Homeಕರ್ನಾಟಕಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಮಾಲಿಕತ್ವದ ದೂರಸಂಪರ್ಕ ಉಪಕರಣಗಳ ತಯಾರಿಕಾ ಕಂಪನಿಯಾದ ‘ಐಟಿಐ ಲಿಮಿಟೆಡ್‌‌’ನ (ITI) ಸುಮಾರು 80 ಗುತ್ತಿಗೆ ಕಾರ್ಮಿಕರನ್ನು ಯಾವುದೆ ನೊಟೀಸ್‌‌ ನೀಡದೆ ಕೆಲಸದಿಂದ ವಜಾ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಕಳೆದ ಬುಧವಾರ ಕಾರ್ಮಿಕರು ಕೆಲಸಕ್ಕೆ ತೆರಳುವಾಗ ವಜಾ ಮಾಡಲಾಗಿದೆ ಎಂದು ಹೇಳಿ ಕಂಪೆನಿ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ. ಹೀಗಾಗಿ ಕಾರ್ಮಿಕರು ಐದು ದಿನಗಳಿಂದ AICCTU ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಈ ಹಿಂದೆ ಗುತ್ತಿಗೆಯಲ್ಲಿ ಹಗರಣ ನಡೆದಿದೆ ಎಂದು ಕಾರ್ಮಿಕರು ದಾವೆ ಹೂಡಿದ್ದರು. ಆ ಪ್ರಕರಣ ನ್ಯಾಯಾಲಯದಲ್ಲಿದೆ. ಆದ್ದರಿಂದ ಸಂಘಟನೆಯಲ್ಲಿರುವ ಮತ್ತು ದಾವೆ ಹೂಡಿರುವ ಕಾರ್ಮಿಕರನ್ನು ಗುರುತಿಸಿ ಕೆಲಸಕ್ಕೆ ಹಾಜರಾಗಲು ಬಿಡುತ್ತಿಲ್ಲ” ಎಂದು AICCTU ಕಾರ್ಮಿಕ ಸಂಘಟನೆಯ ನಾಯಕಿ ಮೈತ್ರೇಯಿ ಕೃಷ್ಣನ್‌ ಹೇಳಿದ್ದಾರೆ.

ಇದನ್ನೂ ಓದಿ:2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

ಹಲವಾರು ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರೂ, ಸುಮಾರು 30 ವರ್ಷಗಳಿಂದ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಕಂಪೆನಿಯ ಉನ್ನತಿಗೆ ಶ್ರಮಿಸಿದ್ದಾರೆ. ಅವರನ್ನು ಯಾವುದೆ ನೋಟಿಸ್‌ ನೀಡದೆ ಕೆಲಸಕ್ಕೆ ಹಾಜರಾಗಲು ಬಿಡುತ್ತಿಲ್ಲ. ಕಾರ್ಮಿಕರು ಹೂಡಿರುವ ಪ್ರಕರಣವನ್ನು ವಾಪಾಸು ಪಡೆಯುವಂತೆ ಅವರಿಗೆ ಒತ್ತಡ ತರಲಾಗಿದೆ ಎಂದು ಮೈತ್ರೇಯಿ ಕೃಷ್ಣನ್‌ ಆರೋಪಿಸಿದ್ದಾರೆ.

ಕಂಪನಿಯು ಈ ಹಿಂದೆ ಬಾಕಿ ಇರುವ ಸಂಬಳ, ಭವಿಷ್ಯ ನಿಧಿ ಅಥವಾ ನೌಕರರ ರಾಜ್ಯ ವಿಮೆಯನ್ನು ಪಾವತಿಸದೆ ಕಾರ್ಮಿಕರನ್ನು ಶೋಷಿಸುತ್ತಿತ್ತು ಎಂದು ಆರೋಪಿಸಲಾಗಿದೆ. ಜುಲೈ 2020 ರಲ್ಲಿ, ಒಪ್ಪಂದದ ಮುಕ್ತಾಯದ ನೆಪದಲ್ಲಿ ಸುಮಾರು 400 ಕಾರ್ಮಿಕರನ್ನು ಕಂಪೆನಿಯು ವಜಾಗೊಳಿಸಿತ್ತು. ಆದರೆ ನಂತರ 400 ಕಾರ್ಮಿಕರಲ್ಲಿ 150 ಮಂದಿಯನ್ನು ಆಯ್ಕೆ ಮತ್ತೆ ಕೆಲಸಕ್ಕೆ ನೇಮಿಸಿಕೊಂಡಿತ್ತು. ಈ ವೇಳೆ ಕಾರ್ಮಿಕರು ತಮ್ಮ ಬಾಕಿ ವೇತನವನ್ನು ಕೇಳಿದ್ದರು, ಆದರೆ ಕಂಪನಿಯು ಅವರಿಗೆ ಪಾವತಿಸಲು ನಿರಾಕರಿಸಿತು. ಕಂಪೆನಿಯು ಪ್ರತಿ ಕಾರ್ಮಿಕರಿಗೆ ಸುಮಾರು 1.5 ಲಕ್ಷ ರೂನಷ್ಟು ಬಾಕಿಯಿಟ್ಟಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದರ ಬೆನ್ನಲ್ಲೇ ಕಾರ್ಮಿಕರು ಒಗ್ಗೂಡಿ ಕೆಜಿಎಲ್‌ಯು ಅಡಿಯಲ್ಲಿ ಯೂನಿಯನ್‌ ರಚಿಸಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಂದಿನಿಂದ ಕಾರ್ಮಿಕರು ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂದು ಮೈತ್ರೇಯಿ ಆರೋಪಿಸಿದ್ದಾರೆ. ಡಿಸೆಂಬರ್ 1 ರಂದು ಯೂನಿಯನ್ ಸದಸ್ಯರನ್ನು ಪ್ರತ್ಯೇಕವಾಗಿ ಗುರುತಿಸಿ ಉಳಿದವರನ್ನು ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....