Homeಮುಖಪುಟಮರಾಠ ಮೀಸಲಾತಿ: ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ; ತಮ್ಮದೇ ಸರಕಾರದ ವಿರುದ್ಧ ಸಿಡಿದೆದ್ದ ಸಚಿವ

ಮರಾಠ ಮೀಸಲಾತಿ: ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ; ತಮ್ಮದೇ ಸರಕಾರದ ವಿರುದ್ಧ ಸಿಡಿದೆದ್ದ ಸಚಿವ

- Advertisement -
- Advertisement -

ಮರಾಠ ಸಮುದಾಯಕ್ಕೆ ಇತರ ಹಿಂದುಳಿದ ವರ್ಗಗಳ (ಒಬಿಸಿ) ಅಡಿಯಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಗೆ ಮಹರಾಷ್ಟ್ರದ ಬಿಜೆಪಿ-ಶಿವಸೇನೆ(ಶಿಂಧೆ) ಸರಕಾರ ಒಪ್ಪಿಕೊಂಡಿದೆ. ಇದರ ಬೆನ್ನಲ್ಲೇ ತಮ್ಮದೇ ಸರಕಾರದ ವಿರುದ್ಧ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್ ಅವರು ವಾಗ್ಧಾಳಿಯನ್ನು ನಡೆಸಿದ್ದಾರೆ.

ಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯಕ್ಕೆ ಮರಾಠರ ಹಿಂಬಾಗಿಲ ಪ್ರವೇಶವನ್ನು ಪ್ರಶ್ನಿಸಿರುವ ಮಹಾರಾಷ್ಟ್ರ ಸಚಿವ ಛಗನ್ ಭುಜಬಲ್, ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ತಮ್ಮದೇ ಸರ್ಕಾರವನ್ನು ಟೀಕಿಸಿದ್ದಾರೆ. ಎಲ್ಲಾ ಮರಾಠಿಗರಿಗೆ ಕುಂಬಿ ಪ್ರಮಾಣ ಪತ್ರ ನೀಡುವ ಕುರಿತು ರಾಜ್ಯ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ಕೇವಲ ಕಣ್ಣೊರೆಸುವ ಪ್ರಯತ್ನ ಎಂದು ಹೇಳಿದ್ದು, ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆಯೇ ಹೊರತು ಅಫಿಡವಿತ್‌ಗಳಿಂದಲ್ಲ ಎಂದು ಹೇಳಿದ್ದಾರೆ.

ಮರಾಠ ಕೋಟಾಕ್ಕೆ ಹೋರಾಟ ನಡೆಸುತ್ತಿದ್ದ ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಅವರು ಇಂದು ಬೆಳಿಗ್ಗೆ ಅನಿರ್ದಿಷ್ಟಾವಧಿ ಉಪವಾಸವನ್ನು ಹಿಂತೆಗೆದುಕೊಂಡಿದ್ದರು.  ಮರಾಠ ಮೀಸಲಾತಿ ಕುರಿತು  ಕರಡು ಅಧಿಸೂಚನೆಯನ್ನು ಕೂಡ ಸರಕಾರ ಹೊರಡಿಸಿತ್ತು.

ಮಹರಾಷ್ಟ್ರದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಭುಜಬಲ್ ಈ ಬಗ್ಗೆ ಮಾತನಾಡಿದ್ದು, ರಾಜ್ಯ ಸರ್ಕಾರವು ಎಲ್ಲಾ ಮರಾಠಿಗರಿಗೆ ಕುಂಬಿ ಪ್ರಮಾಣ ಪತ್ರ ನೀಡುವಂತೆ ಹೊರಡಿಸಿರುವ ಕರಡು ಅಧಿಸೂಚನೆ ಕಣ್ಣಿಗೆ ಮಣ್ಣೆರಚುವಂತಿದೆ. ಒಬಿಸಿಗಳಿಗೆ ಅನ್ಯಾಯವಾಗುತ್ತಿದೆಯೇ ಎಂಬುವುದು ಅಧ್ಯಯನ ನಡೆಸಬೇಕಿದೆ. ಮರಾಠ ಸಮುದಾಯದ ಬುದ್ಧಿಜೀವಿಗಳೂ ಈ ಬಗ್ಗೆ ಯೋಚಿಸಬೇಕು ಎಂದ ಅವರು, ಒಬಿಸಿ ಮೀಸಲಾತಿಗೆ ಸಮುದಾಯ ಹಿಂಬಾಗಿಲ ಪ್ರವೇಶ ಮಾಡುತ್ತಿದೆ. ಜಾತಿಯನ್ನು ಹುಟ್ಟಿನಿಂದ ನಿರ್ಧರಿಸಲಾಗುತ್ತದೆ ಮತ್ತು ಅಫಿಡವಿತ್‌ಗಳಿಂದ ಅಲ್ಲ. ಈ ವಿಷಯವನ್ನು ಚರ್ಚಿಸಲು ಭಾನುವಾರ ಎಲ್ಲಾ ಒಬಿಸಿ ನಾಯಕರನ್ನು ಮಾತುಕತೆಗೆ ಆಹ್ವಾನಿಸಿರುವುದಾಗಿ ಭುಜಬಲ್ ಹೇಳಿದ್ದಾರೆ.

ದಲಿತರು ಮತ್ತು ಆದಿವಾಸಿಗಳು ಸಹ ಎಲ್ಲಾ ರಕ್ತ ಸಂಬಂಧಿಗಳಿಗೆ ಇದೇ ರೀತಿಯ ಬೇಡಿಕೆಯನ್ನು ಮಾಡಿದರೆ ಹೇಗೆ? ಮರಾಠರಿಗೆ ಉದ್ಯೋಗ ನೇಮಕಾತಿಯಲ್ಲಿ ಖಾಲಿ ಹುದ್ದೆಗಳನ್ನು ಕಾಯ್ದಿರಿಸಲು ಮತ್ತು ಸಮುದಾಯದ ಸದಸ್ಯರಿಗೆ ಶೇಕಡಾ 100ರಷ್ಟು ಉಚಿತ ಶಿಕ್ಷಣವನ್ನು ನೀಡಬೇಕೆಂಬ ಜಾರಂಗೆಯ ಬೇಡಿಕೆಯ ಬಗ್ಗೆ ಅವರು ಪ್ರಶ್ನಿಸಿದ್ದಾರೆ. ಮರಾಠಿಗರೇ ಏಕೆ? ಬ್ರಾಹ್ಮಣರು ಸೇರಿದಂತೆ ಎಲ್ಲ ಜಾತಿಯವರಿಗೆ ಉಚಿತ ಶಿಕ್ಷಣ ನೀಡಲಿ ಎಂದು ಹೇಳಿದ್ದಾರೆ.

ಮರಾಠರಿಗೆ ಕುಂಬಿ ಪ್ರಮಾಣಪತ್ರಕ್ಕೆ ವಿರೋಧ: 

ಒಬಿಸಿ ವರ್ಗದಡಿ ಮರಾಠರಿಗೆ ಮೀಸಲಾತಿ ನೀಡುವುದಕ್ಕೆ ಒಬಿಸಿ ಮುಖಂಡರು ವಿರೋಧಿಸುತ್ತಲೇ ಬಂದಿದ್ದಾರೆ. ಈ ಮೊದಲು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರಗಳನ್ನು ನೀಡುವ ಸರ್ಕಾರದ ಉದ್ದೇಶಿತ ಕ್ರಮದ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದಾಗಿ ಕೂಡ ಹೇಳಿದ್ದರು.

ಇಡಬ್ಲ್ಯೂಎಸ್ (ಆರ್ಥಿಕವಾಗಿ ದುರ್ಬಲ ವಿಭಾಗ) ಅಡಿಯಲ್ಲಿ ಮರಾಠರಿಗೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆದರೆ ಮರಾಠರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ. ಶೀಘ್ರದಲ್ಲೇ ಈ ಬಗ್ಗೆ ನಾವು ಬೀದಿಗಿಳಿದು ಪ್ರತಿಭಟನೆ ಮಾಡುತ್ತೇವೆ ಮತ್ತು ಅಗತ್ಯವಿದ್ದರೆ ನಾವು ನ್ಯಾಯಾಲಯಕ್ಕೆ ಹೋಗುತ್ತೇವೆ ಎಂದು ಒಬಿಸಿ ನಾಯಕ ಪ್ರಕಾಶ್ ಶೆಂಡ್ಗೆ ಹೇಳಿದ್ದರು.

ಮರಾಠರಿಗೆ ಕುಂಬಿ ಜಾತಿ ಪ್ರಮಾಣಪತ್ರ ನೀಡಲು ಮಹಾರಾಷ್ಟ್ರ ಸರ್ಕಾರ ರಚಿಸಿರುವ ನ್ಯಾಯಮೂರ್ತಿ ಶಿಂಧೆ ಆಯೋಗಕ್ಕೆ ಯಾವುದೇ ಸಾಂವಿಧಾನಿಕ ಆಧಾರವಿಲ್ಲ ಎಂದು ಪ್ರಕಾಶ್ ಶೆಂಡ್ಗೆ ಹೇಳಿದ್ದರು. ಸಮಿತಿಯು ಯಾರಿಗೂ ಕುಂಬಿ ಪ್ರಮಾಣಪತ್ರಗಳನ್ನು ನೀಡುವ ಸಾಂವಿಧಾನಿಕ ಹಕ್ಕು ಹೊಂದಿಲ್ಲ. ಆ ಸ್ಥಾನಮಾನ ನೀಡಲು ಅದು ಹಿಂದುಳಿದ ವರ್ಗಗಳ ಆಯೋಗವಲ್ಲ. ಮರಾಠರು ಎಂದಿಗೂ ಹಿಂದುಳಿದಿಲ್ಲ ಮತ್ತು ಇದು ಹಲವಾರು ಬಾರಿ ಸಾಬೀತಾಗಿದೆ ಎಂದು ಹೇಳಿದ್ದರು.

ಇದನ್ನು ಓದಿ: ಮೋದಿ, ಕೇಂದ್ರ ಸರ್ಕಾರವನ್ನು ಟೀಕಿಸಿ ಕಿರುನಾಟಕ ಪ್ರದರ್ಶನ: ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಿದ ಕೇರಳ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...