Homeನ್ಯಾಯ ಪಥ'ದೇಶವಿರೋಧಿ' ಪ್ರಕರಣ ಎಂಬ ನಾಚಿಕೆಗೇಡು! : ಡಿ.ಉಮಾಪತಿ

‘ದೇಶವಿರೋಧಿ’ ಪ್ರಕರಣ ಎಂಬ ನಾಚಿಕೆಗೇಡು! : ಡಿ.ಉಮಾಪತಿ

- Advertisement -
- Advertisement -

ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು,
ಬದುಕು ಬೆಳಗುವ ದೀಪದಂತಿರಲಿ ಹೇ ದೇವದೇವ
ಕಳೆದು ಹೋಗಲಿ ಇಳೆಯ ಕತ್ತಲೆ,
ಹೊಳೆದು ಬೆಳಗಲಿ ಎಲ್ಲ ತಾವುಗಳು
ನನ್ನ ಕಾಂತಿಯಿಂದ.
ಸುಮಕುಸುಮಗಳು ಉದ್ಯಾನವ ಸಿಂಗರಿಸಿದಂತೆ
ಸೊಗಸಿಬಿಡಲೇ ನಾನೆನ್ನ ತಾಯ್ನೆಲವ ತಬ್ಬಿ ಹಬ್ಬಿ..
ಎನ್ನ ಜೀವದುಸಿರು ನೀನಾಗು ಎಲೆ ದೇವ,
ತಿಳಿವಿನ ದೀಪಕ್ಕೆಳೆಸುವ ಪತಂಗ ನಾನು
ಎನ್ನ ಇರವಿನ ಧ್ಯೇಯವಾಗಿಸು,
ವೃದ್ಧರು ದುಃಖಿತರು, ದೀನದರಿದ್ರರ ಸೇವೆಯನು.
ಹಿಡಿದೆತ್ತು ಅಂತರ್ಯಾಮಿಯೇ ನನ್ನನು ಜಗದ ಕೇಡಿನಿಂದ
ಉದ್ಧರಿಸು ಮುನ್ನಡೆಸು ಸಚ್ಚಾರಿತ್ರ್ಯದೆಡೆಗೆ

ಈ ಗೀತೆಯನ್ನು ಓದಿ, ಇದರ ಉರ್ದು ಮೂಲದ ಗಾಯನವನ್ನು ಆಲಿಸಿದ ನನಗೆ ಆಚಾರ್ಯ ಬಿ.ಎಂ.ಶ್ರೀ. ಅವರ ಇಂಗ್ಲಿಷ್ ಗೀತಗಳು ಸಂಗ್ರಹದ ಪ್ರಸಿದ್ಧ ಪದ್ಯ ‘ಕರುಣಾಳು ಬಾ ಬೆಳಕೆ, ಮುಸುಕಿದೀ ಮಬ್ಬಿನಲಿ ಕೈ ಹಿಡಿದು ನಡೆಸೆನ್ನನು’ ನೆನಪಾಯಿತು. ಬಿ.ಎಂ.ಶ್ರೀ ಅವರ ಸೊಗಸಿನ ಅನುವಾದದ ಮಹಿಮೆ. ಮೂಲ ಕನ್ನಡದ್ದೇ ಎನ್ನುವಷ್ಟರಮಟ್ಟಿಗೆ ಈ ಗೀತೆ ಕನ್ನಡಿಗರಲ್ಲಿ ಜನಪ್ರಿಯ. ರತ್ನಮಾಲಾ ಪ್ರಕಾಶ್ ಅವರ ಸಿರಿಕಂಠದಲ್ಲಿ ಈ ಗೀತೆಯನ್ನು ಕೇಳಿ ಧ್ಯಾನಸ್ಥ ಸ್ಥಿತಿಗೆ ಜಾರದ ಮನಸುಗಳೇ ಇರಲಾರವು. ಇಂಗ್ಲೆಂಡಿನ ಕ್ರೈಸ್ತ ಸಂತ ಜಾನ್ ಹೆನ್ರಿ ನ್ಯೂಮನ್ 1833ರಲ್ಲಿ ರಚಿಸಿದ್ದ ಪ್ರಾರ್ಥನಾ ಗೀತೆಯಿದು ಎಂಬ ಸಂಗತಿ ಈಗಲೂ ಬಹಳಷ್ಟು ಜನಕ್ಕೆ ತಿಳಿದಿಲ್ಲ. ಭಾರತವೂ ಸೇರಿದಂತೆ ವಿಶ್ವದಾದ್ಯಂತ ಇಗರ್ಜಿಗಳಲ್ಲಿ ಇಂದಿಗೂ ಈ ಇಂಗ್ಲಿಷ್ ಗೀತೆಯನ್ನು ಹಾಡಲಾಗುತ್ತದೆ.

ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು… ಎಂಬ ಪದ್ಯದ ಉರ್ದು ಮೂಲ ಹೀಗಿದೆ-

‘ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ/ ಝಿಂದಗೀ ಶಂಮಾ ಕೀ ಸೂರತ್ ಹೋ ಖುದಾಯಾ ಮೇರೀ/ ದೂರ್ ದುನಿಯಾ ಕಾ ಮೇರೇ ದಮ್ ಸೇ ಅಂಧೇರಾ ಹೋ ಜಾಯೇ/ ಹರ್ ಜಗಾಹ ಮೇರೀ ಚಮಕನೇ ಸೇ ಉಜಾಲಾ ಹೋ ಜಾಯೇ/ ಹೋ ಮೇರೇ ದಮ್ ಸೇ ಯೂಂ ಹೀ ಮೇರೆ ವತನ್ ಕೀ ಝೀನತ್/ ಜಿಸ್ ತರಾಹ್ ಫೂಲ್ ಸೇ ಹೋತೀ ಹೈ ಚಮನ್ ಕೀ ಝೀನತ್/ ಝಿಂದಗೀ ಹೋ ಮೇರೀ ಪರವಾನೇ ಕೀ ಸೂರತ್ ಯಾರಬ್/ ಇಲ್ಮ್ ಕೀ ಶಂಮಾ ಸೇ ಹೋ ಮುಝಕೋ ಮೊಹೋಬ್ಬತ್ ಯಾರಬ್/ ಹೋ ಮೇರಾ ಕಾಮ್ ಗರೀಬೋಂ ಕೀ ಹಿಮಾಯತ್ ಕರನಾ/ ದರದಮಂದೋ ಸೇ ಝೀಂಫೋ ಸೇ ಮೊಹೊಬ್ಬತ್ ಕರನಾ/ ಮೇರೇ ಅಲ್ಲಾಹ ಬುರಾಯೀ ಸೇ ಬಚಾನಾ ಮುಝಕೋ/ ನೇಕ ಜೋ ರಾಹ ಉಸೀ ಪೆ ಚಲಾನಾ ಮುಝಕೋ/ ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ’

ಈ ಉರ್ದು ಗೀತೆಯನ್ನು ನನ್ನ ತಿಳಿವಳಿಕೆಗೆ ನಿಲುಕಿದ ಕನ್ನಡಕ್ಕೆ ತರ್ಜುಮೆ ಮಾಡಿ ಇಲ್ಲಿ ಓದುಗರ ಮುಂದೆ ಇರಿಸಿದ್ದೇನೆ. ಹೆಚ್ಚು ಬಲ್ಲವರು ಇನ್ನಷ್ಟು ಸೊಗಸಾಗಿ ಅನುವಾದ ಮಾಡಿಕೊಳ್ಳಬಹುದು.

ಈಗಲೂ ದೇಶದ ಲಕ್ಷಾಂತರ ಶಾಲೆಗಳಲ್ಲಿ ದಿನನಿತ್ಯ ಮತ್ತು ಸ್ವಾತಂತ್ರ್ಯೋತ್ಸವ ದಿನ ಹಾಗೂ ಗಣರಾಜ್ಯೋತ್ಸವದಂದು ಮೊಳಗುವ ಇನ್ನೊಂದು ಸುಂದರ ದೇಶಭಕ್ತಿ ಗೀತೆಯಿದೆ. ಅದು ‘ಸಾರೇ ಜಹಾಂ ಸೇ ಅಚ್ಛಾ ಹಿಂದೂಸ್ತಾನ ಹಮಾರಾ….’

ಈ ಗೀತೆಯ ಬರೆದ ಕವಿಯೇ ‘ಲಬ್ ಪೇ ಆತೀ ಹೈ ದುವಾ ಬನ್ ಕೇ ತಮನ್ನಾ ಮೇರೀ’ (ಹಂಬಲವೇ ಪ್ರಾರ್ಥನೆಯಾಗಿ ತುಟಿಗೆ ಬರುತಿಹುದು…’) ಎಂಬ ಗೀತೆಯನ್ನೂ ಬರೆದಿದ್ದಾನೆ.

ಆತನ ಹೆಸರು ಅಲ್ಲಾಮ ಇಕ್ಬಾಲ್. 1902ರಲ್ಲಿ ಈ ಗೀತೆಯನ್ನು ಆತ ಬರೆದಿದ್ದ. ಸಾರೇ ಜಹಾಂ ಸೇ ಅಚ್ಛಾ ಬರೆದದ್ದು ಎರಡು ವರ್ಷಗಳ ನಂತರ 1904ರಲ್ಲಿ. ಹಿಂದೂಸ್ತಾನಿ ಬಚ್ಚೋಂ ಕಾ ಖೋಮಿ ಗೀತ್ ನ್ನು ಬರೆದದ್ದು 1905ರಲ್ಲಿ. ಈ ಕಾಲಘಟ್ಟದಲ್ಲಿ ಆತ ಅಪ್ಪಟ ಭಾರತೀಯ ರಾಷ್ಟ್ರವಾದಿಯಾಗಿದ್ದ. ಆನಂತರ ಆತ ಪ್ರತ್ಯೇಕ ಪಾಕಿಸ್ತಾನ ಬೇಡಿಕೆಯ ಹೋರಾಟದ ಮುಂಚೂಣಿಯಲ್ಲಿದ್ದ ಮತ್ತು ಪಾಕಿಸ್ತಾನದ ರಾಷ್ಟ್ರಕವಿ ಎನಿಸಿಕೊಂಡದ್ದು ಹೌದು. ಆದರೆ ಲಬ್ ಪೇ ಆತೀ…ಗೀತೆಯಲ್ಲಿ ಬರುವ ‘ವತನ್’ (ಜನ್ಮಭೂಮಿ) ಪದವು ಭಾರತವನ್ನೇ ಉದ್ದೇಶಿಸಿದ್ದು ಎಂಬುದರಲ್ಲಿ ಯಾವ ಅನುಮಾನವೂ ಇಲ್ಲ. ನಾವು ಇಂದಿಗೂ ಮನದುಂಬಿ ಹಾಡುವ ಸಾರೇ ಜಹಾಂ ಸೇ ಅಚ್ಛಾ ಗೀತೆಯನ್ನು ಆತ ರಚಿಸಿದ್ದು ಲಬ್ ಪೇ ಆತೀ ಬರೆದ ಎರಡು ವರ್ಷಗಳ ನಂತರ ಎಂಬುದನ್ನು ಗಮನಿಸಬೇಕು.

ಯಾವ ಕೋನದಿಂದ ನೋಡಿದರೂ ಲಬ್ ಪೇ ಆತೀ ಹೈ ದುವಾ….ಧಾರ್ಮಿಕ ಗೀತೆ ಅಥವಾ ಮುಸ್ಲಿಂ ಪ್ರಾರ್ಥನೆ ಅಲ್ಲ. ಸಾರೇ ಜಹಾಂ ಸೇ ಅಚ್ಛಾ ಹಿಂದೂಸ್ತಾನ್ ಹಮಾರಾ…ಮುಸ್ಲಿಂ ಪ್ರಾರ್ಥನೆಯೆಂದು ಹೇಳುವುದು ಎಷ್ಟು ವಿಕೃತವೋ, ಲಬ್ ಪೇ ಆತೀ ಹೈ ದುವಾ…ಕ್ಕೆ ಮುಸ್ಲಿಂ ಪ್ರಾರ್ಥನೆಯ ಬಣ್ಣ ಹಚ್ಚುವುದೂ ಅಷ್ಟೇ ವಿಕೃತ ಆದೀತು.

ಇಷ್ಟೆಲ್ಲವನ್ನೂ ಇಲ್ಲಿ ಪ್ರಸ್ತಾಪಿಸಿದ ಹಿನ್ನೆಲೆ ಉತ್ತರಪ್ರದೇಶದ ಪೀಲೀಭೀತ್ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರೊಬ್ಬರ ಅಮಾನತು ಪ್ರಕರಣ. ಮುಖ್ಯೋಪಾಧ್ಯಾಯ ಫುರ್ಖಾನ್ ಅಲಿ ಅವರು ಶಾಲೆಯಲ್ಲಿ ಮದರಸಾದ ಪ್ರಾರ್ಥನೆಯನ್ನು ಮಕ್ಕಳಿಂದ ಹಾಡಿಸುತ್ತಿದ್ದಾರೆ ಎಂಬುದಾಗಿ ವಿಶ್ವಹಿಂದು ಪರಿಷತ್ ಆರೋಪ ಮಾಡಿತ್ತು. ಅಲಿ ಅವರಿಂದ ವಿವರಣೆಯನ್ನೂ ಪಡೆಯದೆ ಜಿಲ್ಲಾಡಳಿತ ಆತನನ್ನು ಅಕ್ಟೋಬರ್ 14ರಂದು ಅಮಾನತಿನಲ್ಲಿ ಇರಿಸಿತು. ಲಬ್ ಪೇ ಆತೀ ಹೈ ದುವಾ ಗೀತೆಯು ಮದರಸಾ ಪ್ರಾರ್ಥನೆ, ಅದನ್ನು ಹಾಡಿಸುವುದು ದೇಶವಿರೋಧದ ಕೃತ್ಯ ಎಂದು ವಿ.ಹಿಂ.ಪ. ದೂರು ನೀಡಿತ್ತು.

ಪೀಲೀಭೀತ್ ಜಿಲ್ಲೆಯ ಈ ಶಾಲೆಯ ಮಕ್ಕಳು ನಿತ್ಯವೂ ರಾಷ್ಟ್ರಗೀತೆಯನ್ನು ಹಾಡುತ್ತಿದ್ದಾರೆ ಮತ್ತು ಸರಸ್ವತಿ ವಂದನಾ ವನ್ನೂ ವಾಚಿಸುತ್ತಿದ್ದಾರೆ, ವೋ ಶಕ್ತಿ ಹಮೇಂ ದೋ ದಯಾನಿಧೀ ಗೀತೆಯನ್ನೂ ಹಾಡುತ್ತಿದ್ದಾರೆ.

ತಮ್ಮ ಮುಖ್ಯೋಪಾಧ್ಯಾಯರನ್ನು ಈ ಶಾಲೆಯ ಮಕ್ಕಳು ಬಹುವಾಗಿ ಪ್ರೀತಿಸುತ್ತಿದ್ದರು. ಯಾಕೆಂದರೆ ಆತನೂ ಮಕ್ಕಳನ್ನು ಅಕ್ಕರೆಯಿಂದ ಕಾಣುತ್ತಿದ್ದರು. ತಮ್ಮ ಸಂಬಳದ ಹಣ ಖರ್ಚು ಮಾಡಿ ಶಾಲೆಯ ಅಭಿವೃದ್ಧಿ ಮಾಡಿದ್ದರು. ಮಧ್ಯಾಹ್ನದ ಬಿಸಿಯೂಟದ ತರಕಾರಿಗೆ ತಾವೇ ಹಣ ನೀಡುತ್ತಿದ್ದರು. ಹೀಗಾಗಿ ತಮ್ಮ ಅಚ್ಚುಮೆಚ್ಚಿನ ಮೇಷ್ಟ್ರನ್ನು ಅಮಾನತಿನಲ್ಲಿ ಇರಿಸಿರುವ ಕ್ರಮವನ್ನು ಮಕ್ಕಳು ಪ್ರತಿಭಟಿಸಿದ್ದಾರೆ. ಕಳೆದ ಶುಕ್ರವಾರ ಶಾಲಾಮೈದಾನದಲ್ಲಿ ಸೇರಿದ್ದ ಮಕ್ಕಳು ಸಾಲುಗಳಲ್ಲಿ ನಿಂತು ಕೂಗಿದ ಘೋಷಣೆ- ದೇಶದ ರಕ್ಷಣೆ ಯಾರು ಮಾಡ್ತಾರೆ? ನಾವು ಮಾಡ್ತೇವೆ. ಹೇಗೆ ಮಾಡ್ತೇವೆ? ತನುವಿನಿಂದ ಮಾಡ್ತೇವೆ, ಮನಸಿನಿಂದ ಮಾಡ್ತೇವೆ, ಧನದಿಂದ ಮಾಡ್ತೇವೆ.

ಹತ್ತು ನಿಮಿಷ ಘೋಷಣೆ ಕೂಗಿ ಮನೆಯತ್ತ ಹೊರಟವು ಮಕ್ಕಳು. ತಮ್ಮ ಮೇಷ್ಟ್ರು ವಾಪಸು ಬರುವವರೆಗೆ ತಾವೂ ಶಾಲೆಗೆ ಬರುವುದಿಲ್ಲ ಎಂದವು. ಲಬ್ ಪೇ ಆತೀ ಹೈ ಗೀತೆಯನ್ನು ಹಾಡುವಂತೆ ಮತ್ತು ಹಾಡಿಸುವಂತೆ ನಾವೇ ಮೇಷ್ಟ್ರನ್ನ ಕೇಳಿಕೊಂಡೆವು. ದಿನ ಬಿಟ್ಟು ದಿನ ಹಾಡಲು ಅವರು ನಮಗೆ ಅನುಮತಿ ಕೊಟ್ಟರು ಎಂದು ಮಕ್ಕಳು ತಿಳಿಸಿವೆ. ಹಾಜರಾತಿ 150ರಿಂದ ಐದು ಹತ್ತಕ್ಕೆ ತಗ್ಗಿದೆ.

ತನ್ನ ತಪ್ಪಿನ ಅರಿವಾದಂತಿರುವ ಸರ್ಕಾರ ಬಿದ್ದರೂ ಮೀಸೆ ಮಣ್ಣಾಗದು ಎಂಬಂತೆ ಅಲಿಯ ಅಮಾನತನ್ನು ಮಾನವೀಯತೆಯ ಆಧಾರದ ಮೇಲೆ ರದ್ದು ಮಾಡಲಾಗಿದೆ ಎಂದಿದೆ. ಆದರೆ ಅವರನ್ನು ಬೇರೆ ಶಾಲೆಗೆ ವರ್ಗ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...