Homeಮುಖಪುಟಇದು ದೆಹಲಿಯಲ್ಲ: ಗೋಲಿ ಮಾರೋ ಘೋಷಣೆಗೆ ಮಮತಾ ಕಿಡಿ, ಮೂವರ ಬಂಧನ

ಇದು ದೆಹಲಿಯಲ್ಲ: ಗೋಲಿ ಮಾರೋ ಘೋಷಣೆಗೆ ಮಮತಾ ಕಿಡಿ, ಮೂವರ ಬಂಧನ

- Advertisement -
- Advertisement -

ಕೋಲ್ಕತ್ತಾದಲ್ಲಿಲ ಅಮಿತ್ ಷಾ ಅವರ ರ್‍ಯಾಲಿಯಲ್ಲಿ‘ ಗೋಲಿ ’ಘೋಷಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಇದು ದೆಹಲಿಯಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ  ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ತಮ್ಮ ಟಿಎಂಸಿ ಪಕ್ಷವು ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿನ ಹಿಂಸಾಚಾರವು “ಯೋಜಿತ ನರಮೇಧ”ವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಪೊಲೀಸರು ಕೇಂದ್ರದ ಅಡಿಯಲ್ಲಿದ್ದಾರೆ. ದೆಹಲಿ ಪೊಲೀಸರು, ಸಿಆರ್‌ಪಿಎಫ್ ಮತ್ತು ಸಿಐಎಸ್‌ಎಫ್ ಇದ್ದರೂ ಸಹ ಗಲಭೆ ತಡೆಯಲು ಏನೂ ಮಾಡಲಿಲ್ಲ. ಎಷ್ಟು ನಾಚಿಕೆಗೇಡಿನ ಸಂಗತಿಯೆಂದರೆ ಇದಕ್ಕೆ ಬಿಜೆಪಿ ಕ್ಷಮೆ ಕೂಡ ಕೋರಿಲ್ಲ ಎಂದು ಅವರು ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ದೆಹಲಿ ಗಲಭೆ ಪೀಡಿತರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸುವಂತೆ ಬ್ಯಾನರ್ಜಿ ತನ್ನ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಗಲಭೆಯಲ್ಲಿ ಕೊಲ್ಲಲ್ಪಟ್ಟವರ ಆತ್ಮಕ್ಕಾಗಿ ಒಂದು ನಿಮಿಷದ ಮೌನಾಚರಣೆ ಮಾಡಿದ ಅವರು, ಬಿಜೆಪಿಯ ಕ್ರಮವನ್ನು ಖಂಡಿಸಿ ಪ್ರತಭಟನೆಗಳನ್ನು ಆಯೋಜಿಸಲು ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಗೋಲಿಮಾರೋ ಘೋಷಣೆಗಳ ಕುರಿತು ಮಾತನಾಡಿದ ಅವರು ಬೆಂಕಿಯುಗುಳುವ ಪ್ರಚೋದನಕಾರಿ ಘೋಷಣೆಗಳು ಕಾನೂನುಬಾಹಿರವಾಗಿವೆ. ಅದನ್ನು ಕೂಗಿದ ಎಲ್ಲರಿಗೂ ದಂಡ ವಿಧಿಸಲಾಗುತ್ತದೆ. ಇದು ಕೋಲ್ಕತಾ, ದೆಹಲಿಯಲ್ಲ. ಇದು ಬಂಗಾಳ. ನಾವು ಒಬ್ಬ ವ್ಯಕ್ತಿಯನ್ನು ಉಳಿಸಿದರೆ, ಇತರರು ಅವರನ್ನು ಪ್ರೋತ್ಸಾಹಿಸುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಬಂಗಾಳದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುವವರು, ದೆಹಲಿ ಘರ್ಷಣೆಗೆ ಪ್ರಚೋದನೆ ಮತ್ತು ಕುಮ್ಮಕ್ಕು ನೀಡಿದವರನ್ನು ಏಕೆ ಬಂಧಿಸಲಾಗಿಲ್ಲ ಎಂದು ಪ್ರಶ್ನಿಸಿದ ಅವರು, ನಿನ್ನೆ ಘೋಷನೆ ಕೂಗಿದವರನ್ನು ಇಂದು ನಾವು ಬಂಧಿಸಿದ್ದೇವೆ ಎಂದಿದ್ದಾರೆ.

“ಯಾರು ದೇಶದ್ರೋಹಿಗಳು ಎಂಬುದನ್ನು ಜನರು ನಿರ್ಧರಿಸುತ್ತಾರೆ. ಅದನ್ನು ನಿರ್ಧರಿಸಲು ನೀವು ಯಾರು? ” ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಈಗಾಗಲೇ ಕೆಲವು ಜನರನ್ನು ಬಂಧಿಸಲಾಗಿದೆ ಮತ್ತು ಇತರರನ್ನು ಪೊಲೀಸರು ಹುಡುಕುತ್ತಿದ್ದಾರೆ ಎಂದ ಅವರು, ಘೋಷಣೆ ಕೂಗಿದವರನ್ನು ಗುರುತಿಸಲು ಸಹಾಯ ಮಾಡುವಂತೆ ಅವರು ಪಕ್ಷದ ಕಾರ್ಯಕರ್ತರನ್ನು ಕೇಳಿದ್ದಾರೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿ ಆದರೆ ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ಗೋಲಿ ಮಾರೊ ಘೋಷಣೆಗಳನ್ನು ಕೂಗಿದ ಘಟನೆಗೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸರು ಸೋಮವಾರ ಬೆಳಿಗ್ಗೆ ಮೂವರು ಬಿಜೆಪಿ ಬೆಂಬಲಿಗರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಅವುಗಳಲ್ಲಿ ಜಾಮೀನು ರಹಿತ ವಿಭಾಗಗಳಿವೆ.

ಅಮಿತ್‌ ಶಾ ಭಾನುವಾರದ ರ್‍ಯಾಲಿಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ನಂತರ  “ಅಮಿತ್‌ ಶಾರವರೆ, ಬಂಗಾಳಕ್ಕೆ ಬಂದು ಉಪದೇಶಿಸುವ ಬದಲು ನಿಮ್ಮ ಮೂಗಿನ ಕೆಳಗಿರುವ ಡೆಲ್ಹಿ ಹಿಂಸಾಚಾರದಲ್ಲಿ 50 ಕ್ಕೂ ಹೆಚ್ಚು ಮುಗ್ಧ ಜೀವಗಳನ್ನು ಉಳಿಸುವಲ್ಲಿ ವಿಫಲರಾದದ್ದಕ್ಕೆ ಕಾರಣ ನೀಡಬೇಕು ಮತ್ತು ಕ್ಷಮೆಯಾಚಿಸಬೇಕು. ಬಿಜೆಪಿ ಹರಡಲು ಪ್ರಯತ್ನಿಸುತ್ತಿರುವ ಧರ್ಮಾಂಧತೆ ಮತ್ತು ದ್ವೇಷವಿಲ್ಲದೆ ಬಂಗಾಳ ಉತ್ತಮವಾಗಿದೆ” ಎಂದು ಮುಖ್ಯಮಂತ್ರಿಯ ಸೋದರಳಿಯ ಮತ್ತು ಟಿಎಂಸಿ ಯುವ ವಿಭಾಗದ ಮುಖ್ಯಸ್ಥ ಅಭಿಷೇಕ್ ಬ್ಯಾನರ್ಜಿ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

ಬಂಗಾಳದಲ್ಲಿ ಟಿಎಂಸಿ ಪರ ಅಭಿಯಾನದ ಭಾಗವಾಗಿ ಒಂದು ಲಕ್ಷಕ್ಕೂ ಹೆಚ್ಚು ಟಿಎಂಸಿ ಕಾರ್ಯಕರ್ತರು ರಾಜ್ಯಾದ್ಯಂತ ಸಂಚರಿಸಿ ಪಶ್ಚಿಮ ಬಂಗಾಳದ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಮತ್ತು ಅದರ ಕೋಮು ಸೌಹಾರ್ದತೆಯನ್ನು ಕಾಪಾಡಲು ಮಮತಾ ಬ್ಯಾನರ್ಜಿ ಏಕೆ ಮಹತ್ವ ಎಂಬುದನ್ನು ಜನರಿಗೆ ಅರ್ಥವಾಗುವಂತೆ ಮಾಡುತ್ತಾರೆ ಎಂದು ಪಕ್ಷ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...