Homeಮುಖಪುಟಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ಇದು ಫ್ಯಾಸಿಸ್ಟರು, ಬಂಡವಾಳಿಗರು V/S ದಮನಿತರ ಸ್ವಾಭಿಮಾನದ ನಡುವಿನ ಹೋರಾಟ…!

ದೆಹಲಿ ಹೋರಾಟದ ಸುತ್ತ ಒಂದು ಸುತ್ತು

- Advertisement -
- Advertisement -

ರೈತ ಹೋರಾಟವು ಮುಖ್ಯವಾದ ಯಶಸ್ಸನ್ನು ಕಂಡಿದೆ. ಈ ಗೆಲುವಿನ ಹಿಂದೆ ರೈತರು ಮತ್ತು ಪ್ರತಿಯೊಬ್ಬ ಪಂಜಾಬಿಗರ ಪಾತ್ರವಿದೆ. ವಿಶೇಷವಾಗಿ, ಪಂಜಾಬ್‌ನ ಸಂಸ್ಕೃತಿ ಏನೆಂದರೆ, ಎಲ್ಲರೂ ಸುತ್ತಾ ಕೂತ್ಕೊಂಡು ಮಾತಾಡೋದು. ಹೀಗೆ ನಾಲ್ಕು ಜನರ ಮಧ್ಯೆ ಚರ್ಚೆಯಾಗುವ ವಿಚಾರ ಹತ್ತು ಜನರಿಗೆ, ನೂರು ಜನರಿಗೆ, ಸಾವಿರ ಜನರ ನಡುವೆ ವಿನಿಮಯ ಆಗುತ್ತದೆ. ಮಾತ್ರವಲ್ಲ, ಈ ರೀತಿಯ ಗುಂಪುಗಳಲ್ಲಿ ಒಬ್ಬ ಮಾತ್ರ ಒಂದು ವಿಚಾರ ಹೇಳಲ್ಲ, ಎಲ್ಲರೂ ಒಂದೊಂದು ರೀತಿಯ ವಿಚಾರ ಹೇಳುತ್ತಾರೆ. ಕೊರೊನಾ ವಿಚಾರದಲ್ಲೂ ಸರ್ಕಾರ ಒಂದು ಸೋಂಕಿನ ಸಮಯವನ್ನು ಬಳಸಿಕೊಂಡು, ರೈತರನ್ನ, ಕಾರ್ಮಿಕರನ್ನ ತುಳಿಯಲು ಮುಂದಾಗಿತ್ತು. ಅದನ್ನು ಪಂಜಾಬ್ ಜನರು ಅರ್ಥ ಮಾಡಿಕೊಂಡರು. ಹೀಗಾಗಿ, ಅವರೆಲ್ಲರೂ ಯಾವುದೇ ಸೋಂಕು ಇದ್ದರೂ ಪರವಾಗಿಲ್ಲ, ನಾವು ಕೋವಿಡ್‌ನಿಂದ ಬೇಕಿದ್ದರೂ ಸಾಯುತ್ತೇವೆ. ಆದರೆ, ಸರ್ಕಾರದ ದಮನದಿಂದ ಸಾಯುವುದಿಲ್ಲ ಎಂದು ರೈತರು ಗಟ್ಟಿ ನಿರ್ಧಾರ ತಳೆದರು. ಆ ನಿರ್ಧಾರದ ಗಟ್ಟಿತನ ಈ ಹೋರಾಟವನ್ನ ಒಂದು ವರ್ಷ ಎಳೆದು ತಂದಿದೆ. ಫ್ಯಾಸಿಸ್ಟ್ ಸರ್ಕಾರವನ್ನ ಮಣಿಸಿದೆ.

ಇದು ಸತ್ಯ ಮತ್ತು ಮಿಥ್ಯದ ನಡುವಿನ ಸಂಘರ್ಷ, ಆಳುವವರು ಮತ್ತು ದುಡಿಯುವವರ ನಡುವಿನ ಸಂಘರ್ಷ, ಬಂಡವಾಳಿಗರು ಮತ್ತು ಸ್ವಾಭಿಮಾನಿಗಳ ನಡುವಿನ ಸಂಘರ್ಷ… ಸತ್ಯದ ಪರವಾಗಿ ಹೋರಾಡುವುದು ನಮ್ಮ‌ ಹಕ್ಕು. ಆ ಹಕ್ಕಿನ ಬಗ್ಗೆ ಅರಿವು ಮೂಡಿಸುವ ಕೆಲಸವನ್ನ ರಾಜ್ಯದ ಕಲಾವಿದರು, ವ್ಯಂಗ್ಯಚಿತ್ರಕಾರರು, ಸಂಗೀತಗಾರರು, ಕತೆಗಾರರು ಮಾಡುತ್ತಲೇ ಇದ್ದಾರೆ.

ಇದನ್ನೂ ಓದಿ:ಸಂಸತ್‌ ಅಧಿವೇಶನ: ಅನ್ನದಾತರಿಗಾಗಿ ಸೂರ್ಯೋದಯ ಎಂದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ

ಒಂದು ಸಣ್ಣ ವ್ಯತ್ಯಾಸ ಏನಂದರೆ, ಪಂಜಾಬಿಗರಿಗೆ ಸಂಘರ್ಷ ಹೊಸದಲ್ಲ.. ಅದು ತಲೆಮಾರುಗಳಿಂದ ಪಂಜಾಬಿಗರಿಗೆ ರಕ್ತದಲ್ಲೇ ಬಂದಿದೆ. ಭಗತ್ ಸಿಂಗ್ ಅಜ್ಜ ಆರಂಭಿಸಿದ ಪಗಡಿ ಸಮಾಜ ಜಟ್ಟ ಹೋರಾಟ(ಸತತ ಒಂಬತ್ತು ತಿಂಗಳ ಕಾಲ ನಡೆಯಿತು)ದಿಂದ ಹಿಡಿದು, ಇಂದಿನವರೆಗೂ ಹೋರಾಟದ ಕಿಚ್ಚು ಪಂಜಾಬಿಗರ ದೇಹದ ನರ-ನಾಡಿಗಳಲ್ಲಿ ತುಂಬಿದೆ. ಲಾಂಗ್ ಲೀವ್ ರೆವಲೂಷನ್ ಎಂಬುದನ್ನು ನಾವು ನಿರಂತರವಾಗಿ ಪಾಲಿಸುತ್ತಾ ಬಂದಿದ್ದೇವೆ.

ಯಾವಾಗ, ರೈತರು ಮಾಡು ಇಲ್ಲವೇ ಮಡಿ ಎಂಬ ರೀತಿಯಲ್ಲಿ ಬೀದಿಗಿದ್ದಾರೆ ಎಂದು ಜನರಿಗೆ ಅರ್ಥವಾಗುತ್ತದೋ, ಆಗ ಇಡೀ ರಾಜ್ಯವೇ ರೈತರೊಂದಿಗೆ ನಿಲ್ಲತ್ತದೆ. ನಾವೂ ಎಣಿಸಿರಲಿಲ್ಲ ಈ ಹೋರಾಟ ಈ ಮಟ್ಟಿಗಿನ ಯಶಸ್ಸನ್ನು ಕಾಣುತ್ತದೆ ಎಂದು. ಅಲ್ಲದೆ, ಹರಿಯಾಣ ಕೂಡ ಈ ಮಟ್ಟಿಗೆ ಮುನ್ನುಗ್ಗಿ ಬರುತ್ತದೆ ಎಂದೂ ಗೊತ್ತಿರಲಿಲ್ಲ. ಹರಿಯಾಣಿಗರಿಗೆ ಅವರದ್ದೇ ಆದ ಸಾಕಷ್ಟು ಸಮಸ್ಯೆಗಳಿವೆ.

ಆದರೆ, ಅವರೂ ನಮ್ಮ ಜೊತೆಗೂಡಿದರು. ಸಾಕಷ್ಟು ಬೆಂಬಲ ನೀಡಿದರು. ಹಾಲು, ಗೂಧಿ ಹಿಟ್ಟು ಸೇರಿದಂತೆ ದಿನ ಬಳಕೆಯ ಸಾಮಗ್ರಿಗಳನ್ನು ಯತೇಚ್ಚವಾಗಿ ರೈತ ಹೋರಾಟಕ್ಕೆ ನೀಡಿದರು. ಹರಿಯಾಣ ಗಡಿಯಲ್ಲಿ ಹರಿಯಾಣದ ಜನರು ಜೊತೆಗೂಡದಿದ್ದರೆ, ಪಂಜಾಬಿಗರು ದೆಹಲಿ ತಲುಪುವುದಗಲೀ, ದೆಹಲಿ ಚಲೋ ಆಗಲೀ ಈ ಮಟ್ಟಿಗೆ ಯಶಸ್ವಿಯಾಗುತ್ತಿರಲಿಲ್ಲ. ಅವರು ಗಡಿಯಲ್ಲಿ ಪೊಲೀಸರನ್ನ ತಡೆದು ನಿಲ್ಲಿಸಿದ್ದೇ ಒಂದು ಮೈಲುಗಲ್ಲು, ಪಂಜಾಬ್-ಹರಿಯಾಣ ಅಣ್ಣ-ತಮ್ಮಂದಿರಿದ್ದಂತೆ. ಅವರು ಅಣ್ಣನಿಗೆ ಅಗತ್ಯದ ಸಮಯದಲ್ಲಿ ಜೊತೆಗೂಡಿದರು. ನಂತರ, ಉತ್ತರ ಪ್ರದೇಶ, ಬಿಹಾರ ಎಲ್ಲರೂ ಅದೇ ಕಿಚ್ವಿನೊಂದಿಗೆ ಸಾಥ್ ಕೊಟ್ಟರು.

ಇದನ್ನೂ ಓದಿ: ಬಿಜೆಪಿಯ ದುರಹಂಕಾರಕ್ಕಾಗಿಯು ರೈತ ಚಳುವಳಿ ನೆನಪಿನಲ್ಲಿ ಉಳಿಯುತ್ತದೆ: ಪ್ರಿಯಾಂಕಾ ಗಾಂಧಿ

ಪಂಜಾಬ್, ಹರಿಯಾಣ, ಯುಪಿ, ಬಿಹಾರಿ ಜನರಿಗೆ ಎಂಎಸ್‌ಪಿ ಬಗ್ಗೆ ಹೇಗೆ ತಿಳಿಸುವುದು ಎಂದು ಚಿಂತಿಸುವಾಗ ಯುಪಿ ಮತ್ತು ಬಿಹಾರದಲ್ಲಿ ರೈತರ ಮೇಲೆ ಅತಿ ಹೆಚ್ಚಾಗಿ ದಮನ-ಲೂಟಿ ನಡೆಯುತ್ತಿದೆ ಎಂದು ಅರ್ಥವಾಯಿತು. ಪಂಜಾಬ್, ಹರಿಯಾಣದಲ್ಲಿ ಒಂದು ಕ್ವಿಂಟಾಲ್ ಗೋಧಿಗೆ 1,900 ರೂ‌. ಕೊಟ್ಟರೆ, ಯುಪಿ ಮತ್ತು ಬಿಹಾರದಲ್ಲಿ ಕೇವಲ 900 ರೂ. ಕೊಡುತ್ತಿದ್ದಾರೆ. ಈ ಪ್ರಮಾಣದಲ್ಲಿ ಆ ಎರಡೂ ರಾಜ್ಯಗಳ ರೈತರನ್ನು ಲೂಟಿ ಮಾಡಲಾಗುತ್ತಿದೆ. ಎಲ್ಲಾ ಪಕ್ಷಗಳೂ ಅವರನ್ನ ಲೂಟಿ ಮಾಡಿವೆ, ಮಾಡುತ್ತಿವೆ.

ಇಷ್ಟು ದೊಡ್ಡ ಸಂಘರ್ಷ ಇಷ್ಟು ದಿನ ಮುಂದುವರೆಯುವುದರಲ್ಲಿ ಇಲ್ಲಿನ ನಾಯಕತ್ವದ ಪಾತ್ರ ತುಂಬಾ ಇದೆ. ನಮ್ಮ ಶತ್ರು ಯಾರು ಎಂದು ಗುರುತಿಸಿ, ಆ ಶತ್ರುಗಳು ಯಾವ ರೀತಿಯಲ್ಲಿ ಸುಲಿಗೆ ಮಾಡಲು ಮುಂದಾಗಿದ್ದಾರೆ ಎಂದು ಜನರಿಗೆ ತಿಳಿಸುವಲ್ಲಿ ಅವರ ಪಾತ್ರ ಭಾರೀ ಇದೆ. ಇಲ್ಲಿನ ಹೋರಾಟಗಳನ್ನು ಒಡೆದು, ಸಧೆ ಬಡಿಯುವುದು ಸರ್ಕಾರಗಳ ಮೊದಲ ಅಜೆಂಡಾ ಆಗಿರುತ್ತದೆ. ಅಂತಹ ಹುನ್ನಾರಕ್ಕೆ ಈ ಹೋರಾಟ ಬಲಿಯಾಗದಂತೆ ಮುನ್ನಡೆಸುವಲ್ಲಿ ರೈತ ನಾಯಕತ್ವ ಸಾಕಷ್ಟು ಶ್ರಮಿಸಿದೆ. ಈ ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ. ನಮ್ಮ ಮುಂದಿರುವ ಶತ್ರು ಈಗ ಹಿಂದೆ ಸರಿದಿರಬಹುದು, ಆದರೆ ಅವರು ಸಂಪೂರ್ಣವಾಗಿ ಹಿಂದೆ ಹೋಗುವುದಿಲ್ಲ. ಅವರನ್ನು ಮಣಿಸಲು ನಮ್ಮ ಹೋರಾಟ ಮುನ್ನಡೆಯುತ್ತಲೇ ಇರಬೇಕು. ಅಲ್ಲದೆ, ಭಾರತ WTO (ವಿಶ್ವ ವಾಣಿಜ್ಯ ಸಂಸ್ಥೆ), LPG (ಉದಾರೀಕರಣ, ಖಾಸಗೀಕರಣ, ಜಾಗತೀಕರಣ)ಯಿಂದ ಹೊರಬರಬೇಕು. ಅದೇ ನಮ್ಮ ಹೋರಟ ಮುಂದಿನ ಗುರಿ…ಈ ಗುರಿಯನ್ನು ಜಯಿಸಿದರೆ, ಭಾರತ ಗೆಲ್ಲುತ್ತದೆ.

  • ~ಸುರೀಂದರ್ ಸಿಂಗ್
    ಬಿಕೆಯು ಡೆಕೌಂದ (ಭಾರತ್ ಕಿಸಾನ್ ಯೂನಿಯನ್)

ಇದನ್ನೂ ಓದಿ: ರೈತರ ಆತ್ಮಹತ್ಯೆ: ವಾಸ್ತವದಿಂದ ದೂರವಿರುವ ಸರಕಾರದ ವರದಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...