Homeಕರ್ನಾಟಕ"ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ": ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ...

“ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

- Advertisement -
- Advertisement -

“ಅವತ್ತು ನಾನು ಸ್ವಲ್ಪ ಮೀನು ತೆಗೆದಿದ್ದೆ. ಅದಕ್ಕೆ ಅವರು ಮೀನು ಕದ್ದಿದಾಳೆ ಎಂದು ಹೇಳಿ ನನಗೆ ಹಲ್ಲೆ ಮಾಡಿದರು. ಈ ಘಟನೆ ನಡೆದ ಬಳಿಕ ನಾನು ಬಂದರಿಗೆ ಹೋಗಿಲ್ಲ. ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ. ಅದಕ್ಕೆ ನಾನು ಊರಿಗೆ ಹೋಗುತ್ತೇನೆ” ಎಂದು ಉಡುಪಿಯ ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ ಮಾಧ್ಯಮಗಳ ಮುಂದೆ ಹೇಳಿದ್ದಾರೆ.

ಮೀನು ಕದ್ದ ಆರೋಪದ ಮೇಲೆ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದ ವಿಡಿಯೋ ಮಾರ್ಚ್ 18ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಈ ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಿದ್ದ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಎಲ್ಲಾ ಬಂಧಿತರನ್ನು ಏಪ್ರಿಲ್‌ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತು ಸರಿಯಾಗಿ ಮಾಹಿತಿ ಸಂಗ್ರಹಿಸದ ಕಾರಣ ಮಲ್ಪೆ ಠಾಣೆಯ ಹೆಡ್‌ ಕಾನ್‌ಸ್ಟೇಬಲ್ ಸುರೇಶ್ ಮತ್ತು ಕಾನ್‌ಸ್ಟೇಬಲ್ ನಾಗರಾಜ್ ಅವರನ್ನು ಅಮಾನತುಗೊಳಿಸಲಾಗಿದೆ.

ತನ್ನ ಮೇಲೆ ಹಲ್ಲೆ ನಡೆದಿರುವ ಕುರಿತು ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಮಹಿಳೆ, “ನಾನು ಅವತ್ತು ಸ್ವಲ್ಪ ಮೀನು ತೆಗೆದಿರುವುದು ಹೌದು. ಮಲ್ಪೆ ಬಂದರಿನಲ್ಲಿ ಆ ರೀತಿ ಮೀನು ತೆಗೆಯುವುದು ಸಹಜ. ಆದರೆ ಅವತ್ತು ಏನೋ ನನ್ನ ಗ್ರಹಚಾರ ಸರಿ ಇರಲಿಲ್ಲ. ಅದಕ್ಕೆ ಏನು ಮಾಡಲು ಆಗಲ್ಲ. ಮೊನ್ನೆಯ ಘಟನೆ ಬಗ್ಗೆ ನನಗೆ ಏನೂ ಹೇಳಲು ಇಲ್ಲ. ನಾವು ನಮ್ಮ ಪಾಡಿಗೆ ದುಡಿದು ತಿನ್ನುತ್ತೇವೆ. ಈಗ ಇಲ್ಲಿ ಇರಲು ನನಗೆ ಆಗಲ್ಲ” ಎಂದಿದ್ದಾರೆ.

“ಈ ಪ್ರಕರಣದಲ್ಲಿ ಯಾರಿಗೆ ಏನು ಮಾಡುವುದು ಬೇಡ. ಅವರ ಪಾಡಿಗೆ ಅವರು, ನಮ್ಮ ಪಾಡಿಗೆ ನಾವು ಇರುತ್ತೇವೆ. ಘಟನೆಯ ಬಳಿಕ ನನಗೆ ಯಾರು ಕೂಡ ತೊಂದರೆ ಕೊಟ್ಟಿಲ್ಲ. ಘಟನೆ ನಡೆದ ದಿನ ರಾತ್ರಿ ಈ ವಿಚಾರದಲ್ಲಿ ರಾಜಿ ಮಾಡಿಕೊಂಡಿದ್ದೆವು. ಪ್ರಕರಣ ದಾಖಲಿಸುವುದು ಬೇಡ ಎಂದು ಮಾತನಾಡಿ ಬಂದಿದ್ದೆವು. ಅದರ ನಂತರ ಮೇಲಿನಿಂದ ಬಂದ ಒತ್ತಡಕ್ಕೆ ಮತ್ತೆ ಕರೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ” ಎಂದು ಹೇಳಿದ್ದಾರೆ.

ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ ಸಂತ್ರಸ್ತೆ

ಹಲ್ಲೆಗೊಳಗಾದ ಮಹಿಳೆ ಸಾಕ್ಷ್ಯ ಅಧಿನಿಯಮ ಕಲಂ 164 ಅಡಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿ ತಮ್ಮ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ನೀಡಿದ್ದು, ಅದರಂತೆ ನ್ಯಾಯಾಧೀಶರು ಆ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ಇಂದು ಕರ್ನಾಟಕ ಬಂದ್: ವಿವಿಧ ಜಿಲ್ಲೆಗಳಲ್ಲಿ ಹೇಗಿದೆ ಪರಿಸ್ಥಿತಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...