Homeಮುಖಪುಟಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

- Advertisement -
- Advertisement -

ವಿಶ್ವ ಫುಟ್‌ಬಾಲ್‌ನ ಪವರ್‌ ಹೌಸ್‌ ಎಂದು ಗುರುತಿಸಿಕೊಂಡಿರುವ ಯುರೋಕಪ್ ಚಾಂಪಿಯನ್‌ಶಿಪ್‌ಗೆ ನಿನ್ನೆ ಮಧ್ಯರಾತ್ರಿ ತೆರೆಬಿದ್ದಿದೆ. ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಇಟಲಿ ಬರೊಬ್ಬರಿ 53 ವರ್ಷಗಳ ನಂತರ ಚಾಂಪಿಯನ್‌ಶಿಪ್ ಪಟ್ಟ ತನ್ನದಾಗಿಸಿಕೊಂಡಿತು.

ವಿಶ್ವ ಫುಟ್ಬಾಲ್‌ನ ಪವರ್‌ ಹೌಸ್‌ ಎಂದು ಕರೆಸಿಕೊಳ್ಲುವ ಫ್ರಾನ್ಸ್‌, ಜರ್ಮನಿ, ಸ್ಪೇನ್‌, ಬೆಲ್ಜಿಯಮ್‌ ತಂಡಗಳು ಫೈನಲ್‌ ಪ್ರವೇಶಿಸಲು ವಿಫಲವಾಗಿದ್ದವು. ಈ ಸಂದರ್ಭದಲ್ಲಿ ಇಟಲಿ ಯುರೋ ಕಪ್‌ ಗೆಲ್ಲುವುದರೊಂದಿಗೆ ಮುಂದಿನ ವರ್ಷ 2022 ರ ಫುಟ್ಬಾಲ್‌ ವಿಶ್ವಕಪ್‌ಗೆ ಸಿದ್ಧವಾಗಿರುವ ಸಂದೇಶವನ್ನು ನೀಡಿದೆ.

ಇಂಗ್ಲೆಂಡ್‌ ರಾಜಧಾನಿ ಲಂಡನ್‌ ನಗರದ ವೆಂಬ್ಲೆ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರೆದರು ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ಕನಸು ನಿನ್ನೆ ತಡರಾತ್ರಿ ಭಗ್ನಗೊಂಡಿತು. ಲ್ಯೂಕ್ ಶಾ ಪಂದ್ಯದ 2 ನೇ ನಿಮಿಷದಲ್ಲಿ ಸಿಡಿಸಿದ ಆರಂಭಿಕ ಗೋಲಿನ ಮುನ್ನಡೆಯ ಹೊರತಾಗಿಯೂ ಇಂಗ್ಲೆಂಡ್‌ ಆಟಗಾರರಿಗೆ ಪಂದ್ಯದಲ್ಲಿ ಮತ್ತೊಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌…

ಇಟಲಿಯ ಸ್ಟಾರ್‌ ಆಟಗಾರ  ಲಿಯೋನಾರ್ಡೊ ಬೊನುಸಿ 67 ನೇ ನಿಮಷದಲ್ಲಿ ಅದ್ಭುತ ಗೋಲು ಗಳಿಸಿ ಇಟಲಿ ಪಕ್ಷದಿಂದ ಜಾರುತ್ತಿದ್ದ ಪಂದ್ಯವನ್ನು ಮತ್ತೆ ಸಮ ಸ್ಥಿತಿಗೆ ತಂದರು. ಎರಡೂ ತಂಡಗಳು ಯುರೋಪಿಯನ್‌ ಫುಟ್ಬಾಲ್‌ ಕಿರೀಟಕ್ಕಾಗಿ ಅಂತಿಮ ನಿಮಿಷದವರೆಗೂ ತೀವ್ರ ಪೈಪೋಟಿ ನಡೆಸಿದವಾದರೂ ಪಂದ್ಯ ಇಕ್ವಲೈಜರ್‌ನಲ್ಲಿಯೇ ಅಂತ್ಯವಾಯಿತು. 90+ ಹೆಚ್ಚುವರಿ ಸಮಯದಲ್ಲೂ ಪ್ರಬಲ ತಡೆಗೋಡೆಗಳನ್ನು ಭೇದಿಸಿ ಗೋಲು ಗಳಿಸುವ ಇಟಲಿ ಮತ್ತು ಇಂಗ್ಲೆಂಡ್‌ ತಂಡದ ಯತ್ನ ಯಶಸ್ವಿಯಾಗಲಿಲ್ಲ. ಕೊನೆಗೆ 1-1 ಗೋಲ್‌ಗಳಿಂದ ಎರಡು ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯ ರೋಚಕ ಪೆನಾಲ್ಟಿ ಶೂಟೌಟ್‌ವರೆಗೂ ಸಾಗಿತು.

ಚಾಂಪಿಯನ್‌ ತಂಡವನ್ನು ನಿರ್ಣಯಿಸುವ ಪೆನಾಲ್ಟಿ ಶೂಟೌಟ್‌ನಲ್ಲಿ ಇಟಲಿ ಮೇಲುಗೈ ಸಾಧಿಸಿ ಇಂಗ್ಲೆಂಡ್‌ ಅಭಿಮಾನಿಗಳನ್ನು ನಿರಾಸೆಗೊಳಿಸಿತು. ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ತಂಡದ ಕನಸು ನಿರ್ಣಾಯಕ ಹಂತದಲ್ಲಿ ವಿಫಲಗೊಂಡಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಕೇನ್ ಮತ್ತು ರಹೀಮ್ ಸ್ಟರ್ಲಿಂಗ್ ಮೇಲೆ ತವರಿನ ಅಭಿಮಾನಿಗಳು ಇಟ್ಟ ನಿರೀಕ್ಷೆ ಹುಸಿಯಾಗಿದೆ. ಇಬ್ಬರೂ ಆಟಗಾರರು ಟೂರ್ನಿಮೆಂಟ್‌ ಉದ್ದಕ್ಕೂ ಮಿಂಚಿನ ಪ್ರದರ್ಶನಗಳನ್ನು ನೀಡಿದ್ದರು.

Euro Cup 2020 England Vs Denmark Preview: Where To Watch Semifinal Match Liveಯುರೋ ಚಾಂಪಿಯನ್ಶಿಪ್‌ನಲ್ಲಿ ನಾಲ್ಕು ಪಂದ್ಯಗಳಿಂದ 5 ಗೋಲುಗಳಿಸಿದ ಕ್ರಿಸ್ಟಿಯಾನೋ ರೊನಾಲ್ಡೊ ಅತಿಹೆಚ್ಚು ಗೋಲು ಗಳಿಸಿದ ಆಟಗಾರನಿಗೆ ನಿಡಲಾಗುವ ಗೋಲ್ಡನ್‌ ಶೂ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಯುರೋ ಕಪ್‌ನಲ್ಲಿ ರೊನಾಲ್ಡೋಗೆ ದೊರೆತ ಮೊದಲ ಪ್ರಶಸ್ತಿ ಇದು.

16 ಗೋಲುಗಳನ್ನು ತಡೆದ ಇಂಗ್ಲೆಂಡ್‌ ಗೋಲ್‌ ಕೀಪರ್‌ ಜೊರ್ಡನ್‌ ಪಿಕ್‌ಫೋರ್ಡ್ ಅವರಿಗೆ ಗೋಲ್ಡನ್‌ ಗ್ಲೌಸ್‌ ಪ್ರಶಸ್ತಿಯನ್ನು ನೀಡಲಾಯಿತು.

ಮತ್ತೊಂದೆಡೆ ಇಟಲಿ ತಂಡ ಮ್ಯಾನೇಜರ್‌ ರಾಬರ್ಟೊ ಮ್ಯಾನ್ಸಿನಿ ಮಾರ್ಗದರ್ಶನದಲ್ಲಿ ಸತತ 34ನೇ ಗೆಲುವನ್ನು ಸಾಧಿಸುವ ಮೂಲಕ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿತು.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

ಎರಡೂ ತಂಡಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಯುರೋ ಕಪ್‌ನಲ್ಲಿ ಇಂಗ್ಲೆಂಡ್‌ ತಂಡ ಮೊದಲ ಬಾರಿಗೆ ಫೈನಲ್ ಹಂತವನ್ನು ತಲುಪಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿತ್ತು. 2020 ರಲ್ಲೂ ಇಂಗ್ಲೆಂಡ್‌ನ ಪ್ರಶಸ್ತಿಯ ಬರ ನೀಗಲಿಲ್ಲ. 1966 ರ ಫುಟ್ಬಾಲ್‌ ವಿಶ್ವಕಪ್‌ ಗೆಲುವಿನ ನಂತರ ಇಂಗ್ಲೆಂಡ್‌ ಇದುವರೆಗೆ ಯಾವುದೇ ಮುಖ್ಯ ಕ್ರೀಡಾಕೂಟದಲ್ಲಿ ಫೈನಲ್‌ಗೇರಿರಲಿಲ್ಲ. ಹಾಗಾಗಿ ಇಂಗ್ಲೆಂಡ್‌ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿ ನಿರೀಕ್ಷೆ ಗರಿಗೆದರಿತ್ತು.

ಅತ್ತ 4 ಬಾರಿಯ ವಿಶ್ವಕಪ್‌ ಚಾಂಪಿಯನ್‌ ಇಟಲಿ ಕೂಡ 2006 ರ ವಿಶ್ವಕಪ್‌ ಗೆಲುವಿನ ನಂತರ ಸತತ 15 ವರ್ಷ ಗೆಲುವಿನ ರುಚಿ ಸವಿದಿರಲಿಲ್ಲ. 2012 ರಲ್ಲಿ ಬಲಿಷ್ಠ ಸ್ಪೇನ್‌ ತಂಡದ ವಿರುದ್ಧ ಸೋಲನುಭವಿಸುವ ಮೂಲಕ ನಿರಾಸೆ ಗೊಂಡಿದ್ದ ಇಟಲಿ ಯುರೋ ಕಪ್‌ 2020 ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಳ್ಳುವ ಮೂಲಕ 2012 ರ ನಿರಾಸೆಗೆ ಕೊನೆಹಾಡಿತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಿನಿ ವರ್ಡ್‌ಕಪ್ ಎಂದೇ ಖ್ಯಾತವಾಗಿರುವ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಹಣಾಹಣಿ ಸುಖಾಂತ್ಯವಾಗಿದೆ. ಕೋವಿಡ್‌ ಕಾರಣದಿಂದ 16 ನೇ ಯುರೋ ಕಪ್‌ ಪಂದ್ಯಾವಳಿಯನ್ನು ಕೇವಲ ಒಂದು ದೇಶದಲ್ಲಿ ನಡೆಯದೇ 11 ದೇಶಗಳು ಟೂರ್ನಿಗೆ ಆತಿಥ್ಯ ವಹಿಸಿದವು. ಅಜೆರ್ಬೈಜಾನ್, ಡೆನ್ಮಾರ್ಕ್, ಇಂಗ್ಲೆಂಡ್, ಜರ್ಮನಿ, ಹಾಲೆಂಡ್, ಹಂಗೇರಿ, ಇಟಲಿ, ರೊಮೇನಿಯಾ, ರಷ್ಯಾ, ಸ್ಕಾಟ್ಲೆಂಡ್ ಮತ್ತು ಸ್ಪೇನ್ ಗಳಲ್ಲಿ ಯುರೋ ಕಪ್‌ ಪಂದ್ಯಗಳು ನಡೆದಿದ್ದು ಕೋವಿಡ್‌ ಆತಂಕದ ನಡುವೆ ಪಂದ್ಯಾವಳಿಯ ಸ್ಥಳ ಬದಲಾವಣೆಗೆ ಕೂಡ ಒತ್ತಾಯಗಳು ಕೇಳಿ ಬಂದಿದ್ದವು.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...