Homeಅಂತರಾಷ್ಟ್ರೀಯಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

ಪಠ್ಯದಲ್ಲಿ ಹವಾಮಾನ ಬದಲಾವಣೆ ಪಾಠ ಕಡ್ಡಾಯಗೊಳಿಸಿದ ಮೊದಲ ದೇಶ ಇಟಲಿ

- Advertisement -
- Advertisement -

ಶಾಲಾ ಮಕ್ಕಳಿಗೆ ಹವಾಮಾನ ಬದಲಾವಣೆಯ ಪಾಠಗಳನ್ನು ಕಡ್ಡಾಯಗೊಳಿಸಿದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಇಟಲಿ ಪಾತ್ರವಾಗಿದೆ. ಬದಲಾಗುತ್ತಿರುವ ಹವಾಮಾನ, ಹೆಚ್ಚುತ್ತಿರುವ ತಾಪಮಾನ, ವಿಪರೀತಗೊಳ್ಳುತ್ತಿರುವ ಮಾಲಿನ್ಯದಂತ ವಿಷ ವರ್ತುಲದಲ್ಲಿ ಮನುಷ್ಯ ಬದುಕುತ್ತಿದ್ದಾನೆ. ಹೀಗಾಗಿ ಹವಾಮಾನ ಬದಲಾವಣೆ ಪಾಠ ಅತ್ಯಗತ್ಯವಾಗಿದೆ. ಈಗ ಹವಾಮಾನ ಬದಲಾವಣೆ ಕುರಿತ ಪಾಠಗಳನ್ನು ಶಾಲಾ ಮಕ್ಕಳಿಗೆ ಇಟಲಿ ಸರ್ಕಾರ ಕಡ್ಡಾಯಗೊಳಿಸಿದೆ.

ಈ ಬಗ್ಗೆ ಶಿಕ್ಷಣ ಮಂತ್ರಿ ಲೋರೆಂಜೋ ಫೀಯೋರಾಮೊಂಟಿ ಮಾತನಾಡಿ, ಮುಂದಿನ ವರ್ಷದ ಶೈಕ್ಷಣಿಕ ವರ್ಷದಿಂದ  ಹವಾಮಾನ ಬದಲಾವಣೆ ಪಾಠಗಳನ್ನು ಶಾಲಾ ವಿದ್ಯಾರ್ಥಿಗಳಿಗೆ ಕಲಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರಲಿದೆ. ಇಟಲಿಯ ಪ್ರತಿ ಶಾಲೆಯೂ  ಹವಾಮಾನ ಬದಲಾವಣೆ ಪಾಠಕ್ಕಾಗಿ ಒಂದು ಗಂಟೆ ಮೀಸಲಿಡಲಿವೆ ಎಂದು ಹೇಳಿದ್ದಾರೆ.

’ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಯನ್ನು ಪಠ್ಯದಲ್ಲಿ ಅಳವಡಿಸುವ ಮೂಲಕ ಶಿಕ್ಷಣ ಸರಳೀಕೃತಗೊಳಿಸಲಾಗುವುದು. ಇದಕ್ಕಾಗಿ ಇಡೀ ಶೈಕ್ಷಣಿಕ ಆಡಳಿತ ಮಂಡಳಿ, ಶಿಕ್ಷಣದ ಮಾದರಿ ಹಾಗೂ ಶೈಕ್ಷಣಿಕ ಸಚಿವಾಲಯದಲ್ಲೂ ಬದಲಾವಣೆ ತರಲಾಗುವುದು. ಇಟಾಲಿಯನ್ ಶಿಕ್ಷಣ ವ್ಯವಸ್ಥೆಯಲ್ಲಿ ಹಾಗೂ ನಾವು ಕಲಿಯುವ ಶಾಲೆಯಲ್ಲಿ ಎಲ್ಲದರಲ್ಲೂ ಪರಿಸರ ಮತ್ತು ಸಮಾಜದ ಕುರಿತ ಪಠ್ಯ ಇರುವಂತೆ ವ್ಯವಸ್ಥೆ ಮಾಡಲು ಬಯಸುತ್ತೇನೆ’ ಎಂದು ಲೋರೆಂಜೋ ಹೇಳಿದರು.

ಲೋರೇಂಜೋ ಅವರು ವಿದ್ಯಾರ್ಥಿಗಳು ಶಾಲೆ ಬಿಟ್ಟು ಹವಾಮಾನ ಬದಲಾವಣೆ ಪ್ರತಿಭಟನೆಯಲ್ಲಿ ಭಾಗವಹಿಸಿ ಎಂದು ಸೆಪ್ಟಂಬರ್‌ನಲ್ಲಿ ಹೇಳಿದ್ದರು. ಆಗ ವಿರೋಧ ಪಕ್ಷದವರು ಲೋರೆಂಜೋ ಅವರ ಹೇಳಿಕೆ ಮತ್ತು ನೀತಿಯನ್ನು ಖಂಡಿಸಿದ್ದರು. ಸ್ವತಃ ಅರ್ಥಶಾಸ್ತ್ರಜ್ಞರೂ ಆಗಿರುವ 42 ವಯಸ್ಸಿನ ಲೊರೆಂಜೊ `ಒಟ್ಟು ದೇಶೀಯ ಉತ್ಪನ್ನವನ್ನು ಇನ್ನು ಮುಂದೆ ದೇಶದ ಆರ್ಥಿಕ ಯಶಸ್ಸಿನ ಮುಖ್ಯ ಅಳತೆಯಾಗಿ ಬಳಸಬಾರದು’ ಎಂಬ ವಾದವನ್ನು ಮುಂದಿಟ್ಟಿದ್ದಂತವರು. ಅದಕ್ಕಾಗಿ ಬಲಪಂಥೀಯರಿಂದ ತೀವ್ರ ವಿರೋಧವನ್ನೂ ಎದುರಿಸಿದ್ದರು. ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾದಾಗಿನಿಂದಲೂ ಬಲಪಂಥೀಯ ವಿರೋಧಕ್ಕೆ ಗುರಿಯಾಗಿದ್ದಾರೆ.

ಶಿಕ್ಷಣಕ್ಕಾಗಿ ಹಣ ಸಂಗ್ರಹಿಸಲು ವಿಮಾನಯಾನ ಟಿಕೆಟ್‌ ದರ ಹೆಚ್ಚಿಸುವುದು, ಪ್ಲಾಸ್ಟಿಕ್ ಮತ್ತು ಸಕ್ಕರೆ ಆಹಾರಗಳ ಮೇಲೆ ಹೊಸದಾಗಿ ತೆರಿಗೆ ಹೇರುವ ಬಗ್ಗೆ ಪ್ರಸ್ತಾಪಿಸಿದ್ದರು. ಆದರೆ ಇದನ್ನು ವಿಮರ್ಶಕರು ತೀವ್ರವಾಗಿ ಖಂಡಿಸಿದ್ದರು. ಇಟಾಲಿಯನ್‌ ಜನತೆ ಈಗಾಗಲೇ ಅಧಿಕ ತೆರಿಗೆ ಭರಿಸುತ್ತಿದ್ದಾರೆ. ಹೀಗಿರುವಾಗ ಹೊಸ ತೆರಿಗೆ ಕಟ್ಟುವುದು ಎಷ್ಟು ಸರಿ..? ಎಂದು ವಿರೋಧ ಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು.

ಎಲ್ಲಾ ಟೀಕೆಗಳ ಹೊರತಾಗಿಯೂ, ಸರ್ಕಾರ 2020ರ ಬಜೆಟ್‌ನಲ್ಲಿ ಪ್ಲಾಸ್ಟಿಕ್ ತೆರಿಗೆ ಮತ್ತು ಸಕ್ಕರೆ ಪಾನೀಯಗಳ ಮೇಲಿನ ಹೊಸ ತೆರಿಗೆ ವಿಧಿಸಿದೆ. ‘ಮೊದಲು ನಾನು ಹೇಳಿದ್ದ ನೀತಿಯನ್ನು ಅಪಹಾಸ್ಯ ಮಾಡಲಾಗಿತ್ತು. ಆದರೆ ಕೆಲ ತಿಂಗಳುಗಳ ನಂತರ ಸರ್ಕಾರ ಎರಡೂ ಪ್ರಸ್ತಾಪಗಳನ್ನು ಬಳಸುತ್ತಿದ್ದು, ಇದು ನಿಜವಾಗಿಯೂ ಸಾಗಬೇಕಾದ ದಾರಿ ಎಂದು ಜನರಿಗೆ ಮನವರಿಕೆಯಾಗಿದೆ’ ಎಂದು ಅರ್ಥಶಾಸ್ತ್ರಜ್ಞರೂ, ಶಿಕ್ಷಣ ಮಂತ್ರಿಯೂ ಆದ ಲೊರೆಂಜೊ ಹೇಳಿದ್ದಾರೆ.

ಸಾಂಪ್ರದಾಯಿಕ ವಿಷಯಗಳಾದ ಭೂಗೋಳಶಾಸ್ತ್ರ, ಗಣಿತಶಾಸ್ತ್ರ, ಭೌತಶಾಸ್ತ್ರ ವಿಷಯಗಳನ್ನು ಸುಸ್ಥಿರ ಬೆಳವಣಿಗೆಯ ಆಯಾಮದಿಂದಲೇ ಬೋಧಿಸಲಾಗುವುದು ಎಂದು ವಿಶ್ವವಿದ್ಯಾಲಯವೊಂದರ ಮಾಜಿ ಪ್ರಾಧ್ಯಾಪಕರೂ ಆಗಿರುವ ಲೊರೆಂಜೊ ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...