Homeಮುಖಪುಟ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ಕೇರಳದಲ್ಲಿ ನಡೆದ ಈ ಅಮಾನವೀಯ ಹತ್ಯೆಗೆ ಸಂಬಂಧಿಸಿದಂತೆ 16 ಜನರ ಮೇಲೆ ಚಾರ್ಜ್ ಸಲ್ಲಿಕೆಯಾಗಿದೆ. ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ!

- Advertisement -
- Advertisement -

“ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯಲ್ಲಿ 2018ರ ಫೆಬ್ರವರಿ 22ರಂದು ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದ ಆರೋಪದಲ್ಲಿ ಹತ್ಯೆಗೀಡಾದ 30 ವರ್ಷದ ಆದಿವಾಸಿ ಯುವಕ ಎ.ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡುತ್ತಾರೆ.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989ರ ಅಡಿಯಲ್ಲಿ ಕೊಲೆ ಆರೋಪವನ್ನು ಮಾಡಲಾಗಿದೆ. ಈ ವರ್ಷದ ಫೆಬ್ರವರಿ 22 ಬಂದರೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂಬ ಬಗ್ಗೆ ಮಧು ಅವರ ತಾಯಿ ಗೊಂದಲಕ್ಕೊಳಗಾಗಿದ್ದಾರೆ.

“ಅವರು (ಪೊಲೀಸರು) ವಿಭಿನ್ನ ಕಾರಣಗಳನ್ನು ನೀಡುತ್ತಾರೆ. ಅದು ನನಗೆ ಅರ್ಥವಾಗುತ್ತಿಲ್ಲ. ನಮ್ಮಲ್ಲಿ ಹಣ ಮತ್ತು ಪ್ರಭಾವ ಇಲ್ಲ. ಎಲ್ಲಾ ಆರೋಪಿಗಳು ಇಷ್ಟು ವರ್ಷಗಳ ಕಾಲ ನೆಮ್ಮದಿಯಾಗಿ ಅಡ್ಡಾಡುತ್ತಿದ್ದಾರೆ” ಎಂದು ಮಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಂತದಲ್ಲಿ ನ್ಯಾಯಕ್ಕಾಗಿ ಯಾರನ್ನು ಭೇಟಿ ಮಾಡಬೇಕು ಎಂಬುದು ಸಂತ್ರಸ್ತ ಕುಟುಂಬಕ್ಕೆ ತಿಳಿಯದಾಗಿದೆ. ಮನ್ನಾರ್ಕ್ಕಾಡ್ ಎಸ್‌ಸಿ/ಎಸ್‌ಟಿ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜನವರಿ 25, 2022) ಪ್ರಕರಣದ ವಿಚಾರಣೆ ಇತ್ತು. ಆದರೆ ಮಧು ಅವರನ್ನು ಪ್ರತಿನಿಧಿಸುವ ಯಾವುದೇ ವಕೀಲರಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಂದು ವಾರದ ಹಿಂದೆಯೇ ಹುದ್ದೆಗೆ ರಾಜೀನಾಮೆ ನೀಡಿದ್ದರು.

ವಿಚಾರಣೆಯ ಹಾದಿಯು ಆರಂಭದಿಂದಲೂ ಹಿನ್ನಡೆಯನ್ನ ಅನುಭವಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕದಲ್ಲಿ ಸರ್ಕಾರದ ವಿಳಂಬ ಮಾಡಿತು. ವಕೀಲರು ಕೂಡ ನಿರ್ಲಿಪ್ತ ಧೋರಣೆ ತೋರಿದರು. ಪ್ರಕರಣವು ಇಂದು ರಾಜಕೀಯ ಪ್ರಭಾವದಿಂದ ತೆವಳುತ್ತಿದೆ. ಪ್ರಕರಣದ ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

ಮಧು ಅವರು ಅತ್ತಪ್ಪಾಡಿ ಸಮೀಪದ ಅರಣ್ಯದ ಬಫರ್ ಝೋನ್ ಪ್ರದೇಶದಲ್ಲಿ ವಾಸವಿದ್ದರು. ಗುಂಪೊಂದು ಮಧು ಅವರನ್ನು ಸೆರೆ ಹಿಡಿದಿತ್ತು. ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದಿದ್ದಾನೆ ಎಂದು ಆರೋಪಿಸಿ ಮಧು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿತು. ನಂತರ ಆ ಗುಂಪು ಮಧು ಅವರನ್ನು ಪಾಲಕ್ಕಾಡ್‌ನ ಅಗಲಿ ಪೊಲೀಸರಿಗೆ ಒಪ್ಪಿಸಿತ್ತು. ಆದರೆ, ಪೊಲೀಸ್ ಠಾಣೆಗೆ ತೆರಳುವ ಮಾರ್ಗಮಧ್ಯೆ ಮಧು ಅವರನ್ನು ಕೊಟ್ಟತ್ತರ ಸರಕಾರಿ ಗಿರಿಜನ ವಿಶೇಷ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪೊಲೀಸ್ ಜೀಪಿನಲ್ಲೇ ಕುಸಿದು ಬಿದ್ದು ಮಧು ಮೃತಪಟ್ಟರು. ಕೇರಳ ಅಷ್ಟೇ ಅಲ್ಲದೇ ಇಡೀ ಭಾರತವು ಈ ಕ್ರೌರ್ಯವನ್ನು ಖಂಡಿಸಿತು. ಮಧು ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿತು.

ಸುದೀರ್ಘ ವಿಚಾರಣೆ

ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಮಧು ಪ್ರಕರಣದ ವಿಚಾರಣೆ ನಡೆಸುತ್ತಿರುವ ಪಾಲಕ್ಕಾಡ್‌ನ ಮನ್ನಾರ್ಕ್ಕಾಡ್  ಎಸ್‌ಸಿ/ಎಸ್‌‌ಟಿ ವಿಶೇಷ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದ ಕಾರಣ ವಿಚಾರಣೆ ನಡೆಯಲಿಲ್ಲ. ಅಲ್ಲದೆ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸಲು ಬಹಳ ಸಮಯ ತೆಗೆದುಕೊಂಡಿತು.

ಆದಿವಾಸಿ ವ್ಯಕ್ತಿಯ ಹತ್ಯೆಯ ನಂತರ ರಚಿಸಲಾದ ‘ಜಸ್ಟೀಸ್ ಫಾರ್ ಮಧು’ ಕ್ರಿಯಾ ಮಂಡಳಿಯು ಸರ್ಕಾರದಿಂದ ನೇಮಿಸಲ್ಪಟ್ಟ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ವಾಗ್ದಾಳಿ ನಡೆಸಿತು. ಸರ್ಕಾರಿ ವಕೀಲರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆಂದು ಕ್ರಿಯಾ ಸಮಿತಿ ಆರೋಪಿಸಿತು. ನಂತರ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಕ್ಕೆ ಕೋರಿದರು.

ಕೇರಳ ಸರ್ಕಾರವು ವಕೀಲ ಪಿ.ಗೋಪಿನಾಥ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಿತು. “ನವೆಂಬರ್ 2018ರಲ್ಲಿ, ಅತ್ತಪಾಡಿಯಲ್ಲಿ ತಾತ್ಕಾಲಿಕ ವಸತಿ ಮತ್ತು ಕಚೇರಿಗಾಗಿ ಗೋಪಿನಾಥ್ ಅವರು ಬೇಡಿಕೆ ಇಟ್ಟರು. ಇದನ್ನು ಒಪ್ಪದ ಸರ್ಕಾರ ನೇಮಕಾತಿ ಆದೇಶವನ್ನು ರದ್ದುಗೊಳಿಸಿತು” ಎಂದು ಕ್ರಿಯಾ ಮಂಡಳಿಯ ಪ್ರಸ್ತುತ ಅಧ್ಯಕ್ಷ ಸುರೇಶ್ ಹೇಳಿದ್ದಾರೆ.

ಶುಲ್ಕವೂ ವಿವಾದದ ವಿಷಯವಾಯಿತು. ಎಲ್‌ಡಿಎಫ್ ಸರ್ಕಾರವು ಪಿ.ಗೋಪಿನಾಥ್ ಅವರ ನೇಮಕ ಮಾಡುವ ವೆಚ್ಚವನ್ನು ಭರಿಸಲು ಸಿದ್ಧವಿಲ್ಲ ಎಂದು ವರದಿಯಾಗಿದೆ. ಆದರೆ ಆನ್‌ಮನೋರಮಾ ವೆಬ್‌ಸೈಟ್‌ ಪ್ರಕಾರ, ಕೇರಳ ಹೈಕೋರ್ಟ್‌ನಲ್ಲಿ ಕನಿಷ್ಠ ಐದು ಪ್ರಕರಣಗಳಲ್ಲಿ ಹಿರಿಯ ವಕೀಲರ ಶುಲ್ಕಕ್ಕಾಗಿ ಸರ್ಕಾರವು 2.59 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡಿದೆ ಎಂದು ಆರ್‌ಟಿಐ ಬಹಿರಂಗಪಡಿಸಿದೆ.

ಕೇರಳದ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಎ.ಕೆ.ಬಾಲನ್ ಅವರು, “ಒಂದೇ ಪ್ರಕರಣಕ್ಕೆ ಎಸ್‌ಪಿಪಿಯನ್ನು ನೇಮಿಸುವ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಅನಿಸಿದ್ದರಿಂದ ನೇಮಕಾತಿ ವಿಳಂಬವಾಗಿದೆ” ಎಂದಿರುವುದು ವರದಿಯಾಗಿದೆ.

ಕ್ರಿಯಾ ಮಂಡಳಿ ಮತ್ತು ಕುಟುಂಬವು ಪ್ರಕರಣವನ್ನು ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಹಸ್ತಾಂತರಿಸಲು ಸಿದ್ಧವಾಗಿಲ್ಲ. ಏಕೆಂದರೆ ಈ ಹುದ್ದೆಯು ರಾಜಕೀಯ ಪ್ರಭಾವದಿಂದ ಕೂಡಿದೆ. ಹೆಚ್ಚಿನ ಆರೋಪಿಗಳು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಥವಾ ಸಿಪಿಐ(ಎಂ) ಭಾಗವಾಗಿದ್ದಾರೆ. ಹೀಗೆ ಒಂದಲ್ಲ ಒಂದು ಕಾರಣಕ್ಕೆ ಮಧು ಹತ್ಯೆ ಪ್ರಕರಣ ವಿಳಂಬವಾಗುತ್ತಲೇ ಸಾಗಿದೆ.

ವರದಿ ಕೃಪೆ: ನ್ಯೂಸ್‌ ಮಿನಿಟ್‌


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...