Homeಮುಖಪುಟಇದು ದೆಹಲಿಯಲ್ಲ: ಗೋಲಿ ಮಾರೋ ಘೋಷಣೆಗೆ ಮಮತಾ ಕಿಡಿ, ಮೂವರ ಬಂಧನ

ಇದು ದೆಹಲಿಯಲ್ಲ: ಗೋಲಿ ಮಾರೋ ಘೋಷಣೆಗೆ ಮಮತಾ ಕಿಡಿ, ಮೂವರ ಬಂಧನ

- Advertisement -
- Advertisement -

ಕೋಲ್ಕತ್ತಾದಲ್ಲಿಲ ಅಮಿತ್ ಷಾ ಅವರ ರ್‍ಯಾಲಿಯಲ್ಲಿ‘ ಗೋಲಿ ’ಘೋಷಣೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಇದು ದೆಹಲಿಯಲ್ಲ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರಕ್ಕೆ  ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ. ತಮ್ಮ ಟಿಎಂಸಿ ಪಕ್ಷವು ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ದೆಹಲಿಯಲ್ಲಿನ ಹಿಂಸಾಚಾರವು “ಯೋಜಿತ ನರಮೇಧ”ವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿ ಪೊಲೀಸರು ಕೇಂದ್ರದ ಅಡಿಯಲ್ಲಿದ್ದಾರೆ. ದೆಹಲಿ ಪೊಲೀಸರು, ಸಿಆರ್‌ಪಿಎಫ್ ಮತ್ತು ಸಿಐಎಸ್‌ಎಫ್ ಇದ್ದರೂ ಸಹ ಗಲಭೆ ತಡೆಯಲು ಏನೂ ಮಾಡಲಿಲ್ಲ. ಎಷ್ಟು ನಾಚಿಕೆಗೇಡಿನ ಸಂಗತಿಯೆಂದರೆ ಇದಕ್ಕೆ ಬಿಜೆಪಿ ಕ್ಷಮೆ ಕೂಡ ಕೋರಿಲ್ಲ ಎಂದು ಅವರು ಕೋಲ್ಕತ್ತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಹೇಳಿದ್ದಾರೆ.

ದೆಹಲಿ ಗಲಭೆ ಪೀಡಿತರಿಗೆ ಸಹಾಯ ಮಾಡಲು ಹಣವನ್ನು ಸಂಗ್ರಹಿಸುವಂತೆ ಬ್ಯಾನರ್ಜಿ ತನ್ನ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಗಲಭೆಯಲ್ಲಿ ಕೊಲ್ಲಲ್ಪಟ್ಟವರ ಆತ್ಮಕ್ಕಾಗಿ ಒಂದು ನಿಮಿಷದ ಮೌನಾಚರಣೆ ಮಾಡಿದ ಅವರು, ಬಿಜೆಪಿಯ ಕ್ರಮವನ್ನು ಖಂಡಿಸಿ ಪ್ರತಭಟನೆಗಳನ್ನು ಆಯೋಜಿಸಲು ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಗೋಲಿಮಾರೋ ಘೋಷಣೆಗಳ ಕುರಿತು ಮಾತನಾಡಿದ ಅವರು ಬೆಂಕಿಯುಗುಳುವ ಪ್ರಚೋದನಕಾರಿ ಘೋಷಣೆಗಳು ಕಾನೂನುಬಾಹಿರವಾಗಿವೆ. ಅದನ್ನು ಕೂಗಿದ ಎಲ್ಲರಿಗೂ ದಂಡ ವಿಧಿಸಲಾಗುತ್ತದೆ. ಇದು ಕೋಲ್ಕತಾ, ದೆಹಲಿಯಲ್ಲ. ಇದು ಬಂಗಾಳ. ನಾವು ಒಬ್ಬ ವ್ಯಕ್ತಿಯನ್ನು ಉಳಿಸಿದರೆ, ಇತರರು ಅವರನ್ನು ಪ್ರೋತ್ಸಾಹಿಸುತ್ತಾರೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಬಂಗಾಳದ ಕಾನೂನು ಸುವ್ಯವಸ್ಥೆ ಬಗ್ಗೆ ಮಾತನಾಡುವವರು, ದೆಹಲಿ ಘರ್ಷಣೆಗೆ ಪ್ರಚೋದನೆ ಮತ್ತು ಕುಮ್ಮಕ್ಕು ನೀಡಿದವರನ್ನು ಏಕೆ ಬಂಧಿಸಲಾಗಿಲ್ಲ ಎಂದು ಪ್ರಶ್ನಿಸಿದ ಅವರು, ನಿನ್ನೆ ಘೋಷನೆ ಕೂಗಿದವರನ್ನು ಇಂದು ನಾವು ಬಂಧಿಸಿದ್ದೇವೆ ಎಂದಿದ್ದಾರೆ.

“ಯಾರು ದೇಶದ್ರೋಹಿಗಳು ಎಂಬುದನ್ನು ಜನರು ನಿರ್ಧರಿಸುತ್ತಾರೆ. ಅದನ್ನು ನಿರ್ಧರಿಸಲು ನೀವು ಯಾರು? ” ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಈಗಾಗಲೇ ಕೆಲವು ಜನರನ್ನು ಬಂಧಿಸಲಾಗಿದೆ ಮತ್ತು ಇತರರನ್ನು ಪೊಲೀಸರು ಹುಡುಕುತ್ತಿದ್ದಾರೆ ಎಂದ ಅವರು, ಘೋಷಣೆ ಕೂಗಿದವರನ್ನು ಗುರುತಿಸಲು ಸಹಾಯ ಮಾಡುವಂತೆ ಅವರು ಪಕ್ಷದ ಕಾರ್ಯಕರ್ತರನ್ನು ಕೇಳಿದ್ದಾರೆ. ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿ ಆದರೆ ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ ಎಂದು ಅವರು ಮನವಿ ಮಾಡಿದ್ದಾರೆ.

ಗೋಲಿ ಮಾರೊ ಘೋಷಣೆಗಳನ್ನು ಕೂಗಿದ ಘಟನೆಗೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸರು ಸೋಮವಾರ ಬೆಳಿಗ್ಗೆ ಮೂವರು ಬಿಜೆಪಿ ಬೆಂಬಲಿಗರನ್ನು ಬಂಧಿಸಿ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ಅವುಗಳಲ್ಲಿ ಜಾಮೀನು ರಹಿತ ವಿಭಾಗಗಳಿವೆ.

ಅಮಿತ್‌ ಶಾ ಭಾನುವಾರದ ರ್‍ಯಾಲಿಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ನಂತರ  “ಅಮಿತ್‌ ಶಾರವರೆ, ಬಂಗಾಳಕ್ಕೆ ಬಂದು ಉಪದೇಶಿಸುವ ಬದಲು ನಿಮ್ಮ ಮೂಗಿನ ಕೆಳಗಿರುವ ಡೆಲ್ಹಿ ಹಿಂಸಾಚಾರದಲ್ಲಿ 50 ಕ್ಕೂ ಹೆಚ್ಚು ಮುಗ್ಧ ಜೀವಗಳನ್ನು ಉಳಿಸುವಲ್ಲಿ ವಿಫಲರಾದದ್ದಕ್ಕೆ ಕಾರಣ ನೀಡಬೇಕು ಮತ್ತು ಕ್ಷಮೆಯಾಚಿಸಬೇಕು. ಬಿಜೆಪಿ ಹರಡಲು ಪ್ರಯತ್ನಿಸುತ್ತಿರುವ ಧರ್ಮಾಂಧತೆ ಮತ್ತು ದ್ವೇಷವಿಲ್ಲದೆ ಬಂಗಾಳ ಉತ್ತಮವಾಗಿದೆ” ಎಂದು ಮುಖ್ಯಮಂತ್ರಿಯ ಸೋದರಳಿಯ ಮತ್ತು ಟಿಎಂಸಿ ಯುವ ವಿಭಾಗದ ಮುಖ್ಯಸ್ಥ ಅಭಿಷೇಕ್ ಬ್ಯಾನರ್ಜಿ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.

ಬಂಗಾಳದಲ್ಲಿ ಟಿಎಂಸಿ ಪರ ಅಭಿಯಾನದ ಭಾಗವಾಗಿ ಒಂದು ಲಕ್ಷಕ್ಕೂ ಹೆಚ್ಚು ಟಿಎಂಸಿ ಕಾರ್ಯಕರ್ತರು ರಾಜ್ಯಾದ್ಯಂತ ಸಂಚರಿಸಿ ಪಶ್ಚಿಮ ಬಂಗಾಳದ ಅಭಿವೃದ್ಧಿ ಮತ್ತು ಬೆಳವಣಿಗೆಗೆ ಮತ್ತು ಅದರ ಕೋಮು ಸೌಹಾರ್ದತೆಯನ್ನು ಕಾಪಾಡಲು ಮಮತಾ ಬ್ಯಾನರ್ಜಿ ಏಕೆ ಮಹತ್ವ ಎಂಬುದನ್ನು ಜನರಿಗೆ ಅರ್ಥವಾಗುವಂತೆ ಮಾಡುತ್ತಾರೆ ಎಂದು ಪಕ್ಷ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...