Homeಕರ್ನಾಟಕಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

ಸಂಘ ಕಟ್ಟಿ ಹಕ್ಕು ಕೇಳಿದ್ದಕ್ಕೆ ಕೆಲಸದಿಂದ ವಜಾಗೊಳಿಸಿದ ಬೆಂಗಳೂರಿನ ITI ಕಂಪೆನಿ: ಕಾರ್ಮಿಕರ ಆರೋಪ- ಪ್ರತಿಭಟನೆ

- Advertisement -
- Advertisement -

ಒಕ್ಕೂಟ ಸರ್ಕಾರದ ಮಾಲಿಕತ್ವದ ದೂರಸಂಪರ್ಕ ಉಪಕರಣಗಳ ತಯಾರಿಕಾ ಕಂಪನಿಯಾದ ‘ಐಟಿಐ ಲಿಮಿಟೆಡ್‌‌’ನ (ITI) ಸುಮಾರು 80 ಗುತ್ತಿಗೆ ಕಾರ್ಮಿಕರನ್ನು ಯಾವುದೆ ನೊಟೀಸ್‌‌ ನೀಡದೆ ಕೆಲಸದಿಂದ ವಜಾ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಕಳೆದ ಬುಧವಾರ ಕಾರ್ಮಿಕರು ಕೆಲಸಕ್ಕೆ ತೆರಳುವಾಗ ವಜಾ ಮಾಡಲಾಗಿದೆ ಎಂದು ಹೇಳಿ ಕಂಪೆನಿ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ. ಹೀಗಾಗಿ ಕಾರ್ಮಿಕರು ಐದು ದಿನಗಳಿಂದ AICCTU ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

“ಈ ಹಿಂದೆ ಗುತ್ತಿಗೆಯಲ್ಲಿ ಹಗರಣ ನಡೆದಿದೆ ಎಂದು ಕಾರ್ಮಿಕರು ದಾವೆ ಹೂಡಿದ್ದರು. ಆ ಪ್ರಕರಣ ನ್ಯಾಯಾಲಯದಲ್ಲಿದೆ. ಆದ್ದರಿಂದ ಸಂಘಟನೆಯಲ್ಲಿರುವ ಮತ್ತು ದಾವೆ ಹೂಡಿರುವ ಕಾರ್ಮಿಕರನ್ನು ಗುರುತಿಸಿ ಕೆಲಸಕ್ಕೆ ಹಾಜರಾಗಲು ಬಿಡುತ್ತಿಲ್ಲ” ಎಂದು AICCTU ಕಾರ್ಮಿಕ ಸಂಘಟನೆಯ ನಾಯಕಿ ಮೈತ್ರೇಯಿ ಕೃಷ್ಣನ್‌ ಹೇಳಿದ್ದಾರೆ.

ಇದನ್ನೂ ಓದಿ:2 ತಿಂಗಳಿನಿಂದ ವೇತನವಿಲ್ಲ: ಎಐಸಿಸಿಟಿಯು ನೇತೃತ್ವದಲ್ಲಿ ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ

ಹಲವಾರು ಕಾರ್ಮಿಕರು ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರೂ, ಸುಮಾರು 30 ವರ್ಷಗಳಿಂದ ಕಂಪೆನಿಯಲ್ಲಿ ಕೆಲಸ ಮಾಡುತ್ತಾ ಕಂಪೆನಿಯ ಉನ್ನತಿಗೆ ಶ್ರಮಿಸಿದ್ದಾರೆ. ಅವರನ್ನು ಯಾವುದೆ ನೋಟಿಸ್‌ ನೀಡದೆ ಕೆಲಸಕ್ಕೆ ಹಾಜರಾಗಲು ಬಿಡುತ್ತಿಲ್ಲ. ಕಾರ್ಮಿಕರು ಹೂಡಿರುವ ಪ್ರಕರಣವನ್ನು ವಾಪಾಸು ಪಡೆಯುವಂತೆ ಅವರಿಗೆ ಒತ್ತಡ ತರಲಾಗಿದೆ ಎಂದು ಮೈತ್ರೇಯಿ ಕೃಷ್ಣನ್‌ ಆರೋಪಿಸಿದ್ದಾರೆ.

ಕಂಪನಿಯು ಈ ಹಿಂದೆ ಬಾಕಿ ಇರುವ ಸಂಬಳ, ಭವಿಷ್ಯ ನಿಧಿ ಅಥವಾ ನೌಕರರ ರಾಜ್ಯ ವಿಮೆಯನ್ನು ಪಾವತಿಸದೆ ಕಾರ್ಮಿಕರನ್ನು ಶೋಷಿಸುತ್ತಿತ್ತು ಎಂದು ಆರೋಪಿಸಲಾಗಿದೆ. ಜುಲೈ 2020 ರಲ್ಲಿ, ಒಪ್ಪಂದದ ಮುಕ್ತಾಯದ ನೆಪದಲ್ಲಿ ಸುಮಾರು 400 ಕಾರ್ಮಿಕರನ್ನು ಕಂಪೆನಿಯು ವಜಾಗೊಳಿಸಿತ್ತು. ಆದರೆ ನಂತರ 400 ಕಾರ್ಮಿಕರಲ್ಲಿ 150 ಮಂದಿಯನ್ನು ಆಯ್ಕೆ ಮತ್ತೆ ಕೆಲಸಕ್ಕೆ ನೇಮಿಸಿಕೊಂಡಿತ್ತು. ಈ ವೇಳೆ ಕಾರ್ಮಿಕರು ತಮ್ಮ ಬಾಕಿ ವೇತನವನ್ನು ಕೇಳಿದ್ದರು, ಆದರೆ ಕಂಪನಿಯು ಅವರಿಗೆ ಪಾವತಿಸಲು ನಿರಾಕರಿಸಿತು. ಕಂಪೆನಿಯು ಪ್ರತಿ ಕಾರ್ಮಿಕರಿಗೆ ಸುಮಾರು 1.5 ಲಕ್ಷ ರೂನಷ್ಟು ಬಾಕಿಯಿಟ್ಟಿದೆ ಎಂದು ಕಾರ್ಮಿಕರು ಆರೋಪಿಸಿದ್ದಾರೆ.

ಇದರ ಬೆನ್ನಲ್ಲೇ ಕಾರ್ಮಿಕರು ಒಗ್ಗೂಡಿ ಕೆಜಿಎಲ್‌ಯು ಅಡಿಯಲ್ಲಿ ಯೂನಿಯನ್‌ ರಚಿಸಿ ಕಂಪನಿ ವಿರುದ್ಧ ಪ್ರಕರಣ ದಾಖಲಿಸಿದ್ದರು. ಅಂದಿನಿಂದ ಕಾರ್ಮಿಕರು ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂದು ಮೈತ್ರೇಯಿ ಆರೋಪಿಸಿದ್ದಾರೆ. ಡಿಸೆಂಬರ್ 1 ರಂದು ಯೂನಿಯನ್ ಸದಸ್ಯರನ್ನು ಪ್ರತ್ಯೇಕವಾಗಿ ಗುರುತಿಸಿ ಉಳಿದವರನ್ನು ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಗೌರವದಿಂದ ವರ್ತಿಸಿ; ಘನತೆಯುತ್ತ ಕೆಲಸದ ವಾತಾವರಣ ನಿರ್ಮಿಸಿ: ಬೆಂಗಳೂರು ಪೌರ ಕಾರ್ಮಿಕರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...