Homeಮುಖಪುಟಪುದುಚೇರಿ ಲೆಫ್ಟಿನೆಂಟ್-ಗವರ್ನರ್: ’ಜೀವಮಾನದ ಅನುಭವ’ ಎಂದ ಡಾ.ಕಿರಣ್ ಬೇಡಿ

ಪುದುಚೇರಿ ಲೆಫ್ಟಿನೆಂಟ್-ಗವರ್ನರ್: ’ಜೀವಮಾನದ ಅನುಭವ’ ಎಂದ ಡಾ.ಕಿರಣ್ ಬೇಡಿ

ಕಿರಣ್ ಬೇಡಿ ಅವರು ದಿನನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರು- ಮುಖ್ಯಮಂತ್ರಿ ವಿ.ನಾರಾಯಣ ಸಾಮಿ

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಆಡಳಿತರೂಢ ಕಾಂಗ್ರೆಸ್ ಸರ್ಕಾರದ ಬಿಕ್ಕಟಿನ ನಡುವೆಯೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಡಾ. ಕಿರಣ್ ಬೇಡಿ ಅವರನ್ನು ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಹುದ್ದೆಯಿಂದ ತೆಗೆದುಹಾಕಿದ್ದರು.

ಸದ್ಯ ಪುದುಚೇರಿಯ ಲೆಫ್ಟಿನೆಂಟ್-ಗವರ್ನರ್ ಅವರ ಕಾರ್ಯಗಳನ್ನು ನಿರ್ವಹಿಸಲು ತೆಲಂಗಾಣದ ಗವರ್ನರ್ ಡಾ. ತಮಿಳಿಸೈ ಸೌಂದರರಾಜನ್ ಅವರನ್ನು ನೇಮಿಸಲಾಗಿದೆ. ಉನ್ನತ ಹುದ್ದೆಯಿಂದ ತೆಗೆದುಹಾಕಿದ ನಂತರ ಕಿರಣ್ ಬೇಡಿ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದು, ಇದು ಜೀವಮಾನದ ಅನುಭವ ಎಂದಿದ್ದಾರೆ.

“ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನನ್ನ ಕೆಲಸದ ಭಾಗವಾಗಿದ್ದ ಎಲ್ಲರಿಗೂ ಮತ್ತು ಎಲ್ಲಾ ಪುದುಚೇರಿಯ ಜನರಿಗೂ, ಸಾರ್ವಜನಿಕ ಅಧಿಕಾರಿಗಳಿಗೂ ಧನ್ಯವಾದಗಳು” ಎಂದು 71 ವರ್ಷದ ಕಿರಣ್ ಬೇಡಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಪುದುಚೇರಿ: ಲೆಫ್ಟಿನೆಂಟ್ ಗವರ್ನರ್ ಹುದ್ದೆಯಿಂದ ಕಿರಣ್ ಬೇಡಿಯನ್ನು ತೆಗೆದುಹಾಕಿದ ರಾಷ್ಟ್ರಪತಿ

“ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಸೇವೆ ಸಲ್ಲಿಸಿದ ಜೀವಮಾನದ ಅನುಭವಕ್ಕಾಗಿ ನಾನು ಭಾರತ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ. ಟೀಮ್ ರಾಜ್ ನಿವಾಸ್ (ರಾಜ್ ನಿವಾಸ್ ತಂಡ) ಸಾರ್ವಜನಿಕ ಹಿತಾಸಕ್ತಿಗಾಗಿ ಶ್ರದ್ಧೆಯಿಂದ ಕೆಲಸ ಮಾಡಿದೆ ಎಂದು ಕಿರಣ್ ಬೇಡಿ ತಮ್ಮ ಧನ್ಯವಾದದ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಏನೇ ಮಾಡಿದ್ದರು ಅದು ಪವಿತ್ರ ಕರ್ತವ್ಯ. ನನ್ನ ಸಾಂವಿಧಾನಿಕ ಮತ್ತು ನೈತಿಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದೇನೆ ಎಂದಿದ್ದಾರೆ.

ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಲೆಫ್ಟಿನೆಂಟ್​ ಗವರ್ನರ್​ ಕಿರಣ್​ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸಾಮಿ ಜನವರಿಯಲ್ಲಿ ಆರೋಪಿಸಿದ್ದರು. “ಕಿರಣ್ ಬೇಡಿ ಅವರು ದಿನನಿತ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವ ಮೂಲಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದರು. ಪುದುಚೇರಿಯಲ್ಲಿ ಜಾತ್ಯತೀತ ಪಕ್ಷಗಳ ಜನರು, ಕೋಮುವಾದಿ ಅಂಶಗಳನ್ನು ಅನುಮತಿಸುವುದಿಲ್ಲ” ಎಂದು ಮುಖ್ಯಮಂತ್ರಿ ವಿ. ನಾರಾಯಣಸಾಮಿ ಮತ್ತೊಮ್ಮೆ ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ಇನ್ನು ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ವಿ.ನಾರಾಯಣ ಸಾಮಿ, “ಬಿಜೆಪಿ ನಮ್ಮ ಸರ್ಕಾರವನ್ನು ಉರುಳಿಸುವ ಸಲುವಾಗಿ ನಮ್ಮ ಶಾಸಕರನ್ನು ಬೇಟೆಯಾಡುತ್ತಿದೆ. 3 ಶಾಸಕರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಬಿಜೆಪಿಯ ಯೋಜನೆಯ ಬಗ್ಗೆ ಜನರಿಗೆ ತಿಳಿದಿದೆ, ಮತದಾರರು 2021 ರ ಚುನಾವಣೆಯ ಸಮಯದಲ್ಲಿ ಅವರಿಗೆ ಸೂಕ್ತವಾದ ಉತ್ತರವನ್ನು ನೀಡುತ್ತಾರೆ” ಎಂದಿದ್ದಾರೆ.

ಕಳೆದ ತಿಂಗಳಿನಿಂದ ಇಲ್ಲಿಯವರೆಗೆ ನಾಲ್ಕು ಕಾಂಗ್ರೆಸ್ ನಾಯಕರು ವಿಧಾನಸಭೆಗೆ ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್ ಸರ್ಕಾರ ಅಲ್ಪಮತಕ್ಕೆ ಕುಸಿದಿದೆ. ಇತ್ತೀಚಿನ ಬೆಳವಣಿಗೆಯಿಂದಾಗಿ, 33 ಸದಸ್ಯ ಬಲವಿರುವ ಸದನದಲ್ಲಿ ಆಡಳಿತಾರೂಢ ಕಾಂಗ್ರೆಸ್-ಡಿಎಂಕೆ ಮೈತ್ರಿ ಮತ್ತು ಎಐಎಡಿಎಂಕೆ-ಬಿಜೆಪಿ ಮೈತ್ರಿಕೂಟವು ತಲಾ 14 ಶಾಸಕರನ್ನು ಹೊಂದಿದೆ. ಮೂರು ನಾಮನಿರ್ದೇಶಿತ ಶಾಸಕರನ್ನು ಒಳಗೊಂಡಿರುವ ಅಸೆಂಬ್ಲಿಯಲ್ಲಿ ಪ್ರಸ್ತುತ 28 ಸಕ್ರಿಯ ಶಾಸಕರು ಇದ್ದಾರೆ.


ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...