Homeಅಂತರಾಷ್ಟ್ರೀಯಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

ಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

- Advertisement -
- Advertisement -

ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪಾಠಗಳನ್ನು ಕಡ್ಡಾಯಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಇಟಲಿ ಪಾತ್ರವಾಗಿದೆ. ಬದಲಾಗುತ್ತಿರುವ ಹವಾಮಾನ, ಹೆಚ್ಚುತ್ತಿರುವ ತಾಪಮಾನ, ವಿಪರೀತಗೊಳ್ಳುತ್ತಿರುವ ಮಾಲಿನ್ಯದಂತ ವಿಷ ವರ್ತುಲದಲ್ಲಿ ಮನುಷ್ಯ ಬದುಕುತ್ತಿದ್ದಾನೆ. ಹೀಗಾಗಿ ಹವಾಮಾನ ಬದಲಾವಣೆ ಪಾಠ ಅತ್ಯಗತ್ಯವಾಗಿದೆ. ಈಗ ಹವಾಮಾನ ಬದಲಾವಣೆ ಕುರಿತ ಪಾಠಗಳನ್ನು ಶಾಲಾ ಮಕ್ಕಳಿಗೆ ಇಟಲಿ ಸರ್ಕಾರ ಕಡ್ಡಾಯಗೊಳಿಸಿದೆ.

ಈ ಬಗ್ಗೆ ಶಿಕ್ಷಣ ಮಂತ್ರಿ ಲೋರೆಂಜೋ ಫೀಯೋರಾಮೊಂಟಿ ಮಾತನಾಡಿ, ಮುಂದಿನ ವರ್ಷದ ಶೈಕ್ಷಣಿಕ ವರ್ಷದಿಂದ  ಹವಾಮಾನ ಬದಲಾವಣೆ ಪಾಠಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಇಟಲಿಯ ಪ್ರತಿ ಶಾಲೆಯೂ  ಹವಾಮಾನ ಬದಲಾವಣೆ ಪಾಠಕ್ಕಾಗಿ ಒಂದು ಗಂಟೆ ಮೀಸಲಿಡಲಿವೆ ಎಂದು ಹೇಳಿದ್ದಾರೆ.

’ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಯನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ಶಿಕ್ಷಣ ಸರಳೀಕೃತಗೊಳಿಸಲಾಗುವುದು. ಇದಕ್ಕಾಗಿ ಇಡೀ ಶೈಕ್ಷಣಿಕ ಆಡಳಿತ ಮಂಡಳಿ, ಶಿಕ್ಷಣದ ಮಾದರಿ ಹಾಗೂ ಶೈಕ್ಷಣಿಕ ಸಚಿವಾಲಯದಲ್ಲೂ ಬದಲಾವಣೆ ತರಲಾಗುವುದು. ಇಟಾಲಿಯನ್ ಶಿಕ್ಷಣ ವ್ಯವಸ್ಥೆಯಲ್ಲಿ ಹಾಗೂ ನಾವು ಕಲಿಯುವ ಶಾಲೆಯಲ್ಲಿ ಎಲ್ಲದರಲ್ಲೂ ಪರಿಸರ ಮತ್ತು ಸಮಾಜದ ಕುರಿತ ಪಠ್ಯ ಇರುವಂತೆ ವ್ಯವಸ್ಥೆ ಮಾಡಲು ಬಯಸುತ್ತೇನೆ’ ಎಂದು ಲೋರೆಂಜೋ ಹೇಳಿದರು.

ಲೋರೇಂಜೋ ಅವರು ವಿದ್ಯಾರ್ಥಿಗಳು ಶಾಲೆ ಬಿಟ್ಟು ಹವಾಮಾನ ಬದಲಾವಣೆ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆಗ ವಿರೋಧ ಪಕ್ಷದವರು ಲೋರೆಂಜೋ ಅವರ ಹೇಳಿಕೆ ಮತ್ತು ನೀತಿಯನ್ನು ಖಂಡಿಸಿದ್ದರು. ಸ್ವತಃ ಅರ್ಥಶಾಸ್ತ್ರಜ್ಞರೂ ಆಗಿರುವ 42 ವಯಸ್ಸಿನ ಲೊರೆಂಜೊ `ಒಟ್ಟು ದೇಶೀಯ ಉತ್ಪನ್ನವನ್ನು ಇನ್ನು ಮುಂದೆ ದೇಶದ ಆರ್ಥಿಕ ಯಶಸ್ಸಿನ ಮುಖ್ಯ ಅಳತೆಯಾಗಿ ಬಳಸಬಾರದು’ ಎಂಬ ವಾದವನ್ನು ಮುಂದಿಟ್ಟಿದ್ದಂತವರು. ಅದಕ್ಕಾಗಿ ಬಲಪಂಥೀಯರಿಂದ ತೀವ್ರ ವಿರೋಧವನ್ನೂ ಎದುರಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದಾಗಿನಿಂದಲೂ ಬಲಪಂಥೀಯ ವಿರೋಧಕ್ಕೆ ಗುರಿಯಾಗಿದ್ದಾರೆ.

ಶಿಕ್ಷಣಕ್ಕಾಗಿ ಹಣ ಸಂಗ್ರಹಿಸಲು ವಿಮಾನಯಾನ ಟಿಕೆಟ್‌ ದರ ಹೆಚ್ಚಿಸುವುದು, ಪ್ಲಾಸ್ಟಿಕ್ ಮತ್ತು ಸಕ್ಕರೆ ಆಹಾರಗಳ ಮೇಲೆ ಹೊಸದಾಗಿ ತೆರಿಗೆ ಹೇರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದನ್ನು ವಿಮರ್ಶಕರು ತೀವ್ರವಾಗಿ ಖಂಡಿಸಿದ್ದರು. ಇಟಾಲಿಯನ್‌ ಜನತೆ ಈಗಾಗಲೇ ಅಧಿಕ ತೆರಿಗೆ ಭರಿಸುತ್ತಿದ್ದಾರೆ. ಹೀಗಿರುವಾಗ ಹೊಸ ತೆರಿಗೆ ಕಟ್ಟುವುದು ಎಷ್ಟು ಸರಿ..? ಎಂದು ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಎಲ್ಲಾ ಟೀಕೆಗಳ ಹೊರತಾಗಿಯೂ, ಸರ್ಕಾರ 2020ರ ಬಜೆಟ್‌ನಲ್ಲಿ ಪ್ಲಾಸ್ಟಿಕ್ ತೆರಿಗೆ ಮತ್ತು ಸಕ್ಕರೆ ಪಾನೀಯಗಳ ಮೇಲಿನ ಹೊಸ ತೆರಿಗೆ ವಿಧಿಸಿದೆ. ‘ಮೊದಲು ನಾನು ಹೇಳಿದ್ದ ನೀತಿಯನ್ನು ಅಪಹಾಸ್ಯ ಮಾಡಲಾಗಿತ್ತು. ಆದರೆ ಕೆಲ ತಿಂಗಳುಗಳ ನಂತರ ಸರ್ಕಾರ ಎರಡೂ ಪ್ರಸ್ತಾಪಗಳನ್ನು ಬಳಸುತ್ತಿದ್ದು, ಇದು ನಿಜವಾಗಿಯೂ ಸಾಗಬೇಕಾದ ದಾರಿ ಎಂದು ಜನರಿಗೆ ಮನವರಿಕೆಯಾಗಿದೆ’ ಎಂದು ಅರ್ಥಶಾಸ್ತ್ರಜ್ಞರೂ, ಶಿಕ್ಷಣ ಮಂತ್ರಿಯೂ ಆದ ಲೊರೆಂಜೊ ಹೇಳಿದ್ದಾರೆ.

ಸಾಂಪ್ರದಾಯಿಕ ವಿಷಯಗಳಾದ ಭೂಗೋಳಶಾಸ್ತ್ರ, ಗಣಿತಶಾಸ್ತ್ರ, ಭೌತಶಾಸ್ತ್ರ ವಿಷಯಗಳನ್ನು ಸುಸ್ಥಿರ ಬೆಳವಣಿಗೆಯ ಆಯಾಮದಿಂದಲೇ ಬೋಧಿಸಲಾಗುವುದು ಎಂದು ವಿಶ್ವವಿದ್ಯಾಲಯವೊಂದರ ಮಾಜಿ ಪ್ರಾಧ್ಯಾಪಕರೂ ಆಗಿರುವ ಲೊರೆಂಜೊ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ವಿರೋಧಿಸಿದ ರೈತ ಸಂಘಟನೆಗಳು : ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ), ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್‌) ಸೇರಿದಂತೆ ಹಲವಾರು ರೈತ ಸಂಘಟನೆಗಳು ಶನಿವಾರ (ಫೆ.7) ಭಾರತ-ಅಮೆರಿಕ ವ್ಯಾಪಾರ ಒಪ್ಪಂದವನ್ನು ವಿರೋಧಿಸಿದ್ದು, ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಪ್ರತಿಭಟನೆ ಘೋಷಿಸಿವೆ. ಈ...

‘ನಮ್ಮ ಹಟ್ಟಿ’ ಕೇವಲ ದೊರೈರಾಜು ಅವರ ಕಥೆಯಲ್ಲ, ಒಂದು ಸಾಂಸ್ಕೃತಿಕ ಲೋಕವನ್ನೇ ಕಟ್ಟಿಕೊಡುವ ಕೃತಿ’: ಕೋಟಿಗಾನಹಳ್ಳಿ ರಾಮಯ್ಯ 

‘ಸಾಮಾನ್ಯವಾಗಿ ಆತ್ಮಕಥನಗಳು ಅಂದರೆ ಒಬ್ಬ ವ್ಯಕ್ತಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಆದರೆ ‘ನಮ್ಮ ಹಟ್ಟಿ’ ಆತ್ಮಕಥಾನಕದಲ್ಲಿ ಒಂದು ಹಟ್ಟಿಯ ವಿವರಗಳು ಬಿಚ್ಚಿಕೊಳ್ಳುತ್ತಾ ಹೋಗುತ್ತವೆ. ಅಲ್ಲಿರುವ ಅನೇಕ ಕುಶಲ ಕರ್ಮಿಗಳು, ಹಾಗೂ ವಿಶಿಷ್ಟ ಲೋಕವೇ...

ಪ. ಬಂಗಾಳ ಎಸ್‌ಐಆರ್ | ಮೈಕ್ರೋ ಅಬ್ಸರ್ವರ್ಸ್ ಬದಲಿಗೆ 8,505 ಗ್ರೂಪ್ ಬಿ ಅಧಿಕಾರಿಗಳನ್ನು ಒದಗಿಸುತ್ತೇವೆ : ಚು. ಆಯೋಗಕ್ಕೆ ತಿಳಿಸಿದ ಮಮತಾ ಸರ್ಕಾರ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯಕ್ಕಾಗಿ ಮೈಕ್ರೋ ಅಬ್ಸರ್ವರ್ಸ್ ಬದಲಿಗೆ ತನ್ನ ಅಧೀನದ ಸುಮಾರು 8,505 ಗ್ರೂಪ್ ಬಿ ಅಧಿಕಾರಿಗಳನ್ನು ನಿಯೋಜಿಸಲು ಸಿದ್ಧವಿರುವುದಾಗಿ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ...

ಸಿಎಂ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋ ಹಂಚಿಕೊಂಡ ಅಸ್ಸಾಂ ಬಿಜೆಪಿ!

ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮುಸ್ಲಿಮರಿಗೆ ಗುಂಡಿಕ್ಕಿದಂತೆ ತೋರಿಸುವ ವಿಡಿಯೋವನ್ನು ಅಸ್ಸಾಂ ಬಿಜೆಪಿಯ ರಾಜ್ಯ ಘಟಕ ತನ್ನ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಶನಿವಾರ (ಫೆ.7) ಹಂಚಿಕೊಂಡಿತ್ತು. ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಅದನ್ನು...

ಯಾವುದೇ ಕಾರಣಕ್ಕೂ ಕೇರಳದಲ್ಲಿ ಎನ್‌ಪಿಆರ್ ಜಾರಿಯಾಗುವುದಿಲ್ಲ : ಸಿಎಂ ಪಿಣರಾಯಿ ವಿಜಯನ್

ಕೇರಳದಲ್ಲಿ ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಯನ್ನು ಜಾರಿಗೆ ತರಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶನಿವಾರ (ಫೆ.7) ಪುನರುಚ್ಚರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, "ಯಾವುದೇ ಸಂದರ್ಭದಲ್ಲೂ...