Homeಮುಖಪುಟಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

- Advertisement -
- Advertisement -

ವಿಶ್ವ ಫುಟ್‌ಬಾಲ್‌ನ ಪವರ್‌ ಹೌಸ್‌ ಎಂದು ಗುರುತಿಸಿಕೊಂಡಿರುವ ಯುರೋಕಪ್ ಚಾಂಪಿಯನ್‌ಶಿಪ್‌ಗೆ ನಿನ್ನೆ ಮಧ್ಯರಾತ್ರಿ ತೆರೆಬಿದ್ದಿದೆ. ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಇಟಲಿ ಬರೊಬ್ಬರಿ 53 ವರ್ಷಗಳ ನಂತರ ಚಾಂಪಿಯನ್‌ಶಿಪ್ ಪಟ್ಟ ತನ್ನದಾಗಿಸಿಕೊಂಡಿತು.

ವಿಶ್ವ ಫುಟ್ಬಾಲ್‌ನ ಪವರ್‌ ಹೌಸ್‌ ಎಂದು ಕರೆಸಿಕೊಳ್ಲುವ ಫ್ರಾನ್ಸ್‌, ಜರ್ಮನಿ, ಸ್ಪೇನ್‌, ಬೆಲ್ಜಿಯಮ್‌ ತಂಡಗಳು ಫೈನಲ್‌ ಪ್ರವೇಶಿಸಲು ವಿಫಲವಾಗಿದ್ದವು. ಈ ಸಂದರ್ಭದಲ್ಲಿ ಇಟಲಿ ಯುರೋ ಕಪ್‌ ಗೆಲ್ಲುವುದರೊಂದಿಗೆ ಮುಂದಿನ ವರ್ಷ 2022 ರ ಫುಟ್ಬಾಲ್‌ ವಿಶ್ವಕಪ್‌ಗೆ ಸಿದ್ಧವಾಗಿರುವ ಸಂದೇಶವನ್ನು ನೀಡಿದೆ.

ಇಂಗ್ಲೆಂಡ್‌ ರಾಜಧಾನಿ ಲಂಡನ್‌ ನಗರದ ವೆಂಬ್ಲೆ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರೆದರು ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ಕನಸು ನಿನ್ನೆ ತಡರಾತ್ರಿ ಭಗ್ನಗೊಂಡಿತು. ಲ್ಯೂಕ್ ಶಾ ಪಂದ್ಯದ 2 ನೇ ನಿಮಿಷದಲ್ಲಿ ಸಿಡಿಸಿದ ಆರಂಭಿಕ ಗೋಲಿನ ಮುನ್ನಡೆಯ ಹೊರತಾಗಿಯೂ ಇಂಗ್ಲೆಂಡ್‌ ಆಟಗಾರರಿಗೆ ಪಂದ್ಯದಲ್ಲಿ ಮತ್ತೊಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌…

ಇಟಲಿಯ ಸ್ಟಾರ್‌ ಆಟಗಾರ  ಲಿಯೋನಾರ್ಡೊ ಬೊನುಸಿ 67 ನೇ ನಿಮಷದಲ್ಲಿ ಅದ್ಭುತ ಗೋಲು ಗಳಿಸಿ ಇಟಲಿ ಪಕ್ಷದಿಂದ ಜಾರುತ್ತಿದ್ದ ಪಂದ್ಯವನ್ನು ಮತ್ತೆ ಸಮ ಸ್ಥಿತಿಗೆ ತಂದರು. ಎರಡೂ ತಂಡಗಳು ಯುರೋಪಿಯನ್‌ ಫುಟ್ಬಾಲ್‌ ಕಿರೀಟಕ್ಕಾಗಿ ಅಂತಿಮ ನಿಮಿಷದವರೆಗೂ ತೀವ್ರ ಪೈಪೋಟಿ ನಡೆಸಿದವಾದರೂ ಪಂದ್ಯ ಇಕ್ವಲೈಜರ್‌ನಲ್ಲಿಯೇ ಅಂತ್ಯವಾಯಿತು. 90+ ಹೆಚ್ಚುವರಿ ಸಮಯದಲ್ಲೂ ಪ್ರಬಲ ತಡೆಗೋಡೆಗಳನ್ನು ಭೇದಿಸಿ ಗೋಲು ಗಳಿಸುವ ಇಟಲಿ ಮತ್ತು ಇಂಗ್ಲೆಂಡ್‌ ತಂಡದ ಯತ್ನ ಯಶಸ್ವಿಯಾಗಲಿಲ್ಲ. ಕೊನೆಗೆ 1-1 ಗೋಲ್‌ಗಳಿಂದ ಎರಡು ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯ ರೋಚಕ ಪೆನಾಲ್ಟಿ ಶೂಟೌಟ್‌ವರೆಗೂ ಸಾಗಿತು.

ಚಾಂಪಿಯನ್‌ ತಂಡವನ್ನು ನಿರ್ಣಯಿಸುವ ಪೆನಾಲ್ಟಿ ಶೂಟೌಟ್‌ನಲ್ಲಿ ಇಟಲಿ ಮೇಲುಗೈ ಸಾಧಿಸಿ ಇಂಗ್ಲೆಂಡ್‌ ಅಭಿಮಾನಿಗಳನ್ನು ನಿರಾಸೆಗೊಳಿಸಿತು. ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ತಂಡದ ಕನಸು ನಿರ್ಣಾಯಕ ಹಂತದಲ್ಲಿ ವಿಫಲಗೊಂಡಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಕೇನ್ ಮತ್ತು ರಹೀಮ್ ಸ್ಟರ್ಲಿಂಗ್ ಮೇಲೆ ತವರಿನ ಅಭಿಮಾನಿಗಳು ಇಟ್ಟ ನಿರೀಕ್ಷೆ ಹುಸಿಯಾಗಿದೆ. ಇಬ್ಬರೂ ಆಟಗಾರರು ಟೂರ್ನಿಮೆಂಟ್‌ ಉದ್ದಕ್ಕೂ ಮಿಂಚಿನ ಪ್ರದರ್ಶನಗಳನ್ನು ನೀಡಿದ್ದರು.

Euro Cup 2020 England Vs Denmark Preview: Where To Watch Semifinal Match Liveಯುರೋ ಚಾಂಪಿಯನ್ಶಿಪ್‌ನಲ್ಲಿ ನಾಲ್ಕು ಪಂದ್ಯಗಳಿಂದ 5 ಗೋಲುಗಳಿಸಿದ ಕ್ರಿಸ್ಟಿಯಾನೋ ರೊನಾಲ್ಡೊ ಅತಿಹೆಚ್ಚು ಗೋಲು ಗಳಿಸಿದ ಆಟಗಾರನಿಗೆ ನಿಡಲಾಗುವ ಗೋಲ್ಡನ್‌ ಶೂ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಯುರೋ ಕಪ್‌ನಲ್ಲಿ ರೊನಾಲ್ಡೋಗೆ ದೊರೆತ ಮೊದಲ ಪ್ರಶಸ್ತಿ ಇದು.

16 ಗೋಲುಗಳನ್ನು ತಡೆದ ಇಂಗ್ಲೆಂಡ್‌ ಗೋಲ್‌ ಕೀಪರ್‌ ಜೊರ್ಡನ್‌ ಪಿಕ್‌ಫೋರ್ಡ್ ಅವರಿಗೆ ಗೋಲ್ಡನ್‌ ಗ್ಲೌಸ್‌ ಪ್ರಶಸ್ತಿಯನ್ನು ನೀಡಲಾಯಿತು.

ಮತ್ತೊಂದೆಡೆ ಇಟಲಿ ತಂಡ ಮ್ಯಾನೇಜರ್‌ ರಾಬರ್ಟೊ ಮ್ಯಾನ್ಸಿನಿ ಮಾರ್ಗದರ್ಶನದಲ್ಲಿ ಸತತ 34ನೇ ಗೆಲುವನ್ನು ಸಾಧಿಸುವ ಮೂಲಕ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿತು.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

ಎರಡೂ ತಂಡಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಯುರೋ ಕಪ್‌ನಲ್ಲಿ ಇಂಗ್ಲೆಂಡ್‌ ತಂಡ ಮೊದಲ ಬಾರಿಗೆ ಫೈನಲ್ ಹಂತವನ್ನು ತಲುಪಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿತ್ತು. 2020 ರಲ್ಲೂ ಇಂಗ್ಲೆಂಡ್‌ನ ಪ್ರಶಸ್ತಿಯ ಬರ ನೀಗಲಿಲ್ಲ. 1966 ರ ಫುಟ್ಬಾಲ್‌ ವಿಶ್ವಕಪ್‌ ಗೆಲುವಿನ ನಂತರ ಇಂಗ್ಲೆಂಡ್‌ ಇದುವರೆಗೆ ಯಾವುದೇ ಮುಖ್ಯ ಕ್ರೀಡಾಕೂಟದಲ್ಲಿ ಫೈನಲ್‌ಗೇರಿರಲಿಲ್ಲ. ಹಾಗಾಗಿ ಇಂಗ್ಲೆಂಡ್‌ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿ ನಿರೀಕ್ಷೆ ಗರಿಗೆದರಿತ್ತು.

ಅತ್ತ 4 ಬಾರಿಯ ವಿಶ್ವಕಪ್‌ ಚಾಂಪಿಯನ್‌ ಇಟಲಿ ಕೂಡ 2006 ರ ವಿಶ್ವಕಪ್‌ ಗೆಲುವಿನ ನಂತರ ಸತತ 15 ವರ್ಷ ಗೆಲುವಿನ ರುಚಿ ಸವಿದಿರಲಿಲ್ಲ. 2012 ರಲ್ಲಿ ಬಲಿಷ್ಠ ಸ್ಪೇನ್‌ ತಂಡದ ವಿರುದ್ಧ ಸೋಲನುಭವಿಸುವ ಮೂಲಕ ನಿರಾಸೆ ಗೊಂಡಿದ್ದ ಇಟಲಿ ಯುರೋ ಕಪ್‌ 2020 ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಳ್ಳುವ ಮೂಲಕ 2012 ರ ನಿರಾಸೆಗೆ ಕೊನೆಹಾಡಿತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಿನಿ ವರ್ಡ್‌ಕಪ್ ಎಂದೇ ಖ್ಯಾತವಾಗಿರುವ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಹಣಾಹಣಿ ಸುಖಾಂತ್ಯವಾಗಿದೆ. ಕೋವಿಡ್‌ ಕಾರಣದಿಂದ 16 ನೇ ಯುರೋ ಕಪ್‌ ಪಂದ್ಯಾವಳಿಯನ್ನು ಕೇವಲ ಒಂದು ದೇಶದಲ್ಲಿ ನಡೆಯದೇ 11 ದೇಶಗಳು ಟೂರ್ನಿಗೆ ಆತಿಥ್ಯ ವಹಿಸಿದವು. ಅಜೆರ್ಬೈಜಾನ್, ಡೆನ್ಮಾರ್ಕ್, ಇಂಗ್ಲೆಂಡ್, ಜರ್ಮನಿ, ಹಾಲೆಂಡ್, ಹಂಗೇರಿ, ಇಟಲಿ, ರೊಮೇನಿಯಾ, ರಷ್ಯಾ, ಸ್ಕಾಟ್ಲೆಂಡ್ ಮತ್ತು ಸ್ಪೇನ್ ಗಳಲ್ಲಿ ಯುರೋ ಕಪ್‌ ಪಂದ್ಯಗಳು ನಡೆದಿದ್ದು ಕೋವಿಡ್‌ ಆತಂಕದ ನಡುವೆ ಪಂದ್ಯಾವಳಿಯ ಸ್ಥಳ ಬದಲಾವಣೆಗೆ ಕೂಡ ಒತ್ತಾಯಗಳು ಕೇಳಿ ಬಂದಿದ್ದವು.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...