Homeಮುಖಪುಟಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ದೆಹಲಿ ಹೋರಾಟದ ಸುತ್ತ ಒಂದು ಸುತ್ತು

- Advertisement -
- Advertisement -

ರೈತ ಹೋರಾಟವು ಮುಖ್ಯವಾದ ಯಶಸ್ಸನ್ನು ಕಂಡಿದೆ. ಈ ಗೆಲುವಿನ ಹಿಂದೆ ರೈತರು ಮತ್ತು ಪ್ರತಿಯೊಬ್ಬ ಪಂಜಾಬಿಗರ ಪಾತ್ರವಿದೆ. ವಿಶೇಷವಾಗಿ, ಪಂಜಾಬ್‌ನ ಸಂಸ್ಕೃತಿ ಏನೆಂದರೆ, ಎಲ್ಲರೂ ಸುತ್ತಾ ಕೂತ್ಕೊಂಡು ಮಾತಾಡೋದು. ಹೀಗೆ ನಾಲ್ಕು ಜನರ ಮಧ್ಯೆ ಚರ್ಚೆಯಾಗುವ ವಿಚಾರ ಹತ್ತು ಜನರಿಗೆ, ನೂರು ಜನರಿಗೆ, ಸಾವಿರ ಜನರ ನಡುವೆ ವಿನಿಮಯ ಆಗುತ್ತದೆ. ಮಾತ್ರವಲ್ಲ, ಈ ರೀತಿಯ ಗುಂಪುಗಳಲ್ಲಿ ಒಬ್ಬ ಮಾತ್ರ ಒಂದು ವಿಚಾರ ಹೇಳಲ್ಲ, ಎಲ್ಲರೂ ಒಂದೊಂದು ರೀತಿಯ ವಿಚಾರ ಹೇಳುತ್ತಾರೆ. ಕೊರೊನಾ ವಿಚಾರದಲ್ಲೂ ಸರ್ಕಾರ ಒಂದು ಸೋಂಕಿನ ಸಮಯವನ್ನು ಬಳಸಿಕೊಂಡು, ರೈತರನ್ನ, ಕಾರ್ಮಿಕರನ್ನ ತುಳಿಯಲು ಮುಂದಾಗಿತ್ತು. ಅದನ್ನು ಪಂಜಾಬ್ ಜನರು ಅರ್ಥ ಮಾಡಿಕೊಂಡರು. ಹೀಗಾಗಿ, ಅವರೆಲ್ಲರೂ ಯಾವುದೇ ಸೋಂಕು ಇದ್ದರೂ ಪರವಾಗಿಲ್ಲ, ನಾವು ಕೋವಿಡ್‌ನಿಂದ ಬೇಕಿದ್ದರೂ ಸಾಯುತ್ತೇವೆ. ಆದರೆ, ಸರ್ಕಾರದ ದಮನದಿಂದ ಸಾಯುವುದಿಲ್ಲ ಎಂದು ರೈತರು ಗಟ್ಟಿ ನಿರ್ಧಾರ ತಳೆದರು. ಆ ನಿರ್ಧಾರದ ಗಟ್ಟಿತನ ಈ ಹೋರಾಟವನ್ನ ಒಂದು ವರ್ಷ ಎಳೆದು ತಂದಿದೆ. ಫ್ಯಾಸಿಸ್ಟ್ ಸರ್ಕಾರವನ್ನ ಮಣಿಸಿದೆ.

ಇದು ಸತ್ಯ ಮತ್ತು ಮಿಥ್ಯದ ನಡುವಿನ ಸಂಘರ್ಷ, ಆಳುವವರು ಮತ್ತು ದುಡಿಯುವವರ ನಡುವಿನ ಸಂಘರ್ಷ, ಬಂಡವಾಳಿಗರು ಮತ್ತು ಸ್ವಾಭಿಮಾನಿಗಳ ನಡುವಿನ ಸಂಘರ್ಷ… ಸತ್ಯದ ಪರವಾಗಿ ಹೋರಾಡುವುದು ನಮ್ಮ‌ ಹಕ್ಕು. ಆ ಹಕ್ಕಿನ ಬಗ್ಗೆ ಅರಿವು ಮೂಡಿಸುವ ಕೆಲಸವನ್ನ ರಾಜ್ಯದ ಕಲಾವಿದರು, ವ್ಯಂಗ್ಯಚಿತ್ರಕಾರರು, ಸಂಗೀತಗಾರರು, ಕತೆಗಾರರು ಮಾಡುತ್ತಲೇ ಇದ್ದಾರೆ.

ಇದನ್ನೂ ಓದಿ:ಸಂಸತ್‌ ಅಧಿವೇಶನ: ಅನ್ನದಾತರಿಗಾಗಿ ಸೂರ್ಯೋದಯ ಎಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ಒಂದು ಸಣ್ಣ ವ್ಯತ್ಯಾಸ ಏನಂದರೆ, ಪಂಜಾಬಿಗರಿಗೆ ಸಂಘರ್ಷ ಹೊಸದಲ್ಲ.. ಅದು ತಲೆಮಾರುಗಳಿಂದ ಪಂಜಾಬಿಗರಿಗೆ ರಕ್ತದಲ್ಲೇ ಬಂದಿದೆ. ಭಗತ್ ಸಿಂಗ್ ಅಜ್ಜ ಆರಂಭಿಸಿದ ಪಗಡಿ ಸಮಾಜ ಜಟ್ಟ ಹೋರಾಟ(ಸತತ ಒಂಬತ್ತು ತಿಂಗಳ ಕಾಲ ನಡೆಯಿತು)ದಿಂದ ಹಿಡಿದು, ಇಂದಿನವರೆಗೂ ಹೋರಾಟದ ಕಿಚ್ಚು ಪಂಜಾಬಿಗರ ದೇಹದ ನರ-ನಾಡಿಗಳಲ್ಲಿ ತುಂಬಿದೆ. ಲಾಂಗ್ ಲೀವ್ ರೆವಲೂಷನ್ ಎಂಬುದನ್ನು ನಾವು ನಿರಂತರವಾಗಿ ಪಾಲಿಸುತ್ತಾ ಬಂದಿದ್ದೇವೆ.

ಯಾವಾಗ, ರೈತರು ಮಾಡು ಇಲ್ಲವೇ ಮಡಿ ಎಂಬ ರೀತಿಯಲ್ಲಿ ಬೀದಿಗಿದ್ದಾರೆ ಎಂದು ಜನರಿಗೆ ಅರ್ಥವಾಗುತ್ತದೋ, ಆಗ ಇಡೀ ರಾಜ್ಯವೇ ರೈತರೊಂದಿಗೆ ನಿಲ್ಲತ್ತದೆ. ನಾವೂ ಎಣಿಸಿರಲಿಲ್ಲ ಈ ಹೋರಾಟ ಈ ಮಟ್ಟಿಗಿನ ಯಶಸ್ಸನ್ನು ಕಾಣುತ್ತದೆ ಎಂದು. ಅಲ್ಲದೆ, ಹರಿಯಾಣ ಕೂಡ ಈ ಮಟ್ಟಿಗೆ ಮುನ್ನುಗ್ಗಿ ಬರುತ್ತದೆ ಎಂದೂ ಗೊತ್ತಿರಲಿಲ್ಲ. ಹರಿಯಾಣಿಗರಿಗೆ ಅವರದ್ದೇ ಆದ ಸಾಕಷ್ಟು ಸಮಸ್ಯೆಗಳಿವೆ.

ಆದರೆ, ಅವರೂ ನಮ್ಮ ಜೊತೆಗೂಡಿದರು. ಸಾಕಷ್ಟು ಬೆಂಬಲ ನೀಡಿದರು. ಹಾಲು, ಗೂಧಿ ಹಿಟ್ಟು ಸೇರಿದಂತೆ ದಿನ ಬಳಕೆಯ ಸಾಮಗ್ರಿಗಳನ್ನು ಯತೇಚ್ಚವಾಗಿ ರೈತ ಹೋರಾಟಕ್ಕೆ ನೀಡಿದರು. ಹರಿಯಾಣ ಗಡಿಯಲ್ಲಿ ಹರಿಯಾಣದ ಜನರು ಜೊತೆಗೂಡದಿದ್ದರೆ, ಪಂಜಾಬಿಗರು ದೆಹಲಿ ತಲುಪುವುದಗಲೀ, ದೆಹಲಿ ಚಲೋ ಆಗಲೀ ಈ ಮಟ್ಟಿಗೆ ಯಶಸ್ವಿಯಾಗುತ್ತಿರಲಿಲ್ಲ. ಅವರು ಗಡಿಯಲ್ಲಿ ಪೊಲೀಸರನ್ನ ತಡೆದು ನಿಲ್ಲಿಸಿದ್ದೇ ಒಂದು ಮೈಲುಗಲ್ಲು, ಪಂಜಾಬ್-ಹರಿಯಾಣ ಅಣ್ಣ-ತಮ್ಮಂದಿರಿದ್ದಂತೆ. ಅವರು ಅಣ್ಣನಿಗೆ ಅಗತ್ಯದ ಸಮಯದಲ್ಲಿ ಜೊತೆಗೂಡಿದರು. ನಂತರ, ಉತ್ತರ ಪ್ರದೇಶ, ಬಿಹಾರ ಎಲ್ಲರೂ ಅದೇ ಕಿಚ್ವಿನೊಂದಿಗೆ ಸಾಥ್ ಕೊಟ್ಟರು.

ಇದನ್ನೂ ಓದಿ: ಬಿಜೆಪಿಯ ದುರಹಂಕಾರಕ್ಕಾಗಿಯು ರೈತ ಚಳುವಳಿ ನೆನಪಿನಲ್ಲಿ ಉಳಿಯುತ್ತದೆ: ಪ್ರಿಯಾಂಕಾ ಗಾಂಧಿ

ಪಂಜಾಬ್, ಹರಿಯಾಣ, ಯುಪಿ, ಬಿಹಾರಿ ಜನರಿಗೆ ಎಂಎಸ್‌ಪಿ ಬಗ್ಗೆ ಹೇಗೆ ತಿಳಿಸುವುದು ಎಂದು ಚಿಂತಿಸುವಾಗ ಯುಪಿ ಮತ್ತು ಬಿಹಾರದಲ್ಲಿ ರೈತರ ಮೇಲೆ ಅತಿ ಹೆಚ್ಚಾಗಿ ದಮನ-ಲೂಟಿ ನಡೆಯುತ್ತಿದೆ ಎಂದು ಅರ್ಥವಾಯಿತು. ಪಂಜಾಬ್, ಹರಿಯಾಣದಲ್ಲಿ ಒಂದು ಕ್ವಿಂಟಾಲ್ ಗೋಧಿಗೆ 1,900 ರೂ‌. ಕೊಟ್ಟರೆ, ಯುಪಿ ಮತ್ತು ಬಿಹಾರದಲ್ಲಿ ಕೇವಲ 900 ರೂ. ಕೊಡುತ್ತಿದ್ದಾರೆ. ಈ ಪ್ರಮಾಣದಲ್ಲಿ ಆ ಎರಡೂ ರಾಜ್ಯಗಳ ರೈತರನ್ನು ಲೂಟಿ ಮಾಡಲಾಗುತ್ತಿದೆ. ಎಲ್ಲಾ ಪಕ್ಷಗಳೂ ಅವರನ್ನ ಲೂಟಿ ಮಾಡಿವೆ, ಮಾಡುತ್ತಿವೆ.

ಇಷ್ಟು ದೊಡ್ಡ ಸಂಘರ್ಷ ಇಷ್ಟು ದಿನ ಮುಂದುವರೆಯುವುದರಲ್ಲಿ ಇಲ್ಲಿನ ನಾಯಕತ್ವದ ಪಾತ್ರ ತುಂಬಾ ಇದೆ. ನಮ್ಮ ಶತ್ರು ಯಾರು ಎಂದು ಗುರುತಿಸಿ, ಆ ಶತ್ರುಗಳು ಯಾವ ರೀತಿಯಲ್ಲಿ ಸುಲಿಗೆ ಮಾಡಲು ಮುಂದಾಗಿದ್ದಾರೆ ಎಂದು ಜನರಿಗೆ ತಿಳಿಸುವಲ್ಲಿ ಅವರ ಪಾತ್ರ ಭಾರೀ ಇದೆ. ಇಲ್ಲಿನ ಹೋರಾಟಗಳನ್ನು ಒಡೆದು, ಸಧೆ ಬಡಿಯುವುದು ಸರ್ಕಾರಗಳ ಮೊದಲ ಅಜೆಂಡಾ ಆಗಿರುತ್ತದೆ. ಅಂತಹ ಹುನ್ನಾರಕ್ಕೆ ಈ ಹೋರಾಟ ಬಲಿಯಾಗದಂತೆ ಮುನ್ನಡೆಸುವಲ್ಲಿ ರೈತ ನಾಯಕತ್ವ ಸಾಕಷ್ಟು ಶ್ರಮಿಸಿದೆ. ಈ ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ. ನಮ್ಮ ಮುಂದಿರುವ ಶತ್ರು ಈಗ ಹಿಂದೆ ಸರಿದಿರಬಹುದು, ಆದರೆ ಅವರು ಸಂಪೂರ್ಣವಾಗಿ ಹಿಂದೆ ಹೋಗುವುದಿಲ್ಲ. ಅವರನ್ನು ಮಣಿಸಲು ನಮ್ಮ ಹೋರಾಟ ಮುನ್ನಡೆಯುತ್ತಲೇ ಇರಬೇಕು. ಅಲ್ಲದೆ, ಭಾರತ WTO (ವಿಶ್ವ ವಾಣಿಜ್ಯ ಸಂಸ್ಥೆ), LPG (ಉದಾರೀಕರಣ, ಖಾಸಗೀಕರಣ, ಜಾಗತೀಕರಣ)ಯಿಂದ ಹೊರಬರಬೇಕು. ಅದೇ ನಮ್ಮ ಹೋರಟ ಮುಂದಿನ ಗುರಿ…ಈ ಗುರಿಯನ್ನು ಜಯಿಸಿದರೆ, ಭಾರತ ಗೆಲ್ಲುತ್ತದೆ.

  • ~ಸುರೀಂದರ್ ಸಿಂಗ್
    ಬಿಕೆಯು ಡೆಕೌಂದ (ಭಾರತ್ ಕಿಸಾನ್ ಯೂನಿಯನ್)

ಇದನ್ನೂ ಓದಿ: ರೈತರ ಆತ್ಮಹತ್ಯೆ: ವಾಸ್ತವದಿಂದ ದೂರವಿರುವ ಸರಕಾರದ ವರದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...