಕರೆ ಪಾನೀಯಗಳ ಮೇಲಿನ ಹೊಸ ತೆರಿಗೆ ವಿಧಿಸಿದೆ. ‘ಮೊದಲು ನಾನು ಹೇಳಿದ್ದ ನೀತಿಯನ್ನು ಅಪಹಾಸ್ಯ ಮಾಡಲಾಗಿತ್ತು. ಆದರೆ ಕೆಲ ತಿಂಗಳುಗಳ ನಂತರ ಸರ್ಕಾರ ಎರಡೂ ಪ್ರಸ್ತಾಪಗಳನ್ನು ಬಳಸುತ್ತಿದ್ದು, ಇದು ನಿಜವಾಗಿಯೂ ಸಾಗಬೇಕಾದ ದಾರಿ ಎಂದು ಜನರಿಗೆ ಮನವರಿಕೆಯಾಗಿದೆ’ ಎಂದು ಅರ್ಥಶಾಸ್ತ್ರಜ್ಞರೂ, ಶಿಕ್ಷಣ ಮಂತ್ರಿಯೂ ಆದ ಲೊರೆಂಜೊ ಹೇಳಿದ್ದಾರೆ.

ಸಾಂಪ್ರದಾಯಿಕ ವಿಷಯಗಳಾದ ಭೂಗೋಳಶಾಸ್ತ್ರ, ಗಣಿತಶಾಸ್ತ್ರ, ಭೌತಶಾಸ್ತ್ರ ವಿಷಯಗಳನ್ನು ಸುಸ್ಥಿರ ಬೆಳವಣಿಗೆಯ ಆಯಾಮದಿಂದಲೇ ಬೋಧಿಸಲಾಗುವುದು ಎಂದು ವಿಶ್ವವಿದ್ಯಾಲಯವೊಂದರ ಮಾಜಿ ಪ್ರಾಧ್ಯಾಪಕರೂ ಆಗಿರುವ ಲೊರೆಂಜೊ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...