Homeಮುಖಪುಟ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ಕೇರಳದಲ್ಲಿ ನಡೆದ ಈ ಅಮಾನವೀಯ ಹತ್ಯೆಗೆ ಸಂಬಂಧಿಸಿದಂತೆ 16 ಜನರ ಮೇಲೆ ಚಾರ್ಜ್ ಸಲ್ಲಿಕೆಯಾಗಿದೆ. ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ!

- Advertisement -
- Advertisement -

“ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯಲ್ಲಿ 2018ರ ಫೆಬ್ರವರಿ 22ರಂದು ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದ ಆರೋಪದಲ್ಲಿ ಹತ್ಯೆಗೀಡಾದ 30 ವರ್ಷದ ಆದಿವಾಸಿ ಯುವಕ ಎ.ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡುತ್ತಾರೆ.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989ರ ಅಡಿಯಲ್ಲಿ ಕೊಲೆ ಆರೋಪವನ್ನು ಮಾಡಲಾಗಿದೆ. ಈ ವರ್ಷದ ಫೆಬ್ರವರಿ 22 ಬಂದರೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂಬ ಬಗ್ಗೆ ಮಧು ಅವರ ತಾಯಿ ಗೊಂದಲಕ್ಕೊಳಗಾಗಿದ್ದಾರೆ.

“ಅವರು (ಪೊಲೀಸರು) ವಿಭಿನ್ನ ಕಾರಣಗಳನ್ನು ನೀಡುತ್ತಾರೆ. ಅದು ನನಗೆ ಅರ್ಥವಾಗುತ್ತಿಲ್ಲ. ನಮ್ಮಲ್ಲಿ ಹಣ ಮತ್ತು ಪ್ರಭಾವ ಇಲ್ಲ. ಎಲ್ಲಾ ಆರೋಪಿಗಳು ಇಷ್ಟು ವರ್ಷಗಳ ಕಾಲ ನೆಮ್ಮದಿಯಾಗಿ ಅಡ್ಡಾಡುತ್ತಿದ್ದಾರೆ” ಎಂದು ಮಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಂತದಲ್ಲಿ ನ್ಯಾಯಕ್ಕಾಗಿ ಯಾರನ್ನು ಭೇಟಿ ಮಾಡಬೇಕು ಎಂಬುದು ಸಂತ್ರಸ್ತ ಕುಟುಂಬಕ್ಕೆ ತಿಳಿಯದಾಗಿದೆ. ಮನ್ನಾರ್ಕ್ಕಾಡ್ ಎಸ್‌ಸಿ/ಎಸ್‌ಟಿ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜನವರಿ 25, 2022) ಪ್ರಕರಣದ ವಿಚಾರಣೆ ಇತ್ತು. ಆದರೆ ಮಧು ಅವರನ್ನು ಪ್ರತಿನಿಧಿಸುವ ಯಾವುದೇ ವಕೀಲರಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಂದು ವಾರದ ಹಿಂದೆಯೇ ಹುದ್ದೆಗೆ ರಾಜೀನಾಮೆ ನೀಡಿದ್ದರು.

ವಿಚಾರಣೆಯ ಹಾದಿಯು ಆರಂಭದಿಂದಲೂ ಹಿನ್ನಡೆಯನ್ನ ಅನುಭವಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕದಲ್ಲಿ ಸರ್ಕಾರದ ವಿಳಂಬ ಮಾಡಿತು. ವಕೀಲರು ಕೂಡ ನಿರ್ಲಿಪ್ತ ಧೋರಣೆ ತೋರಿದರು. ಪ್ರಕರಣವು ಇಂದು ರಾಜಕೀಯ ಪ್ರಭಾವದಿಂದ ತೆವಳುತ್ತಿದೆ. ಪ್ರಕರಣದ ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

ಮಧು ಅವರು ಅತ್ತಪ್ಪಾಡಿ ಸಮೀಪದ ಅರಣ್ಯದ ಬಫರ್ ಝೋನ್ ಪ್ರದೇಶದಲ್ಲಿ ವಾಸವಿದ್ದರು. ಗುಂಪೊಂದು ಮಧು ಅವರನ್ನು ಸೆರೆ ಹಿಡಿದಿತ್ತು. ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದಿದ್ದಾನೆ ಎಂದು ಆರೋಪಿಸಿ ಮಧು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿತು. ನಂತರ ಆ ಗುಂಪು ಮಧು ಅವರನ್ನು ಪಾಲಕ್ಕಾಡ್‌ನ ಅಗಲಿ ಪೊಲೀಸರಿಗೆ ಒಪ್ಪಿಸಿತ್ತು. ಆದರೆ, ಪೊಲೀಸ್ ಠಾಣೆಗೆ ತೆರಳುವ ಮಾರ್ಗಮಧ್ಯೆ ಮಧು ಅವರನ್ನು ಕೊಟ್ಟತ್ತರ ಸರಕಾರಿ ಗಿರಿಜನ ವಿಶೇಷ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪೊಲೀಸ್ ಜೀಪಿನಲ್ಲೇ ಕುಸಿದು ಬಿದ್ದು ಮಧು ಮೃತಪಟ್ಟರು. ಕೇರಳ ಅಷ್ಟೇ ಅಲ್ಲದೇ ಇಡೀ ಭಾರತವು ಈ ಕ್ರೌರ್ಯವನ್ನು ಖಂಡಿಸಿತು. ಮಧು ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿತು.

ಸುದೀರ್ಘ ವಿಚಾರಣೆ

ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಮಧು ಪ್ರಕರಣದ ವಿಚಾರಣೆ ನಡೆಸುತ್ತಿರುವ ಪಾಲಕ್ಕಾಡ್‌ನ ಮನ್ನಾರ್ಕ್ಕಾಡ್  ಎಸ್‌ಸಿ/ಎಸ್‌‌ಟಿ ವಿಶೇಷ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದ ಕಾರಣ ವಿಚಾರಣೆ ನಡೆಯಲಿಲ್ಲ. ಅಲ್ಲದೆ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸಲು ಬಹಳ ಸಮಯ ತೆಗೆದುಕೊಂಡಿತು.

ಆದಿವಾಸಿ ವ್ಯಕ್ತಿಯ ಹತ್ಯೆಯ ನಂತರ ರಚಿಸಲಾದ ‘ಜಸ್ಟೀಸ್ ಫಾರ್ ಮಧು’ ಕ್ರಿಯಾ ಮಂಡಳಿಯು ಸರ್ಕಾರದಿಂದ ನೇಮಿಸಲ್ಪಟ್ಟ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ವಾಗ್ದಾಳಿ ನಡೆಸಿತು. ಸರ್ಕಾರಿ ವಕೀಲರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆಂದು ಕ್ರಿಯಾ ಸಮಿತಿ ಆರೋಪಿಸಿತು. ನಂತರ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಕ್ಕೆ ಕೋರಿದರು.

ಕೇರಳ ಸರ್ಕಾರವು ವಕೀಲ ಪಿ.ಗೋಪಿನಾಥ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಿತು. “ನವೆಂಬರ್ 2018ರಲ್ಲಿ, ಅತ್ತಪಾಡಿಯಲ್ಲಿ ತಾತ್ಕಾಲಿಕ ವಸತಿ ಮತ್ತು ಕಚೇರಿಗಾಗಿ ಗೋಪಿನಾಥ್ ಅವರು ಬೇಡಿಕೆ ಇಟ್ಟರು. ಇದನ್ನು ಒಪ್ಪದ ಸರ್ಕಾರ ನೇಮಕಾತಿ ಆದೇಶವನ್ನು ರದ್ದುಗೊಳಿಸಿತು” ಎಂದು ಕ್ರಿಯಾ ಮಂಡಳಿಯ ಪ್ರಸ್ತುತ ಅಧ್ಯಕ್ಷ ಸುರೇಶ್ ಹೇಳಿದ್ದಾರೆ.

ಶುಲ್ಕವೂ ವಿವಾದದ ವಿಷಯವಾಯಿತು. ಎಲ್‌ಡಿಎಫ್ ಸರ್ಕಾರವು ಪಿ.ಗೋಪಿನಾಥ್ ಅವರ ನೇಮಕ ಮಾಡುವ ವೆಚ್ಚವನ್ನು ಭರಿಸಲು ಸಿದ್ಧವಿಲ್ಲ ಎಂದು ವರದಿಯಾಗಿದೆ. ಆದರೆ ಆನ್‌ಮನೋರಮಾ ವೆಬ್‌ಸೈಟ್‌ ಪ್ರಕಾರ, ಕೇರಳ ಹೈಕೋರ್ಟ್‌ನಲ್ಲಿ ಕನಿಷ್ಠ ಐದು ಪ್ರಕರಣಗಳಲ್ಲಿ ಹಿರಿಯ ವಕೀಲರ ಶುಲ್ಕಕ್ಕಾಗಿ ಸರ್ಕಾರವು 2.59 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡಿದೆ ಎಂದು ಆರ್‌ಟಿಐ ಬಹಿರಂಗಪಡಿಸಿದೆ.

ಕೇರಳದ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಎ.ಕೆ.ಬಾಲನ್ ಅವರು, “ಒಂದೇ ಪ್ರಕರಣಕ್ಕೆ ಎಸ್‌ಪಿಪಿಯನ್ನು ನೇಮಿಸುವ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಅನಿಸಿದ್ದರಿಂದ ನೇಮಕಾತಿ ವಿಳಂಬವಾಗಿದೆ” ಎಂದಿರುವುದು ವರದಿಯಾಗಿದೆ.

ಕ್ರಿಯಾ ಮಂಡಳಿ ಮತ್ತು ಕುಟುಂಬವು ಪ್ರಕರಣವನ್ನು ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಹಸ್ತಾಂತರಿಸಲು ಸಿದ್ಧವಾಗಿಲ್ಲ. ಏಕೆಂದರೆ ಈ ಹುದ್ದೆಯು ರಾಜಕೀಯ ಪ್ರಭಾವದಿಂದ ಕೂಡಿದೆ. ಹೆಚ್ಚಿನ ಆರೋಪಿಗಳು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಥವಾ ಸಿಪಿಐ(ಎಂ) ಭಾಗವಾಗಿದ್ದಾರೆ. ಹೀಗೆ ಒಂದಲ್ಲ ಒಂದು ಕಾರಣಕ್ಕೆ ಮಧು ಹತ್ಯೆ ಪ್ರಕರಣ ವಿಳಂಬವಾಗುತ್ತಲೇ ಸಾಗಿದೆ.

ವರದಿ ಕೃಪೆ: ನ್ಯೂಸ್‌ ಮಿನಿಟ್‌


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...