Homeಮುಖಪುಟಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

- Advertisement -
- Advertisement -

ವಿಶ್ವ ಫುಟ್‌ಬಾಲ್‌ನ ಪವರ್‌ ಹೌಸ್‌ ಎಂದು ಗುರುತಿಸಿಕೊಂಡಿರುವ ಯುರೋಕಪ್ ಚಾಂಪಿಯನ್‌ಶಿಪ್‌ಗೆ ನಿನ್ನೆ ಮಧ್ಯರಾತ್ರಿ ತೆರೆಬಿದ್ದಿದೆ. ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಇಟಲಿ ಬರೊಬ್ಬರಿ 53 ವರ್ಷಗಳ ನಂತರ ಚಾಂಪಿಯನ್‌ಶಿಪ್ ಪಟ್ಟ ತನ್ನದಾಗಿಸಿಕೊಂಡಿತು.

ವಿಶ್ವ ಫುಟ್ಬಾಲ್‌ನ ಪವರ್‌ ಹೌಸ್‌ ಎಂದು ಕರೆಸಿಕೊಳ್ಲುವ ಫ್ರಾನ್ಸ್‌, ಜರ್ಮನಿ, ಸ್ಪೇನ್‌, ಬೆಲ್ಜಿಯಮ್‌ ತಂಡಗಳು ಫೈನಲ್‌ ಪ್ರವೇಶಿಸಲು ವಿಫಲವಾಗಿದ್ದವು. ಈ ಸಂದರ್ಭದಲ್ಲಿ ಇಟಲಿ ಯುರೋ ಕಪ್‌ ಗೆಲ್ಲುವುದರೊಂದಿಗೆ ಮುಂದಿನ ವರ್ಷ 2022 ರ ಫುಟ್ಬಾಲ್‌ ವಿಶ್ವಕಪ್‌ಗೆ ಸಿದ್ಧವಾಗಿರುವ ಸಂದೇಶವನ್ನು ನೀಡಿದೆ.

ಇಂಗ್ಲೆಂಡ್‌ ರಾಜಧಾನಿ ಲಂಡನ್‌ ನಗರದ ವೆಂಬ್ಲೆ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರೆದರು ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ಕನಸು ನಿನ್ನೆ ತಡರಾತ್ರಿ ಭಗ್ನಗೊಂಡಿತು. ಲ್ಯೂಕ್ ಶಾ ಪಂದ್ಯದ 2 ನೇ ನಿಮಿಷದಲ್ಲಿ ಸಿಡಿಸಿದ ಆರಂಭಿಕ ಗೋಲಿನ ಮುನ್ನಡೆಯ ಹೊರತಾಗಿಯೂ ಇಂಗ್ಲೆಂಡ್‌ ಆಟಗಾರರಿಗೆ ಪಂದ್ಯದಲ್ಲಿ ಮತ್ತೊಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌…

ಇಟಲಿಯ ಸ್ಟಾರ್‌ ಆಟಗಾರ  ಲಿಯೋನಾರ್ಡೊ ಬೊನುಸಿ 67 ನೇ ನಿಮಷದಲ್ಲಿ ಅದ್ಭುತ ಗೋಲು ಗಳಿಸಿ ಇಟಲಿ ಪಕ್ಷದಿಂದ ಜಾರುತ್ತಿದ್ದ ಪಂದ್ಯವನ್ನು ಮತ್ತೆ ಸಮ ಸ್ಥಿತಿಗೆ ತಂದರು. ಎರಡೂ ತಂಡಗಳು ಯುರೋಪಿಯನ್‌ ಫುಟ್ಬಾಲ್‌ ಕಿರೀಟಕ್ಕಾಗಿ ಅಂತಿಮ ನಿಮಿಷದವರೆಗೂ ತೀವ್ರ ಪೈಪೋಟಿ ನಡೆಸಿದವಾದರೂ ಪಂದ್ಯ ಇಕ್ವಲೈಜರ್‌ನಲ್ಲಿಯೇ ಅಂತ್ಯವಾಯಿತು. 90+ ಹೆಚ್ಚುವರಿ ಸಮಯದಲ್ಲೂ ಪ್ರಬಲ ತಡೆಗೋಡೆಗಳನ್ನು ಭೇದಿಸಿ ಗೋಲು ಗಳಿಸುವ ಇಟಲಿ ಮತ್ತು ಇಂಗ್ಲೆಂಡ್‌ ತಂಡದ ಯತ್ನ ಯಶಸ್ವಿಯಾಗಲಿಲ್ಲ. ಕೊನೆಗೆ 1-1 ಗೋಲ್‌ಗಳಿಂದ ಎರಡು ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯ ರೋಚಕ ಪೆನಾಲ್ಟಿ ಶೂಟೌಟ್‌ವರೆಗೂ ಸಾಗಿತು.

ಚಾಂಪಿಯನ್‌ ತಂಡವನ್ನು ನಿರ್ಣಯಿಸುವ ಪೆನಾಲ್ಟಿ ಶೂಟೌಟ್‌ನಲ್ಲಿ ಇಟಲಿ ಮೇಲುಗೈ ಸಾಧಿಸಿ ಇಂಗ್ಲೆಂಡ್‌ ಅಭಿಮಾನಿಗಳನ್ನು ನಿರಾಸೆಗೊಳಿಸಿತು. ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ತಂಡದ ಕನಸು ನಿರ್ಣಾಯಕ ಹಂತದಲ್ಲಿ ವಿಫಲಗೊಂಡಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಕೇನ್ ಮತ್ತು ರಹೀಮ್ ಸ್ಟರ್ಲಿಂಗ್ ಮೇಲೆ ತವರಿನ ಅಭಿಮಾನಿಗಳು ಇಟ್ಟ ನಿರೀಕ್ಷೆ ಹುಸಿಯಾಗಿದೆ. ಇಬ್ಬರೂ ಆಟಗಾರರು ಟೂರ್ನಿಮೆಂಟ್‌ ಉದ್ದಕ್ಕೂ ಮಿಂಚಿನ ಪ್ರದರ್ಶನಗಳನ್ನು ನೀಡಿದ್ದರು.

Euro Cup 2020 England Vs Denmark Preview: Where To Watch Semifinal Match Liveಯುರೋ ಚಾಂಪಿಯನ್ಶಿಪ್‌ನಲ್ಲಿ ನಾಲ್ಕು ಪಂದ್ಯಗಳಿಂದ 5 ಗೋಲುಗಳಿಸಿದ ಕ್ರಿಸ್ಟಿಯಾನೋ ರೊನಾಲ್ಡೊ ಅತಿಹೆಚ್ಚು ಗೋಲು ಗಳಿಸಿದ ಆಟಗಾರನಿಗೆ ನಿಡಲಾಗುವ ಗೋಲ್ಡನ್‌ ಶೂ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಯುರೋ ಕಪ್‌ನಲ್ಲಿ ರೊನಾಲ್ಡೋಗೆ ದೊರೆತ ಮೊದಲ ಪ್ರಶಸ್ತಿ ಇದು.

16 ಗೋಲುಗಳನ್ನು ತಡೆದ ಇಂಗ್ಲೆಂಡ್‌ ಗೋಲ್‌ ಕೀಪರ್‌ ಜೊರ್ಡನ್‌ ಪಿಕ್‌ಫೋರ್ಡ್ ಅವರಿಗೆ ಗೋಲ್ಡನ್‌ ಗ್ಲೌಸ್‌ ಪ್ರಶಸ್ತಿಯನ್ನು ನೀಡಲಾಯಿತು.

ಮತ್ತೊಂದೆಡೆ ಇಟಲಿ ತಂಡ ಮ್ಯಾನೇಜರ್‌ ರಾಬರ್ಟೊ ಮ್ಯಾನ್ಸಿನಿ ಮಾರ್ಗದರ್ಶನದಲ್ಲಿ ಸತತ 34ನೇ ಗೆಲುವನ್ನು ಸಾಧಿಸುವ ಮೂಲಕ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿತು.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

ಎರಡೂ ತಂಡಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಯುರೋ ಕಪ್‌ನಲ್ಲಿ ಇಂಗ್ಲೆಂಡ್‌ ತಂಡ ಮೊದಲ ಬಾರಿಗೆ ಫೈನಲ್ ಹಂತವನ್ನು ತಲುಪಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿತ್ತು. 2020 ರಲ್ಲೂ ಇಂಗ್ಲೆಂಡ್‌ನ ಪ್ರಶಸ್ತಿಯ ಬರ ನೀಗಲಿಲ್ಲ. 1966 ರ ಫುಟ್ಬಾಲ್‌ ವಿಶ್ವಕಪ್‌ ಗೆಲುವಿನ ನಂತರ ಇಂಗ್ಲೆಂಡ್‌ ಇದುವರೆಗೆ ಯಾವುದೇ ಮುಖ್ಯ ಕ್ರೀಡಾಕೂಟದಲ್ಲಿ ಫೈನಲ್‌ಗೇರಿರಲಿಲ್ಲ. ಹಾಗಾಗಿ ಇಂಗ್ಲೆಂಡ್‌ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿ ನಿರೀಕ್ಷೆ ಗರಿಗೆದರಿತ್ತು.

ಅತ್ತ 4 ಬಾರಿಯ ವಿಶ್ವಕಪ್‌ ಚಾಂಪಿಯನ್‌ ಇಟಲಿ ಕೂಡ 2006 ರ ವಿಶ್ವಕಪ್‌ ಗೆಲುವಿನ ನಂತರ ಸತತ 15 ವರ್ಷ ಗೆಲುವಿನ ರುಚಿ ಸವಿದಿರಲಿಲ್ಲ. 2012 ರಲ್ಲಿ ಬಲಿಷ್ಠ ಸ್ಪೇನ್‌ ತಂಡದ ವಿರುದ್ಧ ಸೋಲನುಭವಿಸುವ ಮೂಲಕ ನಿರಾಸೆ ಗೊಂಡಿದ್ದ ಇಟಲಿ ಯುರೋ ಕಪ್‌ 2020 ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಳ್ಳುವ ಮೂಲಕ 2012 ರ ನಿರಾಸೆಗೆ ಕೊನೆಹಾಡಿತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಿನಿ ವರ್ಡ್‌ಕಪ್ ಎಂದೇ ಖ್ಯಾತವಾಗಿರುವ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಹಣಾಹಣಿ ಸುಖಾಂತ್ಯವಾಗಿದೆ. ಕೋವಿಡ್‌ ಕಾರಣದಿಂದ 16 ನೇ ಯುರೋ ಕಪ್‌ ಪಂದ್ಯಾವಳಿಯನ್ನು ಕೇವಲ ಒಂದು ದೇಶದಲ್ಲಿ ನಡೆಯದೇ 11 ದೇಶಗಳು ಟೂರ್ನಿಗೆ ಆತಿಥ್ಯ ವಹಿಸಿದವು. ಅಜೆರ್ಬೈಜಾನ್, ಡೆನ್ಮಾರ್ಕ್, ಇಂಗ್ಲೆಂಡ್, ಜರ್ಮನಿ, ಹಾಲೆಂಡ್, ಹಂಗೇರಿ, ಇಟಲಿ, ರೊಮೇನಿಯಾ, ರಷ್ಯಾ, ಸ್ಕಾಟ್ಲೆಂಡ್ ಮತ್ತು ಸ್ಪೇನ್ ಗಳಲ್ಲಿ ಯುರೋ ಕಪ್‌ ಪಂದ್ಯಗಳು ನಡೆದಿದ್ದು ಕೋವಿಡ್‌ ಆತಂಕದ ನಡುವೆ ಪಂದ್ಯಾವಳಿಯ ಸ್ಥಳ ಬದಲಾವಣೆಗೆ ಕೂಡ ಒತ್ತಾಯಗಳು ಕೇಳಿ ಬಂದಿದ್ದವು.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...