Homeಕರ್ನಾಟಕಫಲಿತಾಂಶ ಬಂದು 2 ತಿಂಗಳಾಯ್ತು, ಬಿಜೆಪಿಯ ವಿರೋಧ ಪಕ್ಷದ ನಾಯಕನೆಲ್ಲಿ?: ಕಾಂಗ್ರೆಸ್ ಪ್ರಶ್ನೆ

ಫಲಿತಾಂಶ ಬಂದು 2 ತಿಂಗಳಾಯ್ತು, ಬಿಜೆಪಿಯ ವಿರೋಧ ಪಕ್ಷದ ನಾಯಕನೆಲ್ಲಿ?: ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆದು ಫಲಿತಾಂಶ ಬಂದು 60ದಿನಗಳು ಕಳೆದಿವೆ ಆದರೆ ಪ್ರಬಲ ವಿರೋಧ ಪಕ್ಷವಾಗಿರುವ ಬಿಜೆಪಿಯು ಈವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ರಾಜ್ಯ ಕಾಂಗ್ರೆಸ್ ನಾಯಕರು ವಿಪಕ್ಷ ನಾಯಕನ ನೇಮಕ ವಿಚಾರಕ್ಕೆ ಟೀಕೆ ಮಾಡುತ್ತಲೇ ಇದ್ದಾರೆ. ಇದು ರಾಜ್ಯ ಬಿಜೆಪಿ ನಾಯಕರಿಗೆ ಮುಜುಗರ ಉಂಟು ಮಾಡಿದೆ.

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಚುನಾವಣೆ ಫಲಿತಾಂಶ ಬಂದು 2 ತಿಂಗಳಾಯ್ತು, ಅಧಿವೇಶನವೂ ಪ್ರಾರಂಭ ಆಯ್ತು, ಆದರೆ ಬಿಜೆಪಿಯ ವಿರೋಧ ಪಕ್ಷದ ನಾಯಕನೆಲ್ಲಿ? ನಾವಿಕನಿಲ್ಲದ ನೌಕೆ, ನಾಯಕನಿಲ್ಲದ ಬಿಜೆಪಿ ಎರಡೂ ಮುಳುಗುವುದು ನಿಶ್ಚಿತ!” ಎಂದು ಹೇಳಿದೆ

”ಹಿಂದೆ ಬಿಎಸ್ ಯಡಿಯೂರಪ್ಪ ಅವರು ಸಂಪುಟ ರಚನೆಗೆ ತಿಂಗಳುಗಟ್ಟಲೆ ಹೈಕಮಾಂಡ್ ಬಾಗಿಲು ಕಾದಿದ್ದರು, ನಂತರ ಬಸವರಾಜ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಗೆ 15ಕ್ಕೂ ಹೆಚ್ಚು ಬಾರಿ ದೆಹಲಿ ದಂಡಯಾತ್ರೆ ಮಾಡಿದ್ದರು, ಆದರೂ ಸಂಪುಟ ವಿಸ್ತರಣೆಯಾಗಲಿಲ್ಲ. ಈಗ ವಿಪಕ್ಷ ನಾಯಕನ ಆಯ್ಕೆಗೆ ಸತಾಯಿಸುತ್ತಿದ್ದಾರೆ” ಎಂದು ಕಾಂಗ್ರೆಸ್ ಟೀಕೆ ಮಾಡಿದೆ.

”ಬಿಜೆಪಿ ಹೈಕಮಾಂಡಿಗೆ ಕರ್ನಾಟಕವನ್ನಷ್ಟೇ ಅಲ್ಲ, ಕರ್ನಾಟಕದ ಬಿಜೆಪಿಯನ್ನು ಕಂಡರೂ ತಾತ್ಸಾರವೇ?” ಎಂದು ಪ್ರಶ್ನೆ ಮಾಡಿದೆ.

ವಿಧಾನಮಂಡಲ ಅಧಿವೇಶನ ಆರಂಭವಾದರೂ ವಿಧಾನಸಭೆಯ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದಿರುವುದಕ್ಕೆ ಬಿಜೆಪಿಗೆ ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್ ಈ ಹಿಂದೆಯೂ ಸಾಕಷ್ಟು ಬಾರಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿತ್ತು.

”ಡಿಯರ್ ಬಿಜೆಪಿ, ಸರ್ಕಾರ ರಚನೆ ಆಯ್ತು, ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, ಸದನವೂ ಪ್ರಾರಂಭವಾಯ್ತು. ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ ಎಂದರೆ ಎಂತಹ ಹಿನಾಯ ಸ್ಥಿತಿಯಲ್ಲಿದೆ!” ಎಂದು ಕಾಂಗ್ರೆಸ್ ವ್ಯಂಗ್ಯವಾಡಿತ್ತು.

ಇದನ್ನೂ ಓದಿ: ಅಕ್ರಮ ಗಣಿಗಾರಿಕೆ: ಮಾಜಿ ಸಚಿವ ಮುನಿರತ್ನ ಸೇರಿ ನಾಲ್ವರ ವಿರುದ್ಧ FIR ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...