Homeಮುಖಪುಟಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

- Advertisement -
- Advertisement -

ವಿಶ್ವ ಫುಟ್‌ಬಾಲ್‌ನ ಪವರ್‌ ಹೌಸ್‌ ಎಂದು ಗುರುತಿಸಿಕೊಂಡಿರುವ ಯುರೋಕಪ್ ಚಾಂಪಿಯನ್‌ಶಿಪ್‌ಗೆ ನಿನ್ನೆ ಮಧ್ಯರಾತ್ರಿ ತೆರೆಬಿದ್ದಿದೆ. ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಇಟಲಿ ಬರೊಬ್ಬರಿ 53 ವರ್ಷಗಳ ನಂತರ ಚಾಂಪಿಯನ್‌ಶಿಪ್ ಪಟ್ಟ ತನ್ನದಾಗಿಸಿಕೊಂಡಿತು.

ವಿಶ್ವ ಫುಟ್ಬಾಲ್‌ನ ಪವರ್‌ ಹೌಸ್‌ ಎಂದು ಕರೆಸಿಕೊಳ್ಲುವ ಫ್ರಾನ್ಸ್‌, ಜರ್ಮನಿ, ಸ್ಪೇನ್‌, ಬೆಲ್ಜಿಯಮ್‌ ತಂಡಗಳು ಫೈನಲ್‌ ಪ್ರವೇಶಿಸಲು ವಿಫಲವಾಗಿದ್ದವು. ಈ ಸಂದರ್ಭದಲ್ಲಿ ಇಟಲಿ ಯುರೋ ಕಪ್‌ ಗೆಲ್ಲುವುದರೊಂದಿಗೆ ಮುಂದಿನ ವರ್ಷ 2022 ರ ಫುಟ್ಬಾಲ್‌ ವಿಶ್ವಕಪ್‌ಗೆ ಸಿದ್ಧವಾಗಿರುವ ಸಂದೇಶವನ್ನು ನೀಡಿದೆ.

ಇಂಗ್ಲೆಂಡ್‌ ರಾಜಧಾನಿ ಲಂಡನ್‌ ನಗರದ ವೆಂಬ್ಲೆ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರೆದರು ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ಕನಸು ನಿನ್ನೆ ತಡರಾತ್ರಿ ಭಗ್ನಗೊಂಡಿತು. ಲ್ಯೂಕ್ ಶಾ ಪಂದ್ಯದ 2 ನೇ ನಿಮಿಷದಲ್ಲಿ ಸಿಡಿಸಿದ ಆರಂಭಿಕ ಗೋಲಿನ ಮುನ್ನಡೆಯ ಹೊರತಾಗಿಯೂ ಇಂಗ್ಲೆಂಡ್‌ ಆಟಗಾರರಿಗೆ ಪಂದ್ಯದಲ್ಲಿ ಮತ್ತೊಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌…

ಇಟಲಿಯ ಸ್ಟಾರ್‌ ಆಟಗಾರ  ಲಿಯೋನಾರ್ಡೊ ಬೊನುಸಿ 67 ನೇ ನಿಮಷದಲ್ಲಿ ಅದ್ಭುತ ಗೋಲು ಗಳಿಸಿ ಇಟಲಿ ಪಕ್ಷದಿಂದ ಜಾರುತ್ತಿದ್ದ ಪಂದ್ಯವನ್ನು ಮತ್ತೆ ಸಮ ಸ್ಥಿತಿಗೆ ತಂದರು. ಎರಡೂ ತಂಡಗಳು ಯುರೋಪಿಯನ್‌ ಫುಟ್ಬಾಲ್‌ ಕಿರೀಟಕ್ಕಾಗಿ ಅಂತಿಮ ನಿಮಿಷದವರೆಗೂ ತೀವ್ರ ಪೈಪೋಟಿ ನಡೆಸಿದವಾದರೂ ಪಂದ್ಯ ಇಕ್ವಲೈಜರ್‌ನಲ್ಲಿಯೇ ಅಂತ್ಯವಾಯಿತು. 90+ ಹೆಚ್ಚುವರಿ ಸಮಯದಲ್ಲೂ ಪ್ರಬಲ ತಡೆಗೋಡೆಗಳನ್ನು ಭೇದಿಸಿ ಗೋಲು ಗಳಿಸುವ ಇಟಲಿ ಮತ್ತು ಇಂಗ್ಲೆಂಡ್‌ ತಂಡದ ಯತ್ನ ಯಶಸ್ವಿಯಾಗಲಿಲ್ಲ. ಕೊನೆಗೆ 1-1 ಗೋಲ್‌ಗಳಿಂದ ಎರಡು ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯ ರೋಚಕ ಪೆನಾಲ್ಟಿ ಶೂಟೌಟ್‌ವರೆಗೂ ಸಾಗಿತು.

ಚಾಂಪಿಯನ್‌ ತಂಡವನ್ನು ನಿರ್ಣಯಿಸುವ ಪೆನಾಲ್ಟಿ ಶೂಟೌಟ್‌ನಲ್ಲಿ ಇಟಲಿ ಮೇಲುಗೈ ಸಾಧಿಸಿ ಇಂಗ್ಲೆಂಡ್‌ ಅಭಿಮಾನಿಗಳನ್ನು ನಿರಾಸೆಗೊಳಿಸಿತು. ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ತಂಡದ ಕನಸು ನಿರ್ಣಾಯಕ ಹಂತದಲ್ಲಿ ವಿಫಲಗೊಂಡಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಕೇನ್ ಮತ್ತು ರಹೀಮ್ ಸ್ಟರ್ಲಿಂಗ್ ಮೇಲೆ ತವರಿನ ಅಭಿಮಾನಿಗಳು ಇಟ್ಟ ನಿರೀಕ್ಷೆ ಹುಸಿಯಾಗಿದೆ. ಇಬ್ಬರೂ ಆಟಗಾರರು ಟೂರ್ನಿಮೆಂಟ್‌ ಉದ್ದಕ್ಕೂ ಮಿಂಚಿನ ಪ್ರದರ್ಶನಗಳನ್ನು ನೀಡಿದ್ದರು.

Euro Cup 2020 England Vs Denmark Preview: Where To Watch Semifinal Match Liveಯುರೋ ಚಾಂಪಿಯನ್ಶಿಪ್‌ನಲ್ಲಿ ನಾಲ್ಕು ಪಂದ್ಯಗಳಿಂದ 5 ಗೋಲುಗಳಿಸಿದ ಕ್ರಿಸ್ಟಿಯಾನೋ ರೊನಾಲ್ಡೊ ಅತಿಹೆಚ್ಚು ಗೋಲು ಗಳಿಸಿದ ಆಟಗಾರನಿಗೆ ನಿಡಲಾಗುವ ಗೋಲ್ಡನ್‌ ಶೂ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಯುರೋ ಕಪ್‌ನಲ್ಲಿ ರೊನಾಲ್ಡೋಗೆ ದೊರೆತ ಮೊದಲ ಪ್ರಶಸ್ತಿ ಇದು.

16 ಗೋಲುಗಳನ್ನು ತಡೆದ ಇಂಗ್ಲೆಂಡ್‌ ಗೋಲ್‌ ಕೀಪರ್‌ ಜೊರ್ಡನ್‌ ಪಿಕ್‌ಫೋರ್ಡ್ ಅವರಿಗೆ ಗೋಲ್ಡನ್‌ ಗ್ಲೌಸ್‌ ಪ್ರಶಸ್ತಿಯನ್ನು ನೀಡಲಾಯಿತು.

ಮತ್ತೊಂದೆಡೆ ಇಟಲಿ ತಂಡ ಮ್ಯಾನೇಜರ್‌ ರಾಬರ್ಟೊ ಮ್ಯಾನ್ಸಿನಿ ಮಾರ್ಗದರ್ಶನದಲ್ಲಿ ಸತತ 34ನೇ ಗೆಲುವನ್ನು ಸಾಧಿಸುವ ಮೂಲಕ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿತು.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

ಎರಡೂ ತಂಡಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಯುರೋ ಕಪ್‌ನಲ್ಲಿ ಇಂಗ್ಲೆಂಡ್‌ ತಂಡ ಮೊದಲ ಬಾರಿಗೆ ಫೈನಲ್ ಹಂತವನ್ನು ತಲುಪಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿತ್ತು. 2020 ರಲ್ಲೂ ಇಂಗ್ಲೆಂಡ್‌ನ ಪ್ರಶಸ್ತಿಯ ಬರ ನೀಗಲಿಲ್ಲ. 1966 ರ ಫುಟ್ಬಾಲ್‌ ವಿಶ್ವಕಪ್‌ ಗೆಲುವಿನ ನಂತರ ಇಂಗ್ಲೆಂಡ್‌ ಇದುವರೆಗೆ ಯಾವುದೇ ಮುಖ್ಯ ಕ್ರೀಡಾಕೂಟದಲ್ಲಿ ಫೈನಲ್‌ಗೇರಿರಲಿಲ್ಲ. ಹಾಗಾಗಿ ಇಂಗ್ಲೆಂಡ್‌ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿ ನಿರೀಕ್ಷೆ ಗರಿಗೆದರಿತ್ತು.

ಅತ್ತ 4 ಬಾರಿಯ ವಿಶ್ವಕಪ್‌ ಚಾಂಪಿಯನ್‌ ಇಟಲಿ ಕೂಡ 2006 ರ ವಿಶ್ವಕಪ್‌ ಗೆಲುವಿನ ನಂತರ ಸತತ 15 ವರ್ಷ ಗೆಲುವಿನ ರುಚಿ ಸವಿದಿರಲಿಲ್ಲ. 2012 ರಲ್ಲಿ ಬಲಿಷ್ಠ ಸ್ಪೇನ್‌ ತಂಡದ ವಿರುದ್ಧ ಸೋಲನುಭವಿಸುವ ಮೂಲಕ ನಿರಾಸೆ ಗೊಂಡಿದ್ದ ಇಟಲಿ ಯುರೋ ಕಪ್‌ 2020 ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಳ್ಳುವ ಮೂಲಕ 2012 ರ ನಿರಾಸೆಗೆ ಕೊನೆಹಾಡಿತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಿನಿ ವರ್ಡ್‌ಕಪ್ ಎಂದೇ ಖ್ಯಾತವಾಗಿರುವ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಹಣಾಹಣಿ ಸುಖಾಂತ್ಯವಾಗಿದೆ. ಕೋವಿಡ್‌ ಕಾರಣದಿಂದ 16 ನೇ ಯುರೋ ಕಪ್‌ ಪಂದ್ಯಾವಳಿಯನ್ನು ಕೇವಲ ಒಂದು ದೇಶದಲ್ಲಿ ನಡೆಯದೇ 11 ದೇಶಗಳು ಟೂರ್ನಿಗೆ ಆತಿಥ್ಯ ವಹಿಸಿದವು. ಅಜೆರ್ಬೈಜಾನ್, ಡೆನ್ಮಾರ್ಕ್, ಇಂಗ್ಲೆಂಡ್, ಜರ್ಮನಿ, ಹಾಲೆಂಡ್, ಹಂಗೇರಿ, ಇಟಲಿ, ರೊಮೇನಿಯಾ, ರಷ್ಯಾ, ಸ್ಕಾಟ್ಲೆಂಡ್ ಮತ್ತು ಸ್ಪೇನ್ ಗಳಲ್ಲಿ ಯುರೋ ಕಪ್‌ ಪಂದ್ಯಗಳು ನಡೆದಿದ್ದು ಕೋವಿಡ್‌ ಆತಂಕದ ನಡುವೆ ಪಂದ್ಯಾವಳಿಯ ಸ್ಥಳ ಬದಲಾವಣೆಗೆ ಕೂಡ ಒತ್ತಾಯಗಳು ಕೇಳಿ ಬಂದಿದ್ದವು.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...