Homeಮುಖಪುಟಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

ಯುರೋ ಕಪ್‌ ಫೈನಲ್‌: ರೋಚಕ ಪೆನಾಲ್ಟಿ ಶೂಟೌಟ್‌ನಲ್ಲಿ ಪ್ರಶಸ್ತಿ ಮುಡಿಗೇರಿಸಿಕೊಂಡ ಇಟಲಿ ತಂಡ

- Advertisement -
- Advertisement -

ವಿಶ್ವ ಫುಟ್‌ಬಾಲ್‌ನ ಪವರ್‌ ಹೌಸ್‌ ಎಂದು ಗುರುತಿಸಿಕೊಂಡಿರುವ ಯುರೋಕಪ್ ಚಾಂಪಿಯನ್‌ಶಿಪ್‌ಗೆ ನಿನ್ನೆ ಮಧ್ಯರಾತ್ರಿ ತೆರೆಬಿದ್ದಿದೆ. ಅಂತಿಮ ಹಣಾಹಣಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಇಟಲಿ ಬರೊಬ್ಬರಿ 53 ವರ್ಷಗಳ ನಂತರ ಚಾಂಪಿಯನ್‌ಶಿಪ್ ಪಟ್ಟ ತನ್ನದಾಗಿಸಿಕೊಂಡಿತು.

ವಿಶ್ವ ಫುಟ್ಬಾಲ್‌ನ ಪವರ್‌ ಹೌಸ್‌ ಎಂದು ಕರೆಸಿಕೊಳ್ಲುವ ಫ್ರಾನ್ಸ್‌, ಜರ್ಮನಿ, ಸ್ಪೇನ್‌, ಬೆಲ್ಜಿಯಮ್‌ ತಂಡಗಳು ಫೈನಲ್‌ ಪ್ರವೇಶಿಸಲು ವಿಫಲವಾಗಿದ್ದವು. ಈ ಸಂದರ್ಭದಲ್ಲಿ ಇಟಲಿ ಯುರೋ ಕಪ್‌ ಗೆಲ್ಲುವುದರೊಂದಿಗೆ ಮುಂದಿನ ವರ್ಷ 2022 ರ ಫುಟ್ಬಾಲ್‌ ವಿಶ್ವಕಪ್‌ಗೆ ಸಿದ್ಧವಾಗಿರುವ ಸಂದೇಶವನ್ನು ನೀಡಿದೆ.

ಇಂಗ್ಲೆಂಡ್‌ ರಾಜಧಾನಿ ಲಂಡನ್‌ ನಗರದ ವೆಂಬ್ಲೆ ಕ್ರೀಡಾಂಗಣದಲ್ಲಿ ತವರಿನ ಪ್ರೇಕ್ಷಕರೆದರು ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ಕನಸು ನಿನ್ನೆ ತಡರಾತ್ರಿ ಭಗ್ನಗೊಂಡಿತು. ಲ್ಯೂಕ್ ಶಾ ಪಂದ್ಯದ 2 ನೇ ನಿಮಿಷದಲ್ಲಿ ಸಿಡಿಸಿದ ಆರಂಭಿಕ ಗೋಲಿನ ಮುನ್ನಡೆಯ ಹೊರತಾಗಿಯೂ ಇಂಗ್ಲೆಂಡ್‌ ಆಟಗಾರರಿಗೆ ಪಂದ್ಯದಲ್ಲಿ ಮತ್ತೊಂದು ಗೋಲು ಗಳಿಸಲು ಸಾಧ್ಯವಾಗಲಿಲ್ಲ.

ಇದನ್ನೂ ಓದಿ: ಅರ್ಜೆಂಟಿನಾ ಮಡಿಲಿಗೆ ಕೋಪಾ ಅಮೆರಿಕ ಕಪ್ : 28 ವರ್ಷಗಳ ನಂತರ ಪ್ರಶಸ್ತಿ ಬರ ನೀಗಿಸಿಕೊಂಡ ಮೆಸ್ಸಿ ಎಂಡ್‌…

ಇಟಲಿಯ ಸ್ಟಾರ್‌ ಆಟಗಾರ  ಲಿಯೋನಾರ್ಡೊ ಬೊನುಸಿ 67 ನೇ ನಿಮಷದಲ್ಲಿ ಅದ್ಭುತ ಗೋಲು ಗಳಿಸಿ ಇಟಲಿ ಪಕ್ಷದಿಂದ ಜಾರುತ್ತಿದ್ದ ಪಂದ್ಯವನ್ನು ಮತ್ತೆ ಸಮ ಸ್ಥಿತಿಗೆ ತಂದರು. ಎರಡೂ ತಂಡಗಳು ಯುರೋಪಿಯನ್‌ ಫುಟ್ಬಾಲ್‌ ಕಿರೀಟಕ್ಕಾಗಿ ಅಂತಿಮ ನಿಮಿಷದವರೆಗೂ ತೀವ್ರ ಪೈಪೋಟಿ ನಡೆಸಿದವಾದರೂ ಪಂದ್ಯ ಇಕ್ವಲೈಜರ್‌ನಲ್ಲಿಯೇ ಅಂತ್ಯವಾಯಿತು. 90+ ಹೆಚ್ಚುವರಿ ಸಮಯದಲ್ಲೂ ಪ್ರಬಲ ತಡೆಗೋಡೆಗಳನ್ನು ಭೇದಿಸಿ ಗೋಲು ಗಳಿಸುವ ಇಟಲಿ ಮತ್ತು ಇಂಗ್ಲೆಂಡ್‌ ತಂಡದ ಯತ್ನ ಯಶಸ್ವಿಯಾಗಲಿಲ್ಲ. ಕೊನೆಗೆ 1-1 ಗೋಲ್‌ಗಳಿಂದ ಎರಡು ತಂಡಗಳು ಸಮಬಲ ಸಾಧಿಸಿದ್ದರಿಂದ ಪಂದ್ಯ ರೋಚಕ ಪೆನಾಲ್ಟಿ ಶೂಟೌಟ್‌ವರೆಗೂ ಸಾಗಿತು.

ಚಾಂಪಿಯನ್‌ ತಂಡವನ್ನು ನಿರ್ಣಯಿಸುವ ಪೆನಾಲ್ಟಿ ಶೂಟೌಟ್‌ನಲ್ಲಿ ಇಟಲಿ ಮೇಲುಗೈ ಸಾಧಿಸಿ ಇಂಗ್ಲೆಂಡ್‌ ಅಭಿಮಾನಿಗಳನ್ನು ನಿರಾಸೆಗೊಳಿಸಿತು. ಮೊಟ್ಟ ಮೊದಲ ಬಾರಿಗೆ ಯುರೋಪಿಯನ್‌ ಚಾಂಪಿಯನ್‌ ಆಗುವ ಇಂಗ್ಲೆಂಡ್‌ ತಂಡದ ಕನಸು ನಿರ್ಣಾಯಕ ಹಂತದಲ್ಲಿ ವಿಫಲಗೊಂಡಿದ್ದಕ್ಕೆ ಅಭಿಮಾನಿಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದರು.

ಇಂಗ್ಲೆಂಡ್‌ ತಂಡದ ನಾಯಕ ಹ್ಯಾರಿ ಕೇನ್ ಮತ್ತು ರಹೀಮ್ ಸ್ಟರ್ಲಿಂಗ್ ಮೇಲೆ ತವರಿನ ಅಭಿಮಾನಿಗಳು ಇಟ್ಟ ನಿರೀಕ್ಷೆ ಹುಸಿಯಾಗಿದೆ. ಇಬ್ಬರೂ ಆಟಗಾರರು ಟೂರ್ನಿಮೆಂಟ್‌ ಉದ್ದಕ್ಕೂ ಮಿಂಚಿನ ಪ್ರದರ್ಶನಗಳನ್ನು ನೀಡಿದ್ದರು.

Euro Cup 2020 England Vs Denmark Preview: Where To Watch Semifinal Match Liveಯುರೋ ಚಾಂಪಿಯನ್ಶಿಪ್‌ನಲ್ಲಿ ನಾಲ್ಕು ಪಂದ್ಯಗಳಿಂದ 5 ಗೋಲುಗಳಿಸಿದ ಕ್ರಿಸ್ಟಿಯಾನೋ ರೊನಾಲ್ಡೊ ಅತಿಹೆಚ್ಚು ಗೋಲು ಗಳಿಸಿದ ಆಟಗಾರನಿಗೆ ನಿಡಲಾಗುವ ಗೋಲ್ಡನ್‌ ಶೂ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಯುರೋ ಕಪ್‌ನಲ್ಲಿ ರೊನಾಲ್ಡೋಗೆ ದೊರೆತ ಮೊದಲ ಪ್ರಶಸ್ತಿ ಇದು.

16 ಗೋಲುಗಳನ್ನು ತಡೆದ ಇಂಗ್ಲೆಂಡ್‌ ಗೋಲ್‌ ಕೀಪರ್‌ ಜೊರ್ಡನ್‌ ಪಿಕ್‌ಫೋರ್ಡ್ ಅವರಿಗೆ ಗೋಲ್ಡನ್‌ ಗ್ಲೌಸ್‌ ಪ್ರಶಸ್ತಿಯನ್ನು ನೀಡಲಾಯಿತು.

ಮತ್ತೊಂದೆಡೆ ಇಟಲಿ ತಂಡ ಮ್ಯಾನೇಜರ್‌ ರಾಬರ್ಟೊ ಮ್ಯಾನ್ಸಿನಿ ಮಾರ್ಗದರ್ಶನದಲ್ಲಿ ಸತತ 34ನೇ ಗೆಲುವನ್ನು ಸಾಧಿಸುವ ಮೂಲಕ ಐತಿಹಾಸಿಕ ದಾಖಲೆಯನ್ನು ನಿರ್ಮಿಸಿತು.

ಇದನ್ನೂ ಓದಿ: ಡಿಯಾಗೋ ಮರಡೋನಾ: ಫುಟ್‌ಬಾಲ್ ಲೋಕವನ್ನು ಪ್ರಜ್ವಲಿಸಿದ ಅದ್ಭುತ ಮಾಂತ್ರಿಕ

ಎರಡೂ ತಂಡಗಳಿಗೂ ಪ್ರತಿಷ್ಠೆಯ ಪ್ರಶ್ನೆಯಾಗಿದ್ದ ಯುರೋ ಕಪ್‌ನಲ್ಲಿ ಇಂಗ್ಲೆಂಡ್‌ ತಂಡ ಮೊದಲ ಬಾರಿಗೆ ಫೈನಲ್ ಹಂತವನ್ನು ತಲುಪಿ ಹೊಸ ನಿರೀಕ್ಷೆಗಳನ್ನು ಹುಟ್ಟಿಸಿತ್ತು. 2020 ರಲ್ಲೂ ಇಂಗ್ಲೆಂಡ್‌ನ ಪ್ರಶಸ್ತಿಯ ಬರ ನೀಗಲಿಲ್ಲ. 1966 ರ ಫುಟ್ಬಾಲ್‌ ವಿಶ್ವಕಪ್‌ ಗೆಲುವಿನ ನಂತರ ಇಂಗ್ಲೆಂಡ್‌ ಇದುವರೆಗೆ ಯಾವುದೇ ಮುಖ್ಯ ಕ್ರೀಡಾಕೂಟದಲ್ಲಿ ಫೈನಲ್‌ಗೇರಿರಲಿಲ್ಲ. ಹಾಗಾಗಿ ಇಂಗ್ಲೆಂಡ್‌ ಅಭಿಮಾನಿಗಳಲ್ಲಿ ಸ್ವಾಭಾವಿಕವಾಗಿ ನಿರೀಕ್ಷೆ ಗರಿಗೆದರಿತ್ತು.

ಅತ್ತ 4 ಬಾರಿಯ ವಿಶ್ವಕಪ್‌ ಚಾಂಪಿಯನ್‌ ಇಟಲಿ ಕೂಡ 2006 ರ ವಿಶ್ವಕಪ್‌ ಗೆಲುವಿನ ನಂತರ ಸತತ 15 ವರ್ಷ ಗೆಲುವಿನ ರುಚಿ ಸವಿದಿರಲಿಲ್ಲ. 2012 ರಲ್ಲಿ ಬಲಿಷ್ಠ ಸ್ಪೇನ್‌ ತಂಡದ ವಿರುದ್ಧ ಸೋಲನುಭವಿಸುವ ಮೂಲಕ ನಿರಾಸೆ ಗೊಂಡಿದ್ದ ಇಟಲಿ ಯುರೋ ಕಪ್‌ 2020 ಚಾಂಪಿಯನ್‌ಶಿಪ್ ಮುಡಿಗೇರಿಸಿಕೊಳ್ಳುವ ಮೂಲಕ 2012 ರ ನಿರಾಸೆಗೆ ಕೊನೆಹಾಡಿತು.

ಕೊರೊನಾ ಸಾಂಕ್ರಾಮಿಕದ ನಡುವೆಯೂ ಮಿನಿ ವರ್ಡ್‌ಕಪ್ ಎಂದೇ ಖ್ಯಾತವಾಗಿರುವ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಹಣಾಹಣಿ ಸುಖಾಂತ್ಯವಾಗಿದೆ. ಕೋವಿಡ್‌ ಕಾರಣದಿಂದ 16 ನೇ ಯುರೋ ಕಪ್‌ ಪಂದ್ಯಾವಳಿಯನ್ನು ಕೇವಲ ಒಂದು ದೇಶದಲ್ಲಿ ನಡೆಯದೇ 11 ದೇಶಗಳು ಟೂರ್ನಿಗೆ ಆತಿಥ್ಯ ವಹಿಸಿದವು. ಅಜೆರ್ಬೈಜಾನ್, ಡೆನ್ಮಾರ್ಕ್, ಇಂಗ್ಲೆಂಡ್, ಜರ್ಮನಿ, ಹಾಲೆಂಡ್, ಹಂಗೇರಿ, ಇಟಲಿ, ರೊಮೇನಿಯಾ, ರಷ್ಯಾ, ಸ್ಕಾಟ್ಲೆಂಡ್ ಮತ್ತು ಸ್ಪೇನ್ ಗಳಲ್ಲಿ ಯುರೋ ಕಪ್‌ ಪಂದ್ಯಗಳು ನಡೆದಿದ್ದು ಕೋವಿಡ್‌ ಆತಂಕದ ನಡುವೆ ಪಂದ್ಯಾವಳಿಯ ಸ್ಥಳ ಬದಲಾವಣೆಗೆ ಕೂಡ ಒತ್ತಾಯಗಳು ಕೇಳಿ ಬಂದಿದ್ದವು.

-ರಾಜೇಶ್‌ ಹೆಬ್ಬಾರ್‌


ಇದನ್ನೂ ಓದಿ: ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...