Homeಮುಖಪುಟಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ 'ಮಾಡು ಇಲ್ಲವೇ ಮಡಿ' ಯುದ್ಧವಾಗಿದೆ: ಸ್ಟಾಲಿನ್

ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ ‘ಮಾಡು ಇಲ್ಲವೇ ಮಡಿ’ ಯುದ್ಧವಾಗಿದೆ: ಸ್ಟಾಲಿನ್

- Advertisement -
- Advertisement -

ಲೋಕಸಭೆ ಚುನಾವಣೆಯನ್ನು ಭಾರತದ ಪ್ರಜಾಪ್ರಭುತ್ವದ ತಿರುಳನ್ನು ರಕ್ಷಿಸುವ ಮಾಡು ಇಲ್ಲವೇ ಮಡಿ ಯುದ್ಧವಾಗಿದೆ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಎರಡನೇ ಹೋರಾಟದ ಮಧ್ಯೆ ನಾವು ಇದ್ದಂತೆ ಭಾಸವಾಗುತ್ತಿದೆ.  ಇದು ಭಾರತದ ತಿರುಳನ್ನು ರಕ್ಷಿಸುವುದು: ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ನಮ್ಮ ಬಹುತ್ವ ಸಮಾಜವನ್ನು ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ.

ತಮ್ಮ ಚೆನ್ನೈ ನಿವಾಸದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಡಿಎಂಕೆ ಮುಖ್ಯಸ್ಥರು ಆಗಿರುವ ಸ್ಟಾಲಿನ್‌, ಮೋದಿ ಮತ್ತು ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಬಲವಾದ ತಂಡ ಹೊಂದಿವೆ. ಅಖಿಲೇಶ್ ಯಾದವ್, (ಅರವಿಂದ್) ಕೇಜ್ರಿವಾಲ್, ಉದ್ಧವ್ ಠಾಕ್ರೆ, ಮಮತಾ ಬ್ಯಾನರ್ಜಿ ಮತ್ತು ತೇಜಸ್ವಿ ಯಾದವ್ ಅವರಂತಹ ನಾಯಕರು ನಮ್ಮೊಂದಿಗೆ ಇದ್ದಾರೆ. ಈ ಹೋರಾಟದಲ್ಲಿ ನಾವು ಒಗ್ಗಟ್ಟಾಗಿದ್ದೇವೆ, ಮುಂಬರುವ ಚುನಾವಣೆಯಲ್ಲಿ ರಾಹುಲ್ ಗಾಂಧಿಯಂತಹ ಕ್ರಿಯಾಶೀಲ ಯುವ ನಾಯಕ ಮೋದಿಯ ಆ ಬೆಳೆಸಿದ ಚಿತ್ರಣವನ್ನು ಮತ್ತು ಆರೆಸ್ಸೆಸ್‌ ನಿರೂಪಣೆಯನ್ನು ಕೆಡವಲು ಸಜ್ಜಾಗಿದ್ದಾರೆ ಎಂದು ಸ್ಟಾಲಿನ್ ಹೇಳಿದರು. ಲೋಕಸಭೆ ಚುನಾವಣೆಯನ್ನು “ಭಾರತೀಯ ಪ್ರಜಾಪ್ರಭುತ್ವಕ್ಕಾಗಿ ಮಾಡು ಇಲ್ಲವೇ ಮಡಿ ಯುದ್ಧ” ಎಂದು ಬಣ್ಣಿಸಿದ್ದಾರೆ.

ಬಿಜೆಪಿಗೆ ತೆರಳಿದ ನಂತರ ಆಪ್ ನಾಯಕರ ವಿರುದ್ಧದ ಪ್ರಕರಣಗಳು ಹಿಂತೆಗೆದುಕೊಳ್ಳುವ ಕುರಿತ ವರದಿಯನ್ನು ಉಲ್ಲೇಖಿಸಿದ ಸ್ಟಾಲಿನ್, ‘ಒಂದು ದಶಕದ ಅಧಿಕಾರದ ನಂತರ, ಮೋದಿ ಸರ್ಕಾರವು ತಮ್ಮ ಸಾಧನೆಗಳನ್ನು ಪ್ರದರ್ಶಿಸುವ ಬದಲು ಹಿಂದಿನದನ್ನು ಕೆದಕುವ ಕೆಲಸದಲ್ಲಿ ನಿರತವಾಗಿದೆ,  ಪಂಡಿತ್ ನೆಹರೂ ಮತ್ತು ಇಂದಿರಾ ಗಾಂಧಿಯಂತಹ ದಿಗ್ಗಜರ ಬಳಿ ಬೆರಳು ತೋರಿಸುತ್ತಿದೆ. ಮತ್ತು ಈಗ ಅವರ ಮುಖ್ಯ ಕಾರ್ಯಸೂಚಿ ಏನು? ಮೇಲ್ನೋಟಕ್ಕೆ, ಪ್ರತಿಪಕ್ಷಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಾಗಿದೆ ಎಂದು ಹೇಳಿದ್ದಾರೆ.

ಆರ್‌ಟಿಐ ಉತ್ತರದ ಆಧಾರದ ಮೇಲೆ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಪಕ್ಷ ಎತ್ತಿರುವ ಕಚ್ಚತೀವು ವಿಷಯವನ್ನು ಉಲ್ಲೇಖಿಸಿ ಬಿಜೆಪಿ ತನ್ನ ಉದ್ದೇಶಗಳಿಗಾಗಿ ಆರ್‌ಟಿಐನ್ನು ಬಳಸಲು ನಿರ್ಧರಿಸಿದೆ ಎಂದು ಅವರು ಹೇಳಿದರು. ಮೋದಿಯವರ ಮಾತುಗಳನ್ನು ಇನ್ನು ಮುಂದೆ ಜನರು ನಂಬಲಾರರು ಎಂಬ ಭಯದಿಂದ ಅವರು ಆರ್‌ಟಿಐಗೆ ಮೊರೆ ಹೋಗಿದ್ದಾರೆ ಎಂದು ಹೇಳಿದರು.

ಡಿಎಂಕೆ ತನ್ನ ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ಯಾವಾಗಲೂ ಬದ್ಧವಾಗಿದೆ ಎಂದು ಪ್ರತಿಪಾದಿಸಿದ ಸ್ಟಾಲಿನ್‌, “ಎಲ್ಲರಿಗೂ ಎಲ್ಲವೂ” ಎಂಬ ತತ್ವದ ಮೇಲೆ ಬಲವಾದ ನಂಬಿಕೆಯನ್ನು ಹೊಂದಿದೆ ಎಂದು ಹೇಳಿದ್ದು, ಬಿಜೆಪಿ ಬೇರೆಯೇ ಆಟವನ್ನು ಆಡುತ್ತದೆ, ಅವರು ದ್ವೇಷವನ್ನು ಬೆಳೆಸುತ್ತಾರೆ ಮತ್ತು ಆರೆಸ್ಸೆಸ್ ಸಿದ್ಧಾಂತದಲ್ಲಿ ರಾಜಕೀಯವನ್ನು ಮಾಡುತ್ತಾರೆ. ಇಂದು ಮೋದಿಯನ್ನು ಮುಂದಾಳತ್ವವನ್ನಾಗಿ ಮಾಡಿಕೊಂಡಿದ್ದಾರೆ. ನಿನ್ನೆ ಬೇರೊಬ್ಬರಿದ್ದರು ಮತ್ತು ಅದು ನಾಳೆ ಮತ್ತೊಂದು ಮುಖವನ್ನು ಹುಡುಕುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಗರು ಪ್ರಜಾಪ್ರಭುತ್ವ ಮತ್ತು ಸಹಕಾರಿ ಸಂಯುಕ್ತ ವ್ಯವಸ್ಥೆಯ  ಬಗ್ಗೆ ಮಾತನಾಡಲು ಇಷ್ಟಪಡುತ್ತಾರೆ, ಆದರೆ ಅದು ನಿಜವಾಗಿಯೂ ಎಲ್ಲಿದೆ? ಪ್ರಾಯೋಗಿಕವಾಗಿ ಇದು ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...