Homeಮುಖಪುಟಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ 'ಮಾಡು ಇಲ್ಲವೇ ಮಡಿ' ಯುದ್ಧವಾಗಿದೆ: ಸ್ಟಾಲಿನ್

ಲೋಕಸಭೆ ಚುನಾವಣೆ ಪ್ರಜಾಪ್ರಭುತ್ವದ ರಕ್ಷಣೆಗಿರುವ ‘ಮಾಡು ಇಲ್ಲವೇ ಮಡಿ’ ಯುದ್ಧವಾಗಿದೆ: ಸ್ಟಾಲಿನ್

- Advertisement -
- Advertisement -

ಲೋಕಸಭೆ ಚುನಾವಣೆಯನ್ನು ಭಾರತದ ಪ್ರಜಾಪ್ರಭುತ್ವದ ತಿರುಳನ್ನು ರಕ್ಷಿಸುವ ಮಾಡು ಇಲ್ಲವೇ ಮಡಿ ಯುದ್ಧವಾಗಿದೆ ಎಂದು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹೇಳಿದ್ದಾರೆ.

ಸ್ವಾತಂತ್ರ್ಯಕ್ಕಾಗಿ ಎರಡನೇ ಹೋರಾಟದ ಮಧ್ಯೆ ನಾವು ಇದ್ದಂತೆ ಭಾಸವಾಗುತ್ತಿದೆ.  ಇದು ಭಾರತದ ತಿರುಳನ್ನು ರಕ್ಷಿಸುವುದು: ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ನಮ್ಮ ಬಹುತ್ವ ಸಮಾಜವನ್ನು ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ.

ತಮ್ಮ ಚೆನ್ನೈ ನಿವಾಸದಲ್ಲಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಡಿಎಂಕೆ ಮುಖ್ಯಸ್ಥರು ಆಗಿರುವ ಸ್ಟಾಲಿನ್‌, ಮೋದಿ ಮತ್ತು ಬಿಜೆಪಿ ವಿರುದ್ಧ ಪ್ರತಿಪಕ್ಷಗಳು ಬಲವಾದ ತಂಡ ಹೊಂದಿವೆ. ಅಖಿಲೇಶ್ ಯಾದವ್, (ಅರವಿಂದ್) ಕೇಜ್ರಿವಾಲ್, ಉದ್ಧವ್ ಠಾಕ್ರೆ, ಮಮತಾ ಬ್ಯಾನರ್ಜಿ ಮತ್ತು ತೇಜಸ್ವಿ ಯಾದವ್ ಅವರಂತಹ ನಾಯಕರು ನಮ್ಮೊಂದಿಗೆ ಇದ್ದಾರೆ. ಈ ಹೋರಾಟದಲ್ಲಿ ನಾವು ಒಗ್ಗಟ್ಟಾಗಿದ್ದೇವೆ, ಮುಂಬರುವ ಚುನಾವಣೆಯಲ್ಲಿ ರಾಹುಲ್ ಗಾಂಧಿಯಂತಹ ಕ್ರಿಯಾಶೀಲ ಯುವ ನಾಯಕ ಮೋದಿಯ ಆ ಬೆಳೆಸಿದ ಚಿತ್ರಣವನ್ನು ಮತ್ತು ಆರೆಸ್ಸೆಸ್‌ ನಿರೂಪಣೆಯನ್ನು ಕೆಡವಲು ಸಜ್ಜಾಗಿದ್ದಾರೆ ಎಂದು ಸ್ಟಾಲಿನ್ ಹೇಳಿದರು. ಲೋಕಸಭೆ ಚುನಾವಣೆಯನ್ನು “ಭಾರತೀಯ ಪ್ರಜಾಪ್ರಭುತ್ವಕ್ಕಾಗಿ ಮಾಡು ಇಲ್ಲವೇ ಮಡಿ ಯುದ್ಧ” ಎಂದು ಬಣ್ಣಿಸಿದ್ದಾರೆ.

ಬಿಜೆಪಿಗೆ ತೆರಳಿದ ನಂತರ ಆಪ್ ನಾಯಕರ ವಿರುದ್ಧದ ಪ್ರಕರಣಗಳು ಹಿಂತೆಗೆದುಕೊಳ್ಳುವ ಕುರಿತ ವರದಿಯನ್ನು ಉಲ್ಲೇಖಿಸಿದ ಸ್ಟಾಲಿನ್, ‘ಒಂದು ದಶಕದ ಅಧಿಕಾರದ ನಂತರ, ಮೋದಿ ಸರ್ಕಾರವು ತಮ್ಮ ಸಾಧನೆಗಳನ್ನು ಪ್ರದರ್ಶಿಸುವ ಬದಲು ಹಿಂದಿನದನ್ನು ಕೆದಕುವ ಕೆಲಸದಲ್ಲಿ ನಿರತವಾಗಿದೆ,  ಪಂಡಿತ್ ನೆಹರೂ ಮತ್ತು ಇಂದಿರಾ ಗಾಂಧಿಯಂತಹ ದಿಗ್ಗಜರ ಬಳಿ ಬೆರಳು ತೋರಿಸುತ್ತಿದೆ. ಮತ್ತು ಈಗ ಅವರ ಮುಖ್ಯ ಕಾರ್ಯಸೂಚಿ ಏನು? ಮೇಲ್ನೋಟಕ್ಕೆ, ಪ್ರತಿಪಕ್ಷಗಳನ್ನು ಹಿಡಿತದಲ್ಲಿಟ್ಟುಕೊಳ್ಳುವುದಾಗಿದೆ ಎಂದು ಹೇಳಿದ್ದಾರೆ.

ಆರ್‌ಟಿಐ ಉತ್ತರದ ಆಧಾರದ ಮೇಲೆ ಇಂದಿರಾ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಪಕ್ಷ ಎತ್ತಿರುವ ಕಚ್ಚತೀವು ವಿಷಯವನ್ನು ಉಲ್ಲೇಖಿಸಿ ಬಿಜೆಪಿ ತನ್ನ ಉದ್ದೇಶಗಳಿಗಾಗಿ ಆರ್‌ಟಿಐನ್ನು ಬಳಸಲು ನಿರ್ಧರಿಸಿದೆ ಎಂದು ಅವರು ಹೇಳಿದರು. ಮೋದಿಯವರ ಮಾತುಗಳನ್ನು ಇನ್ನು ಮುಂದೆ ಜನರು ನಂಬಲಾರರು ಎಂಬ ಭಯದಿಂದ ಅವರು ಆರ್‌ಟಿಐಗೆ ಮೊರೆ ಹೋಗಿದ್ದಾರೆ ಎಂದು ಹೇಳಿದರು.

ಡಿಎಂಕೆ ತನ್ನ ಸಾಮಾಜಿಕ ನ್ಯಾಯದ ಸಿದ್ಧಾಂತಕ್ಕೆ ಯಾವಾಗಲೂ ಬದ್ಧವಾಗಿದೆ ಎಂದು ಪ್ರತಿಪಾದಿಸಿದ ಸ್ಟಾಲಿನ್‌, “ಎಲ್ಲರಿಗೂ ಎಲ್ಲವೂ” ಎಂಬ ತತ್ವದ ಮೇಲೆ ಬಲವಾದ ನಂಬಿಕೆಯನ್ನು ಹೊಂದಿದೆ ಎಂದು ಹೇಳಿದ್ದು, ಬಿಜೆಪಿ ಬೇರೆಯೇ ಆಟವನ್ನು ಆಡುತ್ತದೆ, ಅವರು ದ್ವೇಷವನ್ನು ಬೆಳೆಸುತ್ತಾರೆ ಮತ್ತು ಆರೆಸ್ಸೆಸ್ ಸಿದ್ಧಾಂತದಲ್ಲಿ ರಾಜಕೀಯವನ್ನು ಮಾಡುತ್ತಾರೆ. ಇಂದು ಮೋದಿಯನ್ನು ಮುಂದಾಳತ್ವವನ್ನಾಗಿ ಮಾಡಿಕೊಂಡಿದ್ದಾರೆ. ನಿನ್ನೆ ಬೇರೊಬ್ಬರಿದ್ದರು ಮತ್ತು ಅದು ನಾಳೆ ಮತ್ತೊಂದು ಮುಖವನ್ನು ಹುಡುಕುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿಗರು ಪ್ರಜಾಪ್ರಭುತ್ವ ಮತ್ತು ಸಹಕಾರಿ ಸಂಯುಕ್ತ ವ್ಯವಸ್ಥೆಯ  ಬಗ್ಗೆ ಮಾತನಾಡಲು ಇಷ್ಟಪಡುತ್ತಾರೆ, ಆದರೆ ಅದು ನಿಜವಾಗಿಯೂ ಎಲ್ಲಿದೆ? ಪ್ರಾಯೋಗಿಕವಾಗಿ ಇದು ಅಸ್ತಿತ್ವದಲ್ಲಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...