Homeಮುಖಪುಟಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

- Advertisement -
- Advertisement -

ವಿಶ್ವ ಫುಟ್‌ಬಾಲ್‌ನ ಪವರ್‌ ಹೌಸ್‌ ಎಂದು ಗುರುತಿಸಿಕೊಂಡಿರುವ ಯುರೋಕಪ್ ಚಾಂಪಿಯನ್‌ಶಿಪ್‌ಗೆ ನಿನ್ನೆ ಮಧ್ಯರಾತ್ರಿ ತೆರೆಬಿದ್ದಿದೆ. ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಇಟಲಿ ಬರೊಬ್ಬರಿ 53 ವರ್ಷಗಳ ನಂತರ ಚಾಂಪಿಯನ್‌ಶಿಪ್ ಪಟ್ಟ ತನ್ನದಾಗಿಸಿಕೊಂಡಿತು.

ವಿಶ್ವ ಫುಟ್ಬಾಲ್‌ನ ಪವರ್‌ ಹೌಸ್‌ ಎಂದು ಕರೆಸಿಕೊಳ್ಲುವ ಫ್ರಾನ್ಸ್‌, ಜರ್ಮನಿ, ಸ್ಪೇನ್‌, ಬೆಲ್ಜಿಯಮ್‌ ತಂಡಗಳು ಫೈನಲ್‌ ಪ್ರವೇಶಿಸಲು ವಿಫಲವಾಗಿದ್ದವು. ಈ ಸಂದರ್ಭದಲ್ಲಿ ಇಟಲಿ ಯುರೋ ಕಪ್‌ ಗೆಲ್ಲುವುದರೊಂದಿಗೆ ಮುಂದಿನ ವರ್ಷ 2022 ರ ಫುಟ್ಬಾಲ್‌ ವಿಶ್ವಕಪ್‌ಗೆ ಸಿದ್ಧವಾಗಿರುವ ಸಂದೇಶವನ್ನು ನೀಡಿದೆ.

ಇಂಗ್ಲೆಂಡ್‌ ರಾಜಧಾನಿ ಲಂಡನ್‌ ನಗರದ ವೆಂಬ್ಲೆ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರೆದರು ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ಕನಸು ನಿನ್ನೆ ತಡರಾತ್ರಿ ಭಗ್ನಗೊಂಡಿತು. ಲ್ಯೂಕ್ ಶಾ ಪಂದ್ಯದ 2 ನೇ ನಿಮಿಷದಲ್ಲಿ ಸಿಡಿಸಿದ ಆರಂಭಿಕ ಗೋಲಿನ ಮುನ್ನಡೆಯ ಹೊರತಾಗಿಯೂ ಇಂಗ್ಲೆಂಡ್‌ ಆಟಗಾರರಿಗೆ ಪಂದ್ಯದಲ್ಲಿ ಮತ್ತೊಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌…

ಇಟಲಿಯ ಸ್ಟಾರ್‌ ಆಟಗಾರ  ಲಿಯೋನಾರ್ಡೊ ಬೊನುಸಿ 67 ನೇ ನಿಮಷದಲ್ಲಿ ಅದ್ಭುತ ಗೋಲು ಗಳಿಸಿ ಇಟಲಿ ಪಕ್ಷದಿಂದ ಜಾರುತ್ತಿದ್ದ ಪಂದ್ಯವನ್ನು ಮತ್ತೆ ಸಮ ಸ್ಥಿತಿಗೆ ತಂದರು. ಎರಡೂ ತಂಡಗಳು ಯುರೋಪಿಯನ್‌ ಫುಟ್ಬಾಲ್‌ ಕಿರೀಟಕ್ಕಾಗಿ ಅಂತಿಮ ನಿಮಿಷದವರೆಗೂ ತೀವ್ರ ಪೈಪೋಟಿ ನಡೆಸಿದವಾದರೂ ಪಂದ್ಯ ಇಕ್ವಲೈಜರ್‌ನಲ್ಲಿಯೇ ಅಂತ್ಯವಾಯಿತು. 90+ ಹೆಚ್ಚುವರಿ ಸಮಯದಲ್ಲೂ ಪ್ರಬಲ ತಡೆಗೋಡೆಗಳನ್ನು ಭೇದಿಸಿ ಗೋಲು ಗಳಿಸುವ ಇಟಲಿ ಮತ್ತು ಇಂಗ್ಲೆಂಡ್‌ ತಂಡದ ಯತ್ನ ಯಶಸ್ವಿಯಾಗಲಿಲ್ಲ. ಕೊನೆಗೆ 1-1 ಗೋಲ್‌ಗಳಿಂದ ಎರಡು ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯ ರೋಚಕ ಪೆನಾಲ್ಟಿ ಶೂಟೌಟ್‌ವರೆಗೂ ಸಾಗಿತು.

ಚಾಂಪಿಯನ್‌ ತಂಡವನ್ನು ನಿರ್ಣಯಿಸುವ ಪೆನಾಲ್ಟಿ ಶೂಟೌಟ್‌ನಲ್ಲಿ ಇಟಲಿ ಮೇಲುಗೈ ಸಾಧಿಸಿ ಇಂಗ್ಲೆಂಡ್‌ ಅಭಿಮಾನಿಗಳನ್ನು ನಿರಾಸೆಗೊಳಿಸಿತು. ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ತಂಡದ ಕನಸು ನಿರ್ಣಾಯಕ ಹಂತದಲ್ಲಿ ವಿಫಲಗೊಂಡಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಕೇನ್ ಮತ್ತು ರಹೀಮ್ ಸ್ಟರ್ಲಿಂಗ್ ಮೇಲೆ ತವರಿನ ಅಭಿಮಾನಿಗಳು ಇಟ್ಟ ನಿರೀಕ್ಷೆ ಹುಸಿಯಾಗಿದೆ. ಇಬ್ಬರೂ ಆಟಗಾರರು ಟೂರ್ನಿಮೆಂಟ್‌ ಉದ್ದಕ್ಕೂ ಮಿಂಚಿನ ಪ್ರದರ್ಶನಗಳನ್ನು ನೀಡಿದ್ದರು.

Euro Cup 2020 England Vs Denmark Preview: Where To Watch Semifinal Match Liveಯುರೋ ಚಾಂಪಿಯನ್ಶಿಪ್‌ನಲ್ಲಿ ನಾಲ್ಕು ಪಂದ್ಯಗಳಿಂದ 5 ಗೋಲುಗಳಿಸಿದ ಕ್ರಿಸ್ಟಿಯಾನೋ ರೊನಾಲ್ಡೊ ಅತಿಹೆಚ್ಚು ಗೋಲು ಗಳಿಸಿದ ಆಟಗಾರನಿಗೆ ನಿಡಲಾಗುವ ಗೋಲ್ಡನ್‌ ಶೂ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಯುರೋ ಕಪ್‌ನಲ್ಲಿ ರೊನಾಲ್ಡೋಗೆ ದೊರೆತ ಮೊದಲ ಪ್ರಶಸ್ತಿ ಇದು.

16 ಗೋಲುಗಳನ್ನು ತಡೆದ ಇಂಗ್ಲೆಂಡ್‌ ಗೋಲ್‌ ಕೀಪರ್‌ ಜೊರ್ಡನ್‌ ಪಿಕ್‌ಫೋರ್ಡ್ ಅವರಿಗೆ ಗೋಲ್ಡನ್‌ ಗ್ಲೌಸ್‌ ಪ್ರಶಸ್ತಿಯನ್ನು ನೀಡಲಾಯಿತು.

ಮತ್ತೊಂದೆಡೆ ಇಟಲಿ ತಂಡ ಮ್ಯಾನೇಜರ್‌ ರಾಬರ್ಟೊ ಮ್ಯಾನ್ಸಿನಿ ಮಾರ್ಗದರ್ಶನದಲ್ಲಿ ಸತತ 34ನೇ ಗೆಲುವನ್ನು ಸಾಧಿಸುವ ಮೂಲಕ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿತು.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

ಎರಡೂ ತಂಡಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಯುರೋ ಕಪ್‌ನಲ್ಲಿ ಇಂಗ್ಲೆಂಡ್‌ ತಂಡ ಮೊದಲ ಬಾರಿಗೆ ಫೈನಲ್ ಹಂತವನ್ನು ತಲುಪಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿತ್ತು. 2020 ರಲ್ಲೂ ಇಂಗ್ಲೆಂಡ್‌ನ ಪ್ರಶಸ್ತಿಯ ಬರ ನೀಗಲಿಲ್ಲ. 1966 ರ ಫುಟ್ಬಾಲ್‌ ವಿಶ್ವಕಪ್‌ ಗೆಲುವಿನ ನಂತರ ಇಂಗ್ಲೆಂಡ್‌ ಇದುವರೆಗೆ ಯಾವುದೇ ಮುಖ್ಯ ಕ್ರೀಡಾಕೂಟದಲ್ಲಿ ಫೈನಲ್‌ಗೇರಿರಲಿಲ್ಲ. ಹಾಗಾಗಿ ಇಂಗ್ಲೆಂಡ್‌ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿ ನಿರೀಕ್ಷೆ ಗರಿಗೆದರಿತ್ತು.

ಅತ್ತ 4 ಬಾರಿಯ ವಿಶ್ವಕಪ್‌ ಚಾಂಪಿಯನ್‌ ಇಟಲಿ ಕೂಡ 2006 ರ ವಿಶ್ವಕಪ್‌ ಗೆಲುವಿನ ನಂತರ ಸತತ 15 ವರ್ಷ ಗೆಲುವಿನ ರುಚಿ ಸವಿದಿರಲಿಲ್ಲ. 2012 ರಲ್ಲಿ ಬಲಿಷ್ಠ ಸ್ಪೇನ್‌ ತಂಡದ ವಿರುದ್ಧ ಸೋಲನುಭವಿಸುವ ಮೂಲಕ ನಿರಾಸೆ ಗೊಂಡಿದ್ದ ಇಟಲಿ ಯುರೋ ಕಪ್‌ 2020 ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಳ್ಳುವ ಮೂಲಕ 2012 ರ ನಿರಾಸೆಗೆ ಕೊನೆಹಾಡಿತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಿನಿ ವರ್ಡ್‌ಕಪ್ ಎಂದೇ ಖ್ಯಾತವಾಗಿರುವ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಹಣಾಹಣಿ ಸುಖಾಂತ್ಯವಾಗಿದೆ. ಕೋವಿಡ್‌ ಕಾರಣದಿಂದ 16 ನೇ ಯುರೋ ಕಪ್‌ ಪಂದ್ಯಾವಳಿಯನ್ನು ಕೇವಲ ಒಂದು ದೇಶದಲ್ಲಿ ನಡೆಯದೇ 11 ದೇಶಗಳು ಟೂರ್ನಿಗೆ ಆತಿಥ್ಯ ವಹಿಸಿದವು. ಅಜೆರ್ಬೈಜಾನ್, ಡೆನ್ಮಾರ್ಕ್, ಇಂಗ್ಲೆಂಡ್, ಜರ್ಮನಿ, ಹಾಲೆಂಡ್, ಹಂಗೇರಿ, ಇಟಲಿ, ರೊಮೇನಿಯಾ, ರಷ್ಯಾ, ಸ್ಕಾಟ್ಲೆಂಡ್ ಮತ್ತು ಸ್ಪೇನ್ ಗಳಲ್ಲಿ ಯುರೋ ಕಪ್‌ ಪಂದ್ಯಗಳು ನಡೆದಿದ್ದು ಕೋವಿಡ್‌ ಆತಂಕದ ನಡುವೆ ಪಂದ್ಯಾವಳಿಯ ಸ್ಥಳ ಬದಲಾವಣೆಗೆ ಕೂಡ ಒತ್ತಾಯಗಳು ಕೇಳಿ ಬಂದಿದ್ದವು.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....