Homeಮುಖಪುಟಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

- Advertisement -
- Advertisement -

ವಿಶ್ವ ಫುಟ್‌ಬಾಲ್‌ನ ಪವರ್‌ ಹೌಸ್‌ ಎಂದು ಗುರುತಿಸಿಕೊಂಡಿರುವ ಯುರೋಕಪ್ ಚಾಂಪಿಯನ್‌ಶಿಪ್‌ಗೆ ನಿನ್ನೆ ಮಧ್ಯರಾತ್ರಿ ತೆರೆಬಿದ್ದಿದೆ. ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಇಟಲಿ ಬರೊಬ್ಬರಿ 53 ವರ್ಷಗಳ ನಂತರ ಚಾಂಪಿಯನ್‌ಶಿಪ್ ಪಟ್ಟ ತನ್ನದಾಗಿಸಿಕೊಂಡಿತು.

ವಿಶ್ವ ಫುಟ್ಬಾಲ್‌ನ ಪವರ್‌ ಹೌಸ್‌ ಎಂದು ಕರೆಸಿಕೊಳ್ಲುವ ಫ್ರಾನ್ಸ್‌, ಜರ್ಮನಿ, ಸ್ಪೇನ್‌, ಬೆಲ್ಜಿಯಮ್‌ ತಂಡಗಳು ಫೈನಲ್‌ ಪ್ರವೇಶಿಸಲು ವಿಫಲವಾಗಿದ್ದವು. ಈ ಸಂದರ್ಭದಲ್ಲಿ ಇಟಲಿ ಯುರೋ ಕಪ್‌ ಗೆಲ್ಲುವುದರೊಂದಿಗೆ ಮುಂದಿನ ವರ್ಷ 2022 ರ ಫುಟ್ಬಾಲ್‌ ವಿಶ್ವಕಪ್‌ಗೆ ಸಿದ್ಧವಾಗಿರುವ ಸಂದೇಶವನ್ನು ನೀಡಿದೆ.

ಇಂಗ್ಲೆಂಡ್‌ ರಾಜಧಾನಿ ಲಂಡನ್‌ ನಗರದ ವೆಂಬ್ಲೆ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರೆದರು ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ಕನಸು ನಿನ್ನೆ ತಡರಾತ್ರಿ ಭಗ್ನಗೊಂಡಿತು. ಲ್ಯೂಕ್ ಶಾ ಪಂದ್ಯದ 2 ನೇ ನಿಮಿಷದಲ್ಲಿ ಸಿಡಿಸಿದ ಆರಂಭಿಕ ಗೋಲಿನ ಮುನ್ನಡೆಯ ಹೊರತಾಗಿಯೂ ಇಂಗ್ಲೆಂಡ್‌ ಆಟಗಾರರಿಗೆ ಪಂದ್ಯದಲ್ಲಿ ಮತ್ತೊಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌…

ಇಟಲಿಯ ಸ್ಟಾರ್‌ ಆಟಗಾರ  ಲಿಯೋನಾರ್ಡೊ ಬೊನುಸಿ 67 ನೇ ನಿಮಷದಲ್ಲಿ ಅದ್ಭುತ ಗೋಲು ಗಳಿಸಿ ಇಟಲಿ ಪಕ್ಷದಿಂದ ಜಾರುತ್ತಿದ್ದ ಪಂದ್ಯವನ್ನು ಮತ್ತೆ ಸಮ ಸ್ಥಿತಿಗೆ ತಂದರು. ಎರಡೂ ತಂಡಗಳು ಯುರೋಪಿಯನ್‌ ಫುಟ್ಬಾಲ್‌ ಕಿರೀಟಕ್ಕಾಗಿ ಅಂತಿಮ ನಿಮಿಷದವರೆಗೂ ತೀವ್ರ ಪೈಪೋಟಿ ನಡೆಸಿದವಾದರೂ ಪಂದ್ಯ ಇಕ್ವಲೈಜರ್‌ನಲ್ಲಿಯೇ ಅಂತ್ಯವಾಯಿತು. 90+ ಹೆಚ್ಚುವರಿ ಸಮಯದಲ್ಲೂ ಪ್ರಬಲ ತಡೆಗೋಡೆಗಳನ್ನು ಭೇದಿಸಿ ಗೋಲು ಗಳಿಸುವ ಇಟಲಿ ಮತ್ತು ಇಂಗ್ಲೆಂಡ್‌ ತಂಡದ ಯತ್ನ ಯಶಸ್ವಿಯಾಗಲಿಲ್ಲ. ಕೊನೆಗೆ 1-1 ಗೋಲ್‌ಗಳಿಂದ ಎರಡು ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯ ರೋಚಕ ಪೆನಾಲ್ಟಿ ಶೂಟೌಟ್‌ವರೆಗೂ ಸಾಗಿತು.

ಚಾಂಪಿಯನ್‌ ತಂಡವನ್ನು ನಿರ್ಣಯಿಸುವ ಪೆನಾಲ್ಟಿ ಶೂಟೌಟ್‌ನಲ್ಲಿ ಇಟಲಿ ಮೇಲುಗೈ ಸಾಧಿಸಿ ಇಂಗ್ಲೆಂಡ್‌ ಅಭಿಮಾನಿಗಳನ್ನು ನಿರಾಸೆಗೊಳಿಸಿತು. ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ತಂಡದ ಕನಸು ನಿರ್ಣಾಯಕ ಹಂತದಲ್ಲಿ ವಿಫಲಗೊಂಡಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಕೇನ್ ಮತ್ತು ರಹೀಮ್ ಸ್ಟರ್ಲಿಂಗ್ ಮೇಲೆ ತವರಿನ ಅಭಿಮಾನಿಗಳು ಇಟ್ಟ ನಿರೀಕ್ಷೆ ಹುಸಿಯಾಗಿದೆ. ಇಬ್ಬರೂ ಆಟಗಾರರು ಟೂರ್ನಿಮೆಂಟ್‌ ಉದ್ದಕ್ಕೂ ಮಿಂಚಿನ ಪ್ರದರ್ಶನಗಳನ್ನು ನೀಡಿದ್ದರು.

Euro Cup 2020 England Vs Denmark Preview: Where To Watch Semifinal Match Liveಯುರೋ ಚಾಂಪಿಯನ್ಶಿಪ್‌ನಲ್ಲಿ ನಾಲ್ಕು ಪಂದ್ಯಗಳಿಂದ 5 ಗೋಲುಗಳಿಸಿದ ಕ್ರಿಸ್ಟಿಯಾನೋ ರೊನಾಲ್ಡೊ ಅತಿಹೆಚ್ಚು ಗೋಲು ಗಳಿಸಿದ ಆಟಗಾರನಿಗೆ ನಿಡಲಾಗುವ ಗೋಲ್ಡನ್‌ ಶೂ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಯುರೋ ಕಪ್‌ನಲ್ಲಿ ರೊನಾಲ್ಡೋಗೆ ದೊರೆತ ಮೊದಲ ಪ್ರಶಸ್ತಿ ಇದು.

16 ಗೋಲುಗಳನ್ನು ತಡೆದ ಇಂಗ್ಲೆಂಡ್‌ ಗೋಲ್‌ ಕೀಪರ್‌ ಜೊರ್ಡನ್‌ ಪಿಕ್‌ಫೋರ್ಡ್ ಅವರಿಗೆ ಗೋಲ್ಡನ್‌ ಗ್ಲೌಸ್‌ ಪ್ರಶಸ್ತಿಯನ್ನು ನೀಡಲಾಯಿತು.

ಮತ್ತೊಂದೆಡೆ ಇಟಲಿ ತಂಡ ಮ್ಯಾನೇಜರ್‌ ರಾಬರ್ಟೊ ಮ್ಯಾನ್ಸಿನಿ ಮಾರ್ಗದರ್ಶನದಲ್ಲಿ ಸತತ 34ನೇ ಗೆಲುವನ್ನು ಸಾಧಿಸುವ ಮೂಲಕ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿತು.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

ಎರಡೂ ತಂಡಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಯುರೋ ಕಪ್‌ನಲ್ಲಿ ಇಂಗ್ಲೆಂಡ್‌ ತಂಡ ಮೊದಲ ಬಾರಿಗೆ ಫೈನಲ್ ಹಂತವನ್ನು ತಲುಪಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿತ್ತು. 2020 ರಲ್ಲೂ ಇಂಗ್ಲೆಂಡ್‌ನ ಪ್ರಶಸ್ತಿಯ ಬರ ನೀಗಲಿಲ್ಲ. 1966 ರ ಫುಟ್ಬಾಲ್‌ ವಿಶ್ವಕಪ್‌ ಗೆಲುವಿನ ನಂತರ ಇಂಗ್ಲೆಂಡ್‌ ಇದುವರೆಗೆ ಯಾವುದೇ ಮುಖ್ಯ ಕ್ರೀಡಾಕೂಟದಲ್ಲಿ ಫೈನಲ್‌ಗೇರಿರಲಿಲ್ಲ. ಹಾಗಾಗಿ ಇಂಗ್ಲೆಂಡ್‌ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿ ನಿರೀಕ್ಷೆ ಗರಿಗೆದರಿತ್ತು.

ಅತ್ತ 4 ಬಾರಿಯ ವಿಶ್ವಕಪ್‌ ಚಾಂಪಿಯನ್‌ ಇಟಲಿ ಕೂಡ 2006 ರ ವಿಶ್ವಕಪ್‌ ಗೆಲುವಿನ ನಂತರ ಸತತ 15 ವರ್ಷ ಗೆಲುವಿನ ರುಚಿ ಸವಿದಿರಲಿಲ್ಲ. 2012 ರಲ್ಲಿ ಬಲಿಷ್ಠ ಸ್ಪೇನ್‌ ತಂಡದ ವಿರುದ್ಧ ಸೋಲನುಭವಿಸುವ ಮೂಲಕ ನಿರಾಸೆ ಗೊಂಡಿದ್ದ ಇಟಲಿ ಯುರೋ ಕಪ್‌ 2020 ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಳ್ಳುವ ಮೂಲಕ 2012 ರ ನಿರಾಸೆಗೆ ಕೊನೆಹಾಡಿತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಿನಿ ವರ್ಡ್‌ಕಪ್ ಎಂದೇ ಖ್ಯಾತವಾಗಿರುವ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಹಣಾಹಣಿ ಸುಖಾಂತ್ಯವಾಗಿದೆ. ಕೋವಿಡ್‌ ಕಾರಣದಿಂದ 16 ನೇ ಯುರೋ ಕಪ್‌ ಪಂದ್ಯಾವಳಿಯನ್ನು ಕೇವಲ ಒಂದು ದೇಶದಲ್ಲಿ ನಡೆಯದೇ 11 ದೇಶಗಳು ಟೂರ್ನಿಗೆ ಆತಿಥ್ಯ ವಹಿಸಿದವು. ಅಜೆರ್ಬೈಜಾನ್, ಡೆನ್ಮಾರ್ಕ್, ಇಂಗ್ಲೆಂಡ್, ಜರ್ಮನಿ, ಹಾಲೆಂಡ್, ಹಂಗೇರಿ, ಇಟಲಿ, ರೊಮೇನಿಯಾ, ರಷ್ಯಾ, ಸ್ಕಾಟ್ಲೆಂಡ್ ಮತ್ತು ಸ್ಪೇನ್ ಗಳಲ್ಲಿ ಯುರೋ ಕಪ್‌ ಪಂದ್ಯಗಳು ನಡೆದಿದ್ದು ಕೋವಿಡ್‌ ಆತಂಕದ ನಡುವೆ ಪಂದ್ಯಾವಳಿಯ ಸ್ಥಳ ಬದಲಾವಣೆಗೆ ಕೂಡ ಒತ್ತಾಯಗಳು ಕೇಳಿ ಬಂದಿದ್ದವು.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....