Homeಮುಖಪುಟ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ಕೇರಳದಲ್ಲಿ ನಡೆದ ಈ ಅಮಾನವೀಯ ಹತ್ಯೆಗೆ ಸಂಬಂಧಿಸಿದಂತೆ 16 ಜನರ ಮೇಲೆ ಚಾರ್ಜ್ ಸಲ್ಲಿಕೆಯಾಗಿದೆ. ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ!

- Advertisement -
- Advertisement -

“ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯಲ್ಲಿ 2018ರ ಫೆಬ್ರವರಿ 22ರಂದು ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದ ಆರೋಪದಲ್ಲಿ ಹತ್ಯೆಗೀಡಾದ 30 ವರ್ಷದ ಆದಿವಾಸಿ ಯುವಕ ಎ.ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡುತ್ತಾರೆ.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989ರ ಅಡಿಯಲ್ಲಿ ಕೊಲೆ ಆರೋಪವನ್ನು ಮಾಡಲಾಗಿದೆ. ಈ ವರ್ಷದ ಫೆಬ್ರವರಿ 22 ಬಂದರೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂಬ ಬಗ್ಗೆ ಮಧು ಅವರ ತಾಯಿ ಗೊಂದಲಕ್ಕೊಳಗಾಗಿದ್ದಾರೆ.

“ಅವರು (ಪೊಲೀಸರು) ವಿಭಿನ್ನ ಕಾರಣಗಳನ್ನು ನೀಡುತ್ತಾರೆ. ಅದು ನನಗೆ ಅರ್ಥವಾಗುತ್ತಿಲ್ಲ. ನಮ್ಮಲ್ಲಿ ಹಣ ಮತ್ತು ಪ್ರಭಾವ ಇಲ್ಲ. ಎಲ್ಲಾ ಆರೋಪಿಗಳು ಇಷ್ಟು ವರ್ಷಗಳ ಕಾಲ ನೆಮ್ಮದಿಯಾಗಿ ಅಡ್ಡಾಡುತ್ತಿದ್ದಾರೆ” ಎಂದು ಮಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಂತದಲ್ಲಿ ನ್ಯಾಯಕ್ಕಾಗಿ ಯಾರನ್ನು ಭೇಟಿ ಮಾಡಬೇಕು ಎಂಬುದು ಸಂತ್ರಸ್ತ ಕುಟುಂಬಕ್ಕೆ ತಿಳಿಯದಾಗಿದೆ. ಮನ್ನಾರ್ಕ್ಕಾಡ್ ಎಸ್‌ಸಿ/ಎಸ್‌ಟಿ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜನವರಿ 25, 2022) ಪ್ರಕರಣದ ವಿಚಾರಣೆ ಇತ್ತು. ಆದರೆ ಮಧು ಅವರನ್ನು ಪ್ರತಿನಿಧಿಸುವ ಯಾವುದೇ ವಕೀಲರಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಂದು ವಾರದ ಹಿಂದೆಯೇ ಹುದ್ದೆಗೆ ರಾಜೀನಾಮೆ ನೀಡಿದ್ದರು.

ವಿಚಾರಣೆಯ ಹಾದಿಯು ಆರಂಭದಿಂದಲೂ ಹಿನ್ನಡೆಯನ್ನ ಅನುಭವಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕದಲ್ಲಿ ಸರ್ಕಾರದ ವಿಳಂಬ ಮಾಡಿತು. ವಕೀಲರು ಕೂಡ ನಿರ್ಲಿಪ್ತ ಧೋರಣೆ ತೋರಿದರು. ಪ್ರಕರಣವು ಇಂದು ರಾಜಕೀಯ ಪ್ರಭಾವದಿಂದ ತೆವಳುತ್ತಿದೆ. ಪ್ರಕರಣದ ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

ಮಧು ಅವರು ಅತ್ತಪ್ಪಾಡಿ ಸಮೀಪದ ಅರಣ್ಯದ ಬಫರ್ ಝೋನ್ ಪ್ರದೇಶದಲ್ಲಿ ವಾಸವಿದ್ದರು. ಗುಂಪೊಂದು ಮಧು ಅವರನ್ನು ಸೆರೆ ಹಿಡಿದಿತ್ತು. ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದಿದ್ದಾನೆ ಎಂದು ಆರೋಪಿಸಿ ಮಧು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿತು. ನಂತರ ಆ ಗುಂಪು ಮಧು ಅವರನ್ನು ಪಾಲಕ್ಕಾಡ್‌ನ ಅಗಲಿ ಪೊಲೀಸರಿಗೆ ಒಪ್ಪಿಸಿತ್ತು. ಆದರೆ, ಪೊಲೀಸ್ ಠಾಣೆಗೆ ತೆರಳುವ ಮಾರ್ಗಮಧ್ಯೆ ಮಧು ಅವರನ್ನು ಕೊಟ್ಟತ್ತರ ಸರಕಾರಿ ಗಿರಿಜನ ವಿಶೇಷ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪೊಲೀಸ್ ಜೀಪಿನಲ್ಲೇ ಕುಸಿದು ಬಿದ್ದು ಮಧು ಮೃತಪಟ್ಟರು. ಕೇರಳ ಅಷ್ಟೇ ಅಲ್ಲದೇ ಇಡೀ ಭಾರತವು ಈ ಕ್ರೌರ್ಯವನ್ನು ಖಂಡಿಸಿತು. ಮಧು ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿತು.

ಸುದೀರ್ಘ ವಿಚಾರಣೆ

ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಮಧು ಪ್ರಕರಣದ ವಿಚಾರಣೆ ನಡೆಸುತ್ತಿರುವ ಪಾಲಕ್ಕಾಡ್‌ನ ಮನ್ನಾರ್ಕ್ಕಾಡ್  ಎಸ್‌ಸಿ/ಎಸ್‌‌ಟಿ ವಿಶೇಷ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದ ಕಾರಣ ವಿಚಾರಣೆ ನಡೆಯಲಿಲ್ಲ. ಅಲ್ಲದೆ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸಲು ಬಹಳ ಸಮಯ ತೆಗೆದುಕೊಂಡಿತು.

ಆದಿವಾಸಿ ವ್ಯಕ್ತಿಯ ಹತ್ಯೆಯ ನಂತರ ರಚಿಸಲಾದ ‘ಜಸ್ಟೀಸ್ ಫಾರ್ ಮಧು’ ಕ್ರಿಯಾ ಮಂಡಳಿಯು ಸರ್ಕಾರದಿಂದ ನೇಮಿಸಲ್ಪಟ್ಟ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ವಾಗ್ದಾಳಿ ನಡೆಸಿತು. ಸರ್ಕಾರಿ ವಕೀಲರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆಂದು ಕ್ರಿಯಾ ಸಮಿತಿ ಆರೋಪಿಸಿತು. ನಂತರ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಕ್ಕೆ ಕೋರಿದರು.

ಕೇರಳ ಸರ್ಕಾರವು ವಕೀಲ ಪಿ.ಗೋಪಿನಾಥ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಿತು. “ನವೆಂಬರ್ 2018ರಲ್ಲಿ, ಅತ್ತಪಾಡಿಯಲ್ಲಿ ತಾತ್ಕಾಲಿಕ ವಸತಿ ಮತ್ತು ಕಚೇರಿಗಾಗಿ ಗೋಪಿನಾಥ್ ಅವರು ಬೇಡಿಕೆ ಇಟ್ಟರು. ಇದನ್ನು ಒಪ್ಪದ ಸರ್ಕಾರ ನೇಮಕಾತಿ ಆದೇಶವನ್ನು ರದ್ದುಗೊಳಿಸಿತು” ಎಂದು ಕ್ರಿಯಾ ಮಂಡಳಿಯ ಪ್ರಸ್ತುತ ಅಧ್ಯಕ್ಷ ಸುರೇಶ್ ಹೇಳಿದ್ದಾರೆ.

ಶುಲ್ಕವೂ ವಿವಾದದ ವಿಷಯವಾಯಿತು. ಎಲ್‌ಡಿಎಫ್ ಸರ್ಕಾರವು ಪಿ.ಗೋಪಿನಾಥ್ ಅವರ ನೇಮಕ ಮಾಡುವ ವೆಚ್ಚವನ್ನು ಭರಿಸಲು ಸಿದ್ಧವಿಲ್ಲ ಎಂದು ವರದಿಯಾಗಿದೆ. ಆದರೆ ಆನ್‌ಮನೋರಮಾ ವೆಬ್‌ಸೈಟ್‌ ಪ್ರಕಾರ, ಕೇರಳ ಹೈಕೋರ್ಟ್‌ನಲ್ಲಿ ಕನಿಷ್ಠ ಐದು ಪ್ರಕರಣಗಳಲ್ಲಿ ಹಿರಿಯ ವಕೀಲರ ಶುಲ್ಕಕ್ಕಾಗಿ ಸರ್ಕಾರವು 2.59 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡಿದೆ ಎಂದು ಆರ್‌ಟಿಐ ಬಹಿರಂಗಪಡಿಸಿದೆ.

ಕೇರಳದ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಎ.ಕೆ.ಬಾಲನ್ ಅವರು, “ಒಂದೇ ಪ್ರಕರಣಕ್ಕೆ ಎಸ್‌ಪಿಪಿಯನ್ನು ನೇಮಿಸುವ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಅನಿಸಿದ್ದರಿಂದ ನೇಮಕಾತಿ ವಿಳಂಬವಾಗಿದೆ” ಎಂದಿರುವುದು ವರದಿಯಾಗಿದೆ.

ಕ್ರಿಯಾ ಮಂಡಳಿ ಮತ್ತು ಕುಟುಂಬವು ಪ್ರಕರಣವನ್ನು ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಹಸ್ತಾಂತರಿಸಲು ಸಿದ್ಧವಾಗಿಲ್ಲ. ಏಕೆಂದರೆ ಈ ಹುದ್ದೆಯು ರಾಜಕೀಯ ಪ್ರಭಾವದಿಂದ ಕೂಡಿದೆ. ಹೆಚ್ಚಿನ ಆರೋಪಿಗಳು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಥವಾ ಸಿಪಿಐ(ಎಂ) ಭಾಗವಾಗಿದ್ದಾರೆ. ಹೀಗೆ ಒಂದಲ್ಲ ಒಂದು ಕಾರಣಕ್ಕೆ ಮಧು ಹತ್ಯೆ ಪ್ರಕರಣ ವಿಳಂಬವಾಗುತ್ತಲೇ ಸಾಗಿದೆ.

ವರದಿ ಕೃಪೆ: ನ್ಯೂಸ್‌ ಮಿನಿಟ್‌


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....