Homeನ್ಯಾಯ ಪಥ'ದೇಶವಿರೋಧಿ' ಪ್ರಕರಣ ಎಂಬ ನಾಚಿಕೆಗೇಡು! : ಡಿ.ಉಮಾಪತಿ

‘ದೇಶವಿರೋಧಿ’ ಪ್ರಕರಣ ಎಂಬ ನಾಚಿಕೆಗೇಡು! : ಡಿ.ಉಮಾಪತಿ

- Advertisement -
- Advertisement -

ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು,
ಬದುಕು ಬೆಳಗುವ ದೀಪದಂತಿರಲಿ ಹೇ ದೇವದೇವ
ಕಳೆದು ಹೋಗಲಿ ಇಳೆಯ ಕತ್ತಲೆ,
ಹೊಳೆದು ಬೆಳಗಲಿ ಎಲ್ಲ ತಾವುಗಳು
ನನ್ನ ಕಾಂತಿಯಿಂದ.
ಸುಮಕುಸುಮಗಳು ಉದ್ಯಾನವ ಸಿಂಗರಿಸಿದಂತೆ
ಸೊಗಸಿಬಿಡಲೇ ನಾನೆನ್ನ ತಾಯ್ನೆಲವ ತಬ್ಬಿ ಹಬ್ಬಿ..
ಎನ್ನ ಜೀವದುಸಿರು ನೀನಾಗು ಎಲೆ ದೇವ,
ತಿಳಿವಿನ ದೀಪಕ್ಕೆಳೆಸುವ ಪತಂಗ ನಾನು
ಎನ್ನ ಇರವಿನ ಧ್ಯೇಯವಾಗಿಸು,
ವೃದ್ಧರು ದುಃಖಿತರು, ದೀನದರಿದ್ರರ ಸೇವೆಯನು.
ಹಿಡಿದೆತ್ತು ಅಂತರ್ಯಾಮಿಯೇ ನನ್ನನು ಜಗದ ಕೇಡಿನಿಂದ
ಉದ್ಧರಿಸು ಮುನ್ನಡೆಸು ಸಚ್ಚಾರಿತ್ರ್ಯದೆಡೆಗೆ

ಈ ಗೀತೆಯನ್ನು ಓದಿ, ಇದರ ಉರ್ದು ಮೂಲದ ಗಾಯನವನ್ನು ಆಲಿಸಿದ ನನಗೆ ಆಚಾರ್ಯ ಬಿ.ಎಂ.ಶ್ರೀ. ಅವರ ಇಂಗ್ಲಿಷ್ ಗೀತಗಳು ಸಂಗ್ರಹದ ಪ್ರಸಿದ್ಧ ಪದ್ಯ ‘ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಸೆನ್ನನು’ ನೆನಪಾಯಿತು. ಬಿ.ಎಂ.ಶ್ರೀ ಅವರ ಸೊಗಸಿನ ಅನುವಾದದ ಮಹಿಮೆ. ಮೂಲ ಕನ್ನಡದ್ದೇ ಎನ್ನುವಷ್ಟರಮಟ್ಟಿಗೆ ಈ ಗೀತೆ ಕನ್ನಡಿಗರಲ್ಲಿ ಜನಪ್ರಿಯ. ರತ್ನಮಾಲಾ ಪ್ರಕಾಶ್ ಅವರ ಸಿರಿಕಂಠದಲ್ಲಿ ಈ ಗೀತೆಯನ್ನು ಕೇಳಿ ಧ್ಯಾನಸ್ಥ ಸ್ಥಿತಿಗೆ ಜಾರದ ಮನಸುಗಳೇ ಇರಲಾರವು. ಇಂಗ್ಲೆಂಡಿನ ಕ್ರೈಸ್ತ ಸಂತ ಜಾನ್ ಹೆನ್ರಿ ನ್ಯೂಮನ್ 1833ರಲ್ಲಿ ರಚಿಸಿದ್ದ ಪ್ರಾರ್ಥನಾ ಗೀತೆಯಿದು ಎಂಬ ಸಂಗತಿ ಈಗಲೂ ಬಹಳಷ್ಟು ಜನಕ್ಕೆ ತಿಳಿದಿಲ್ಲ. ಭಾರತವೂ ಸೇರಿದಂತೆ ವಿಶ್ವದಾದ್ಯಂತ ಇಗರ್ಜಿಗಳಲ್ಲಿ ಇಂದಿಗೂ ಈ ಇಂಗ್ಲಿಷ್ ಗೀತೆಯನ್ನು ಹಾಡಲಾಗುತ್ತದೆ.

ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು… ಎಂಬ ಪದ್ಯದ ಉರ್ದು ಮೂಲ ಹೀಗಿದೆ-

‘ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ/ ಝಿಂದಗೀ ಶಂಮಾ ಕೀ ಸೂರತ್ ಹೋ ಖುದಾಯಾ ಮೇರೀ/ ದೂರ್ ದುನಿಯಾ ಕಾ ಮೇರೇ ದಮ್ ಸೇ ಅಂಧೇರಾ ಹೋ ಜಾಯೇ/ ಹರ್ ಜಗಾಹ ಮೇರೀ ಚಮಕನೇ ಸೇ ಉಜಾಲಾ ಹೋ ಜಾಯೇ/ ಹೋ ಮೇರೇ ದಮ್ ಸೇ ಯೂಂ ಹೀ ಮೇರೆ ವತನ್ ಕೀ ಝೀನತ್/ ಜಿಸ್ ತರಾಹ್ ಫೂಲ್ ಸೇ ಹೋತೀ ಹೈ ಚಮನ್ ಕೀ ಝೀನತ್/ ಝಿಂದಗೀ ಹೋ ಮೇರೀ ಪರವಾನೇ ಕೀ ಸೂರತ್ ಯಾರಬ್/ ಇಲ್ಮ್ ಕೀ ಶಂಮಾ ಸೇ ಹೋ ಮುಝಕೋ ಮೊಹೋಬ್ಬತ್ ಯಾರಬ್/ ಹೋ ಮೇರಾ ಕಾಮ್ ಗರೀಬೋಂ ಕೀ ಹಿಮಾಯತ್ ಕರನಾ/ ದರದಮಂದೋ ಸೇ ಝೀಂಫೋ ಸೇ ಮೊಹೊಬ್ಬತ್ ಕರನಾ/ ಮೇರೇ ಅಲ್ಲಾಹ ಬುರಾಯೀ ಸೇ ಬಚಾನಾ ಮುಝಕೋ/ ನೇಕ ಜೋ ರಾಹ ಉಸೀ ಪೆ ಚಲಾನಾ ಮುಝಕೋ/ ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ’

ಈ ಉರ್ದು ಗೀತೆಯನ್ನು ನನ್ನ ತಿಳಿವಳಿಕೆಗೆ ನಿಲುಕಿದ ಕನ್ನಡಕ್ಕೆ ತರ್ಜುಮೆ ಮಾಡಿ ಇಲ್ಲಿ ಓದುಗರ ಮುಂದೆ ಇರಿಸಿದ್ದೇನೆ. ಹೆಚ್ಚು ಬಲ್ಲವರು ಇನ್ನಷ್ಟು ಸೊಗಸಾಗಿ ಅನುವಾದ ಮಾಡಿಕೊಳ್ಳಬಹುದು.

ಈಗಲೂ ದೇಶದ ಲಕ್ಷಾಂತರ ಶಾಲೆಗಳಲ್ಲಿ ದಿನನಿತ್ಯ ಮತ್ತು ಸ್ವಾತಂತ್ರ್ಯೋತ್ಸವ ದಿನ ಹಾಗೂ ಗಣರಾಜ್ಯೋತ್ಸವದಂದು ಮೊಳಗುವ ಇನ್ನೊಂದು ಸುಂದರ ದೇಶಭಕ್ತಿ ಗೀತೆಯಿದೆ. ಅದು ‘ಸಾರೇ ಜಹಾಂ ಸೇ ಅಚ್ಛಾ ಹಿಂದೂಸ್ತಾನ ಹಮಾರಾ….’

ಈ ಗೀತೆಯ ಬರೆದ ಕವಿಯೇ ‘ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ’ (ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು…’) ಎಂಬ ಗೀತೆಯನ್ನೂ ಬರೆದಿದ್ದಾನೆ.

ಆತನ ಹೆಸರು ಅಲ್ಲಾಮ ಇಕ್ಬಾಲ್. 1902ರಲ್ಲಿ ಈ ಗೀತೆಯನ್ನು ಆತ ಬರೆದಿದ್ದ. ಸಾರೇ ಜಹಾಂ ಸೇ ಅಚ್ಛಾ ಬರೆದದ್ದು ಎರಡು ವರ್ಷಗಳ ನಂತರ 1904ರಲ್ಲಿ. ಹಿಂದೂಸ್ತಾನಿ ಬಚ್ಚೋಂ ಕಾ ಖೋಮಿ ಗೀತ್ ನ್ನು ಬರೆದದ್ದು 1905ರಲ್ಲಿ. ಈ ಕಾಲಘಟ್ಟದಲ್ಲಿ ಆತ ಅಪ್ಪಟ ಭಾರತೀಯ ರಾಷ್ಟ್ರವಾದಿಯಾಗಿದ್ದ. ಆನಂತರ ಆತ ಪ್ರತ್ಯೇಕ ಪಾಕಿಸ್ತಾನ ಬೇಡಿಕೆಯ ಹೋರಾಟದ ಮುಂಚೂಣಿಯಲ್ಲಿದ್ದ ಮತ್ತು ಪಾಕಿಸ್ತಾನದ ರಾಷ್ಟ್ರಕವಿ ಎನಿಸಿಕೊಂಡದ್ದು ಹೌದು. ಆದರೆ ಲಬ್ ಪೇ ಆತೀ…ಗೀತೆಯಲ್ಲಿ ಬರುವ ‘ವತನ್’ (ಜನ್ಮಭೂಮಿ) ಪದವು ಭಾರತವನ್ನೇ ಉದ್ದೇಶಿಸಿದ್ದು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ನಾವು ಇಂದಿಗೂ ಮನದುಂಬಿ ಹಾಡುವ ಸಾರೇ ಜಹಾಂ ಸೇ ಅಚ್ಛಾ ಗೀತೆಯನ್ನು ಆತ ರಚಿಸಿದ್ದು ಲಬ್ ಪೇ ಆತೀ ಬರೆದ ಎರಡು ವರ್ಷಗಳ ನಂತರ ಎಂಬುದನ್ನು ಗಮನಿಸಬೇಕು.

ಯಾವ ಕೋನದಿಂದ ನೋಡಿದರೂ ಲಬ್ ಪೇ ಆತೀ ಹೈ ದುವಾ….ಧಾರ್ಮಿಕ ಗೀತೆ ಅಥವಾ ಮುಸ್ಲಿಂ ಪ್ರಾರ್ಥನೆ ಅಲ್ಲ. ಸಾರೇ ಜಹಾಂ ಸೇ ಅಚ್ಛಾ ಹಿಂದೂಸ್ತಾನ್ ಹಮಾರಾ…ಮುಸ್ಲಿಂ ಪ್ರಾರ್ಥನೆಯೆಂದು ಹೇಳುವುದು ಎಷ್ಟು ವಿಕೃತವೋ, ಲಬ್ ಪೇ ಆತೀ ಹೈ ದುವಾ…ಕ್ಕೆ ಮುಸ್ಲಿಂ ಪ್ರಾರ್ಥನೆಯ ಬಣ್ಣ ಹಚ್ಚುವುದೂ ಅಷ್ಟೇ ವಿಕೃತ ಆದೀತು.

ಇಷ್ಟೆಲ್ಲವನ್ನೂ ಇಲ್ಲಿ ಪ್ರಸ್ತಾಪಿಸಿದ ಹಿನ್ನೆಲೆ ಉತ್ತರಪ್ರದೇಶದ ಪೀಲೀಭೀತ್ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರ ಅಮಾನತು ಪ್ರಕರಣ. ಮುಖ್ಯೋಪಾಧ್ಯಾಯ ಫುರ್ಖಾನ್ ಅಲಿ ಅವರು ಶಾಲೆಯಲ್ಲಿ ಮದರಸಾದ ಪ್ರಾರ್ಥನೆಯನ್ನು ಮಕ್ಕಳಿಂದ ಹಾಡಿಸುತ್ತಿದ್ದಾರೆ ಎಂಬುದಾಗಿ ವಿಶ್ವಹಿಂದು ಪರಿಷತ್ ಆರೋಪ ಮಾಡಿತ್ತು. ಅಲಿ ಅವರಿಂದ ವಿವರಣೆಯನ್ನೂ ಪಡೆಯದೆ ಜಿಲ್ಲಾಡಳಿತ ಆತನನ್ನು ಅಕ್ಟೋಬರ್ 14ರಂದು ಅಮಾನತಿನಲ್ಲಿ ಇರಿಸಿತು. ಲಬ್ ಪೇ ಆತೀ ಹೈ ದುವಾ ಗೀತೆಯು ಮದರಸಾ ಪ್ರಾರ್ಥನೆ, ಅದನ್ನು ಹಾಡಿಸುವುದು ದೇಶವಿರೋಧದ ಕೃತ್ಯ ಎಂದು ವಿ.ಹಿಂ.ಪ. ದೂರು ನೀಡಿತ್ತು.

ಪೀಲೀಭೀತ್ ಜಿಲ್ಲೆಯ ಈ ಶಾಲೆಯ ಮಕ್ಕಳು ನಿತ್ಯವೂ ರಾಷ್ಟ್ರಗೀತೆಯನ್ನು ಹಾಡುತ್ತಿದ್ದಾರೆ ಮತ್ತು ಸರಸ್ವತಿ ವಂದನಾ ವನ್ನೂ ವಾಚಿಸುತ್ತಿದ್ದಾರೆ, ವೋ ಶಕ್ತಿ ಹಮೇಂ ದೋ ದಯಾನಿಧೀ ಗೀತೆಯನ್ನೂ ಹಾಡುತ್ತಿದ್ದಾರೆ.

ತಮ್ಮ ಮುಖ್ಯೋಪಾಧ್ಯಾಯರನ್ನು ಈ ಶಾಲೆಯ ಮಕ್ಕಳು ಬಹುವಾಗಿ ಪ್ರೀತಿಸುತ್ತಿದ್ದರು. ಯಾಕೆಂದರೆ ಆತನೂ ಮಕ್ಕಳನ್ನು ಅಕ್ಕರೆಯಿಂದ ಕಾಣುತ್ತಿದ್ದರು. ತಮ್ಮ ಸಂಬಳದ ಹಣ ಖರ್ಚು ಮಾಡಿ ಶಾಲೆಯ ಅಭಿವೃದ್ಧಿ ಮಾಡಿದ್ದರು. ಮಧ್ಯಾಹ್ನದ ಬಿಸಿಯೂಟದ ತರಕಾರಿಗೆ ತಾವೇ ಹಣ ನೀಡುತ್ತಿದ್ದರು. ಹೀಗಾಗಿ ತಮ್ಮ ಅಚ್ಚುಮೆಚ್ಚಿನ ಮೇಷ್ಟ್ರನ್ನು ಅಮಾನತಿನಲ್ಲಿ ಇರಿಸಿರುವ ಕ್ರಮವನ್ನು ಮಕ್ಕಳು ಪ್ರತಿಭಟಿಸಿದ್ದಾರೆ. ಕಳೆದ ಶುಕ್ರವಾರ ಶಾಲಾಮೈದಾನದಲ್ಲಿ ಸೇರಿದ್ದ ಮಕ್ಕಳು ಸಾಲುಗಳಲ್ಲಿ ನಿಂತು ಕೂಗಿದ ಘೋಷಣೆ- ದೇಶದ ರಕ್ಷಣೆ ಯಾರು ಮಾಡ್ತಾರೆ? ನಾವು ಮಾಡ್ತೇವೆ. ಹೇಗೆ ಮಾಡ್ತೇವೆ? ತನುವಿನಿಂದ ಮಾಡ್ತೇವೆ, ಮನಸಿನಿಂದ ಮಾಡ್ತೇವೆ, ಧನದಿಂದ ಮಾಡ್ತೇವೆ.

ಹತ್ತು ನಿಮಿಷ ಘೋಷಣೆ ಕೂಗಿ ಮನೆಯತ್ತ ಹೊರಟವು ಮಕ್ಕಳು. ತಮ್ಮ ಮೇಷ್ಟ್ರು ವಾಪಸು ಬರುವವರೆಗೆ ತಾವೂ ಶಾಲೆಗೆ ಬರುವುದಿಲ್ಲ ಎಂದವು. ಲಬ್ ಪೇ ಆತೀ ಹೈ ಗೀತೆಯನ್ನು ಹಾಡುವಂತೆ ಮತ್ತು ಹಾಡಿಸುವಂತೆ ನಾವೇ ಮೇಷ್ಟ್ರನ್ನ ಕೇಳಿಕೊಂಡೆವು. ದಿನ ಬಿಟ್ಟು ದಿನ ಹಾಡಲು ಅವರು ನಮಗೆ ಅನುಮತಿ ಕೊಟ್ಟರು ಎಂದು ಮಕ್ಕಳು ತಿಳಿಸಿವೆ. ಹಾಜರಾತಿ 150ರಿಂದ ಐದು ಹತ್ತಕ್ಕೆ ತಗ್ಗಿದೆ.

ತನ್ನ ತಪ್ಪಿನ ಅರಿವಾದಂತಿರುವ ಸರ್ಕಾರ ಬಿದ್ದರೂ ಮೀಸೆ ಮಣ್ಣಾಗದು ಎಂಬಂತೆ ಅಲಿಯ ಅಮಾನತನ್ನು ಮಾನವೀಯತೆಯ ಆಧಾರದ ಮೇಲೆ ರದ್ದು ಮಾಡಲಾಗಿದೆ ಎಂದಿದೆ. ಆದರೆ ಅವರನ್ನು ಬೇರೆ ಶಾಲೆಗೆ ವರ್ಗ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...