Homeಮುಖಪುಟಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ದೆಹಲಿ ಹೋರಾಟದ ಸುತ್ತ ಒಂದು ಸುತ್ತು

- Advertisement -
- Advertisement -

ರೈತ ಹೋರಾಟವು ಮುಖ್ಯವಾದ ಯಶಸ್ಸನ್ನು ಕಂಡಿದೆ. ಈ ಗೆಲುವಿನ ಹಿಂದೆ ರೈತರು ಮತ್ತು ಪ್ರತಿಯೊಬ್ಬ ಪಂಜಾಬಿಗರ ಪಾತ್ರವಿದೆ. ವಿಶೇಷವಾಗಿ, ಪಂಜಾಬ್‌ನ ಸಂಸ್ಕೃತಿ ಏನೆಂದರೆ, ಎಲ್ಲರೂ ಸುತ್ತಾ ಕೂತ್ಕೊಂಡು ಮಾತಾಡೋದು. ಹೀಗೆ ನಾಲ್ಕು ಜನರ ಮಧ್ಯೆ ಚರ್ಚೆಯಾಗುವ ವಿಚಾರ ಹತ್ತು ಜನರಿಗೆ, ನೂರು ಜನರಿಗೆ, ಸಾವಿರ ಜನರ ನಡುವೆ ವಿನಿಮಯ ಆಗುತ್ತದೆ. ಮಾತ್ರವಲ್ಲ, ಈ ರೀತಿಯ ಗುಂಪುಗಳಲ್ಲಿ ಒಬ್ಬ ಮಾತ್ರ ಒಂದು ವಿಚಾರ ಹೇಳಲ್ಲ, ಎಲ್ಲರೂ ಒಂದೊಂದು ರೀತಿಯ ವಿಚಾರ ಹೇಳುತ್ತಾರೆ. ಕೊರೊನಾ ವಿಚಾರದಲ್ಲೂ ಸರ್ಕಾರ ಒಂದು ಸೋಂಕಿನ ಸಮಯವನ್ನು ಬಳಸಿಕೊಂಡು, ರೈತರನ್ನ, ಕಾರ್ಮಿಕರನ್ನ ತುಳಿಯಲು ಮುಂದಾಗಿತ್ತು. ಅದನ್ನು ಪಂಜಾಬ್ ಜನರು ಅರ್ಥ ಮಾಡಿಕೊಂಡರು. ಹೀಗಾಗಿ, ಅವರೆಲ್ಲರೂ ಯಾವುದೇ ಸೋಂಕು ಇದ್ದರೂ ಪರವಾಗಿಲ್ಲ, ನಾವು ಕೋವಿಡ್‌ನಿಂದ ಬೇಕಿದ್ದರೂ ಸಾಯುತ್ತೇವೆ. ಆದರೆ, ಸರ್ಕಾರದ ದಮನದಿಂದ ಸಾಯುವುದಿಲ್ಲ ಎಂದು ರೈತರು ಗಟ್ಟಿ ನಿರ್ಧಾರ ತಳೆದರು. ಆ ನಿರ್ಧಾರದ ಗಟ್ಟಿತನ ಈ ಹೋರಾಟವನ್ನ ಒಂದು ವರ್ಷ ಎಳೆದು ತಂದಿದೆ. ಫ್ಯಾಸಿಸ್ಟ್ ಸರ್ಕಾರವನ್ನ ಮಣಿಸಿದೆ.

ಇದು ಸತ್ಯ ಮತ್ತು ಮಿಥ್ಯದ ನಡುವಿನ ಸಂಘರ್ಷ, ಆಳುವವರು ಮತ್ತು ದುಡಿಯುವವರ ನಡುವಿನ ಸಂಘರ್ಷ, ಬಂಡವಾಳಿಗರು ಮತ್ತು ಸ್ವಾಭಿಮಾನಿಗಳ ನಡುವಿನ ಸಂಘರ್ಷ… ಸತ್ಯದ ಪರವಾಗಿ ಹೋರಾಡುವುದು ನಮ್ಮ‌ ಹಕ್ಕು. ಆ ಹಕ್ಕಿನ ಬಗ್ಗೆ ಅರಿವು ಮೂಡಿಸುವ ಕೆಲಸವನ್ನ ರಾಜ್ಯದ ಕಲಾವಿದರು, ವ್ಯಂಗ್ಯಚಿತ್ರಕಾರರು, ಸಂಗೀತಗಾರರು, ಕತೆಗಾರರು ಮಾಡುತ್ತಲೇ ಇದ್ದಾರೆ.

ಇದನ್ನೂ ಓದಿ:ಸಂಸತ್‌ ಅಧಿವೇಶನ: ಅನ್ನದಾತರಿಗಾಗಿ ಸೂರ್ಯೋದಯ ಎಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ಒಂದು ಸಣ್ಣ ವ್ಯತ್ಯಾಸ ಏನಂದರೆ, ಪಂಜಾಬಿಗರಿಗೆ ಸಂಘರ್ಷ ಹೊಸದಲ್ಲ.. ಅದು ತಲೆಮಾರುಗಳಿಂದ ಪಂಜಾಬಿಗರಿಗೆ ರಕ್ತದಲ್ಲೇ ಬಂದಿದೆ. ಭಗತ್ ಸಿಂಗ್ ಅಜ್ಜ ಆರಂಭಿಸಿದ ಪಗಡಿ ಸಮಾಜ ಜಟ್ಟ ಹೋರಾಟ(ಸತತ ಒಂಬತ್ತು ತಿಂಗಳ ಕಾಲ ನಡೆಯಿತು)ದಿಂದ ಹಿಡಿದು, ಇಂದಿನವರೆಗೂ ಹೋರಾಟದ ಕಿಚ್ಚು ಪಂಜಾಬಿಗರ ದೇಹದ ನರ-ನಾಡಿಗಳಲ್ಲಿ ತುಂಬಿದೆ. ಲಾಂಗ್ ಲೀವ್ ರೆವಲೂಷನ್ ಎಂಬುದನ್ನು ನಾವು ನಿರಂತರವಾಗಿ ಪಾಲಿಸುತ್ತಾ ಬಂದಿದ್ದೇವೆ.

ಯಾವಾಗ, ರೈತರು ಮಾಡು ಇಲ್ಲವೇ ಮಡಿ ಎಂಬ ರೀತಿಯಲ್ಲಿ ಬೀದಿಗಿದ್ದಾರೆ ಎಂದು ಜನರಿಗೆ ಅರ್ಥವಾಗುತ್ತದೋ, ಆಗ ಇಡೀ ರಾಜ್ಯವೇ ರೈತರೊಂದಿಗೆ ನಿಲ್ಲತ್ತದೆ. ನಾವೂ ಎಣಿಸಿರಲಿಲ್ಲ ಈ ಹೋರಾಟ ಈ ಮಟ್ಟಿಗಿನ ಯಶಸ್ಸನ್ನು ಕಾಣುತ್ತದೆ ಎಂದು. ಅಲ್ಲದೆ, ಹರಿಯಾಣ ಕೂಡ ಈ ಮಟ್ಟಿಗೆ ಮುನ್ನುಗ್ಗಿ ಬರುತ್ತದೆ ಎಂದೂ ಗೊತ್ತಿರಲಿಲ್ಲ. ಹರಿಯಾಣಿಗರಿಗೆ ಅವರದ್ದೇ ಆದ ಸಾಕಷ್ಟು ಸಮಸ್ಯೆಗಳಿವೆ.

ಆದರೆ, ಅವರೂ ನಮ್ಮ ಜೊತೆಗೂಡಿದರು. ಸಾಕಷ್ಟು ಬೆಂಬಲ ನೀಡಿದರು. ಹಾಲು, ಗೂಧಿ ಹಿಟ್ಟು ಸೇರಿದಂತೆ ದಿನ ಬಳಕೆಯ ಸಾಮಗ್ರಿಗಳನ್ನು ಯತೇಚ್ಚವಾಗಿ ರೈತ ಹೋರಾಟಕ್ಕೆ ನೀಡಿದರು. ಹರಿಯಾಣ ಗಡಿಯಲ್ಲಿ ಹರಿಯಾಣದ ಜನರು ಜೊತೆಗೂಡದಿದ್ದರೆ, ಪಂಜಾಬಿಗರು ದೆಹಲಿ ತಲುಪುವುದಗಲೀ, ದೆಹಲಿ ಚಲೋ ಆಗಲೀ ಈ ಮಟ್ಟಿಗೆ ಯಶಸ್ವಿಯಾಗುತ್ತಿರಲಿಲ್ಲ. ಅವರು ಗಡಿಯಲ್ಲಿ ಪೊಲೀಸರನ್ನ ತಡೆದು ನಿಲ್ಲಿಸಿದ್ದೇ ಒಂದು ಮೈಲುಗಲ್ಲು, ಪಂಜಾಬ್-ಹರಿಯಾಣ ಅಣ್ಣ-ತಮ್ಮಂದಿರಿದ್ದಂತೆ. ಅವರು ಅಣ್ಣನಿಗೆ ಅಗತ್ಯದ ಸಮಯದಲ್ಲಿ ಜೊತೆಗೂಡಿದರು. ನಂತರ, ಉತ್ತರ ಪ್ರದೇಶ, ಬಿಹಾರ ಎಲ್ಲರೂ ಅದೇ ಕಿಚ್ವಿನೊಂದಿಗೆ ಸಾಥ್ ಕೊಟ್ಟರು.

ಇದನ್ನೂ ಓದಿ: ಬಿಜೆಪಿಯ ದುರಹಂಕಾರಕ್ಕಾಗಿಯು ರೈತ ಚಳುವಳಿ ನೆನಪಿನಲ್ಲಿ ಉಳಿಯುತ್ತದೆ: ಪ್ರಿಯಾಂಕಾ ಗಾಂಧಿ

ಪಂಜಾಬ್, ಹರಿಯಾಣ, ಯುಪಿ, ಬಿಹಾರಿ ಜನರಿಗೆ ಎಂಎಸ್‌ಪಿ ಬಗ್ಗೆ ಹೇಗೆ ತಿಳಿಸುವುದು ಎಂದು ಚಿಂತಿಸುವಾಗ ಯುಪಿ ಮತ್ತು ಬಿಹಾರದಲ್ಲಿ ರೈತರ ಮೇಲೆ ಅತಿ ಹೆಚ್ಚಾಗಿ ದಮನ-ಲೂಟಿ ನಡೆಯುತ್ತಿದೆ ಎಂದು ಅರ್ಥವಾಯಿತು. ಪಂಜಾಬ್, ಹರಿಯಾಣದಲ್ಲಿ ಒಂದು ಕ್ವಿಂಟಾಲ್ ಗೋಧಿಗೆ 1,900 ರೂ‌. ಕೊಟ್ಟರೆ, ಯುಪಿ ಮತ್ತು ಬಿಹಾರದಲ್ಲಿ ಕೇವಲ 900 ರೂ. ಕೊಡುತ್ತಿದ್ದಾರೆ. ಈ ಪ್ರಮಾಣದಲ್ಲಿ ಆ ಎರಡೂ ರಾಜ್ಯಗಳ ರೈತರನ್ನು ಲೂಟಿ ಮಾಡಲಾಗುತ್ತಿದೆ. ಎಲ್ಲಾ ಪಕ್ಷಗಳೂ ಅವರನ್ನ ಲೂಟಿ ಮಾಡಿವೆ, ಮಾಡುತ್ತಿವೆ.

ಇಷ್ಟು ದೊಡ್ಡ ಸಂಘರ್ಷ ಇಷ್ಟು ದಿನ ಮುಂದುವರೆಯುವುದರಲ್ಲಿ ಇಲ್ಲಿನ ನಾಯಕತ್ವದ ಪಾತ್ರ ತುಂಬಾ ಇದೆ. ನಮ್ಮ ಶತ್ರು ಯಾರು ಎಂದು ಗುರುತಿಸಿ, ಆ ಶತ್ರುಗಳು ಯಾವ ರೀತಿಯಲ್ಲಿ ಸುಲಿಗೆ ಮಾಡಲು ಮುಂದಾಗಿದ್ದಾರೆ ಎಂದು ಜನರಿಗೆ ತಿಳಿಸುವಲ್ಲಿ ಅವರ ಪಾತ್ರ ಭಾರೀ ಇದೆ. ಇಲ್ಲಿನ ಹೋರಾಟಗಳನ್ನು ಒಡೆದು, ಸಧೆ ಬಡಿಯುವುದು ಸರ್ಕಾರಗಳ ಮೊದಲ ಅಜೆಂಡಾ ಆಗಿರುತ್ತದೆ. ಅಂತಹ ಹುನ್ನಾರಕ್ಕೆ ಈ ಹೋರಾಟ ಬಲಿಯಾಗದಂತೆ ಮುನ್ನಡೆಸುವಲ್ಲಿ ರೈತ ನಾಯಕತ್ವ ಸಾಕಷ್ಟು ಶ್ರಮಿಸಿದೆ. ಈ ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ. ನಮ್ಮ ಮುಂದಿರುವ ಶತ್ರು ಈಗ ಹಿಂದೆ ಸರಿದಿರಬಹುದು, ಆದರೆ ಅವರು ಸಂಪೂರ್ಣವಾಗಿ ಹಿಂದೆ ಹೋಗುವುದಿಲ್ಲ. ಅವರನ್ನು ಮಣಿಸಲು ನಮ್ಮ ಹೋರಾಟ ಮುನ್ನಡೆಯುತ್ತಲೇ ಇರಬೇಕು. ಅಲ್ಲದೆ, ಭಾರತ WTO (ವಿಶ್ವ ವಾಣಿಜ್ಯ ಸಂಸ್ಥೆ), LPG (ಉದಾರೀಕರಣ, ಖಾಸಗೀಕರಣ, ಜಾಗತೀಕರಣ)ಯಿಂದ ಹೊರಬರಬೇಕು. ಅದೇ ನಮ್ಮ ಹೋರಟ ಮುಂದಿನ ಗುರಿ…ಈ ಗುರಿಯನ್ನು ಜಯಿಸಿದರೆ, ಭಾರತ ಗೆಲ್ಲುತ್ತದೆ.

  • ~ಸುರೀಂದರ್ ಸಿಂಗ್
    ಬಿಕೆಯು ಡೆಕೌಂದ (ಭಾರತ್ ಕಿಸಾನ್ ಯೂನಿಯನ್)

ಇದನ್ನೂ ಓದಿ: ರೈತರ ಆತ್ಮಹತ್ಯೆ: ವಾಸ್ತವದಿಂದ ದೂರವಿರುವ ಸರಕಾರದ ವರದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...