Homeನ್ಯಾಯ ಪಥ'ದೇಶವಿರೋಧಿ' ಪ್ರಕರಣ ಎಂಬ ನಾಚಿಕೆಗೇಡು! : ಡಿ.ಉಮಾಪತಿ

‘ದೇಶವಿರೋಧಿ’ ಪ್ರಕರಣ ಎಂಬ ನಾಚಿಕೆಗೇಡು! : ಡಿ.ಉಮಾಪತಿ

- Advertisement -
- Advertisement -

ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು,
ಬದುಕು ಬೆಳಗುವ ದೀಪದಂತಿರಲಿ ಹೇ ದೇವದೇವ
ಕಳೆದು ಹೋಗಲಿ ಇಳೆಯ ಕತ್ತಲೆ,
ಹೊಳೆದು ಬೆಳಗಲಿ ಎಲ್ಲ ತಾವುಗಳು
ನನ್ನ ಕಾಂತಿಯಿಂದ.
ಸುಮಕುಸುಮಗಳು ಉದ್ಯಾನವ ಸಿಂಗರಿಸಿದಂತೆ
ಸೊಗಸಿಬಿಡಲೇ ನಾನೆನ್ನ ತಾಯ್ನೆಲವ ತಬ್ಬಿ ಹಬ್ಬಿ..
ಎನ್ನ ಜೀವದುಸಿರು ನೀನಾಗು ಎಲೆ ದೇವ,
ತಿಳಿವಿನ ದೀಪಕ್ಕೆಳೆಸುವ ಪತಂಗ ನಾನು
ಎನ್ನ ಇರವಿನ ಧ್ಯೇಯವಾಗಿಸು,
ವೃದ್ಧರು ದುಃಖಿತರು, ದೀನದರಿದ್ರರ ಸೇವೆಯನು.
ಹಿಡಿದೆತ್ತು ಅಂತರ್ಯಾಮಿಯೇ ನನ್ನನು ಜಗದ ಕೇಡಿನಿಂದ
ಉದ್ಧರಿಸು ಮುನ್ನಡೆಸು ಸಚ್ಚಾರಿತ್ರ್ಯದೆಡೆಗೆ

ಈ ಗೀತೆಯನ್ನು ಓದಿ, ಇದರ ಉರ್ದು ಮೂಲದ ಗಾಯನವನ್ನು ಆಲಿಸಿದ ನನಗೆ ಆಚಾರ್ಯ ಬಿ.ಎಂ.ಶ್ರೀ. ಅವರ ಇಂಗ್ಲಿಷ್ ಗೀತಗಳು ಸಂಗ್ರಹದ ಪ್ರಸಿದ್ಧ ಪದ್ಯ ‘ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಸೆನ್ನನು’ ನೆನಪಾಯಿತು. ಬಿ.ಎಂ.ಶ್ರೀ ಅವರ ಸೊಗಸಿನ ಅನುವಾದದ ಮಹಿಮೆ. ಮೂಲ ಕನ್ನಡದ್ದೇ ಎನ್ನುವಷ್ಟರಮಟ್ಟಿಗೆ ಈ ಗೀತೆ ಕನ್ನಡಿಗರಲ್ಲಿ ಜನಪ್ರಿಯ. ರತ್ನಮಾಲಾ ಪ್ರಕಾಶ್ ಅವರ ಸಿರಿಕಂಠದಲ್ಲಿ ಈ ಗೀತೆಯನ್ನು ಕೇಳಿ ಧ್ಯಾನಸ್ಥ ಸ್ಥಿತಿಗೆ ಜಾರದ ಮನಸುಗಳೇ ಇರಲಾರವು. ಇಂಗ್ಲೆಂಡಿನ ಕ್ರೈಸ್ತ ಸಂತ ಜಾನ್ ಹೆನ್ರಿ ನ್ಯೂಮನ್ 1833ರಲ್ಲಿ ರಚಿಸಿದ್ದ ಪ್ರಾರ್ಥನಾ ಗೀತೆಯಿದು ಎಂಬ ಸಂಗತಿ ಈಗಲೂ ಬಹಳಷ್ಟು ಜನಕ್ಕೆ ತಿಳಿದಿಲ್ಲ. ಭಾರತವೂ ಸೇರಿದಂತೆ ವಿಶ್ವದಾದ್ಯಂತ ಇಗರ್ಜಿಗಳಲ್ಲಿ ಇಂದಿಗೂ ಈ ಇಂಗ್ಲಿಷ್ ಗೀತೆಯನ್ನು ಹಾಡಲಾಗುತ್ತದೆ.

ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು… ಎಂಬ ಪದ್ಯದ ಉರ್ದು ಮೂಲ ಹೀಗಿದೆ-

‘ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ/ ಝಿಂದಗೀ ಶಂಮಾ ಕೀ ಸೂರತ್ ಹೋ ಖುದಾಯಾ ಮೇರೀ/ ದೂರ್ ದುನಿಯಾ ಕಾ ಮೇರೇ ದಮ್ ಸೇ ಅಂಧೇರಾ ಹೋ ಜಾಯೇ/ ಹರ್ ಜಗಾಹ ಮೇರೀ ಚಮಕನೇ ಸೇ ಉಜಾಲಾ ಹೋ ಜಾಯೇ/ ಹೋ ಮೇರೇ ದಮ್ ಸೇ ಯೂಂ ಹೀ ಮೇರೆ ವತನ್ ಕೀ ಝೀನತ್/ ಜಿಸ್ ತರಾಹ್ ಫೂಲ್ ಸೇ ಹೋತೀ ಹೈ ಚಮನ್ ಕೀ ಝೀನತ್/ ಝಿಂದಗೀ ಹೋ ಮೇರೀ ಪರವಾನೇ ಕೀ ಸೂರತ್ ಯಾರಬ್/ ಇಲ್ಮ್ ಕೀ ಶಂಮಾ ಸೇ ಹೋ ಮುಝಕೋ ಮೊಹೋಬ್ಬತ್ ಯಾರಬ್/ ಹೋ ಮೇರಾ ಕಾಮ್ ಗರೀಬೋಂ ಕೀ ಹಿಮಾಯತ್ ಕರನಾ/ ದರದಮಂದೋ ಸೇ ಝೀಂಫೋ ಸೇ ಮೊಹೊಬ್ಬತ್ ಕರನಾ/ ಮೇರೇ ಅಲ್ಲಾಹ ಬುರಾಯೀ ಸೇ ಬಚಾನಾ ಮುಝಕೋ/ ನೇಕ ಜೋ ರಾಹ ಉಸೀ ಪೆ ಚಲಾನಾ ಮುಝಕೋ/ ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ’

ಈ ಉರ್ದು ಗೀತೆಯನ್ನು ನನ್ನ ತಿಳಿವಳಿಕೆಗೆ ನಿಲುಕಿದ ಕನ್ನಡಕ್ಕೆ ತರ್ಜುಮೆ ಮಾಡಿ ಇಲ್ಲಿ ಓದುಗರ ಮುಂದೆ ಇರಿಸಿದ್ದೇನೆ. ಹೆಚ್ಚು ಬಲ್ಲವರು ಇನ್ನಷ್ಟು ಸೊಗಸಾಗಿ ಅನುವಾದ ಮಾಡಿಕೊಳ್ಳಬಹುದು.

ಈಗಲೂ ದೇಶದ ಲಕ್ಷಾಂತರ ಶಾಲೆಗಳಲ್ಲಿ ದಿನನಿತ್ಯ ಮತ್ತು ಸ್ವಾತಂತ್ರ್ಯೋತ್ಸವ ದಿನ ಹಾಗೂ ಗಣರಾಜ್ಯೋತ್ಸವದಂದು ಮೊಳಗುವ ಇನ್ನೊಂದು ಸುಂದರ ದೇಶಭಕ್ತಿ ಗೀತೆಯಿದೆ. ಅದು ‘ಸಾರೇ ಜಹಾಂ ಸೇ ಅಚ್ಛಾ ಹಿಂದೂಸ್ತಾನ ಹಮಾರಾ….’

ಈ ಗೀತೆಯ ಬರೆದ ಕವಿಯೇ ‘ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ’ (ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು…’) ಎಂಬ ಗೀತೆಯನ್ನೂ ಬರೆದಿದ್ದಾನೆ.

ಆತನ ಹೆಸರು ಅಲ್ಲಾಮ ಇಕ್ಬಾಲ್. 1902ರಲ್ಲಿ ಈ ಗೀತೆಯನ್ನು ಆತ ಬರೆದಿದ್ದ. ಸಾರೇ ಜಹಾಂ ಸೇ ಅಚ್ಛಾ ಬರೆದದ್ದು ಎರಡು ವರ್ಷಗಳ ನಂತರ 1904ರಲ್ಲಿ. ಹಿಂದೂಸ್ತಾನಿ ಬಚ್ಚೋಂ ಕಾ ಖೋಮಿ ಗೀತ್ ನ್ನು ಬರೆದದ್ದು 1905ರಲ್ಲಿ. ಈ ಕಾಲಘಟ್ಟದಲ್ಲಿ ಆತ ಅಪ್ಪಟ ಭಾರತೀಯ ರಾಷ್ಟ್ರವಾದಿಯಾಗಿದ್ದ. ಆನಂತರ ಆತ ಪ್ರತ್ಯೇಕ ಪಾಕಿಸ್ತಾನ ಬೇಡಿಕೆಯ ಹೋರಾಟದ ಮುಂಚೂಣಿಯಲ್ಲಿದ್ದ ಮತ್ತು ಪಾಕಿಸ್ತಾನದ ರಾಷ್ಟ್ರಕವಿ ಎನಿಸಿಕೊಂಡದ್ದು ಹೌದು. ಆದರೆ ಲಬ್ ಪೇ ಆತೀ…ಗೀತೆಯಲ್ಲಿ ಬರುವ ‘ವತನ್’ (ಜನ್ಮಭೂಮಿ) ಪದವು ಭಾರತವನ್ನೇ ಉದ್ದೇಶಿಸಿದ್ದು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ನಾವು ಇಂದಿಗೂ ಮನದುಂಬಿ ಹಾಡುವ ಸಾರೇ ಜಹಾಂ ಸೇ ಅಚ್ಛಾ ಗೀತೆಯನ್ನು ಆತ ರಚಿಸಿದ್ದು ಲಬ್ ಪೇ ಆತೀ ಬರೆದ ಎರಡು ವರ್ಷಗಳ ನಂತರ ಎಂಬುದನ್ನು ಗಮನಿಸಬೇಕು.

ಯಾವ ಕೋನದಿಂದ ನೋಡಿದರೂ ಲಬ್ ಪೇ ಆತೀ ಹೈ ದುವಾ….ಧಾರ್ಮಿಕ ಗೀತೆ ಅಥವಾ ಮುಸ್ಲಿಂ ಪ್ರಾರ್ಥನೆ ಅಲ್ಲ. ಸಾರೇ ಜಹಾಂ ಸೇ ಅಚ್ಛಾ ಹಿಂದೂಸ್ತಾನ್ ಹಮಾರಾ…ಮುಸ್ಲಿಂ ಪ್ರಾರ್ಥನೆಯೆಂದು ಹೇಳುವುದು ಎಷ್ಟು ವಿಕೃತವೋ, ಲಬ್ ಪೇ ಆತೀ ಹೈ ದುವಾ…ಕ್ಕೆ ಮುಸ್ಲಿಂ ಪ್ರಾರ್ಥನೆಯ ಬಣ್ಣ ಹಚ್ಚುವುದೂ ಅಷ್ಟೇ ವಿಕೃತ ಆದೀತು.

ಇಷ್ಟೆಲ್ಲವನ್ನೂ ಇಲ್ಲಿ ಪ್ರಸ್ತಾಪಿಸಿದ ಹಿನ್ನೆಲೆ ಉತ್ತರಪ್ರದೇಶದ ಪೀಲೀಭೀತ್ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರ ಅಮಾನತು ಪ್ರಕರಣ. ಮುಖ್ಯೋಪಾಧ್ಯಾಯ ಫುರ್ಖಾನ್ ಅಲಿ ಅವರು ಶಾಲೆಯಲ್ಲಿ ಮದರಸಾದ ಪ್ರಾರ್ಥನೆಯನ್ನು ಮಕ್ಕಳಿಂದ ಹಾಡಿಸುತ್ತಿದ್ದಾರೆ ಎಂಬುದಾಗಿ ವಿಶ್ವಹಿಂದು ಪರಿಷತ್ ಆರೋಪ ಮಾಡಿತ್ತು. ಅಲಿ ಅವರಿಂದ ವಿವರಣೆಯನ್ನೂ ಪಡೆಯದೆ ಜಿಲ್ಲಾಡಳಿತ ಆತನನ್ನು ಅಕ್ಟೋಬರ್ 14ರಂದು ಅಮಾನತಿನಲ್ಲಿ ಇರಿಸಿತು. ಲಬ್ ಪೇ ಆತೀ ಹೈ ದುವಾ ಗೀತೆಯು ಮದರಸಾ ಪ್ರಾರ್ಥನೆ, ಅದನ್ನು ಹಾಡಿಸುವುದು ದೇಶವಿರೋಧದ ಕೃತ್ಯ ಎಂದು ವಿ.ಹಿಂ.ಪ. ದೂರು ನೀಡಿತ್ತು.

ಪೀಲೀಭೀತ್ ಜಿಲ್ಲೆಯ ಈ ಶಾಲೆಯ ಮಕ್ಕಳು ನಿತ್ಯವೂ ರಾಷ್ಟ್ರಗೀತೆಯನ್ನು ಹಾಡುತ್ತಿದ್ದಾರೆ ಮತ್ತು ಸರಸ್ವತಿ ವಂದನಾ ವನ್ನೂ ವಾಚಿಸುತ್ತಿದ್ದಾರೆ, ವೋ ಶಕ್ತಿ ಹಮೇಂ ದೋ ದಯಾನಿಧೀ ಗೀತೆಯನ್ನೂ ಹಾಡುತ್ತಿದ್ದಾರೆ.

ತಮ್ಮ ಮುಖ್ಯೋಪಾಧ್ಯಾಯರನ್ನು ಈ ಶಾಲೆಯ ಮಕ್ಕಳು ಬಹುವಾಗಿ ಪ್ರೀತಿಸುತ್ತಿದ್ದರು. ಯಾಕೆಂದರೆ ಆತನೂ ಮಕ್ಕಳನ್ನು ಅಕ್ಕರೆಯಿಂದ ಕಾಣುತ್ತಿದ್ದರು. ತಮ್ಮ ಸಂಬಳದ ಹಣ ಖರ್ಚು ಮಾಡಿ ಶಾಲೆಯ ಅಭಿವೃದ್ಧಿ ಮಾಡಿದ್ದರು. ಮಧ್ಯಾಹ್ನದ ಬಿಸಿಯೂಟದ ತರಕಾರಿಗೆ ತಾವೇ ಹಣ ನೀಡುತ್ತಿದ್ದರು. ಹೀಗಾಗಿ ತಮ್ಮ ಅಚ್ಚುಮೆಚ್ಚಿನ ಮೇಷ್ಟ್ರನ್ನು ಅಮಾನತಿನಲ್ಲಿ ಇರಿಸಿರುವ ಕ್ರಮವನ್ನು ಮಕ್ಕಳು ಪ್ರತಿಭಟಿಸಿದ್ದಾರೆ. ಕಳೆದ ಶುಕ್ರವಾರ ಶಾಲಾಮೈದಾನದಲ್ಲಿ ಸೇರಿದ್ದ ಮಕ್ಕಳು ಸಾಲುಗಳಲ್ಲಿ ನಿಂತು ಕೂಗಿದ ಘೋಷಣೆ- ದೇಶದ ರಕ್ಷಣೆ ಯಾರು ಮಾಡ್ತಾರೆ? ನಾವು ಮಾಡ್ತೇವೆ. ಹೇಗೆ ಮಾಡ್ತೇವೆ? ತನುವಿನಿಂದ ಮಾಡ್ತೇವೆ, ಮನಸಿನಿಂದ ಮಾಡ್ತೇವೆ, ಧನದಿಂದ ಮಾಡ್ತೇವೆ.

ಹತ್ತು ನಿಮಿಷ ಘೋಷಣೆ ಕೂಗಿ ಮನೆಯತ್ತ ಹೊರಟವು ಮಕ್ಕಳು. ತಮ್ಮ ಮೇಷ್ಟ್ರು ವಾಪಸು ಬರುವವರೆಗೆ ತಾವೂ ಶಾಲೆಗೆ ಬರುವುದಿಲ್ಲ ಎಂದವು. ಲಬ್ ಪೇ ಆತೀ ಹೈ ಗೀತೆಯನ್ನು ಹಾಡುವಂತೆ ಮತ್ತು ಹಾಡಿಸುವಂತೆ ನಾವೇ ಮೇಷ್ಟ್ರನ್ನ ಕೇಳಿಕೊಂಡೆವು. ದಿನ ಬಿಟ್ಟು ದಿನ ಹಾಡಲು ಅವರು ನಮಗೆ ಅನುಮತಿ ಕೊಟ್ಟರು ಎಂದು ಮಕ್ಕಳು ತಿಳಿಸಿವೆ. ಹಾಜರಾತಿ 150ರಿಂದ ಐದು ಹತ್ತಕ್ಕೆ ತಗ್ಗಿದೆ.

ತನ್ನ ತಪ್ಪಿನ ಅರಿವಾದಂತಿರುವ ಸರ್ಕಾರ ಬಿದ್ದರೂ ಮೀಸೆ ಮಣ್ಣಾಗದು ಎಂಬಂತೆ ಅಲಿಯ ಅಮಾನತನ್ನು ಮಾನವೀಯತೆಯ ಆಧಾರದ ಮೇಲೆ ರದ್ದು ಮಾಡಲಾಗಿದೆ ಎಂದಿದೆ. ಆದರೆ ಅವರನ್ನು ಬೇರೆ ಶಾಲೆಗೆ ವರ್ಗ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...