Homeಮುಖಪುಟ‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

‘ಅಕ್ಕಿ ಕದ್ದನೆಂದು ಆದಿವಾಸಿ ಯುವಕನನ್ನು ಕೊಂದು 4 ವರ್ಷವಾಯಿತು, ವಿಚಾರಣೆ ಮಾತ್ರ ಆರಂಭವಾಗಲಿಲ್ಲ’

ಕೇರಳದಲ್ಲಿ ನಡೆದ ಈ ಅಮಾನವೀಯ ಹತ್ಯೆಗೆ ಸಂಬಂಧಿಸಿದಂತೆ 16 ಜನರ ಮೇಲೆ ಚಾರ್ಜ್ ಸಲ್ಲಿಕೆಯಾಗಿದೆ. ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ!

- Advertisement -
- Advertisement -

“ನನ್ನ ಮಗ ಗುಂಪು ಹತ್ಯೆಗೀಡಾಗಿ ನಾಲ್ಕು ವರ್ಷಗಳಾಗಿವೆ. ಆದರೆ ವಿಚಾರಣೆ ಏಕೆ ಆರಂಭವಾಗಿಲ್ಲ ಎಂಬುದು ನಮಗೆ ತಿಳಿದಿಲ್ಲ. ನಮಗೆ ನ್ಯಾಯ ಬೇಕು” ಎಂದು ಪಾಲಕ್ಕಾಡ್ ಜಿಲ್ಲೆಯ ಅಟ್ಟಪ್ಪಾಡಿಯಲ್ಲಿ 2018ರ ಫೆಬ್ರವರಿ 22ರಂದು ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದ ಆರೋಪದಲ್ಲಿ ಹತ್ಯೆಗೀಡಾದ 30 ವರ್ಷದ ಆದಿವಾಸಿ ಯುವಕ ಎ.ಮಧು ಅವರ ತಾಯಿ ಮಲ್ಲಿ ಹತಾಶೆಯಿಂದ ಮಾತನಾಡುತ್ತಾರೆ.

ವಿಶೇಷ ತನಿಖಾ ತಂಡವು ಮೇ 2018ರಲ್ಲಿ 3,000 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು. 16 ವ್ಯಕ್ತಿಗಳನ್ನು ಆರೋಪಿಗಳೆಂದು ಗುರುತಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯಿದೆ, 1989ರ ಅಡಿಯಲ್ಲಿ ಕೊಲೆ ಆರೋಪವನ್ನು ಮಾಡಲಾಗಿದೆ. ಈ ವರ್ಷದ ಫೆಬ್ರವರಿ 22 ಬಂದರೆ ಮಧು ಅವರನ್ನು ಬರ್ಬರವಾಗಿ ಕೊಂದು ನಾಲ್ಕು ವರ್ಷವಾಗುತ್ತದೆ. ಆದರೆ ಇನ್ನೂ ಏಕೆ ವಿಚಾರಣೆ ಆರಂಭವಾಗಿಲ್ಲ ಎಂಬ ಬಗ್ಗೆ ಮಧು ಅವರ ತಾಯಿ ಗೊಂದಲಕ್ಕೊಳಗಾಗಿದ್ದಾರೆ.

“ಅವರು (ಪೊಲೀಸರು) ವಿಭಿನ್ನ ಕಾರಣಗಳನ್ನು ನೀಡುತ್ತಾರೆ. ಅದು ನನಗೆ ಅರ್ಥವಾಗುತ್ತಿಲ್ಲ. ನಮ್ಮಲ್ಲಿ ಹಣ ಮತ್ತು ಪ್ರಭಾವ ಇಲ್ಲ. ಎಲ್ಲಾ ಆರೋಪಿಗಳು ಇಷ್ಟು ವರ್ಷಗಳ ಕಾಲ ನೆಮ್ಮದಿಯಾಗಿ ಅಡ್ಡಾಡುತ್ತಿದ್ದಾರೆ” ಎಂದು ಮಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಹಂತದಲ್ಲಿ ನ್ಯಾಯಕ್ಕಾಗಿ ಯಾರನ್ನು ಭೇಟಿ ಮಾಡಬೇಕು ಎಂಬುದು ಸಂತ್ರಸ್ತ ಕುಟುಂಬಕ್ಕೆ ತಿಳಿಯದಾಗಿದೆ. ಮನ್ನಾರ್ಕ್ಕಾಡ್ ಎಸ್‌ಸಿ/ಎಸ್‌ಟಿ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ (ಜನವರಿ 25, 2022) ಪ್ರಕರಣದ ವಿಚಾರಣೆ ಇತ್ತು. ಆದರೆ ಮಧು ಅವರನ್ನು ಪ್ರತಿನಿಧಿಸುವ ಯಾವುದೇ ವಕೀಲರಿರಲಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಒಂದು ವಾರದ ಹಿಂದೆಯೇ ಹುದ್ದೆಗೆ ರಾಜೀನಾಮೆ ನೀಡಿದ್ದರು.

ವಿಚಾರಣೆಯ ಹಾದಿಯು ಆರಂಭದಿಂದಲೂ ಹಿನ್ನಡೆಯನ್ನ ಅನುಭವಿಸಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕದಲ್ಲಿ ಸರ್ಕಾರದ ವಿಳಂಬ ಮಾಡಿತು. ವಕೀಲರು ಕೂಡ ನಿರ್ಲಿಪ್ತ ಧೋರಣೆ ತೋರಿದರು. ಪ್ರಕರಣವು ಇಂದು ರಾಜಕೀಯ ಪ್ರಭಾವದಿಂದ ತೆವಳುತ್ತಿದೆ. ಪ್ರಕರಣದ ಹೆಚ್ಚಿನ ಆರೋಪಿಗಳು ಆಡಳಿತಾರೂಢ ಸಿಪಿಐ(ಎಂ)ನ ಸ್ಥಳೀಯ ಮುಖಂಡರಾಗಿದ್ದಾರೆ.

ಆರೋಪಿಗಳಲ್ಲಿ ಒಬ್ಬರು ಸೆಪ್ಟೆಂಬರ್ 2021ರಲ್ಲಿ ಸಿಪಿಐ(ಎಂ) ಶಾಖೆಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಆದರೆ ಹೆಚ್ಚಿನ ವಿರೋಧಗಳು ಬಂದಿದ್ದರಿಂದ ನಿರ್ಧಾರವನ್ನು ಹಿಂತೆಗೆದುಕೊಳ್ಳಲಾಯಿತು. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಿಪಿಐ(ಎಂ) ನಾಯಕರು ಘಟನೆಯನ್ನು ಖಂಡಿಸಿದರೂ, ಹತ್ಯೆಯಾದ ಆದಿವಾಸಿಗೆ ನ್ಯಾಯ ದೊರಕಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹಲವರು ಟೀಕಿಸಿದ್ದಾರೆ.

ಮಧು ಅವರು ಅತ್ತಪ್ಪಾಡಿ ಸಮೀಪದ ಅರಣ್ಯದ ಬಫರ್ ಝೋನ್ ಪ್ರದೇಶದಲ್ಲಿ ವಾಸವಿದ್ದರು. ಗುಂಪೊಂದು ಮಧು ಅವರನ್ನು ಸೆರೆ ಹಿಡಿದಿತ್ತು. ಕಿರಾಣಿ ಅಂಗಡಿಯಿಂದ ಅಕ್ಕಿ ಕದ್ದಿದ್ದಾನೆ ಎಂದು ಆರೋಪಿಸಿ ಮಧು ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿತು. ನಂತರ ಆ ಗುಂಪು ಮಧು ಅವರನ್ನು ಪಾಲಕ್ಕಾಡ್‌ನ ಅಗಲಿ ಪೊಲೀಸರಿಗೆ ಒಪ್ಪಿಸಿತ್ತು. ಆದರೆ, ಪೊಲೀಸ್ ಠಾಣೆಗೆ ತೆರಳುವ ಮಾರ್ಗಮಧ್ಯೆ ಮಧು ಅವರನ್ನು ಕೊಟ್ಟತ್ತರ ಸರಕಾರಿ ಗಿರಿಜನ ವಿಶೇಷ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಪೊಲೀಸ್ ಜೀಪಿನಲ್ಲೇ ಕುಸಿದು ಬಿದ್ದು ಮಧು ಮೃತಪಟ್ಟರು. ಕೇರಳ ಅಷ್ಟೇ ಅಲ್ಲದೇ ಇಡೀ ಭಾರತವು ಈ ಕ್ರೌರ್ಯವನ್ನು ಖಂಡಿಸಿತು. ಮಧು ಅವರ ಸಾವಿಗೆ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿತು.

ಸುದೀರ್ಘ ವಿಚಾರಣೆ

ಚಾರ್ಜ್ ಶೀಟ್ ಸಲ್ಲಿಕೆಯಾದ ನಂತರ ಮಧು ಪ್ರಕರಣದ ವಿಚಾರಣೆ ನಡೆಸುತ್ತಿರುವ ಪಾಲಕ್ಕಾಡ್‌ನ ಮನ್ನಾರ್ಕ್ಕಾಡ್  ಎಸ್‌ಸಿ/ಎಸ್‌‌ಟಿ ವಿಶೇಷ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದ ಕಾರಣ ವಿಚಾರಣೆ ನಡೆಯಲಿಲ್ಲ. ಅಲ್ಲದೆ ಸಿಪಿಐ(ಎಂ) ನೇತೃತ್ವದ ಕೇರಳ ಸರ್ಕಾರವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸಲು ಬಹಳ ಸಮಯ ತೆಗೆದುಕೊಂಡಿತು.

ಆದಿವಾಸಿ ವ್ಯಕ್ತಿಯ ಹತ್ಯೆಯ ನಂತರ ರಚಿಸಲಾದ ‘ಜಸ್ಟೀಸ್ ಫಾರ್ ಮಧು’ ಕ್ರಿಯಾ ಮಂಡಳಿಯು ಸರ್ಕಾರದಿಂದ ನೇಮಿಸಲ್ಪಟ್ಟ ಪಬ್ಲಿಕ್ ಪ್ರಾಸಿಕ್ಯೂಟರ್ ವಿರುದ್ಧ ವಾಗ್ದಾಳಿ ನಡೆಸಿತು. ಸರ್ಕಾರಿ ವಕೀಲರು ರಾಜಕೀಯ ಸಂಪರ್ಕಗಳನ್ನು ಹೊಂದಿದ್ದಾರೆಂದು ಕ್ರಿಯಾ ಸಮಿತಿ ಆರೋಪಿಸಿತು. ನಂತರ ಅವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕಕ್ಕೆ ಕೋರಿದರು.

ಕೇರಳ ಸರ್ಕಾರವು ವಕೀಲ ಪಿ.ಗೋಪಿನಾಥ್ ಅವರನ್ನು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ನೇಮಿಸಿತು. “ನವೆಂಬರ್ 2018ರಲ್ಲಿ, ಅತ್ತಪಾಡಿಯಲ್ಲಿ ತಾತ್ಕಾಲಿಕ ವಸತಿ ಮತ್ತು ಕಚೇರಿಗಾಗಿ ಗೋಪಿನಾಥ್ ಅವರು ಬೇಡಿಕೆ ಇಟ್ಟರು. ಇದನ್ನು ಒಪ್ಪದ ಸರ್ಕಾರ ನೇಮಕಾತಿ ಆದೇಶವನ್ನು ರದ್ದುಗೊಳಿಸಿತು” ಎಂದು ಕ್ರಿಯಾ ಮಂಡಳಿಯ ಪ್ರಸ್ತುತ ಅಧ್ಯಕ್ಷ ಸುರೇಶ್ ಹೇಳಿದ್ದಾರೆ.

ಶುಲ್ಕವೂ ವಿವಾದದ ವಿಷಯವಾಯಿತು. ಎಲ್‌ಡಿಎಫ್ ಸರ್ಕಾರವು ಪಿ.ಗೋಪಿನಾಥ್ ಅವರ ನೇಮಕ ಮಾಡುವ ವೆಚ್ಚವನ್ನು ಭರಿಸಲು ಸಿದ್ಧವಿಲ್ಲ ಎಂದು ವರದಿಯಾಗಿದೆ. ಆದರೆ ಆನ್‌ಮನೋರಮಾ ವೆಬ್‌ಸೈಟ್‌ ಪ್ರಕಾರ, ಕೇರಳ ಹೈಕೋರ್ಟ್‌ನಲ್ಲಿ ಕನಿಷ್ಠ ಐದು ಪ್ರಕರಣಗಳಲ್ಲಿ ಹಿರಿಯ ವಕೀಲರ ಶುಲ್ಕಕ್ಕಾಗಿ ಸರ್ಕಾರವು 2.59 ಕೋಟಿ ರೂಪಾಯಿಗಿಂತ ಹೆಚ್ಚು ಖರ್ಚು ಮಾಡಿದೆ ಎಂದು ಆರ್‌ಟಿಐ ಬಹಿರಂಗಪಡಿಸಿದೆ.

ಕೇರಳದ ಎಸ್‌ಸಿ/ಎಸ್‌ಟಿ ಅಭಿವೃದ್ಧಿ ಸಚಿವರಾಗಿದ್ದ ಎ.ಕೆ.ಬಾಲನ್ ಅವರು, “ಒಂದೇ ಪ್ರಕರಣಕ್ಕೆ ಎಸ್‌ಪಿಪಿಯನ್ನು ನೇಮಿಸುವ ಅಗತ್ಯವಿಲ್ಲ ಎಂದು ಸರ್ಕಾರಕ್ಕೆ ಅನಿಸಿದ್ದರಿಂದ ನೇಮಕಾತಿ ವಿಳಂಬವಾಗಿದೆ” ಎಂದಿರುವುದು ವರದಿಯಾಗಿದೆ.

ಕ್ರಿಯಾ ಮಂಡಳಿ ಮತ್ತು ಕುಟುಂಬವು ಪ್ರಕರಣವನ್ನು ನ್ಯಾಯಾಲಯದ ಪಬ್ಲಿಕ್ ಪ್ರಾಸಿಕ್ಯೂಟರ್‌ಗೆ ಹಸ್ತಾಂತರಿಸಲು ಸಿದ್ಧವಾಗಿಲ್ಲ. ಏಕೆಂದರೆ ಈ ಹುದ್ದೆಯು ರಾಜಕೀಯ ಪ್ರಭಾವದಿಂದ ಕೂಡಿದೆ. ಹೆಚ್ಚಿನ ಆರೋಪಿಗಳು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಅಥವಾ ಸಿಪಿಐ(ಎಂ) ಭಾಗವಾಗಿದ್ದಾರೆ. ಹೀಗೆ ಒಂದಲ್ಲ ಒಂದು ಕಾರಣಕ್ಕೆ ಮಧು ಹತ್ಯೆ ಪ್ರಕರಣ ವಿಳಂಬವಾಗುತ್ತಲೇ ಸಾಗಿದೆ.

ವರದಿ ಕೃಪೆ: ನ್ಯೂಸ್‌ ಮಿನಿಟ್‌


ಇದನ್ನೂ ಓದಿರಿ: ಸಂವಿಧಾನ ವಿರೋಧಿ ಚರ್ಚಾ ಸ್ಪರ್ಧೆ: ತಾವರೆಕೆರೆ ವಿಇಎಸ್‌ ಶಾಲೆಯ ವಿರುದ್ಧ ಶಿಕ್ಷಣ ಆಯುಕ್ತರಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...