Homeಮುಖಪುಟ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ಕೇರಳದಲ್ಲಿ ನಡೆದ ಈ ಅಮಾನವೀಯ ಹತ್ಯೆಗೆ ಸಂಬಂಧಿಸಿದಂತೆ 16 ಜನರ ಮೇಲೆ ಚಾರ್ಜ್ ಸಲ್ಲಿಕೆಯಾಗಿದೆ. ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ!

- Advertisement -
- Advertisement -

“ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯಲ್ಲಿ 2018ರ ಫೆಬ್ರವರಿ 22ರಂದು ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದ ಆರೋಪದಲ್ಲಿ ಹತ್ಯೆಗೀಡಾದ 30 ವರ್ಷದ ಆದಿವಾಸಿ ಯುವಕ ಎ.ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡುತ್ತಾರೆ.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989ರ ಅಡಿಯಲ್ಲಿ ಕೊಲೆ ಆರೋಪವನ್ನು ಮಾಡಲಾಗಿದೆ. ಈ ವರ್ಷದ ಫೆಬ್ರವರಿ 22 ಬಂದರೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂಬ ಬಗ್ಗೆ ಮಧು ಅವರ ತಾಯಿ ಗೊಂದಲಕ್ಕೊಳಗಾಗಿದ್ದಾರೆ.

“ಅವರು (ಪೊಲೀಸರು) ವಿಭಿನ್ನ ಕಾರಣಗಳನ್ನು ನೀಡುತ್ತಾರೆ. ಅದು ನನಗೆ ಅರ್ಥವಾಗುತ್ತಿಲ್ಲ. ನಮ್ಮಲ್ಲಿ ಹಣ ಮತ್ತು ಪ್ರಭಾವ ಇಲ್ಲ. ಎಲ್ಲಾ ಆರೋಪಿಗಳು ಇಷ್ಟು ವರ್ಷಗಳ ಕಾಲ ನೆಮ್ಮದಿಯಾಗಿ ಅಡ್ಡಾಡುತ್ತಿದ್ದಾರೆ” ಎಂದು ಮಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಂತದಲ್ಲಿ ನ್ಯಾಯಕ್ಕಾಗಿ ಯಾರನ್ನು ಭೇಟಿ ಮಾಡಬೇಕು ಎಂಬುದು ಸಂತ್ರಸ್ತ ಕುಟುಂಬಕ್ಕೆ ತಿಳಿಯದಾಗಿದೆ. ಮನ್ನಾರ್ಕ್ಕಾಡ್ ಎಸ್‌ಸಿ/ಎಸ್‌ಟಿ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜನವರಿ 25, 2022) ಪ್ರಕರಣದ ವಿಚಾರಣೆ ಇತ್ತು. ಆದರೆ ಮಧು ಅವರನ್ನು ಪ್ರತಿನಿಧಿಸುವ ಯಾವುದೇ ವಕೀಲರಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಂದು ವಾರದ ಹಿಂದೆಯೇ ಹುದ್ದೆಗೆ ರಾಜೀನಾಮೆ ನೀಡಿದ್ದರು.

ವಿಚಾರಣೆಯ ಹಾದಿಯು ಆರಂಭದಿಂದಲೂ ಹಿನ್ನಡೆಯನ್ನ ಅನುಭವಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕದಲ್ಲಿ ಸರ್ಕಾರದ ವಿಳಂಬ ಮಾಡಿತು. ವಕೀಲರು ಕೂಡ ನಿರ್ಲಿಪ್ತ ಧೋರಣೆ ತೋರಿದರು. ಪ್ರಕರಣವು ಇಂದು ರಾಜಕೀಯ ಪ್ರಭಾವದಿಂದ ತೆವಳುತ್ತಿದೆ. ಪ್ರಕರಣದ ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

ಮಧು ಅವರು ಅತ್ತಪ್ಪಾಡಿ ಸಮೀಪದ ಅರಣ್ಯದ ಬಫರ್ ಝೋನ್ ಪ್ರದೇಶದಲ್ಲಿ ವಾಸವಿದ್ದರು. ಗುಂಪೊಂದು ಮಧು ಅವರನ್ನು ಸೆರೆ ಹಿಡಿದಿತ್ತು. ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದಿದ್ದಾನೆ ಎಂದು ಆರೋಪಿಸಿ ಮಧು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿತು. ನಂತರ ಆ ಗುಂಪು ಮಧು ಅವರನ್ನು ಪಾಲಕ್ಕಾಡ್‌ನ ಅಗಲಿ ಪೊಲೀಸರಿಗೆ ಒಪ್ಪಿಸಿತ್ತು. ಆದರೆ, ಪೊಲೀಸ್ ಠಾಣೆಗೆ ತೆರಳುವ ಮಾರ್ಗಮಧ್ಯೆ ಮಧು ಅವರನ್ನು ಕೊಟ್ಟತ್ತರ ಸರಕಾರಿ ಗಿರಿಜನ ವಿಶೇಷ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪೊಲೀಸ್ ಜೀಪಿನಲ್ಲೇ ಕುಸಿದು ಬಿದ್ದು ಮಧು ಮೃತಪಟ್ಟರು. ಕೇರಳ ಅಷ್ಟೇ ಅಲ್ಲದೇ ಇಡೀ ಭಾರತವು ಈ ಕ್ರೌರ್ಯವನ್ನು ಖಂಡಿಸಿತು. ಮಧು ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿತು.

ಸುದೀರ್ಘ ವಿಚಾರಣೆ

ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಮಧು ಪ್ರಕರಣದ ವಿಚಾರಣೆ ನಡೆಸುತ್ತಿರುವ ಪಾಲಕ್ಕಾಡ್‌ನ ಮನ್ನಾರ್ಕ್ಕಾಡ್  ಎಸ್‌ಸಿ/ಎಸ್‌‌ಟಿ ವಿಶೇಷ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದ ಕಾರಣ ವಿಚಾರಣೆ ನಡೆಯಲಿಲ್ಲ. ಅಲ್ಲದೆ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸಲು ಬಹಳ ಸಮಯ ತೆಗೆದುಕೊಂಡಿತು.

ಆದಿವಾಸಿ ವ್ಯಕ್ತಿಯ ಹತ್ಯೆಯ ನಂತರ ರಚಿಸಲಾದ ‘ಜಸ್ಟೀಸ್ ಫಾರ್ ಮಧು’ ಕ್ರಿಯಾ ಮಂಡಳಿಯು ಸರ್ಕಾರದಿಂದ ನೇಮಿಸಲ್ಪಟ್ಟ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ವಾಗ್ದಾಳಿ ನಡೆಸಿತು. ಸರ್ಕಾರಿ ವಕೀಲರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆಂದು ಕ್ರಿಯಾ ಸಮಿತಿ ಆರೋಪಿಸಿತು. ನಂತರ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಕ್ಕೆ ಕೋರಿದರು.

ಕೇರಳ ಸರ್ಕಾರವು ವಕೀಲ ಪಿ.ಗೋಪಿನಾಥ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಿತು. “ನವೆಂಬರ್ 2018ರಲ್ಲಿ, ಅತ್ತಪಾಡಿಯಲ್ಲಿ ತಾತ್ಕಾಲಿಕ ವಸತಿ ಮತ್ತು ಕಚೇರಿಗಾಗಿ ಗೋಪಿನಾಥ್ ಅವರು ಬೇಡಿಕೆ ಇಟ್ಟರು. ಇದನ್ನು ಒಪ್ಪದ ಸರ್ಕಾರ ನೇಮಕಾತಿ ಆದೇಶವನ್ನು ರದ್ದುಗೊಳಿಸಿತು” ಎಂದು ಕ್ರಿಯಾ ಮಂಡಳಿಯ ಪ್ರಸ್ತುತ ಅಧ್ಯಕ್ಷ ಸುರೇಶ್ ಹೇಳಿದ್ದಾರೆ.

ಶುಲ್ಕವೂ ವಿವಾದದ ವಿಷಯವಾಯಿತು. ಎಲ್‌ಡಿಎಫ್ ಸರ್ಕಾರವು ಪಿ.ಗೋಪಿನಾಥ್ ಅವರ ನೇಮಕ ಮಾಡುವ ವೆಚ್ಚವನ್ನು ಭರಿಸಲು ಸಿದ್ಧವಿಲ್ಲ ಎಂದು ವರದಿಯಾಗಿದೆ. ಆದರೆ ಆನ್‌ಮನೋರಮಾ ವೆಬ್‌ಸೈಟ್‌ ಪ್ರಕಾರ, ಕೇರಳ ಹೈಕೋರ್ಟ್‌ನಲ್ಲಿ ಕನಿಷ್ಠ ಐದು ಪ್ರಕರಣಗಳಲ್ಲಿ ಹಿರಿಯ ವಕೀಲರ ಶುಲ್ಕಕ್ಕಾಗಿ ಸರ್ಕಾರವು 2.59 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡಿದೆ ಎಂದು ಆರ್‌ಟಿಐ ಬಹಿರಂಗಪಡಿಸಿದೆ.

ಕೇರಳದ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಎ.ಕೆ.ಬಾಲನ್ ಅವರು, “ಒಂದೇ ಪ್ರಕರಣಕ್ಕೆ ಎಸ್‌ಪಿಪಿಯನ್ನು ನೇಮಿಸುವ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಅನಿಸಿದ್ದರಿಂದ ನೇಮಕಾತಿ ವಿಳಂಬವಾಗಿದೆ” ಎಂದಿರುವುದು ವರದಿಯಾಗಿದೆ.

ಕ್ರಿಯಾ ಮಂಡಳಿ ಮತ್ತು ಕುಟುಂಬವು ಪ್ರಕರಣವನ್ನು ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಹಸ್ತಾಂತರಿಸಲು ಸಿದ್ಧವಾಗಿಲ್ಲ. ಏಕೆಂದರೆ ಈ ಹುದ್ದೆಯು ರಾಜಕೀಯ ಪ್ರಭಾವದಿಂದ ಕೂಡಿದೆ. ಹೆಚ್ಚಿನ ಆರೋಪಿಗಳು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಥವಾ ಸಿಪಿಐ(ಎಂ) ಭಾಗವಾಗಿದ್ದಾರೆ. ಹೀಗೆ ಒಂದಲ್ಲ ಒಂದು ಕಾರಣಕ್ಕೆ ಮಧು ಹತ್ಯೆ ಪ್ರಕರಣ ವಿಳಂಬವಾಗುತ್ತಲೇ ಸಾಗಿದೆ.

ವರದಿ ಕೃಪೆ: ನ್ಯೂಸ್‌ ಮಿನಿಟ್‌


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...