Homeಮುಖಪುಟ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ಕೇರಳದಲ್ಲಿ ನಡೆದ ಈ ಅಮಾನವೀಯ ಹತ್ಯೆಗೆ ಸಂಬಂಧಿಸಿದಂತೆ 16 ಜನರ ಮೇಲೆ ಚಾರ್ಜ್ ಸಲ್ಲಿಕೆಯಾಗಿದೆ. ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ!

- Advertisement -
- Advertisement -

“ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯಲ್ಲಿ 2018ರ ಫೆಬ್ರವರಿ 22ರಂದು ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದ ಆರೋಪದಲ್ಲಿ ಹತ್ಯೆಗೀಡಾದ 30 ವರ್ಷದ ಆದಿವಾಸಿ ಯುವಕ ಎ.ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡುತ್ತಾರೆ.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989ರ ಅಡಿಯಲ್ಲಿ ಕೊಲೆ ಆರೋಪವನ್ನು ಮಾಡಲಾಗಿದೆ. ಈ ವರ್ಷದ ಫೆಬ್ರವರಿ 22 ಬಂದರೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂಬ ಬಗ್ಗೆ ಮಧು ಅವರ ತಾಯಿ ಗೊಂದಲಕ್ಕೊಳಗಾಗಿದ್ದಾರೆ.

“ಅವರು (ಪೊಲೀಸರು) ವಿಭಿನ್ನ ಕಾರಣಗಳನ್ನು ನೀಡುತ್ತಾರೆ. ಅದು ನನಗೆ ಅರ್ಥವಾಗುತ್ತಿಲ್ಲ. ನಮ್ಮಲ್ಲಿ ಹಣ ಮತ್ತು ಪ್ರಭಾವ ಇಲ್ಲ. ಎಲ್ಲಾ ಆರೋಪಿಗಳು ಇಷ್ಟು ವರ್ಷಗಳ ಕಾಲ ನೆಮ್ಮದಿಯಾಗಿ ಅಡ್ಡಾಡುತ್ತಿದ್ದಾರೆ” ಎಂದು ಮಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಂತದಲ್ಲಿ ನ್ಯಾಯಕ್ಕಾಗಿ ಯಾರನ್ನು ಭೇಟಿ ಮಾಡಬೇಕು ಎಂಬುದು ಸಂತ್ರಸ್ತ ಕುಟುಂಬಕ್ಕೆ ತಿಳಿಯದಾಗಿದೆ. ಮನ್ನಾರ್ಕ್ಕಾಡ್ ಎಸ್‌ಸಿ/ಎಸ್‌ಟಿ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜನವರಿ 25, 2022) ಪ್ರಕರಣದ ವಿಚಾರಣೆ ಇತ್ತು. ಆದರೆ ಮಧು ಅವರನ್ನು ಪ್ರತಿನಿಧಿಸುವ ಯಾವುದೇ ವಕೀಲರಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಂದು ವಾರದ ಹಿಂದೆಯೇ ಹುದ್ದೆಗೆ ರಾಜೀನಾಮೆ ನೀಡಿದ್ದರು.

ವಿಚಾರಣೆಯ ಹಾದಿಯು ಆರಂಭದಿಂದಲೂ ಹಿನ್ನಡೆಯನ್ನ ಅನುಭವಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕದಲ್ಲಿ ಸರ್ಕಾರದ ವಿಳಂಬ ಮಾಡಿತು. ವಕೀಲರು ಕೂಡ ನಿರ್ಲಿಪ್ತ ಧೋರಣೆ ತೋರಿದರು. ಪ್ರಕರಣವು ಇಂದು ರಾಜಕೀಯ ಪ್ರಭಾವದಿಂದ ತೆವಳುತ್ತಿದೆ. ಪ್ರಕರಣದ ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

ಮಧು ಅವರು ಅತ್ತಪ್ಪಾಡಿ ಸಮೀಪದ ಅರಣ್ಯದ ಬಫರ್ ಝೋನ್ ಪ್ರದೇಶದಲ್ಲಿ ವಾಸವಿದ್ದರು. ಗುಂಪೊಂದು ಮಧು ಅವರನ್ನು ಸೆರೆ ಹಿಡಿದಿತ್ತು. ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದಿದ್ದಾನೆ ಎಂದು ಆರೋಪಿಸಿ ಮಧು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿತು. ನಂತರ ಆ ಗುಂಪು ಮಧು ಅವರನ್ನು ಪಾಲಕ್ಕಾಡ್‌ನ ಅಗಲಿ ಪೊಲೀಸರಿಗೆ ಒಪ್ಪಿಸಿತ್ತು. ಆದರೆ, ಪೊಲೀಸ್ ಠಾಣೆಗೆ ತೆರಳುವ ಮಾರ್ಗಮಧ್ಯೆ ಮಧು ಅವರನ್ನು ಕೊಟ್ಟತ್ತರ ಸರಕಾರಿ ಗಿರಿಜನ ವಿಶೇಷ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪೊಲೀಸ್ ಜೀಪಿನಲ್ಲೇ ಕುಸಿದು ಬಿದ್ದು ಮಧು ಮೃತಪಟ್ಟರು. ಕೇರಳ ಅಷ್ಟೇ ಅಲ್ಲದೇ ಇಡೀ ಭಾರತವು ಈ ಕ್ರೌರ್ಯವನ್ನು ಖಂಡಿಸಿತು. ಮಧು ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿತು.

ಸುದೀರ್ಘ ವಿಚಾರಣೆ

ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಮಧು ಪ್ರಕರಣದ ವಿಚಾರಣೆ ನಡೆಸುತ್ತಿರುವ ಪಾಲಕ್ಕಾಡ್‌ನ ಮನ್ನಾರ್ಕ್ಕಾಡ್  ಎಸ್‌ಸಿ/ಎಸ್‌‌ಟಿ ವಿಶೇಷ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದ ಕಾರಣ ವಿಚಾರಣೆ ನಡೆಯಲಿಲ್ಲ. ಅಲ್ಲದೆ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸಲು ಬಹಳ ಸಮಯ ತೆಗೆದುಕೊಂಡಿತು.

ಆದಿವಾಸಿ ವ್ಯಕ್ತಿಯ ಹತ್ಯೆಯ ನಂತರ ರಚಿಸಲಾದ ‘ಜಸ್ಟೀಸ್ ಫಾರ್ ಮಧು’ ಕ್ರಿಯಾ ಮಂಡಳಿಯು ಸರ್ಕಾರದಿಂದ ನೇಮಿಸಲ್ಪಟ್ಟ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ವಾಗ್ದಾಳಿ ನಡೆಸಿತು. ಸರ್ಕಾರಿ ವಕೀಲರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆಂದು ಕ್ರಿಯಾ ಸಮಿತಿ ಆರೋಪಿಸಿತು. ನಂತರ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಕ್ಕೆ ಕೋರಿದರು.

ಕೇರಳ ಸರ್ಕಾರವು ವಕೀಲ ಪಿ.ಗೋಪಿನಾಥ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಿತು. “ನವೆಂಬರ್ 2018ರಲ್ಲಿ, ಅತ್ತಪಾಡಿಯಲ್ಲಿ ತಾತ್ಕಾಲಿಕ ವಸತಿ ಮತ್ತು ಕಚೇರಿಗಾಗಿ ಗೋಪಿನಾಥ್ ಅವರು ಬೇಡಿಕೆ ಇಟ್ಟರು. ಇದನ್ನು ಒಪ್ಪದ ಸರ್ಕಾರ ನೇಮಕಾತಿ ಆದೇಶವನ್ನು ರದ್ದುಗೊಳಿಸಿತು” ಎಂದು ಕ್ರಿಯಾ ಮಂಡಳಿಯ ಪ್ರಸ್ತುತ ಅಧ್ಯಕ್ಷ ಸುರೇಶ್ ಹೇಳಿದ್ದಾರೆ.

ಶುಲ್ಕವೂ ವಿವಾದದ ವಿಷಯವಾಯಿತು. ಎಲ್‌ಡಿಎಫ್ ಸರ್ಕಾರವು ಪಿ.ಗೋಪಿನಾಥ್ ಅವರ ನೇಮಕ ಮಾಡುವ ವೆಚ್ಚವನ್ನು ಭರಿಸಲು ಸಿದ್ಧವಿಲ್ಲ ಎಂದು ವರದಿಯಾಗಿದೆ. ಆದರೆ ಆನ್‌ಮನೋರಮಾ ವೆಬ್‌ಸೈಟ್‌ ಪ್ರಕಾರ, ಕೇರಳ ಹೈಕೋರ್ಟ್‌ನಲ್ಲಿ ಕನಿಷ್ಠ ಐದು ಪ್ರಕರಣಗಳಲ್ಲಿ ಹಿರಿಯ ವಕೀಲರ ಶುಲ್ಕಕ್ಕಾಗಿ ಸರ್ಕಾರವು 2.59 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡಿದೆ ಎಂದು ಆರ್‌ಟಿಐ ಬಹಿರಂಗಪಡಿಸಿದೆ.

ಕೇರಳದ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಎ.ಕೆ.ಬಾಲನ್ ಅವರು, “ಒಂದೇ ಪ್ರಕರಣಕ್ಕೆ ಎಸ್‌ಪಿಪಿಯನ್ನು ನೇಮಿಸುವ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಅನಿಸಿದ್ದರಿಂದ ನೇಮಕಾತಿ ವಿಳಂಬವಾಗಿದೆ” ಎಂದಿರುವುದು ವರದಿಯಾಗಿದೆ.

ಕ್ರಿಯಾ ಮಂಡಳಿ ಮತ್ತು ಕುಟುಂಬವು ಪ್ರಕರಣವನ್ನು ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಹಸ್ತಾಂತರಿಸಲು ಸಿದ್ಧವಾಗಿಲ್ಲ. ಏಕೆಂದರೆ ಈ ಹುದ್ದೆಯು ರಾಜಕೀಯ ಪ್ರಭಾವದಿಂದ ಕೂಡಿದೆ. ಹೆಚ್ಚಿನ ಆರೋಪಿಗಳು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಥವಾ ಸಿಪಿಐ(ಎಂ) ಭಾಗವಾಗಿದ್ದಾರೆ. ಹೀಗೆ ಒಂದಲ್ಲ ಒಂದು ಕಾರಣಕ್ಕೆ ಮಧು ಹತ್ಯೆ ಪ್ರಕರಣ ವಿಳಂಬವಾಗುತ್ತಲೇ ಸಾಗಿದೆ.

ವರದಿ ಕೃಪೆ: ನ್ಯೂಸ್‌ ಮಿನಿಟ್‌


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...