Homeಮುಖಪುಟಮರಾಠ ಮೀಸಲಾತಿ: ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ; ತಮ್ಮದೇ ಸರಕಾರದ ವಿರುದ್ಧ ಸಿಡಿದೆದ್ದ ಸಚಿವ

ಮರಾಠ ಮೀಸಲಾತಿ: ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ; ತಮ್ಮದೇ ಸರಕಾರದ ವಿರುದ್ಧ ಸಿಡಿದೆದ್ದ ಸಚಿವ

- Advertisement -
- Advertisement -

ಮರಾಠ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ಮಹರಾಷ್ಟ್ರದ ಬಿಜೆಪಿ-ಶಿವಸೇನೆ(ಶಿಂಧೆ) ಸರಕಾರ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ತಮ್ಮದೇ ಸರಕಾರದ ವಿರುದ್ಧ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರು ವಾಗ್ಧಾಳಿಯನ್ನು ನಡೆಸಿದ್ದಾರೆ.

ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಕ್ಕೆ ಮರಾಠರ ಹಿಂಬಾಗಿಲ ಪ್ರವೇಶವನ್ನು ಪ್ರಶ್ನಿಸಿರುವ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ತಮ್ಮದೇ ಸರ್ಕಾರವನ್ನು ಟೀಕಿಸಿದ್ದಾರೆ. ಎಲ್ಲಾ ಮರಾಠಿಗರಿಗೆ ಕುಂಬಿ ಪ್ರಮಾಣ ಪತ್ರ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ಕೇವಲ ಕಣ್ಣೊರೆಸುವ ಪ್ರಯತ್ನ ಎಂದು ಹೇಳಿದ್ದು, ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆಯೇ ಹೊರತು ಅಫಿಡವಿತ್‌ಗಳಿಂದಲ್ಲ ಎಂದು ಹೇಳಿದ್ದಾರೆ.

ಮರಾಠ ಕೋಟಾಕ್ಕೆ ಹೋರಾಟ ನಡೆಸುತ್ತಿದ್ದ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಅವರು ಇಂದು ಬೆಳಿಗ್ಗೆ ಅನಿರ್ದಿಷ್ಟಾವಧಿ ಉಪವಾಸವನ್ನು ಹಿಂತೆಗೆದುಕೊಂಡಿದ್ದರು.  ಮರಾಠ ಮೀಸಲಾತಿ ಕುರಿತು  ಕರಡು ಅಧಿಸೂಚನೆಯನ್ನು ಕೂಡ ಸರಕಾರ ಹೊರಡಿಸಿತ್ತು.

ಮಹರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಭುಜಬಲ್ ಈ ಬಗ್ಗೆ ಮಾತನಾಡಿದ್ದು, ರಾಜ್ಯ ಸರ್ಕಾರವು ಎಲ್ಲಾ ಮರಾಠಿಗರಿಗೆ ಕುಂಬಿ ಪ್ರಮಾಣ ಪತ್ರ ನೀಡುವಂತೆ ಹೊರಡಿಸಿರುವ ಕರಡು ಅಧಿಸೂಚನೆ ಕಣ್ಣಿಗೆ ಮಣ್ಣೆರಚುವಂತಿದೆ. ಒಬಿಸಿಗಳಿಗೆ ಅನ್ಯಾಯವಾಗುತ್ತಿದೆಯೇ ಎಂಬುವುದು ಅಧ್ಯಯನ ನಡೆಸಬೇಕಿದೆ. ಮರಾಠ ಸಮುದಾಯದ ಬುದ್ಧಿಜೀವಿಗಳೂ ಈ ಬಗ್ಗೆ ಯೋಚಿಸಬೇಕು ಎಂದ ಅವರು, ಒಬಿಸಿ ಮೀಸಲಾತಿಗೆ ಸಮುದಾಯ ಹಿಂಬಾಗಿಲ ಪ್ರವೇಶ ಮಾಡುತ್ತಿದೆ. ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ ಮತ್ತು ಅಫಿಡವಿತ್‌ಗಳಿಂದ ಅಲ್ಲ. ಈ ವಿಷಯವನ್ನು ಚರ್ಚಿಸಲು ಭಾನುವಾರ ಎಲ್ಲಾ ಒಬಿಸಿ ನಾಯಕರನ್ನು ಮಾತುಕತೆಗೆ ಆಹ್ವಾನಿಸಿರುವುದಾಗಿ ಭುಜಬಲ್ ಹೇಳಿದ್ದಾರೆ.

ದಲಿತರು ಮತ್ತು ಆದಿವಾಸಿಗಳು ಸಹ ಎಲ್ಲಾ ರಕ್ತ ಸಂಬಂಧಿಗಳಿಗೆ ಇದೇ ರೀತಿಯ ಬೇಡಿಕೆಯನ್ನು ಮಾಡಿದರೆ ಹೇಗೆ? ಮರಾಠರಿಗೆ ಉದ್ಯೋಗ ನೇಮಕಾತಿಯಲ್ಲಿ ಖಾಲಿ ಹುದ್ದೆಗಳನ್ನು ಕಾಯ್ದಿರಿಸಲು ಮತ್ತು ಸಮುದಾಯದ ಸದಸ್ಯರಿಗೆ ಶೇಕಡಾ 100ರಷ್ಟು ಉಚಿತ ಶಿಕ್ಷಣವನ್ನು ನೀಡಬೇಕೆಂಬ ಜಾರಂಗೆಯ ಬೇಡಿಕೆಯ ಬಗ್ಗೆ ಅವರು ಪ್ರಶ್ನಿಸಿದ್ದಾರೆ. ಮರಾಠಿಗರೇ ಏಕೆ? ಬ್ರಾಹ್ಮಣರು ಸೇರಿದಂತೆ ಎಲ್ಲ ಜಾತಿಯವರಿಗೆ ಉಚಿತ ಶಿಕ್ಷಣ ನೀಡಲಿ ಎಂದು ಹೇಳಿದ್ದಾರೆ.

ಮರಾಠರಿಗೆ ಕುಂಬಿ ಪ್ರಮಾಣಪತ್ರಕ್ಕೆ ವಿರೋಧ: 

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸುತ್ತಲೇ ಬಂದಿದ್ದಾರೆ. ಈ ಮೊದಲು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದರು.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಶೀಘ್ರದಲ್ಲೇ ಈ ಬಗ್ಗೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದರು.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಹೇಳಿದ್ದರು. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ. ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...