Homeಮುಖಪುಟಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ 'ಮಾಡು ಇಲ್ಲವೇ ಮಡಿ' ಯುದ್ಧವಾಗಿದೆ: ಸ್ಟಾಲಿನ್

ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ ‘ಮಾಡು ಇಲ್ಲವೇ ಮಡಿ’ ಯುದ್ಧವಾಗಿದೆ: ಸ್ಟಾಲಿನ್

- Advertisement -
- Advertisement -

ಲೋಕಸಭೆ ಚುನಾವಣೆಯನ್ನು ಭಾರತದ ಪ್ರಜಾಪ್ರಭುತ್ವದ ತಿರುಳನ್ನು ರಕ್ಷಿಸುವ ಮಾಡು ಇಲ್ಲವೇ ಮಡಿ ಯುದ್ಧವಾಗಿದೆ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಎರಡನೇ ಹೋರಾಟದ ಮಧ್ಯೆ ನಾವು ಇದ್ದಂತೆ ಭಾಸವಾಗುತ್ತಿದೆ.  ಇದು ಭಾರತದ ತಿರುಳನ್ನು ರಕ್ಷಿಸುವುದು: ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ನಮ್ಮ ಬಹುತ್ವ ಸಮಾಜವನ್ನು ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ.

ತಮ್ಮ ಚೆನ್ನೈ ನಿವಾಸದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಡಿಎಂಕೆ ಮುಖ್ಯಸ್ಥರು ಆಗಿರುವ ಸ್ಟಾಲಿನ್‌, ಮೋದಿ ಮತ್ತು ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಬಲವಾದ ತಂಡ ಹೊಂದಿವೆ. ಅಖಿಲೇಶ್ ಯಾದವ್, (ಅರವಿಂದ್) ಕೇಜ್ರಿವಾಲ್, ಉದ್ಧವ್ ಠಾಕ್ರೆ, ಮಮತಾ ಬ್ಯಾನರ್ಜಿ ಮತ್ತು ತೇಜಸ್ವಿ ಯಾದವ್ ಅವರಂತಹ ನಾಯಕರು ನಮ್ಮೊಂದಿಗೆ ಇದ್ದಾರೆ. ಈ ಹೋರಾಟದಲ್ಲಿ ನಾವು ಒಗ್ಗಟ್ಟಾಗಿದ್ದೇವೆ, ಮುಂಬರುವ ಚುನಾವಣೆಯಲ್ಲಿ ರಾಹುಲ್ ಗಾಂಧಿಯಂತಹ ಕ್ರಿಯಾಶೀಲ ಯುವ ನಾಯಕ ಮೋದಿಯ ಆ ಬೆಳೆಸಿದ ಚಿತ್ರಣವನ್ನು ಮತ್ತು ಆರೆಸ್ಸೆಸ್‌ ನಿರೂಪಣೆಯನ್ನು ಕೆಡವಲು ಸಜ್ಜಾಗಿದ್ದಾರೆ ಎಂದು ಸ್ಟಾಲಿನ್ ಹೇಳಿದರು. ಲೋಕಸಭೆ ಚುನಾವಣೆಯನ್ನು “ಭಾರತೀಯ ಪ್ರಜಾಪ್ರಭುತ್ವಕ್ಕಾಗಿ ಮಾಡು ಇಲ್ಲವೇ ಮಡಿ ಯುದ್ಧ” ಎಂದು ಬಣ್ಣಿಸಿದ್ದಾರೆ.

ಬಿಜೆಪಿಗೆ ತೆರಳಿದ ನಂತರ ಆಪ್ ನಾಯಕರ ವಿರುದ್ಧದ ಪ್ರಕರಣಗಳು ಹಿಂತೆಗೆದುಕೊಳ್ಳುವ ಕುರಿತ ವರದಿಯನ್ನು ಉಲ್ಲೇಖಿಸಿದ ಸ್ಟಾಲಿನ್, ‘ಒಂದು ದಶಕದ ಅಧಿಕಾರದ ನಂತರ, ಮೋದಿ ಸರ್ಕಾರವು ತಮ್ಮ ಸಾಧನೆಗಳನ್ನು ಪ್ರದರ್ಶಿಸುವ ಬದಲು ಹಿಂದಿನದನ್ನು ಕೆದಕುವ ಕೆಲಸದಲ್ಲಿ ನಿರತವಾಗಿದೆ,  ಪಂಡಿತ್ ನೆಹರೂ ಮತ್ತು ಇಂದಿರಾ ಗಾಂಧಿಯಂತಹ ದಿಗ್ಗಜರ ಬಳಿ ಬೆರಳು ತೋರಿಸುತ್ತಿದೆ. ಮತ್ತು ಈಗ ಅವರ ಮುಖ್ಯ ಕಾರ್ಯಸೂಚಿ ಏನು? ಮೇಲ್ನೋಟಕ್ಕೆ, ಪ್ರತಿಪಕ್ಷಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಾಗಿದೆ ಎಂದು ಹೇಳಿದ್ದಾರೆ.

ಆರ್‌ಟಿಐ ಉತ್ತರದ ಆಧಾರದ ಮೇಲೆ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಪಕ್ಷ ಎತ್ತಿರುವ ಕಚ್ಚತೀವು ವಿಷಯವನ್ನು ಉಲ್ಲೇಖಿಸಿ ಬಿಜೆಪಿ ತನ್ನ ಉದ್ದೇಶಗಳಿಗಾಗಿ ಆರ್‌ಟಿಐನ್ನು ಬಳಸಲು ನಿರ್ಧರಿಸಿದೆ ಎಂದು ಅವರು ಹೇಳಿದರು. ಮೋದಿಯವರ ಮಾತುಗಳನ್ನು ಇನ್ನು ಮುಂದೆ ಜನರು ನಂಬಲಾರರು ಎಂಬ ಭಯದಿಂದ ಅವರು ಆರ್‌ಟಿಐಗೆ ಮೊರೆ ಹೋಗಿದ್ದಾರೆ ಎಂದು ಹೇಳಿದರು.

ಡಿಎಂಕೆ ತನ್ನ ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ಯಾವಾಗಲೂ ಬದ್ಧವಾಗಿದೆ ಎಂದು ಪ್ರತಿಪಾದಿಸಿದ ಸ್ಟಾಲಿನ್‌, “ಎಲ್ಲರಿಗೂ ಎಲ್ಲವೂ” ಎಂಬ ತತ್ವದ ಮೇಲೆ ಬಲವಾದ ನಂಬಿಕೆಯನ್ನು ಹೊಂದಿದೆ ಎಂದು ಹೇಳಿದ್ದು, ಬಿಜೆಪಿ ಬೇರೆಯೇ ಆಟವನ್ನು ಆಡುತ್ತದೆ, ಅವರು ದ್ವೇಷವನ್ನು ಬೆಳೆಸುತ್ತಾರೆ ಮತ್ತು ಆರೆಸ್ಸೆಸ್ ಸಿದ್ಧಾಂತದಲ್ಲಿ ರಾಜಕೀಯವನ್ನು ಮಾಡುತ್ತಾರೆ. ಇಂದು ಮೋದಿಯನ್ನು ಮುಂದಾಳತ್ವವನ್ನಾಗಿ ಮಾಡಿಕೊಂಡಿದ್ದಾರೆ. ನಿನ್ನೆ ಬೇರೊಬ್ಬರಿದ್ದರು ಮತ್ತು ಅದು ನಾಳೆ ಮತ್ತೊಂದು ಮುಖವನ್ನು ಹುಡುಕುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಗರು ಪ್ರಜಾಪ್ರಭುತ್ವ ಮತ್ತು ಸಹಕಾರಿ ಸಂಯುಕ್ತ ವ್ಯವಸ್ಥೆಯ  ಬಗ್ಗೆ ಮಾತನಾಡಲು ಇಷ್ಟಪಡುತ್ತಾರೆ, ಆದರೆ ಅದು ನಿಜವಾಗಿಯೂ ಎಲ್ಲಿದೆ? ಪ್ರಾಯೋಗಿಕವಾಗಿ ಇದು ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...