Homeಕರ್ನಾಟಕ‘ಕುವೆಂಪು & ನಾಡಗೀತೆಗೆ ಮಾಡುವ ಅಪಮಾನ ನೋಡಿ ತೆಪ್ಪಗಿರಲು ನನಗೆ ಕಷ್ಟ’: ಪ್ರತಿಷ್ಠಾನಕ್ಕೆ ‘ಹಂಪನಾ’ ರಾಜೀನಾಮೆ

‘ಕುವೆಂಪು & ನಾಡಗೀತೆಗೆ ಮಾಡುವ ಅಪಮಾನ ನೋಡಿ ತೆಪ್ಪಗಿರಲು ನನಗೆ ಕಷ್ಟ’: ಪ್ರತಿಷ್ಠಾನಕ್ಕೆ ‘ಹಂಪನಾ’ ರಾಜೀನಾಮೆ

- Advertisement -
- Advertisement -

ರಾಷ್ಟ್ರಕವಿ ಕುವೆಂಪು ಮತ್ತು ರಾಷ್ಟ್ರಗೀತೆಯನ್ನು ನಿಂದಿಸಿದವರ ಮೇಲೆ ಕಾನೂನು ಕ್ರಮಕೈಗೊಳ್ಳದೆ, ಅವರಿಗೆ ಜವಬ್ದಾರಿಯುತ ಸ್ಥಾನಗಳನ್ನು ನೀಡಿದ ಸರ್ಕಾರದ ನಡೆಯನ್ನು ಪ್ರತಿಭಟಿಸಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಸಾಹಿತಿ, ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಸೋಮವಾರ ರಾಜೀನಾಮೆ ಘೋಷಿಸಿದ್ದಾರೆ.

ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಹಂಪನಾ, “ರಾಷ್ಟ್ರಕವಿ ಕುವೆಂಪುರವರನ್ನೂ, ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ” ಎಂದು ಹೇಳಿದ್ದು, ಮುಖ್ಯಮಂತ್ರಿ ತನ್ನ ರಾಜೀನಾಮೆಯನ್ನು ಅಂಗೀಕರಿಸಬೇಕು ಎಂದು ಅವರು ವಿನಂತಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕುವೆಂಪುರವರನ್ನೂ ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ರಾಷ್ಟ್ರಗೀತಿಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪಠ್ಯಪುಸ್ತಕ ‘ಚಕ್ರತೀರ್ಥ’ದಲ್ಲಿ ಒದ್ದಾಡುತ್ತಾ ಸರ್ಕಾರವನ್ನು ಪೇಚಿಗೆ ಸಿಲುಕಿಸಿದೆ: ನಾಡೋಜ ಹಂಪನಾ

ಇದು, ‘ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ’ ಎಂಬ ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ ಎಂದು ಅವರು ಮುಖ್ಯಮಂತ್ರಿಗೆ ತನ್ನ ಪತ್ರದಲ್ಲಿ ಬರೆದಿದ್ದಾರೆ.

“ಮಹಾಕವಿ ಕುವೆಂಪು ಅವರು ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನ ಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ‘ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ’ವನ್ನು ಪ್ರಾರಂಭಿಸಿತಲ್ಲದೆ ಅತ್ಯುನ್ನತ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನಿತ್ತು ಗೌರವಿಸಿತು” ಎಂದು ಅವರು ತಮ್ಮ ಪತ್ರದಲ್ಲಿ ಸರ್ಕಾರವನ್ನು ನೆನಪಿಸಿದ್ದಾರೆ.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ಅವರು ಮುಖ್ಯಮಂತ್ರಿಗೆ ಬರೆದ ಪತ್ರದ ಪೂರ್ಣ ಪಠ್ಯ ಹೀಗಿದೆ

ಶ್ರೀ. ಬಸವರಾಜ ಬೊಮ್ಮಾಯಿ ಅವರು
ಸನ್ಮಾನ್ಯ ಮುಖ್ಯಮಂತ್ರಿಗಳು,
ವಿಧಾನಸೌಧ, ಬೆಂಗಳೂರು.

ಮಾನ್ಯರೇ,

ವಿಷಯ: ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ

ತಮ್ಮ ಅಮೂಲ್ಯ ಕೃತಿಗಳಿಂದ ಹೊಸಗನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳನ್ನೂ ಸಪ್ರಾಣಿಸಿ ಭಾರತೀಯ ಸಾಹಿತ್ಯದಲ್ಲಿ ಕನ್ನಡಕ್ಕೂ, ಕರ್ನಾಟಕಕ್ಕೂ ಮಹಾಕವಿ ಕುವೆಂಪುರವರು ಗೌರವ ತಂದರು. ಅವರು ಕನ್ನಡಕ್ಕೆ ಜ್ಞಾನ ಪೀಠ ಪ್ರಶಸ್ತಿ ತಂದ ಮೊದಲಿಗರು. ಇದನ್ನರಿತು ಸರ್ಕಾರ ‘ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ’ವನ್ನು ಪ್ರಾರಂಭಿಸಿತಲ್ಲದೆ ಅತ್ಯುನ್ನತ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನಿತ್ತು ಗೌರವಿಸಿತು.

ಆದರೆ ಇಂದು ಕುವೆಂಪುರವರನ್ನೂ, ಅವರು ಹುಟ್ಟಿದ ಗೌರವಾನ್ವಿತ ದೊಡ್ಡ ಜನಾಂಗವನ್ನೂ ಅವಾಚ್ಯ ಶಬ್ದಗಳಿಂದ ನಿಂದಿಸಿ, ನಮ್ಮ ರಾಷ್ಟ್ರಗೀತೆಯಾದ ನಾಡಗೀತೆಯನ್ನು ಲೇವಡಿ ಮಾಡಿದ ವ್ಯಕ್ತಿಯ ಮೇಲೆ ಕ್ರಮಕೈಗೊಳ್ಳುವ ಬದಲು ಸರ್ಕಾರ ಜವಾಬ್ದಾರಿಯ ಸ್ಥಾನ ನೀಡಿದೆ. ಇದು ಅಪಾಯಕಾರಿಯಾದ ಬೆಳವಣಿಗೆ.

ಇದರಿಂದ “ಪುಣ್ಯಶ್ಲೋಕರ ಮೇಲೆ ಕೆಟ್ಟ ಮಾತುಗಳ ಮಳೆ ಸುರಿಸಿದರೆ ಅಂಥವರಿಗೆ ಸರಕಾರದ ಸಮಿತಿಗಳಲ್ಲಿ ಸದಸ್ಯರಾಗುವ ಸದವಕಾಶಗಳಿವೆ” ಎಂಬ ಸಂದೇಶ ರವಾನೆ ಮಾಡಿದಂತಾಗಿದೆ. ವ್ಯಕ್ಜತಿಗಳ ತೇಜೋವಧೆ ಮಾಡುವುದನ್ನು ನಮ್ಮ ಸರಕಾರ ಸಹಿಸುವುದಿಲ್ಲ ಎಂಬ ನಂಬಿಕೆ ಹುಸಿಯಾಗಿದೆ.

ರಾಷ್ಟ್ರಕವಿ ಕುವೆಂಪುರವರನ್ನೂ, ನಮ್ಮ ಪವಿತ್ರ ನಾಡಗೀತೆಯನ್ನೂ ಅಪಮಾನಿಸುತ್ತಿದ್ದರೂ ನೋಡಿಕೊಂಡು ತೆಪ್ಪಗಿರುವುದು ನನಗೆ ಕಷ್ಟವಾಗಿದೆ. ಸರ್ಕಾರ ಸ್ಥಾಪಿಸಿರುವ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೂ ಸದಸ್ಯತ್ವಕ್ಕೂ ನನ್ನ ರಾಜೀನಾಮೆಯನ್ನು ಮಾನ್ಯ ಮುಖ್ಯಮಂತ್ರಿಗಳು ಅಂಗೀಕರಿಸಬೇಕೆಂದು ಪ್ರಾರ್ಥಿಸುತ್ತೇನೆ.

ತಮ್ಮ ವಿಶ್ವಾಸಿ
ಹಂಪನಾ
ಹಂಪನಾ. ನಾಗರಾಜಯ್ಯ

30.05.2022
ಬೆಂಗಳೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...