Homeಮುಖಪುಟಇದು ದೆಹಲಿಯಲ್ಲ: ಗೋಲಿ ಮಾರೋ ಘೋಷಣೆಗೆ ಮಮತಾ ಕಿಡಿ, ಮೂವರ ಬಂಧನ

ಇದು ದೆಹಲಿಯಲ್ಲ: ಗೋಲಿ ಮಾರೋ ಘೋಷಣೆಗೆ ಮಮತಾ ಕಿಡಿ, ಮೂವರ ಬಂಧನ

- Advertisement -
- Advertisement -

ಕೋಲ್ಕತ್ತಾದಲ್ಲಿಲ ಅಮಿತ್ ಷಾ ಅವರ ರ್‍ಯಾಲಿಯಲ್ಲಿ‘ ಗೋಲಿ ’ಘೋಷಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಇದು ದೆಹಲಿಯಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ  ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ತಮ್ಮ ಟಿಎಂಸಿ ಪಕ್ಷವು ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿನ ಹಿಂಸಾಚಾರವು “ಯೋಜಿತ ನರಮೇಧ”ವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಪೊಲೀಸರು ಕೇಂದ್ರದ ಅಡಿಯಲ್ಲಿದ್ದಾರೆ. ದೆಹಲಿ ಪೊಲೀಸರು, ಸಿಆರ್‌ಪಿಎಫ್ ಮತ್ತು ಸಿಐಎಸ್‌ಎಫ್ ಇದ್ದರೂ ಸಹ ಗಲಭೆ ತಡೆಯಲು ಏನೂ ಮಾಡಲಿಲ್ಲ. ಎಷ್ಟು ನಾಚಿಕೆಗೇಡಿನ ಸಂಗತಿಯೆಂದರೆ ಇದಕ್ಕೆ ಬಿಜೆಪಿ ಕ್ಷಮೆ ಕೂಡ ಕೋರಿಲ್ಲ ಎಂದು ಅವರು ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ದೆಹಲಿ ಗಲಭೆ ಪೀಡಿತರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸುವಂತೆ ಬ್ಯಾನರ್ಜಿ ತನ್ನ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಗಲಭೆಯಲ್ಲಿ ಕೊಲ್ಲಲ್ಪಟ್ಟವರ ಆತ್ಮಕ್ಕಾಗಿ ಒಂದು ನಿಮಿಷದ ಮೌನಾಚರಣೆ ಮಾಡಿದ ಅವರು, ಬಿಜೆಪಿಯ ಕ್ರಮವನ್ನು ಖಂಡಿಸಿ ಪ್ರತಭಟನೆಗಳನ್ನು ಆಯೋಜಿಸಲು ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಗೋಲಿಮಾರೋ ಘೋಷಣೆಗಳ ಕುರಿತು ಮಾತನಾಡಿದ ಅವರು ಬೆಂಕಿಯುಗುಳುವ ಪ್ರಚೋದನಕಾರಿ ಘೋಷಣೆಗಳು ಕಾನೂನುಬಾಹಿರವಾಗಿವೆ. ಅದನ್ನು ಕೂಗಿದ ಎಲ್ಲರಿಗೂ ದಂಡ ವಿಧಿಸಲಾಗುತ್ತದೆ. ಇದು ಕೋಲ್ಕತಾ, ದೆಹಲಿಯಲ್ಲ. ಇದು ಬಂಗಾಳ. ನಾವು ಒಬ್ಬ ವ್ಯಕ್ತಿಯನ್ನು ಉಳಿಸಿದರೆ, ಇತರರು ಅವರನ್ನು ಪ್ರೋತ್ಸಾಹಿಸುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಬಂಗಾಳದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುವವರು, ದೆಹಲಿ ಘರ್ಷಣೆಗೆ ಪ್ರಚೋದನೆ ಮತ್ತು ಕುಮ್ಮಕ್ಕು ನೀಡಿದವರನ್ನು ಏಕೆ ಬಂಧಿಸಲಾಗಿಲ್ಲ ಎಂದು ಪ್ರಶ್ನಿಸಿದ ಅವರು, ನಿನ್ನೆ ಘೋಷನೆ ಕೂಗಿದವರನ್ನು ಇಂದು ನಾವು ಬಂಧಿಸಿದ್ದೇವೆ ಎಂದಿದ್ದಾರೆ.

“ಯಾರು ದೇಶದ್ರೋಹಿಗಳು ಎಂಬುದನ್ನು ಜನರು ನಿರ್ಧರಿಸುತ್ತಾರೆ. ಅದನ್ನು ನಿರ್ಧರಿಸಲು ನೀವು ಯಾರು? ” ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಈಗಾಗಲೇ ಕೆಲವು ಜನರನ್ನು ಬಂಧಿಸಲಾಗಿದೆ ಮತ್ತು ಇತರರನ್ನು ಪೊಲೀಸರು ಹುಡುಕುತ್ತಿದ್ದಾರೆ ಎಂದ ಅವರು, ಘೋಷಣೆ ಕೂಗಿದವರನ್ನು ಗುರುತಿಸಲು ಸಹಾಯ ಮಾಡುವಂತೆ ಅವರು ಪಕ್ಷದ ಕಾರ್ಯಕರ್ತರನ್ನು ಕೇಳಿದ್ದಾರೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿ ಆದರೆ ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ಗೋಲಿ ಮಾರೊ ಘೋಷಣೆಗಳನ್ನು ಕೂಗಿದ ಘಟನೆಗೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸರು ಸೋಮವಾರ ಬೆಳಿಗ್ಗೆ ಮೂವರು ಬಿಜೆಪಿ ಬೆಂಬಲಿಗರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಅವುಗಳಲ್ಲಿ ಜಾಮೀನು ರಹಿತ ವಿಭಾಗಗಳಿವೆ.

ಅಮಿತ್‌ ಶಾ ಭಾನುವಾರದ ರ್‍ಯಾಲಿಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ನಂತರ  “ಅಮಿತ್‌ ಶಾರವರೆ, ಬಂಗಾಳಕ್ಕೆ ಬಂದು ಉಪದೇಶಿಸುವ ಬದಲು ನಿಮ್ಮ ಮೂಗಿನ ಕೆಳಗಿರುವ ಡೆಲ್ಹಿ ಹಿಂಸಾಚಾರದಲ್ಲಿ 50 ಕ್ಕೂ ಹೆಚ್ಚು ಮುಗ್ಧ ಜೀವಗಳನ್ನು ಉಳಿಸುವಲ್ಲಿ ವಿಫಲರಾದದ್ದಕ್ಕೆ ಕಾರಣ ನೀಡಬೇಕು ಮತ್ತು ಕ್ಷಮೆಯಾಚಿಸಬೇಕು. ಬಿಜೆಪಿ ಹರಡಲು ಪ್ರಯತ್ನಿಸುತ್ತಿರುವ ಧರ್ಮಾಂಧತೆ ಮತ್ತು ದ್ವೇಷವಿಲ್ಲದೆ ಬಂಗಾಳ ಉತ್ತಮವಾಗಿದೆ” ಎಂದು ಮುಖ್ಯಮಂತ್ರಿಯ ಸೋದರಳಿಯ ಮತ್ತು ಟಿಎಂಸಿ ಯುವ ವಿಭಾಗದ ಮುಖ್ಯಸ್ಥ ಅಭಿಷೇಕ್ ಬ್ಯಾನರ್ಜಿ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

ಬಂಗಾಳದಲ್ಲಿ ಟಿಎಂಸಿ ಪರ ಅಭಿಯಾನದ ಭಾಗವಾಗಿ ಒಂದು ಲಕ್ಷಕ್ಕೂ ಹೆಚ್ಚು ಟಿಎಂಸಿ ಕಾರ್ಯಕರ್ತರು ರಾಜ್ಯಾದ್ಯಂತ ಸಂಚರಿಸಿ ಪಶ್ಚಿಮ ಬಂಗಾಳದ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಮತ್ತು ಅದರ ಕೋಮು ಸೌಹಾರ್ದತೆಯನ್ನು ಕಾಪಾಡಲು ಮಮತಾ ಬ್ಯಾನರ್ಜಿ ಏಕೆ ಮಹತ್ವ ಎಂಬುದನ್ನು ಜನರಿಗೆ ಅರ್ಥವಾಗುವಂತೆ ಮಾಡುತ್ತಾರೆ ಎಂದು ಪಕ್ಷ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...