Homeಮುಖಪುಟಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ದೆಹಲಿ ಹೋರಾಟದ ಸುತ್ತ ಒಂದು ಸುತ್ತು

- Advertisement -
- Advertisement -

ರೈತ ಹೋರಾಟವು ಮುಖ್ಯವಾದ ಯಶಸ್ಸನ್ನು ಕಂಡಿದೆ. ಈ ಗೆಲುವಿನ ಹಿಂದೆ ರೈತರು ಮತ್ತು ಪ್ರತಿಯೊಬ್ಬ ಪಂಜಾಬಿಗರ ಪಾತ್ರವಿದೆ. ವಿಶೇಷವಾಗಿ, ಪಂಜಾಬ್‌ನ ಸಂಸ್ಕೃತಿ ಏನೆಂದರೆ, ಎಲ್ಲರೂ ಸುತ್ತಾ ಕೂತ್ಕೊಂಡು ಮಾತಾಡೋದು. ಹೀಗೆ ನಾಲ್ಕು ಜನರ ಮಧ್ಯೆ ಚರ್ಚೆಯಾಗುವ ವಿಚಾರ ಹತ್ತು ಜನರಿಗೆ, ನೂರು ಜನರಿಗೆ, ಸಾವಿರ ಜನರ ನಡುವೆ ವಿನಿಮಯ ಆಗುತ್ತದೆ. ಮಾತ್ರವಲ್ಲ, ಈ ರೀತಿಯ ಗುಂಪುಗಳಲ್ಲಿ ಒಬ್ಬ ಮಾತ್ರ ಒಂದು ವಿಚಾರ ಹೇಳಲ್ಲ, ಎಲ್ಲರೂ ಒಂದೊಂದು ರೀತಿಯ ವಿಚಾರ ಹೇಳುತ್ತಾರೆ. ಕೊರೊನಾ ವಿಚಾರದಲ್ಲೂ ಸರ್ಕಾರ ಒಂದು ಸೋಂಕಿನ ಸಮಯವನ್ನು ಬಳಸಿಕೊಂಡು, ರೈತರನ್ನ, ಕಾರ್ಮಿಕರನ್ನ ತುಳಿಯಲು ಮುಂದಾಗಿತ್ತು. ಅದನ್ನು ಪಂಜಾಬ್ ಜನರು ಅರ್ಥ ಮಾಡಿಕೊಂಡರು. ಹೀಗಾಗಿ, ಅವರೆಲ್ಲರೂ ಯಾವುದೇ ಸೋಂಕು ಇದ್ದರೂ ಪರವಾಗಿಲ್ಲ, ನಾವು ಕೋವಿಡ್‌ನಿಂದ ಬೇಕಿದ್ದರೂ ಸಾಯುತ್ತೇವೆ. ಆದರೆ, ಸರ್ಕಾರದ ದಮನದಿಂದ ಸಾಯುವುದಿಲ್ಲ ಎಂದು ರೈತರು ಗಟ್ಟಿ ನಿರ್ಧಾರ ತಳೆದರು. ಆ ನಿರ್ಧಾರದ ಗಟ್ಟಿತನ ಈ ಹೋರಾಟವನ್ನ ಒಂದು ವರ್ಷ ಎಳೆದು ತಂದಿದೆ. ಫ್ಯಾಸಿಸ್ಟ್ ಸರ್ಕಾರವನ್ನ ಮಣಿಸಿದೆ.

ಇದು ಸತ್ಯ ಮತ್ತು ಮಿಥ್ಯದ ನಡುವಿನ ಸಂಘರ್ಷ, ಆಳುವವರು ಮತ್ತು ದುಡಿಯುವವರ ನಡುವಿನ ಸಂಘರ್ಷ, ಬಂಡವಾಳಿಗರು ಮತ್ತು ಸ್ವಾಭಿಮಾನಿಗಳ ನಡುವಿನ ಸಂಘರ್ಷ… ಸತ್ಯದ ಪರವಾಗಿ ಹೋರಾಡುವುದು ನಮ್ಮ‌ ಹಕ್ಕು. ಆ ಹಕ್ಕಿನ ಬಗ್ಗೆ ಅರಿವು ಮೂಡಿಸುವ ಕೆಲಸವನ್ನ ರಾಜ್ಯದ ಕಲಾವಿದರು, ವ್ಯಂಗ್ಯಚಿತ್ರಕಾರರು, ಸಂಗೀತಗಾರರು, ಕತೆಗಾರರು ಮಾಡುತ್ತಲೇ ಇದ್ದಾರೆ.

ಇದನ್ನೂ ಓದಿ:ಸಂಸತ್‌ ಅಧಿವೇಶನ: ಅನ್ನದಾತರಿಗಾಗಿ ಸೂರ್ಯೋದಯ ಎಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ಒಂದು ಸಣ್ಣ ವ್ಯತ್ಯಾಸ ಏನಂದರೆ, ಪಂಜಾಬಿಗರಿಗೆ ಸಂಘರ್ಷ ಹೊಸದಲ್ಲ.. ಅದು ತಲೆಮಾರುಗಳಿಂದ ಪಂಜಾಬಿಗರಿಗೆ ರಕ್ತದಲ್ಲೇ ಬಂದಿದೆ. ಭಗತ್ ಸಿಂಗ್ ಅಜ್ಜ ಆರಂಭಿಸಿದ ಪಗಡಿ ಸಮಾಜ ಜಟ್ಟ ಹೋರಾಟ(ಸತತ ಒಂಬತ್ತು ತಿಂಗಳ ಕಾಲ ನಡೆಯಿತು)ದಿಂದ ಹಿಡಿದು, ಇಂದಿನವರೆಗೂ ಹೋರಾಟದ ಕಿಚ್ಚು ಪಂಜಾಬಿಗರ ದೇಹದ ನರ-ನಾಡಿಗಳಲ್ಲಿ ತುಂಬಿದೆ. ಲಾಂಗ್ ಲೀವ್ ರೆವಲೂಷನ್ ಎಂಬುದನ್ನು ನಾವು ನಿರಂತರವಾಗಿ ಪಾಲಿಸುತ್ತಾ ಬಂದಿದ್ದೇವೆ.

ಯಾವಾಗ, ರೈತರು ಮಾಡು ಇಲ್ಲವೇ ಮಡಿ ಎಂಬ ರೀತಿಯಲ್ಲಿ ಬೀದಿಗಿದ್ದಾರೆ ಎಂದು ಜನರಿಗೆ ಅರ್ಥವಾಗುತ್ತದೋ, ಆಗ ಇಡೀ ರಾಜ್ಯವೇ ರೈತರೊಂದಿಗೆ ನಿಲ್ಲತ್ತದೆ. ನಾವೂ ಎಣಿಸಿರಲಿಲ್ಲ ಈ ಹೋರಾಟ ಈ ಮಟ್ಟಿಗಿನ ಯಶಸ್ಸನ್ನು ಕಾಣುತ್ತದೆ ಎಂದು. ಅಲ್ಲದೆ, ಹರಿಯಾಣ ಕೂಡ ಈ ಮಟ್ಟಿಗೆ ಮುನ್ನುಗ್ಗಿ ಬರುತ್ತದೆ ಎಂದೂ ಗೊತ್ತಿರಲಿಲ್ಲ. ಹರಿಯಾಣಿಗರಿಗೆ ಅವರದ್ದೇ ಆದ ಸಾಕಷ್ಟು ಸಮಸ್ಯೆಗಳಿವೆ.

ಆದರೆ, ಅವರೂ ನಮ್ಮ ಜೊತೆಗೂಡಿದರು. ಸಾಕಷ್ಟು ಬೆಂಬಲ ನೀಡಿದರು. ಹಾಲು, ಗೂಧಿ ಹಿಟ್ಟು ಸೇರಿದಂತೆ ದಿನ ಬಳಕೆಯ ಸಾಮಗ್ರಿಗಳನ್ನು ಯತೇಚ್ಚವಾಗಿ ರೈತ ಹೋರಾಟಕ್ಕೆ ನೀಡಿದರು. ಹರಿಯಾಣ ಗಡಿಯಲ್ಲಿ ಹರಿಯಾಣದ ಜನರು ಜೊತೆಗೂಡದಿದ್ದರೆ, ಪಂಜಾಬಿಗರು ದೆಹಲಿ ತಲುಪುವುದಗಲೀ, ದೆಹಲಿ ಚಲೋ ಆಗಲೀ ಈ ಮಟ್ಟಿಗೆ ಯಶಸ್ವಿಯಾಗುತ್ತಿರಲಿಲ್ಲ. ಅವರು ಗಡಿಯಲ್ಲಿ ಪೊಲೀಸರನ್ನ ತಡೆದು ನಿಲ್ಲಿಸಿದ್ದೇ ಒಂದು ಮೈಲುಗಲ್ಲು, ಪಂಜಾಬ್-ಹರಿಯಾಣ ಅಣ್ಣ-ತಮ್ಮಂದಿರಿದ್ದಂತೆ. ಅವರು ಅಣ್ಣನಿಗೆ ಅಗತ್ಯದ ಸಮಯದಲ್ಲಿ ಜೊತೆಗೂಡಿದರು. ನಂತರ, ಉತ್ತರ ಪ್ರದೇಶ, ಬಿಹಾರ ಎಲ್ಲರೂ ಅದೇ ಕಿಚ್ವಿನೊಂದಿಗೆ ಸಾಥ್ ಕೊಟ್ಟರು.

ಇದನ್ನೂ ಓದಿ: ಬಿಜೆಪಿಯ ದುರಹಂಕಾರಕ್ಕಾಗಿಯು ರೈತ ಚಳುವಳಿ ನೆನಪಿನಲ್ಲಿ ಉಳಿಯುತ್ತದೆ: ಪ್ರಿಯಾಂಕಾ ಗಾಂಧಿ

ಪಂಜಾಬ್, ಹರಿಯಾಣ, ಯುಪಿ, ಬಿಹಾರಿ ಜನರಿಗೆ ಎಂಎಸ್‌ಪಿ ಬಗ್ಗೆ ಹೇಗೆ ತಿಳಿಸುವುದು ಎಂದು ಚಿಂತಿಸುವಾಗ ಯುಪಿ ಮತ್ತು ಬಿಹಾರದಲ್ಲಿ ರೈತರ ಮೇಲೆ ಅತಿ ಹೆಚ್ಚಾಗಿ ದಮನ-ಲೂಟಿ ನಡೆಯುತ್ತಿದೆ ಎಂದು ಅರ್ಥವಾಯಿತು. ಪಂಜಾಬ್, ಹರಿಯಾಣದಲ್ಲಿ ಒಂದು ಕ್ವಿಂಟಾಲ್ ಗೋಧಿಗೆ 1,900 ರೂ‌. ಕೊಟ್ಟರೆ, ಯುಪಿ ಮತ್ತು ಬಿಹಾರದಲ್ಲಿ ಕೇವಲ 900 ರೂ. ಕೊಡುತ್ತಿದ್ದಾರೆ. ಈ ಪ್ರಮಾಣದಲ್ಲಿ ಆ ಎರಡೂ ರಾಜ್ಯಗಳ ರೈತರನ್ನು ಲೂಟಿ ಮಾಡಲಾಗುತ್ತಿದೆ. ಎಲ್ಲಾ ಪಕ್ಷಗಳೂ ಅವರನ್ನ ಲೂಟಿ ಮಾಡಿವೆ, ಮಾಡುತ್ತಿವೆ.

ಇಷ್ಟು ದೊಡ್ಡ ಸಂಘರ್ಷ ಇಷ್ಟು ದಿನ ಮುಂದುವರೆಯುವುದರಲ್ಲಿ ಇಲ್ಲಿನ ನಾಯಕತ್ವದ ಪಾತ್ರ ತುಂಬಾ ಇದೆ. ನಮ್ಮ ಶತ್ರು ಯಾರು ಎಂದು ಗುರುತಿಸಿ, ಆ ಶತ್ರುಗಳು ಯಾವ ರೀತಿಯಲ್ಲಿ ಸುಲಿಗೆ ಮಾಡಲು ಮುಂದಾಗಿದ್ದಾರೆ ಎಂದು ಜನರಿಗೆ ತಿಳಿಸುವಲ್ಲಿ ಅವರ ಪಾತ್ರ ಭಾರೀ ಇದೆ. ಇಲ್ಲಿನ ಹೋರಾಟಗಳನ್ನು ಒಡೆದು, ಸಧೆ ಬಡಿಯುವುದು ಸರ್ಕಾರಗಳ ಮೊದಲ ಅಜೆಂಡಾ ಆಗಿರುತ್ತದೆ. ಅಂತಹ ಹುನ್ನಾರಕ್ಕೆ ಈ ಹೋರಾಟ ಬಲಿಯಾಗದಂತೆ ಮುನ್ನಡೆಸುವಲ್ಲಿ ರೈತ ನಾಯಕತ್ವ ಸಾಕಷ್ಟು ಶ್ರಮಿಸಿದೆ. ಈ ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ. ನಮ್ಮ ಮುಂದಿರುವ ಶತ್ರು ಈಗ ಹಿಂದೆ ಸರಿದಿರಬಹುದು, ಆದರೆ ಅವರು ಸಂಪೂರ್ಣವಾಗಿ ಹಿಂದೆ ಹೋಗುವುದಿಲ್ಲ. ಅವರನ್ನು ಮಣಿಸಲು ನಮ್ಮ ಹೋರಾಟ ಮುನ್ನಡೆಯುತ್ತಲೇ ಇರಬೇಕು. ಅಲ್ಲದೆ, ಭಾರತ WTO (ವಿಶ್ವ ವಾಣಿಜ್ಯ ಸಂಸ್ಥೆ), LPG (ಉದಾರೀಕರಣ, ಖಾಸಗೀಕರಣ, ಜಾಗತೀಕರಣ)ಯಿಂದ ಹೊರಬರಬೇಕು. ಅದೇ ನಮ್ಮ ಹೋರಟ ಮುಂದಿನ ಗುರಿ…ಈ ಗುರಿಯನ್ನು ಜಯಿಸಿದರೆ, ಭಾರತ ಗೆಲ್ಲುತ್ತದೆ.

  • ~ಸುರೀಂದರ್ ಸಿಂಗ್
    ಬಿಕೆಯು ಡೆಕೌಂದ (ಭಾರತ್ ಕಿಸಾನ್ ಯೂನಿಯನ್)

ಇದನ್ನೂ ಓದಿ: ರೈತರ ಆತ್ಮಹತ್ಯೆ: ವಾಸ್ತವದಿಂದ ದೂರವಿರುವ ಸರಕಾರದ ವರದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...