Homeಮುಖಪುಟ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ಕೇರಳದಲ್ಲಿ ನಡೆದ ಈ ಅಮಾನವೀಯ ಹತ್ಯೆಗೆ ಸಂಬಂಧಿಸಿದಂತೆ 16 ಜನರ ಮೇಲೆ ಚಾರ್ಜ್ ಸಲ್ಲಿಕೆಯಾಗಿದೆ. ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ!

- Advertisement -
- Advertisement -

“ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯಲ್ಲಿ 2018ರ ಫೆಬ್ರವರಿ 22ರಂದು ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದ ಆರೋಪದಲ್ಲಿ ಹತ್ಯೆಗೀಡಾದ 30 ವರ್ಷದ ಆದಿವಾಸಿ ಯುವಕ ಎ.ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡುತ್ತಾರೆ.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989ರ ಅಡಿಯಲ್ಲಿ ಕೊಲೆ ಆರೋಪವನ್ನು ಮಾಡಲಾಗಿದೆ. ಈ ವರ್ಷದ ಫೆಬ್ರವರಿ 22 ಬಂದರೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂಬ ಬಗ್ಗೆ ಮಧು ಅವರ ತಾಯಿ ಗೊಂದಲಕ್ಕೊಳಗಾಗಿದ್ದಾರೆ.

“ಅವರು (ಪೊಲೀಸರು) ವಿಭಿನ್ನ ಕಾರಣಗಳನ್ನು ನೀಡುತ್ತಾರೆ. ಅದು ನನಗೆ ಅರ್ಥವಾಗುತ್ತಿಲ್ಲ. ನಮ್ಮಲ್ಲಿ ಹಣ ಮತ್ತು ಪ್ರಭಾವ ಇಲ್ಲ. ಎಲ್ಲಾ ಆರೋಪಿಗಳು ಇಷ್ಟು ವರ್ಷಗಳ ಕಾಲ ನೆಮ್ಮದಿಯಾಗಿ ಅಡ್ಡಾಡುತ್ತಿದ್ದಾರೆ” ಎಂದು ಮಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಂತದಲ್ಲಿ ನ್ಯಾಯಕ್ಕಾಗಿ ಯಾರನ್ನು ಭೇಟಿ ಮಾಡಬೇಕು ಎಂಬುದು ಸಂತ್ರಸ್ತ ಕುಟುಂಬಕ್ಕೆ ತಿಳಿಯದಾಗಿದೆ. ಮನ್ನಾರ್ಕ್ಕಾಡ್ ಎಸ್‌ಸಿ/ಎಸ್‌ಟಿ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜನವರಿ 25, 2022) ಪ್ರಕರಣದ ವಿಚಾರಣೆ ಇತ್ತು. ಆದರೆ ಮಧು ಅವರನ್ನು ಪ್ರತಿನಿಧಿಸುವ ಯಾವುದೇ ವಕೀಲರಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಂದು ವಾರದ ಹಿಂದೆಯೇ ಹುದ್ದೆಗೆ ರಾಜೀನಾಮೆ ನೀಡಿದ್ದರು.

ವಿಚಾರಣೆಯ ಹಾದಿಯು ಆರಂಭದಿಂದಲೂ ಹಿನ್ನಡೆಯನ್ನ ಅನುಭವಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕದಲ್ಲಿ ಸರ್ಕಾರದ ವಿಳಂಬ ಮಾಡಿತು. ವಕೀಲರು ಕೂಡ ನಿರ್ಲಿಪ್ತ ಧೋರಣೆ ತೋರಿದರು. ಪ್ರಕರಣವು ಇಂದು ರಾಜಕೀಯ ಪ್ರಭಾವದಿಂದ ತೆವಳುತ್ತಿದೆ. ಪ್ರಕರಣದ ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

ಮಧು ಅವರು ಅತ್ತಪ್ಪಾಡಿ ಸಮೀಪದ ಅರಣ್ಯದ ಬಫರ್ ಝೋನ್ ಪ್ರದೇಶದಲ್ಲಿ ವಾಸವಿದ್ದರು. ಗುಂಪೊಂದು ಮಧು ಅವರನ್ನು ಸೆರೆ ಹಿಡಿದಿತ್ತು. ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದಿದ್ದಾನೆ ಎಂದು ಆರೋಪಿಸಿ ಮಧು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿತು. ನಂತರ ಆ ಗುಂಪು ಮಧು ಅವರನ್ನು ಪಾಲಕ್ಕಾಡ್‌ನ ಅಗಲಿ ಪೊಲೀಸರಿಗೆ ಒಪ್ಪಿಸಿತ್ತು. ಆದರೆ, ಪೊಲೀಸ್ ಠಾಣೆಗೆ ತೆರಳುವ ಮಾರ್ಗಮಧ್ಯೆ ಮಧು ಅವರನ್ನು ಕೊಟ್ಟತ್ತರ ಸರಕಾರಿ ಗಿರಿಜನ ವಿಶೇಷ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪೊಲೀಸ್ ಜೀಪಿನಲ್ಲೇ ಕುಸಿದು ಬಿದ್ದು ಮಧು ಮೃತಪಟ್ಟರು. ಕೇರಳ ಅಷ್ಟೇ ಅಲ್ಲದೇ ಇಡೀ ಭಾರತವು ಈ ಕ್ರೌರ್ಯವನ್ನು ಖಂಡಿಸಿತು. ಮಧು ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿತು.

ಸುದೀರ್ಘ ವಿಚಾರಣೆ

ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಮಧು ಪ್ರಕರಣದ ವಿಚಾರಣೆ ನಡೆಸುತ್ತಿರುವ ಪಾಲಕ್ಕಾಡ್‌ನ ಮನ್ನಾರ್ಕ್ಕಾಡ್  ಎಸ್‌ಸಿ/ಎಸ್‌‌ಟಿ ವಿಶೇಷ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದ ಕಾರಣ ವಿಚಾರಣೆ ನಡೆಯಲಿಲ್ಲ. ಅಲ್ಲದೆ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸಲು ಬಹಳ ಸಮಯ ತೆಗೆದುಕೊಂಡಿತು.

ಆದಿವಾಸಿ ವ್ಯಕ್ತಿಯ ಹತ್ಯೆಯ ನಂತರ ರಚಿಸಲಾದ ‘ಜಸ್ಟೀಸ್ ಫಾರ್ ಮಧು’ ಕ್ರಿಯಾ ಮಂಡಳಿಯು ಸರ್ಕಾರದಿಂದ ನೇಮಿಸಲ್ಪಟ್ಟ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ವಾಗ್ದಾಳಿ ನಡೆಸಿತು. ಸರ್ಕಾರಿ ವಕೀಲರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆಂದು ಕ್ರಿಯಾ ಸಮಿತಿ ಆರೋಪಿಸಿತು. ನಂತರ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಕ್ಕೆ ಕೋರಿದರು.

ಕೇರಳ ಸರ್ಕಾರವು ವಕೀಲ ಪಿ.ಗೋಪಿನಾಥ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಿತು. “ನವೆಂಬರ್ 2018ರಲ್ಲಿ, ಅತ್ತಪಾಡಿಯಲ್ಲಿ ತಾತ್ಕಾಲಿಕ ವಸತಿ ಮತ್ತು ಕಚೇರಿಗಾಗಿ ಗೋಪಿನಾಥ್ ಅವರು ಬೇಡಿಕೆ ಇಟ್ಟರು. ಇದನ್ನು ಒಪ್ಪದ ಸರ್ಕಾರ ನೇಮಕಾತಿ ಆದೇಶವನ್ನು ರದ್ದುಗೊಳಿಸಿತು” ಎಂದು ಕ್ರಿಯಾ ಮಂಡಳಿಯ ಪ್ರಸ್ತುತ ಅಧ್ಯಕ್ಷ ಸುರೇಶ್ ಹೇಳಿದ್ದಾರೆ.

ಶುಲ್ಕವೂ ವಿವಾದದ ವಿಷಯವಾಯಿತು. ಎಲ್‌ಡಿಎಫ್ ಸರ್ಕಾರವು ಪಿ.ಗೋಪಿನಾಥ್ ಅವರ ನೇಮಕ ಮಾಡುವ ವೆಚ್ಚವನ್ನು ಭರಿಸಲು ಸಿದ್ಧವಿಲ್ಲ ಎಂದು ವರದಿಯಾಗಿದೆ. ಆದರೆ ಆನ್‌ಮನೋರಮಾ ವೆಬ್‌ಸೈಟ್‌ ಪ್ರಕಾರ, ಕೇರಳ ಹೈಕೋರ್ಟ್‌ನಲ್ಲಿ ಕನಿಷ್ಠ ಐದು ಪ್ರಕರಣಗಳಲ್ಲಿ ಹಿರಿಯ ವಕೀಲರ ಶುಲ್ಕಕ್ಕಾಗಿ ಸರ್ಕಾರವು 2.59 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡಿದೆ ಎಂದು ಆರ್‌ಟಿಐ ಬಹಿರಂಗಪಡಿಸಿದೆ.

ಕೇರಳದ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಎ.ಕೆ.ಬಾಲನ್ ಅವರು, “ಒಂದೇ ಪ್ರಕರಣಕ್ಕೆ ಎಸ್‌ಪಿಪಿಯನ್ನು ನೇಮಿಸುವ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಅನಿಸಿದ್ದರಿಂದ ನೇಮಕಾತಿ ವಿಳಂಬವಾಗಿದೆ” ಎಂದಿರುವುದು ವರದಿಯಾಗಿದೆ.

ಕ್ರಿಯಾ ಮಂಡಳಿ ಮತ್ತು ಕುಟುಂಬವು ಪ್ರಕರಣವನ್ನು ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಹಸ್ತಾಂತರಿಸಲು ಸಿದ್ಧವಾಗಿಲ್ಲ. ಏಕೆಂದರೆ ಈ ಹುದ್ದೆಯು ರಾಜಕೀಯ ಪ್ರಭಾವದಿಂದ ಕೂಡಿದೆ. ಹೆಚ್ಚಿನ ಆರೋಪಿಗಳು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಥವಾ ಸಿಪಿಐ(ಎಂ) ಭಾಗವಾಗಿದ್ದಾರೆ. ಹೀಗೆ ಒಂದಲ್ಲ ಒಂದು ಕಾರಣಕ್ಕೆ ಮಧು ಹತ್ಯೆ ಪ್ರಕರಣ ವಿಳಂಬವಾಗುತ್ತಲೇ ಸಾಗಿದೆ.

ವರದಿ ಕೃಪೆ: ನ್ಯೂಸ್‌ ಮಿನಿಟ್‌


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...