Homeಮುಖಪುಟಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

- Advertisement -
- Advertisement -

ವಿಶ್ವ ಫುಟ್‌ಬಾಲ್‌ನ ಪವರ್‌ ಹೌಸ್‌ ಎಂದು ಗುರುತಿಸಿಕೊಂಡಿರುವ ಯುರೋಕಪ್ ಚಾಂಪಿಯನ್‌ಶಿಪ್‌ಗೆ ನಿನ್ನೆ ಮಧ್ಯರಾತ್ರಿ ತೆರೆಬಿದ್ದಿದೆ. ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಇಟಲಿ ಬರೊಬ್ಬರಿ 53 ವರ್ಷಗಳ ನಂತರ ಚಾಂಪಿಯನ್‌ಶಿಪ್ ಪಟ್ಟ ತನ್ನದಾಗಿಸಿಕೊಂಡಿತು.

ವಿಶ್ವ ಫುಟ್ಬಾಲ್‌ನ ಪವರ್‌ ಹೌಸ್‌ ಎಂದು ಕರೆಸಿಕೊಳ್ಲುವ ಫ್ರಾನ್ಸ್‌, ಜರ್ಮನಿ, ಸ್ಪೇನ್‌, ಬೆಲ್ಜಿಯಮ್‌ ತಂಡಗಳು ಫೈನಲ್‌ ಪ್ರವೇಶಿಸಲು ವಿಫಲವಾಗಿದ್ದವು. ಈ ಸಂದರ್ಭದಲ್ಲಿ ಇಟಲಿ ಯುರೋ ಕಪ್‌ ಗೆಲ್ಲುವುದರೊಂದಿಗೆ ಮುಂದಿನ ವರ್ಷ 2022 ರ ಫುಟ್ಬಾಲ್‌ ವಿಶ್ವಕಪ್‌ಗೆ ಸಿದ್ಧವಾಗಿರುವ ಸಂದೇಶವನ್ನು ನೀಡಿದೆ.

ಇಂಗ್ಲೆಂಡ್‌ ರಾಜಧಾನಿ ಲಂಡನ್‌ ನಗರದ ವೆಂಬ್ಲೆ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರೆದರು ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ಕನಸು ನಿನ್ನೆ ತಡರಾತ್ರಿ ಭಗ್ನಗೊಂಡಿತು. ಲ್ಯೂಕ್ ಶಾ ಪಂದ್ಯದ 2 ನೇ ನಿಮಿಷದಲ್ಲಿ ಸಿಡಿಸಿದ ಆರಂಭಿಕ ಗೋಲಿನ ಮುನ್ನಡೆಯ ಹೊರತಾಗಿಯೂ ಇಂಗ್ಲೆಂಡ್‌ ಆಟಗಾರರಿಗೆ ಪಂದ್ಯದಲ್ಲಿ ಮತ್ತೊಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌…

ಇಟಲಿಯ ಸ್ಟಾರ್‌ ಆಟಗಾರ  ಲಿಯೋನಾರ್ಡೊ ಬೊನುಸಿ 67 ನೇ ನಿಮಷದಲ್ಲಿ ಅದ್ಭುತ ಗೋಲು ಗಳಿಸಿ ಇಟಲಿ ಪಕ್ಷದಿಂದ ಜಾರುತ್ತಿದ್ದ ಪಂದ್ಯವನ್ನು ಮತ್ತೆ ಸಮ ಸ್ಥಿತಿಗೆ ತಂದರು. ಎರಡೂ ತಂಡಗಳು ಯುರೋಪಿಯನ್‌ ಫುಟ್ಬಾಲ್‌ ಕಿರೀಟಕ್ಕಾಗಿ ಅಂತಿಮ ನಿಮಿಷದವರೆಗೂ ತೀವ್ರ ಪೈಪೋಟಿ ನಡೆಸಿದವಾದರೂ ಪಂದ್ಯ ಇಕ್ವಲೈಜರ್‌ನಲ್ಲಿಯೇ ಅಂತ್ಯವಾಯಿತು. 90+ ಹೆಚ್ಚುವರಿ ಸಮಯದಲ್ಲೂ ಪ್ರಬಲ ತಡೆಗೋಡೆಗಳನ್ನು ಭೇದಿಸಿ ಗೋಲು ಗಳಿಸುವ ಇಟಲಿ ಮತ್ತು ಇಂಗ್ಲೆಂಡ್‌ ತಂಡದ ಯತ್ನ ಯಶಸ್ವಿಯಾಗಲಿಲ್ಲ. ಕೊನೆಗೆ 1-1 ಗೋಲ್‌ಗಳಿಂದ ಎರಡು ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯ ರೋಚಕ ಪೆನಾಲ್ಟಿ ಶೂಟೌಟ್‌ವರೆಗೂ ಸಾಗಿತು.

ಚಾಂಪಿಯನ್‌ ತಂಡವನ್ನು ನಿರ್ಣಯಿಸುವ ಪೆನಾಲ್ಟಿ ಶೂಟೌಟ್‌ನಲ್ಲಿ ಇಟಲಿ ಮೇಲುಗೈ ಸಾಧಿಸಿ ಇಂಗ್ಲೆಂಡ್‌ ಅಭಿಮಾನಿಗಳನ್ನು ನಿರಾಸೆಗೊಳಿಸಿತು. ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ತಂಡದ ಕನಸು ನಿರ್ಣಾಯಕ ಹಂತದಲ್ಲಿ ವಿಫಲಗೊಂಡಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಕೇನ್ ಮತ್ತು ರಹೀಮ್ ಸ್ಟರ್ಲಿಂಗ್ ಮೇಲೆ ತವರಿನ ಅಭಿಮಾನಿಗಳು ಇಟ್ಟ ನಿರೀಕ್ಷೆ ಹುಸಿಯಾಗಿದೆ. ಇಬ್ಬರೂ ಆಟಗಾರರು ಟೂರ್ನಿಮೆಂಟ್‌ ಉದ್ದಕ್ಕೂ ಮಿಂಚಿನ ಪ್ರದರ್ಶನಗಳನ್ನು ನೀಡಿದ್ದರು.

Euro Cup 2020 England Vs Denmark Preview: Where To Watch Semifinal Match Liveಯುರೋ ಚಾಂಪಿಯನ್ಶಿಪ್‌ನಲ್ಲಿ ನಾಲ್ಕು ಪಂದ್ಯಗಳಿಂದ 5 ಗೋಲುಗಳಿಸಿದ ಕ್ರಿಸ್ಟಿಯಾನೋ ರೊನಾಲ್ಡೊ ಅತಿಹೆಚ್ಚು ಗೋಲು ಗಳಿಸಿದ ಆಟಗಾರನಿಗೆ ನಿಡಲಾಗುವ ಗೋಲ್ಡನ್‌ ಶೂ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಯುರೋ ಕಪ್‌ನಲ್ಲಿ ರೊನಾಲ್ಡೋಗೆ ದೊರೆತ ಮೊದಲ ಪ್ರಶಸ್ತಿ ಇದು.

16 ಗೋಲುಗಳನ್ನು ತಡೆದ ಇಂಗ್ಲೆಂಡ್‌ ಗೋಲ್‌ ಕೀಪರ್‌ ಜೊರ್ಡನ್‌ ಪಿಕ್‌ಫೋರ್ಡ್ ಅವರಿಗೆ ಗೋಲ್ಡನ್‌ ಗ್ಲೌಸ್‌ ಪ್ರಶಸ್ತಿಯನ್ನು ನೀಡಲಾಯಿತು.

ಮತ್ತೊಂದೆಡೆ ಇಟಲಿ ತಂಡ ಮ್ಯಾನೇಜರ್‌ ರಾಬರ್ಟೊ ಮ್ಯಾನ್ಸಿನಿ ಮಾರ್ಗದರ್ಶನದಲ್ಲಿ ಸತತ 34ನೇ ಗೆಲುವನ್ನು ಸಾಧಿಸುವ ಮೂಲಕ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿತು.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

ಎರಡೂ ತಂಡಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಯುರೋ ಕಪ್‌ನಲ್ಲಿ ಇಂಗ್ಲೆಂಡ್‌ ತಂಡ ಮೊದಲ ಬಾರಿಗೆ ಫೈನಲ್ ಹಂತವನ್ನು ತಲುಪಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿತ್ತು. 2020 ರಲ್ಲೂ ಇಂಗ್ಲೆಂಡ್‌ನ ಪ್ರಶಸ್ತಿಯ ಬರ ನೀಗಲಿಲ್ಲ. 1966 ರ ಫುಟ್ಬಾಲ್‌ ವಿಶ್ವಕಪ್‌ ಗೆಲುವಿನ ನಂತರ ಇಂಗ್ಲೆಂಡ್‌ ಇದುವರೆಗೆ ಯಾವುದೇ ಮುಖ್ಯ ಕ್ರೀಡಾಕೂಟದಲ್ಲಿ ಫೈನಲ್‌ಗೇರಿರಲಿಲ್ಲ. ಹಾಗಾಗಿ ಇಂಗ್ಲೆಂಡ್‌ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿ ನಿರೀಕ್ಷೆ ಗರಿಗೆದರಿತ್ತು.

ಅತ್ತ 4 ಬಾರಿಯ ವಿಶ್ವಕಪ್‌ ಚಾಂಪಿಯನ್‌ ಇಟಲಿ ಕೂಡ 2006 ರ ವಿಶ್ವಕಪ್‌ ಗೆಲುವಿನ ನಂತರ ಸತತ 15 ವರ್ಷ ಗೆಲುವಿನ ರುಚಿ ಸವಿದಿರಲಿಲ್ಲ. 2012 ರಲ್ಲಿ ಬಲಿಷ್ಠ ಸ್ಪೇನ್‌ ತಂಡದ ವಿರುದ್ಧ ಸೋಲನುಭವಿಸುವ ಮೂಲಕ ನಿರಾಸೆ ಗೊಂಡಿದ್ದ ಇಟಲಿ ಯುರೋ ಕಪ್‌ 2020 ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಳ್ಳುವ ಮೂಲಕ 2012 ರ ನಿರಾಸೆಗೆ ಕೊನೆಹಾಡಿತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಿನಿ ವರ್ಡ್‌ಕಪ್ ಎಂದೇ ಖ್ಯಾತವಾಗಿರುವ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಹಣಾಹಣಿ ಸುಖಾಂತ್ಯವಾಗಿದೆ. ಕೋವಿಡ್‌ ಕಾರಣದಿಂದ 16 ನೇ ಯುರೋ ಕಪ್‌ ಪಂದ್ಯಾವಳಿಯನ್ನು ಕೇವಲ ಒಂದು ದೇಶದಲ್ಲಿ ನಡೆಯದೇ 11 ದೇಶಗಳು ಟೂರ್ನಿಗೆ ಆತಿಥ್ಯ ವಹಿಸಿದವು. ಅಜೆರ್ಬೈಜಾನ್, ಡೆನ್ಮಾರ್ಕ್, ಇಂಗ್ಲೆಂಡ್, ಜರ್ಮನಿ, ಹಾಲೆಂಡ್, ಹಂಗೇರಿ, ಇಟಲಿ, ರೊಮೇನಿಯಾ, ರಷ್ಯಾ, ಸ್ಕಾಟ್ಲೆಂಡ್ ಮತ್ತು ಸ್ಪೇನ್ ಗಳಲ್ಲಿ ಯುರೋ ಕಪ್‌ ಪಂದ್ಯಗಳು ನಡೆದಿದ್ದು ಕೋವಿಡ್‌ ಆತಂಕದ ನಡುವೆ ಪಂದ್ಯಾವಳಿಯ ಸ್ಥಳ ಬದಲಾವಣೆಗೆ ಕೂಡ ಒತ್ತಾಯಗಳು ಕೇಳಿ ಬಂದಿದ್ದವು.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...