Homeಮುಖಪುಟಮರಾಠ ಮೀಸಲಾತಿ: ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ; ತಮ್ಮದೇ ಸರಕಾರದ ವಿರುದ್ಧ ಸಿಡಿದೆದ್ದ ಸಚಿವ

ಮರಾಠ ಮೀಸಲಾತಿ: ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ; ತಮ್ಮದೇ ಸರಕಾರದ ವಿರುದ್ಧ ಸಿಡಿದೆದ್ದ ಸಚಿವ

- Advertisement -
- Advertisement -

ಮರಾಠ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ಮಹರಾಷ್ಟ್ರದ ಬಿಜೆಪಿ-ಶಿವಸೇನೆ(ಶಿಂಧೆ) ಸರಕಾರ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ತಮ್ಮದೇ ಸರಕಾರದ ವಿರುದ್ಧ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರು ವಾಗ್ಧಾಳಿಯನ್ನು ನಡೆಸಿದ್ದಾರೆ.

ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಕ್ಕೆ ಮರಾಠರ ಹಿಂಬಾಗಿಲ ಪ್ರವೇಶವನ್ನು ಪ್ರಶ್ನಿಸಿರುವ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ತಮ್ಮದೇ ಸರ್ಕಾರವನ್ನು ಟೀಕಿಸಿದ್ದಾರೆ. ಎಲ್ಲಾ ಮರಾಠಿಗರಿಗೆ ಕುಂಬಿ ಪ್ರಮಾಣ ಪತ್ರ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ಕೇವಲ ಕಣ್ಣೊರೆಸುವ ಪ್ರಯತ್ನ ಎಂದು ಹೇಳಿದ್ದು, ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆಯೇ ಹೊರತು ಅಫಿಡವಿತ್‌ಗಳಿಂದಲ್ಲ ಎಂದು ಹೇಳಿದ್ದಾರೆ.

ಮರಾಠ ಕೋಟಾಕ್ಕೆ ಹೋರಾಟ ನಡೆಸುತ್ತಿದ್ದ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಅವರು ಇಂದು ಬೆಳಿಗ್ಗೆ ಅನಿರ್ದಿಷ್ಟಾವಧಿ ಉಪವಾಸವನ್ನು ಹಿಂತೆಗೆದುಕೊಂಡಿದ್ದರು.  ಮರಾಠ ಮೀಸಲಾತಿ ಕುರಿತು  ಕರಡು ಅಧಿಸೂಚನೆಯನ್ನು ಕೂಡ ಸರಕಾರ ಹೊರಡಿಸಿತ್ತು.

ಮಹರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಭುಜಬಲ್ ಈ ಬಗ್ಗೆ ಮಾತನಾಡಿದ್ದು, ರಾಜ್ಯ ಸರ್ಕಾರವು ಎಲ್ಲಾ ಮರಾಠಿಗರಿಗೆ ಕುಂಬಿ ಪ್ರಮಾಣ ಪತ್ರ ನೀಡುವಂತೆ ಹೊರಡಿಸಿರುವ ಕರಡು ಅಧಿಸೂಚನೆ ಕಣ್ಣಿಗೆ ಮಣ್ಣೆರಚುವಂತಿದೆ. ಒಬಿಸಿಗಳಿಗೆ ಅನ್ಯಾಯವಾಗುತ್ತಿದೆಯೇ ಎಂಬುವುದು ಅಧ್ಯಯನ ನಡೆಸಬೇಕಿದೆ. ಮರಾಠ ಸಮುದಾಯದ ಬುದ್ಧಿಜೀವಿಗಳೂ ಈ ಬಗ್ಗೆ ಯೋಚಿಸಬೇಕು ಎಂದ ಅವರು, ಒಬಿಸಿ ಮೀಸಲಾತಿಗೆ ಸಮುದಾಯ ಹಿಂಬಾಗಿಲ ಪ್ರವೇಶ ಮಾಡುತ್ತಿದೆ. ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ ಮತ್ತು ಅಫಿಡವಿತ್‌ಗಳಿಂದ ಅಲ್ಲ. ಈ ವಿಷಯವನ್ನು ಚರ್ಚಿಸಲು ಭಾನುವಾರ ಎಲ್ಲಾ ಒಬಿಸಿ ನಾಯಕರನ್ನು ಮಾತುಕತೆಗೆ ಆಹ್ವಾನಿಸಿರುವುದಾಗಿ ಭುಜಬಲ್ ಹೇಳಿದ್ದಾರೆ.

ದಲಿತರು ಮತ್ತು ಆದಿವಾಸಿಗಳು ಸಹ ಎಲ್ಲಾ ರಕ್ತ ಸಂಬಂಧಿಗಳಿಗೆ ಇದೇ ರೀತಿಯ ಬೇಡಿಕೆಯನ್ನು ಮಾಡಿದರೆ ಹೇಗೆ? ಮರಾಠರಿಗೆ ಉದ್ಯೋಗ ನೇಮಕಾತಿಯಲ್ಲಿ ಖಾಲಿ ಹುದ್ದೆಗಳನ್ನು ಕಾಯ್ದಿರಿಸಲು ಮತ್ತು ಸಮುದಾಯದ ಸದಸ್ಯರಿಗೆ ಶೇಕಡಾ 100ರಷ್ಟು ಉಚಿತ ಶಿಕ್ಷಣವನ್ನು ನೀಡಬೇಕೆಂಬ ಜಾರಂಗೆಯ ಬೇಡಿಕೆಯ ಬಗ್ಗೆ ಅವರು ಪ್ರಶ್ನಿಸಿದ್ದಾರೆ. ಮರಾಠಿಗರೇ ಏಕೆ? ಬ್ರಾಹ್ಮಣರು ಸೇರಿದಂತೆ ಎಲ್ಲ ಜಾತಿಯವರಿಗೆ ಉಚಿತ ಶಿಕ್ಷಣ ನೀಡಲಿ ಎಂದು ಹೇಳಿದ್ದಾರೆ.

ಮರಾಠರಿಗೆ ಕುಂಬಿ ಪ್ರಮಾಣಪತ್ರಕ್ಕೆ ವಿರೋಧ: 

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸುತ್ತಲೇ ಬಂದಿದ್ದಾರೆ. ಈ ಮೊದಲು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದರು.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಶೀಘ್ರದಲ್ಲೇ ಈ ಬಗ್ಗೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದರು.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಹೇಳಿದ್ದರು. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ. ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...