Homeಮುಖಪುಟಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ದೆಹಲಿ ಹೋರಾಟದ ಸುತ್ತ ಒಂದು ಸುತ್ತು

- Advertisement -
- Advertisement -

ರೈತ ಹೋರಾಟವು ಮುಖ್ಯವಾದ ಯಶಸ್ಸನ್ನು ಕಂಡಿದೆ. ಈ ಗೆಲುವಿನ ಹಿಂದೆ ರೈತರು ಮತ್ತು ಪ್ರತಿಯೊಬ್ಬ ಪಂಜಾಬಿಗರ ಪಾತ್ರವಿದೆ. ವಿಶೇಷವಾಗಿ, ಪಂಜಾಬ್‌ನ ಸಂಸ್ಕೃತಿ ಏನೆಂದರೆ, ಎಲ್ಲರೂ ಸುತ್ತಾ ಕೂತ್ಕೊಂಡು ಮಾತಾಡೋದು. ಹೀಗೆ ನಾಲ್ಕು ಜನರ ಮಧ್ಯೆ ಚರ್ಚೆಯಾಗುವ ವಿಚಾರ ಹತ್ತು ಜನರಿಗೆ, ನೂರು ಜನರಿಗೆ, ಸಾವಿರ ಜನರ ನಡುವೆ ವಿನಿಮಯ ಆಗುತ್ತದೆ. ಮಾತ್ರವಲ್ಲ, ಈ ರೀತಿಯ ಗುಂಪುಗಳಲ್ಲಿ ಒಬ್ಬ ಮಾತ್ರ ಒಂದು ವಿಚಾರ ಹೇಳಲ್ಲ, ಎಲ್ಲರೂ ಒಂದೊಂದು ರೀತಿಯ ವಿಚಾರ ಹೇಳುತ್ತಾರೆ. ಕೊರೊನಾ ವಿಚಾರದಲ್ಲೂ ಸರ್ಕಾರ ಒಂದು ಸೋಂಕಿನ ಸಮಯವನ್ನು ಬಳಸಿಕೊಂಡು, ರೈತರನ್ನ, ಕಾರ್ಮಿಕರನ್ನ ತುಳಿಯಲು ಮುಂದಾಗಿತ್ತು. ಅದನ್ನು ಪಂಜಾಬ್ ಜನರು ಅರ್ಥ ಮಾಡಿಕೊಂಡರು. ಹೀಗಾಗಿ, ಅವರೆಲ್ಲರೂ ಯಾವುದೇ ಸೋಂಕು ಇದ್ದರೂ ಪರವಾಗಿಲ್ಲ, ನಾವು ಕೋವಿಡ್‌ನಿಂದ ಬೇಕಿದ್ದರೂ ಸಾಯುತ್ತೇವೆ. ಆದರೆ, ಸರ್ಕಾರದ ದಮನದಿಂದ ಸಾಯುವುದಿಲ್ಲ ಎಂದು ರೈತರು ಗಟ್ಟಿ ನಿರ್ಧಾರ ತಳೆದರು. ಆ ನಿರ್ಧಾರದ ಗಟ್ಟಿತನ ಈ ಹೋರಾಟವನ್ನ ಒಂದು ವರ್ಷ ಎಳೆದು ತಂದಿದೆ. ಫ್ಯಾಸಿಸ್ಟ್ ಸರ್ಕಾರವನ್ನ ಮಣಿಸಿದೆ.

ಇದು ಸತ್ಯ ಮತ್ತು ಮಿಥ್ಯದ ನಡುವಿನ ಸಂಘರ್ಷ, ಆಳುವವರು ಮತ್ತು ದುಡಿಯುವವರ ನಡುವಿನ ಸಂಘರ್ಷ, ಬಂಡವಾಳಿಗರು ಮತ್ತು ಸ್ವಾಭಿಮಾನಿಗಳ ನಡುವಿನ ಸಂಘರ್ಷ… ಸತ್ಯದ ಪರವಾಗಿ ಹೋರಾಡುವುದು ನಮ್ಮ‌ ಹಕ್ಕು. ಆ ಹಕ್ಕಿನ ಬಗ್ಗೆ ಅರಿವು ಮೂಡಿಸುವ ಕೆಲಸವನ್ನ ರಾಜ್ಯದ ಕಲಾವಿದರು, ವ್ಯಂಗ್ಯಚಿತ್ರಕಾರರು, ಸಂಗೀತಗಾರರು, ಕತೆಗಾರರು ಮಾಡುತ್ತಲೇ ಇದ್ದಾರೆ.

ಇದನ್ನೂ ಓದಿ:ಸಂಸತ್‌ ಅಧಿವೇಶನ: ಅನ್ನದಾತರಿಗಾಗಿ ಸೂರ್ಯೋದಯ ಎಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ಒಂದು ಸಣ್ಣ ವ್ಯತ್ಯಾಸ ಏನಂದರೆ, ಪಂಜಾಬಿಗರಿಗೆ ಸಂಘರ್ಷ ಹೊಸದಲ್ಲ.. ಅದು ತಲೆಮಾರುಗಳಿಂದ ಪಂಜಾಬಿಗರಿಗೆ ರಕ್ತದಲ್ಲೇ ಬಂದಿದೆ. ಭಗತ್ ಸಿಂಗ್ ಅಜ್ಜ ಆರಂಭಿಸಿದ ಪಗಡಿ ಸಮಾಜ ಜಟ್ಟ ಹೋರಾಟ(ಸತತ ಒಂಬತ್ತು ತಿಂಗಳ ಕಾಲ ನಡೆಯಿತು)ದಿಂದ ಹಿಡಿದು, ಇಂದಿನವರೆಗೂ ಹೋರಾಟದ ಕಿಚ್ಚು ಪಂಜಾಬಿಗರ ದೇಹದ ನರ-ನಾಡಿಗಳಲ್ಲಿ ತುಂಬಿದೆ. ಲಾಂಗ್ ಲೀವ್ ರೆವಲೂಷನ್ ಎಂಬುದನ್ನು ನಾವು ನಿರಂತರವಾಗಿ ಪಾಲಿಸುತ್ತಾ ಬಂದಿದ್ದೇವೆ.

ಯಾವಾಗ, ರೈತರು ಮಾಡು ಇಲ್ಲವೇ ಮಡಿ ಎಂಬ ರೀತಿಯಲ್ಲಿ ಬೀದಿಗಿದ್ದಾರೆ ಎಂದು ಜನರಿಗೆ ಅರ್ಥವಾಗುತ್ತದೋ, ಆಗ ಇಡೀ ರಾಜ್ಯವೇ ರೈತರೊಂದಿಗೆ ನಿಲ್ಲತ್ತದೆ. ನಾವೂ ಎಣಿಸಿರಲಿಲ್ಲ ಈ ಹೋರಾಟ ಈ ಮಟ್ಟಿಗಿನ ಯಶಸ್ಸನ್ನು ಕಾಣುತ್ತದೆ ಎಂದು. ಅಲ್ಲದೆ, ಹರಿಯಾಣ ಕೂಡ ಈ ಮಟ್ಟಿಗೆ ಮುನ್ನುಗ್ಗಿ ಬರುತ್ತದೆ ಎಂದೂ ಗೊತ್ತಿರಲಿಲ್ಲ. ಹರಿಯಾಣಿಗರಿಗೆ ಅವರದ್ದೇ ಆದ ಸಾಕಷ್ಟು ಸಮಸ್ಯೆಗಳಿವೆ.

ಆದರೆ, ಅವರೂ ನಮ್ಮ ಜೊತೆಗೂಡಿದರು. ಸಾಕಷ್ಟು ಬೆಂಬಲ ನೀಡಿದರು. ಹಾಲು, ಗೂಧಿ ಹಿಟ್ಟು ಸೇರಿದಂತೆ ದಿನ ಬಳಕೆಯ ಸಾಮಗ್ರಿಗಳನ್ನು ಯತೇಚ್ಚವಾಗಿ ರೈತ ಹೋರಾಟಕ್ಕೆ ನೀಡಿದರು. ಹರಿಯಾಣ ಗಡಿಯಲ್ಲಿ ಹರಿಯಾಣದ ಜನರು ಜೊತೆಗೂಡದಿದ್ದರೆ, ಪಂಜಾಬಿಗರು ದೆಹಲಿ ತಲುಪುವುದಗಲೀ, ದೆಹಲಿ ಚಲೋ ಆಗಲೀ ಈ ಮಟ್ಟಿಗೆ ಯಶಸ್ವಿಯಾಗುತ್ತಿರಲಿಲ್ಲ. ಅವರು ಗಡಿಯಲ್ಲಿ ಪೊಲೀಸರನ್ನ ತಡೆದು ನಿಲ್ಲಿಸಿದ್ದೇ ಒಂದು ಮೈಲುಗಲ್ಲು, ಪಂಜಾಬ್-ಹರಿಯಾಣ ಅಣ್ಣ-ತಮ್ಮಂದಿರಿದ್ದಂತೆ. ಅವರು ಅಣ್ಣನಿಗೆ ಅಗತ್ಯದ ಸಮಯದಲ್ಲಿ ಜೊತೆಗೂಡಿದರು. ನಂತರ, ಉತ್ತರ ಪ್ರದೇಶ, ಬಿಹಾರ ಎಲ್ಲರೂ ಅದೇ ಕಿಚ್ವಿನೊಂದಿಗೆ ಸಾಥ್ ಕೊಟ್ಟರು.

ಇದನ್ನೂ ಓದಿ: ಬಿಜೆಪಿಯ ದುರಹಂಕಾರಕ್ಕಾಗಿಯು ರೈತ ಚಳುವಳಿ ನೆನಪಿನಲ್ಲಿ ಉಳಿಯುತ್ತದೆ: ಪ್ರಿಯಾಂಕಾ ಗಾಂಧಿ

ಪಂಜಾಬ್, ಹರಿಯಾಣ, ಯುಪಿ, ಬಿಹಾರಿ ಜನರಿಗೆ ಎಂಎಸ್‌ಪಿ ಬಗ್ಗೆ ಹೇಗೆ ತಿಳಿಸುವುದು ಎಂದು ಚಿಂತಿಸುವಾಗ ಯುಪಿ ಮತ್ತು ಬಿಹಾರದಲ್ಲಿ ರೈತರ ಮೇಲೆ ಅತಿ ಹೆಚ್ಚಾಗಿ ದಮನ-ಲೂಟಿ ನಡೆಯುತ್ತಿದೆ ಎಂದು ಅರ್ಥವಾಯಿತು. ಪಂಜಾಬ್, ಹರಿಯಾಣದಲ್ಲಿ ಒಂದು ಕ್ವಿಂಟಾಲ್ ಗೋಧಿಗೆ 1,900 ರೂ‌. ಕೊಟ್ಟರೆ, ಯುಪಿ ಮತ್ತು ಬಿಹಾರದಲ್ಲಿ ಕೇವಲ 900 ರೂ. ಕೊಡುತ್ತಿದ್ದಾರೆ. ಈ ಪ್ರಮಾಣದಲ್ಲಿ ಆ ಎರಡೂ ರಾಜ್ಯಗಳ ರೈತರನ್ನು ಲೂಟಿ ಮಾಡಲಾಗುತ್ತಿದೆ. ಎಲ್ಲಾ ಪಕ್ಷಗಳೂ ಅವರನ್ನ ಲೂಟಿ ಮಾಡಿವೆ, ಮಾಡುತ್ತಿವೆ.

ಇಷ್ಟು ದೊಡ್ಡ ಸಂಘರ್ಷ ಇಷ್ಟು ದಿನ ಮುಂದುವರೆಯುವುದರಲ್ಲಿ ಇಲ್ಲಿನ ನಾಯಕತ್ವದ ಪಾತ್ರ ತುಂಬಾ ಇದೆ. ನಮ್ಮ ಶತ್ರು ಯಾರು ಎಂದು ಗುರುತಿಸಿ, ಆ ಶತ್ರುಗಳು ಯಾವ ರೀತಿಯಲ್ಲಿ ಸುಲಿಗೆ ಮಾಡಲು ಮುಂದಾಗಿದ್ದಾರೆ ಎಂದು ಜನರಿಗೆ ತಿಳಿಸುವಲ್ಲಿ ಅವರ ಪಾತ್ರ ಭಾರೀ ಇದೆ. ಇಲ್ಲಿನ ಹೋರಾಟಗಳನ್ನು ಒಡೆದು, ಸಧೆ ಬಡಿಯುವುದು ಸರ್ಕಾರಗಳ ಮೊದಲ ಅಜೆಂಡಾ ಆಗಿರುತ್ತದೆ. ಅಂತಹ ಹುನ್ನಾರಕ್ಕೆ ಈ ಹೋರಾಟ ಬಲಿಯಾಗದಂತೆ ಮುನ್ನಡೆಸುವಲ್ಲಿ ರೈತ ನಾಯಕತ್ವ ಸಾಕಷ್ಟು ಶ್ರಮಿಸಿದೆ. ಈ ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ. ನಮ್ಮ ಮುಂದಿರುವ ಶತ್ರು ಈಗ ಹಿಂದೆ ಸರಿದಿರಬಹುದು, ಆದರೆ ಅವರು ಸಂಪೂರ್ಣವಾಗಿ ಹಿಂದೆ ಹೋಗುವುದಿಲ್ಲ. ಅವರನ್ನು ಮಣಿಸಲು ನಮ್ಮ ಹೋರಾಟ ಮುನ್ನಡೆಯುತ್ತಲೇ ಇರಬೇಕು. ಅಲ್ಲದೆ, ಭಾರತ WTO (ವಿಶ್ವ ವಾಣಿಜ್ಯ ಸಂಸ್ಥೆ), LPG (ಉದಾರೀಕರಣ, ಖಾಸಗೀಕರಣ, ಜಾಗತೀಕರಣ)ಯಿಂದ ಹೊರಬರಬೇಕು. ಅದೇ ನಮ್ಮ ಹೋರಟ ಮುಂದಿನ ಗುರಿ…ಈ ಗುರಿಯನ್ನು ಜಯಿಸಿದರೆ, ಭಾರತ ಗೆಲ್ಲುತ್ತದೆ.

  • ~ಸುರೀಂದರ್ ಸಿಂಗ್
    ಬಿಕೆಯು ಡೆಕೌಂದ (ಭಾರತ್ ಕಿಸಾನ್ ಯೂನಿಯನ್)

ಇದನ್ನೂ ಓದಿ: ರೈತರ ಆತ್ಮಹತ್ಯೆ: ವಾಸ್ತವದಿಂದ ದೂರವಿರುವ ಸರಕಾರದ ವರದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...