Homeಮುಖಪುಟಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

- Advertisement -
- Advertisement -

ವಿಶ್ವ ಫುಟ್‌ಬಾಲ್‌ನ ಪವರ್‌ ಹೌಸ್‌ ಎಂದು ಗುರುತಿಸಿಕೊಂಡಿರುವ ಯುರೋಕಪ್ ಚಾಂಪಿಯನ್‌ಶಿಪ್‌ಗೆ ನಿನ್ನೆ ಮಧ್ಯರಾತ್ರಿ ತೆರೆಬಿದ್ದಿದೆ. ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಇಟಲಿ ಬರೊಬ್ಬರಿ 53 ವರ್ಷಗಳ ನಂತರ ಚಾಂಪಿಯನ್‌ಶಿಪ್ ಪಟ್ಟ ತನ್ನದಾಗಿಸಿಕೊಂಡಿತು.

ವಿಶ್ವ ಫುಟ್ಬಾಲ್‌ನ ಪವರ್‌ ಹೌಸ್‌ ಎಂದು ಕರೆಸಿಕೊಳ್ಲುವ ಫ್ರಾನ್ಸ್‌, ಜರ್ಮನಿ, ಸ್ಪೇನ್‌, ಬೆಲ್ಜಿಯಮ್‌ ತಂಡಗಳು ಫೈನಲ್‌ ಪ್ರವೇಶಿಸಲು ವಿಫಲವಾಗಿದ್ದವು. ಈ ಸಂದರ್ಭದಲ್ಲಿ ಇಟಲಿ ಯುರೋ ಕಪ್‌ ಗೆಲ್ಲುವುದರೊಂದಿಗೆ ಮುಂದಿನ ವರ್ಷ 2022 ರ ಫುಟ್ಬಾಲ್‌ ವಿಶ್ವಕಪ್‌ಗೆ ಸಿದ್ಧವಾಗಿರುವ ಸಂದೇಶವನ್ನು ನೀಡಿದೆ.

ಇಂಗ್ಲೆಂಡ್‌ ರಾಜಧಾನಿ ಲಂಡನ್‌ ನಗರದ ವೆಂಬ್ಲೆ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರೆದರು ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ಕನಸು ನಿನ್ನೆ ತಡರಾತ್ರಿ ಭಗ್ನಗೊಂಡಿತು. ಲ್ಯೂಕ್ ಶಾ ಪಂದ್ಯದ 2 ನೇ ನಿಮಿಷದಲ್ಲಿ ಸಿಡಿಸಿದ ಆರಂಭಿಕ ಗೋಲಿನ ಮುನ್ನಡೆಯ ಹೊರತಾಗಿಯೂ ಇಂಗ್ಲೆಂಡ್‌ ಆಟಗಾರರಿಗೆ ಪಂದ್ಯದಲ್ಲಿ ಮತ್ತೊಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌…

ಇಟಲಿಯ ಸ್ಟಾರ್‌ ಆಟಗಾರ  ಲಿಯೋನಾರ್ಡೊ ಬೊನುಸಿ 67 ನೇ ನಿಮಷದಲ್ಲಿ ಅದ್ಭುತ ಗೋಲು ಗಳಿಸಿ ಇಟಲಿ ಪಕ್ಷದಿಂದ ಜಾರುತ್ತಿದ್ದ ಪಂದ್ಯವನ್ನು ಮತ್ತೆ ಸಮ ಸ್ಥಿತಿಗೆ ತಂದರು. ಎರಡೂ ತಂಡಗಳು ಯುರೋಪಿಯನ್‌ ಫುಟ್ಬಾಲ್‌ ಕಿರೀಟಕ್ಕಾಗಿ ಅಂತಿಮ ನಿಮಿಷದವರೆಗೂ ತೀವ್ರ ಪೈಪೋಟಿ ನಡೆಸಿದವಾದರೂ ಪಂದ್ಯ ಇಕ್ವಲೈಜರ್‌ನಲ್ಲಿಯೇ ಅಂತ್ಯವಾಯಿತು. 90+ ಹೆಚ್ಚುವರಿ ಸಮಯದಲ್ಲೂ ಪ್ರಬಲ ತಡೆಗೋಡೆಗಳನ್ನು ಭೇದಿಸಿ ಗೋಲು ಗಳಿಸುವ ಇಟಲಿ ಮತ್ತು ಇಂಗ್ಲೆಂಡ್‌ ತಂಡದ ಯತ್ನ ಯಶಸ್ವಿಯಾಗಲಿಲ್ಲ. ಕೊನೆಗೆ 1-1 ಗೋಲ್‌ಗಳಿಂದ ಎರಡು ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯ ರೋಚಕ ಪೆನಾಲ್ಟಿ ಶೂಟೌಟ್‌ವರೆಗೂ ಸಾಗಿತು.

ಚಾಂಪಿಯನ್‌ ತಂಡವನ್ನು ನಿರ್ಣಯಿಸುವ ಪೆನಾಲ್ಟಿ ಶೂಟೌಟ್‌ನಲ್ಲಿ ಇಟಲಿ ಮೇಲುಗೈ ಸಾಧಿಸಿ ಇಂಗ್ಲೆಂಡ್‌ ಅಭಿಮಾನಿಗಳನ್ನು ನಿರಾಸೆಗೊಳಿಸಿತು. ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ತಂಡದ ಕನಸು ನಿರ್ಣಾಯಕ ಹಂತದಲ್ಲಿ ವಿಫಲಗೊಂಡಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಕೇನ್ ಮತ್ತು ರಹೀಮ್ ಸ್ಟರ್ಲಿಂಗ್ ಮೇಲೆ ತವರಿನ ಅಭಿಮಾನಿಗಳು ಇಟ್ಟ ನಿರೀಕ್ಷೆ ಹುಸಿಯಾಗಿದೆ. ಇಬ್ಬರೂ ಆಟಗಾರರು ಟೂರ್ನಿಮೆಂಟ್‌ ಉದ್ದಕ್ಕೂ ಮಿಂಚಿನ ಪ್ರದರ್ಶನಗಳನ್ನು ನೀಡಿದ್ದರು.

Euro Cup 2020 England Vs Denmark Preview: Where To Watch Semifinal Match Liveಯುರೋ ಚಾಂಪಿಯನ್ಶಿಪ್‌ನಲ್ಲಿ ನಾಲ್ಕು ಪಂದ್ಯಗಳಿಂದ 5 ಗೋಲುಗಳಿಸಿದ ಕ್ರಿಸ್ಟಿಯಾನೋ ರೊನಾಲ್ಡೊ ಅತಿಹೆಚ್ಚು ಗೋಲು ಗಳಿಸಿದ ಆಟಗಾರನಿಗೆ ನಿಡಲಾಗುವ ಗೋಲ್ಡನ್‌ ಶೂ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಯುರೋ ಕಪ್‌ನಲ್ಲಿ ರೊನಾಲ್ಡೋಗೆ ದೊರೆತ ಮೊದಲ ಪ್ರಶಸ್ತಿ ಇದು.

16 ಗೋಲುಗಳನ್ನು ತಡೆದ ಇಂಗ್ಲೆಂಡ್‌ ಗೋಲ್‌ ಕೀಪರ್‌ ಜೊರ್ಡನ್‌ ಪಿಕ್‌ಫೋರ್ಡ್ ಅವರಿಗೆ ಗೋಲ್ಡನ್‌ ಗ್ಲೌಸ್‌ ಪ್ರಶಸ್ತಿಯನ್ನು ನೀಡಲಾಯಿತು.

ಮತ್ತೊಂದೆಡೆ ಇಟಲಿ ತಂಡ ಮ್ಯಾನೇಜರ್‌ ರಾಬರ್ಟೊ ಮ್ಯಾನ್ಸಿನಿ ಮಾರ್ಗದರ್ಶನದಲ್ಲಿ ಸತತ 34ನೇ ಗೆಲುವನ್ನು ಸಾಧಿಸುವ ಮೂಲಕ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿತು.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

ಎರಡೂ ತಂಡಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಯುರೋ ಕಪ್‌ನಲ್ಲಿ ಇಂಗ್ಲೆಂಡ್‌ ತಂಡ ಮೊದಲ ಬಾರಿಗೆ ಫೈನಲ್ ಹಂತವನ್ನು ತಲುಪಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿತ್ತು. 2020 ರಲ್ಲೂ ಇಂಗ್ಲೆಂಡ್‌ನ ಪ್ರಶಸ್ತಿಯ ಬರ ನೀಗಲಿಲ್ಲ. 1966 ರ ಫುಟ್ಬಾಲ್‌ ವಿಶ್ವಕಪ್‌ ಗೆಲುವಿನ ನಂತರ ಇಂಗ್ಲೆಂಡ್‌ ಇದುವರೆಗೆ ಯಾವುದೇ ಮುಖ್ಯ ಕ್ರೀಡಾಕೂಟದಲ್ಲಿ ಫೈನಲ್‌ಗೇರಿರಲಿಲ್ಲ. ಹಾಗಾಗಿ ಇಂಗ್ಲೆಂಡ್‌ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿ ನಿರೀಕ್ಷೆ ಗರಿಗೆದರಿತ್ತು.

ಅತ್ತ 4 ಬಾರಿಯ ವಿಶ್ವಕಪ್‌ ಚಾಂಪಿಯನ್‌ ಇಟಲಿ ಕೂಡ 2006 ರ ವಿಶ್ವಕಪ್‌ ಗೆಲುವಿನ ನಂತರ ಸತತ 15 ವರ್ಷ ಗೆಲುವಿನ ರುಚಿ ಸವಿದಿರಲಿಲ್ಲ. 2012 ರಲ್ಲಿ ಬಲಿಷ್ಠ ಸ್ಪೇನ್‌ ತಂಡದ ವಿರುದ್ಧ ಸೋಲನುಭವಿಸುವ ಮೂಲಕ ನಿರಾಸೆ ಗೊಂಡಿದ್ದ ಇಟಲಿ ಯುರೋ ಕಪ್‌ 2020 ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಳ್ಳುವ ಮೂಲಕ 2012 ರ ನಿರಾಸೆಗೆ ಕೊನೆಹಾಡಿತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಿನಿ ವರ್ಡ್‌ಕಪ್ ಎಂದೇ ಖ್ಯಾತವಾಗಿರುವ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಹಣಾಹಣಿ ಸುಖಾಂತ್ಯವಾಗಿದೆ. ಕೋವಿಡ್‌ ಕಾರಣದಿಂದ 16 ನೇ ಯುರೋ ಕಪ್‌ ಪಂದ್ಯಾವಳಿಯನ್ನು ಕೇವಲ ಒಂದು ದೇಶದಲ್ಲಿ ನಡೆಯದೇ 11 ದೇಶಗಳು ಟೂರ್ನಿಗೆ ಆತಿಥ್ಯ ವಹಿಸಿದವು. ಅಜೆರ್ಬೈಜಾನ್, ಡೆನ್ಮಾರ್ಕ್, ಇಂಗ್ಲೆಂಡ್, ಜರ್ಮನಿ, ಹಾಲೆಂಡ್, ಹಂಗೇರಿ, ಇಟಲಿ, ರೊಮೇನಿಯಾ, ರಷ್ಯಾ, ಸ್ಕಾಟ್ಲೆಂಡ್ ಮತ್ತು ಸ್ಪೇನ್ ಗಳಲ್ಲಿ ಯುರೋ ಕಪ್‌ ಪಂದ್ಯಗಳು ನಡೆದಿದ್ದು ಕೋವಿಡ್‌ ಆತಂಕದ ನಡುವೆ ಪಂದ್ಯಾವಳಿಯ ಸ್ಥಳ ಬದಲಾವಣೆಗೆ ಕೂಡ ಒತ್ತಾಯಗಳು ಕೇಳಿ ಬಂದಿದ್ದವು.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದ ದಲಿತ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ : 16 ವರ್ಷದ ಬಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ 14 ವರ್ಷದ ದಲಿತ ಬಾಲಕಿಯ ಭೀಕರ ಅತ್ಯಾಚಾರ, ಕೊಲೆ ನಡೆದಿದ್ದು, ಈ ಸಂಬಂಧ 16 ವರ್ಷದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗುರುವಾರ (ಜ.15) ಬೆಳಿಗ್ಗೆ ಶಾಲೆಗೆ ಹೋದ...

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮುಸ್ಲಿಮರನ್ನು ಎರಡನೇ ದರ್ಜೆಯ ನಾಗರಿಕರಂತೆ ನಡೆಸಿಕೊಳ್ಳುತ್ತದೆ: ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ನಡೆಸಿದ್ದಾರೆ. ಪೌರತ್ವ ಕಾಯ್ದೆ ಮತ್ತು ಹೊಸ ವಕ್ಫ್ ಕಾಯ್ದೆಯಂತಹ ಅದರ ವಿವಿಧ ಕಾನೂನುಗಳು ಮತ್ತು ನೀತಿಗಳು...

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....

ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ...